ಬೆಂಗಳೂರು | 5 ಸ್ಟಾರ್ ಹೋಟೆಲ್‌ನಲ್ಲಿ ಮಹಿಳಾ ಸಹೋದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ ; ಪೈಲಟ್ ವಿರುದ್ಧ ಆರೋಪ

ಬೆಂಗಳೂರು: ಖಾಸಗಿ ಚಾರ್ಟರ್ಡ್ ವಿಮಾನಯಾನ ಸಂಸ್ಥೆಯೊಂದರ ಪೈಲಟ್ ವಿರುದ್ಧ, ಬೆಂಗಳೂರಿನ ಹೋಟೆಲ್‌ನಲ್ಲಿ ರಾತ್ರಿ ತಂಗಿದ್ದ ವೇಳೆ 26 ವರ್ಷದ ಕ್ಯಾಬಿನ್ ಸಿಬ್ಬಂದಿ ಸದಸ್ಯೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪ ಕೇಳಿಬಂದಿದೆ. ಈ ಘಟನೆ ನವೆಂಬರ್ 18 ರಂದು ನಡೆದಿದೆ ಎಂದು ಹೇಳಲಾಗಿದ್ದರೂ, ಸಂತ್ರಸ್ತೆ ಎರಡು ದಿನಗಳ ನಂತರ ಹೈದರಾಬಾದ್ ತಲುಪಿದ ಮೇಲೆ ಪ್ರಕರಣ … Continued

ಬೆಂಗಳೂರು | ವಂದೇ ಭಾರತ್ ರೈಲು ಡಿಕ್ಕಿ ; ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ದುಃಖಕರ ಘಟನೆ ನಡೆದಿದೆ. ಭಾನುವಾರ ಸಂಜೆ ಚಿಕ್ಕಬಾಣಾವರ ರೈಲು ನಿಲ್ದಾಣದ ಬಳಿ ‘ವಂದೇ ಭಾರತ್’ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಇಬ್ಬರು ಯುವ ನರ್ಸಿಂಗ್ ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಕೇರಳ ಮೂಲದ ಜಸ್ಟಿನ್ ಜೋಸೆಫ್ (21) ಮತ್ತು ಸ್ಟೆರಿನ್ ಎಲ್ಜಾ ಸಾಜಿ (19) ಎಂದು ಗುರುತಿಸಲಾಗಿದೆ. ಅಧಿಕಾರಿಗಳ ಪ್ರಕಾರ, … Continued

ವೀಡಿಯೊ…: 14 ಅಡಿ ಉದ್ದದ ಬೃಹತ್‌ ಕಾಳಿಂಗ ಸರ್ಪದ ರಕ್ಷಣೆ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ರಾಗಿಹೊಸಳ್ಳಿಯ ಮನೆಯೊಂದರ ತೋಟದಲ್ಲಿ ಎರಡು ದಿನಗಳ ಹಿಂದೆ ಬೃಹತ್‌ ಕಾಳಿಂಗ ಸರ್ಪವನ್ನು ಉರಗ ಪ್ರೇಮಿ ಕುಮಟಾದ ಪವನ್‌ ನಾಯ್ಕ ಸೆರೆ ಹಿಡಿದಿದ್ದಾರೆ. ರಾಗಿಹೊಸಳ್ಳಿಯ ಪ್ರಶಾಂತ ಹೆಗಡೆ ಎಂಬವರ ಮನೆಯ ತೋಟಕ್ಕೆ ಹಾಕಲಾಗಿದ್ದ ಬಲೆಯ ಬೇಲಿಯಲ್ಲಿ ಈ ಕಾಳಿಂಗ ಸರ್ಪ ಎರಡು ದಿನಗಳಿಂದ ಓಡಾಡುತ್ತಿತ್ತು. ಇದನ್ನು ಕಂಡ … Continued

ಬೆಂಗಳೂರು ಹಣದ ವಾಹನ ದರೋಡೆ ಪ್ರಕರಣ ಭೇದಿಸಿದ ಪೊಲೀಸರು : 5.76 ಕೋಟಿ ರೂ. ವಶ, 3 ಪ್ರಮುಖ ಆರೋಪಿಗಳ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಹೈ-ಪ್ರೊಫೈಲ್ ಎಟಿಎಂ ನಗದು ವಾಹನ ದರೋಡೆ ಪ್ರಕರಣವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದು, ಘಟನೆ ಸಂಭವಿಸಿದ 60 ಗಂಟೆಗಳ ಒಳಗೆ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿ 5.76 ಕೋಟಿ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. ಮಂಗಳವಾರ ನಡೆದಿದ್ದ ಈ ದರೋಡೆ, ಸಿಎಂಎಸ್ (CMS) ಸಂಸ್ಥೆಯು ನಿರ್ವಹಿಸುವ 7.11 ಕೋಟಿ ರೂ. ನಗದನ್ನು ಹೊತ್ತೊಯ್ಯುತ್ತಿದ್ದ ವಾಹನದಲ್ಲಿ … Continued

