ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಚಂಡಮಾರುತದಂತಹ ವ್ಯವಸ್ಥೆ ರೂಪುಗೊಂಡಿದ್ದು, ಇದರ ಪರಿಣಾಮ ಗುಡುಗು ಹಾಗೂ ಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಒಂದು ವಾರ ಕಾಲ ಚಂಡಮಾರುತದ ಪರಿಚಲನೆಯ ಪರಿನಾಮ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮುಂದಿನ ಎರಡ್ಮೂರು ಇದರ … Continued

ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಗುಂಡು

ಮಂಗಳೂರು : ಅಕ್ರಮ ಗೋವು ಸಾಗಣೆಯಲ್ಲಿ ಭಾಗಿಯಾಗಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬೆನ್ನಟ್ಟಿ, ಕಾಲಿಗೆ ಗುಂಡು ಹಾರಿಸಿ (Police Firing) ಬಂಧಿಸಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕೇರಳದ ಕಾಸರಗೋಡು ಮೂಲದ ಅಬ್ದುಲ್ಲಾ (40) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ ಎಂದು … Continued

“ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆ ಹಂತದಲ್ಲಿದ್ದಾರೆ ಎಂದ ಪುತ್ರ ; ಸಂಭಾವ್ಯ ಉತ್ತರಾಧಿಕಾರಿ ಯಾರೆಂದು ಹೇಳಿದ ಯತೀಂದ್ರ : ರಾಜಕೀಯದಲ್ಲಿ ಸಂಚಲನ…!

ಬೆಂಗಳೂರು/ಬೆಳಗಾವಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ನಿರಂತರ ಊಹಾಪೋಹಗಳು ಕೇಳಿಬರುತ್ತಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯೊಂದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ರಾಜಕೀಯ ಜೀವನದ ಕೊನೆಯ ಹಂತದಲ್ಲಿದ್ದಾರೆ ಮತ್ತು ಸಚಿವ ಸತೀಶ ಜಾರಕಿಹೊಳಿ ಅವರಂತಹವರಿಗೆ ‘ಮಾರ್ಗದರ್ಶಕರಾಗಿ’ರಬೇಕು ಎಂದು ಯತೀಂದ್ರ ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ … Continued

ಅರಬ್ಬೀ ಸಮುದ್ರ-ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ನೆಚ್ಚರಿಕೆ

ಬೆಂಗಳೂರು : ಅರಬ್ಬೀ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿಕೆಲದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೂ ಚಂಡಮಾರುತವು ಅಂಡಮಾನ್ ಮತ್ತು ನಿಕೋಬಾರ್ … Continued

ಕರ್ನಾಟಕದಲ್ಲಿ ಮಳೆ ಮುಂದುವರಿಕೆ ; ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರದ ಕಾಲ ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವಾರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ/ಗುಡುಗು ಸಹಿತ … Continued

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ; ಕರ್ನಾಟಕದಲ್ಲಿ 26,000 ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧಾರ

ಶಿವಮೊಗ್ಗ : ರಾಜ್ಯದಲ್ಲಿ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23 ರಿಂದ ನವೆಂಬರ್ 9ರ ವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 7ರಂದು ಟಿಇಟಿ … Continued

ಪುತ್ತೂರು | ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಜನದಟ್ಟಣೆ : 11 ಮಂದಿ ಅಸ್ವಸ್ಥ

ಮಂಗಳೂರು : ಸೋಮವಾರ ಪುತ್ತೂರಿನ ತಾಲೂಕು ಕ್ರೀಡಾಂಗಣದಲ್ಲಿ ನಡೆದ ‘ಅಶೋಕ ಜನಮನ 2025’ ಕಾರ್ಯಕ್ರಮದಲ್ಲಿ ಮಹಿಳೆಯರು ಮತ್ತು ವೃದ್ಧರು ಸೇರಿದಂತೆ 11 ಜನರು ಅಸ್ವಸ್ಥಗೊಂಡ ವಿದ್ಯಮಾನ ನಡೆದಿದೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಕೆಲವರು ಆಯಾಸ, ನಿರ್ಜಲೀಕರಣ ಮತ್ತು ಜನದಟ್ಟಣೆಯಿಂದ ಅಸ್ವಸ್ಥರಾದರು ಎಂದು ಹೇಳಲಾಗಿದೆ. ರೈ ಎಸ್ಟೇಟ್ ಎಜುಕೇಷನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ … Continued

ಬೆಳಗಾವಿ : ಮಾಜಿ ಸಂಸದ ರಮೇಶ ಕತ್ತಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲು

ಬೆಳಗಾವಿ: ವಾಲ್ಮೀಕಿ ನಾಯಕ ಸಮುದಾಯದ ವಿರುದ್ಧ ಅವಾಚ್ಯ ಪದ ಬಳಕೆ ಆರೋಪದ ಮೇಲೆ ಮಾಜಿ ಸಂಸದ ರಮೇಶ ಕತ್ತಿ ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ವೇಳೆ ಮಾಜಿ ಸಂಸದ ರಮೇಶ ಕತ್ತಿ ಅವರು ವಾಲ್ಮೀಕಿ ಸಮುದಾಯದ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂದು ರಾಜಶೇಖರ ತಳವಾರ ಎಂಬುವರು … Continued

ಮೂರು ಬಸ್‌ಗಳ ನಡುವೆ ಡಿಕ್ಕಿ : ಇಬ್ಬರು ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಭಾನುವಾರ ನಡೆದ ಮೂರು ಬಸ್ಸುಗಳು ಡಿಕ್ಕೆ ಹೊಡೆದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹತ್ತು ಮಂದಿ ಗಂಬೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಮಂಡ್ಯ ಜಿಲ್ಲೆಯ ಬಚನಹಳ್ಳಿ ಬಳಿ ಮೂರು ಕೆಎಸ್‌ಆರ್‌ಟಿಸಿ (KSRTC) ಬಸ್‌ಗಳ ನಡುವೆ ಸರಣಿ ಡಿಕ್ಕಿ ಸಂಭವಿಸಿದೆ. … Continued

ಜಾತಿ ಗಣತಿ ಅವಧಿ ಮತ್ತೆ ವಿಸ್ತರಣೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು (Caste census) ಅಕ್ಟೋಬರ್ 31ರವರೆಗೆ ವಿಸ್ತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಸಚಿವ ಶಿವರಾಜ ತಂಗಡಗಿ ಮಾಹಿತಿ ನೀಡಿದ್ದಾರೆ. ಸಭೆಯ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಮೀಕ್ಷೆಯನ್ನು ಅ.31 ವರೆಗೂ ವಿಸ್ತರಣೆ ಮಾಡಲಾಗಿದೆ. ಆದರೆ, ಶಿಕ್ಷಕರನ್ನು ಬಳಕೆ … Continued