ಧಾರವಾಡ | ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಧಾರವಾಡ: ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ವಿಠ್ಠಲ ಶಿಂಧೆ(80), ಅವರ ಪುತ್ರ ನಾರಾಯಣ ಶಿಂಧೆ(42) ಹಾಗೂ ಮೊಮ್ಮಕ್ಕಳಾದ ಶಿವರಾಜ(12), ಶ್ರೀನಿಧಿ(10) ಎಂದು ಗುರುತಿಸಲಾಗಿದೆ. ಈ ನಾಲ್ವರು ಶುಕ್ರವಾರ ಬೆಳಿಗ್ಗೆ ಚಿಕ್ಕಮಲ್ಲಿಗವಾಡ ಗ್ರಾಮದ ಹೊರಗೆ ಇರುವ ಹಳೆ … Continued

ಉಡುಪಿ : ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ ರಹಸ್ಯ ರವಾನೆ ; ಇಬ್ಬರ ಬಂಧನ

ಉಡುಪಿ : ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಉತ್ತರ ಪ್ರದೇಶದ ಇಬ್ಬರನ್ನು ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್ ಯಾರ್ಡ್ ಘಟಕದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಬಂಧಿತರನ್ನು ಉತ್ತರ ಪ್ರದೇಶದವರಾದ ರೋಹಿತ್(26) ಮತ್ತು ಸಂತ್ರಿ(37) ಎಂದು ಗುರುತಿಸಲಾಗಿದ್ದು, ಇವರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಆರೋಪಿಗಳನ್ನು ಸುಷ್ಮಾ ಮೆರೈನ್ ಪ್ರೈವೇಟ್ ಲಿಮಿಟೆಡ್ ಮೂಲಕ … Continued

‘ಸಿಎಂ ಬದಲಾವಣೆ’ ಚರ್ಚೆ ಮತ್ತೆ ಮುನ್ನೆಲೆಗೆ : ಡಿಕೆ ಶಿವಕುಮಾರ ಬಣದ ಶಾಸಕರು ದಿಢೀರ್ ದೆಹಲಿಗೆ…!

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಬಣಕ್ಕೆ ಸೇರಿದ ಕೆಲವು ಕಾಂಗ್ರೆಸ್ ಶಾಸಕರು ದೆಹಲಿಗೆ ದೌಡಾಯಿಸಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕದಲ್ಲಿ ಬಹುಕಾಲದಿಂದ ಕೇಳಿಬರುತ್ತಿರುವ ಮುಖ್ಯಮಂತ್ರಿ ಹುದ್ದೆಯ ಅಧಿಕಾರ ಹಂಚಿಕೆ ಸೂತ್ರವನ್ನು ಜಾರಿಗೆ ತರಲು ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೆಚ್ಚಿಸಲು ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಸರ್ಕಾರವು ಗುರುವಾರ (ನವೆಂಬರ್‌  20)ದಂದು 2.5 ವರ್ಷಗಳನ್ನು … Continued

ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ನವೆಂಬರ್‌ ತಿಂಗಳು ಚಳಿಗಾಲವಾಗಿದ್ದರೂ ನ.21ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೋಲಾರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಹಾಸನ, ಕೊಡಗು, ರಾಮನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ … Continued

ಹಿರಿಯ ಪತ್ರಕರ್ತ ಅಶೋಕ ಹಾಸ್ಯಗಾರರಿಗೆ ಕಾಂತಾವರ ಕನ್ನಡ ಸಂಘದ ʼಯಕ್ಷಗಾನ ಸಾಹಿತ್ಯ ಸಂಶೋಧನಾ ಪ್ರಶಸ್ತಿʼ

ಉಡುಪಿ: ಕಾಂತಾವರ ಕನ್ನಡ ಸಂಘವು ಕೊಡಮಾಡುವ ಸಾಹಿತ್ಯ, ಸಂಶೋಧನೆ, ಪತ್ರಿಕೋದ್ಯಮ, ಶಿಕ್ಷಣ ಮತ್ತು ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ಏಳು ಜನ ಸಾಧಕರಿಗೆ ಸಂಘದ ಪ್ರತಿಷ್ಠಿತ ದತ್ತಿ ನಿಧಿ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಅಲ್ಲದೆ ಓರ್ವರಿಗೆ ವಾರ್ಷಿಕ ಗೌರ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಇದನ್ನು ಡಿಸೆಂಬರ್‌ 28ರಂದು ನಡೆಯುವ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಾಂತಾವರ ಕನ್ನಡ ಸಂಘದ … Continued

ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆಯುವ ಸುಳಿವು ನೀಡಿದರೇ ಡಿಕೆ ಶಿವಕುಮಾರ..?

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರೊಂದಿಗಿನ ತಮ್ಮ ಹಗ್ಗ-ಜಗ್ಗಾಟಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ (ಡಿಕೆಎಸ್) ಅವರು ಬುಧವಾರ ಹೊಸ ಟ್ವಿಸ್ಟ್‌ ನೀಡಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ನಡೆದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಿವಕುಮಾರ, “ನಾನು ಶಾಶ್ವತವಾಗಿ … Continued