ಬೆಂಗಳೂರು : ಟೆಕ್ಕಿ ಪತ್ನಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಎಂಜಿನಿಯರ್‌ ಪತಿ

ಬೆಂಗಳೂರು: ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಪತಿ-ಪತ್ನಿಯ ನಡುವೆ ನಡೆದ ಜಗಳವು ಹಿಂಸಾತ್ಮಕ ರೂಪ ಪಡೆದುಕೊಂಡು, ಬೆಳಗಾಗುವಷ್ಟರಲ್ಲಿ ಇಬ್ಬರೂ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಸಿವಿಲ್ ಎಂಜಿನಿಯರ್‌ ಆಗಿದ್ದ ಸುಮಂತ್ ಜೈನ್ ಹಾಗೂ ಅವರ ಪತ್ನಿ, ಸಾಫ್ಟ್‌ವೇರ್ ಎಂಜಿನಿಯರ್‌ ಆಗಿದ್ದ ಪದ್ಮಾವತಿ ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ದಂಪತಿ ನಡುವೆ ಯಾವುದೋ ವಿಚಾರಕ್ಕೆ ವಾಗ್ವಾದ ಆರಂಭವಾಗಿದ್ದು, … Continued

ಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ

ಬೆಂಗಳೂರು : ರಾಜ್ಯ ಸರ್ಕಾರವು ವಾಹನಗಳ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಪಡೆಯಲು ಅಧಿಕೃತ ಕೇಂದ್ರಗಳಲ್ಲಿ ವಿಧಿಸಲಾಗುವ ಪರೀಕ್ಷಾ ಶುಲ್ಕವನ್ನು ಪರಿಷ್ಕರಿಸಿದ್ದು, ಹೊಸ ದರಗಳು ಆಗಸ್ಟ್ 15ರಿಂದ ಜಾರಿಗೆ ಬಂದಿವೆ.. ಪರಿಷ್ಕೃತ ಶುಲ್ಕದಂತೆ ದ್ವಿಚಕ್ರ ವಾಹನಗಳ ವಾಹನಗಳ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ ಪರೀಕ್ಷಾ ಶುಲ್ಕವನ್ನು ₹65ರಿಂದ ₹80ಕ್ಕೆ ಹೆಚ್ಚಿಸಲಾಗಿದೆ. ಆಟೋ ರಿಕ್ಷಾಗಳ ಶುಲ್ಕ ₹75ರಿಂದ ₹80ಕ್ಕೆ … Continued

ಚಾಮರಾಜನಗರ : ಶಂಕಿತ ಬೇಟೆಗಾರರ ಮೇಲೆ ಅರಣ್ಯ ಸಿಬ್ಬಂದಿ ಗುಂಡಿನ ದಾಳಿ; ಮೂವರು ಸಾವು

ಚಾಮರಾಜನಗರ : ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿ ಬೇಟೆಯಲ್ಲಿ ತೊಡಗಿದ್ದರು ಎಂದು ಶಂಕಿಸಲಾದ ಮೂವರು ವ್ಯಕ್ತಿಗಳು ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೃತಪಟ್ಟಿರುವ ಘಟನೆ ಶನಿವಾರ ಮುಂಜಾನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಥೋಮಿಯಾರ್ ಪಾಳ್ಯ ಗ್ರಾಮದ ನಿವಾಸಿಗಳಾದ ಅಂಥೋನಿಸ್ವಾಮಿ, ಪೀಟರ್ ಮತ್ತು ಕುಮಾರ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ … Continued

ಟಿಟಿಪಿ ಸಂಪರ್ಕದ ಶಂಕೆ: ಬೆಂಗಳೂರಿನಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿಯ ಬಂಧನ

ಬೆಂಗಳೂರು: ಪಾಕಿಸ್ತಾನದಲ್ಲಿನ ನಿಷೇಧಿತ ಉಗ್ರ ಸಂಘಟನೆಯಾದ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಜತೆ ಸಂಪರ್ಕ ಹೊಂದಿದ್ದಾನೆಂದು ಶಂಕಿಸಲಾದ ಹಾಗೂ ಪಾಕಿಸ್ತಾನ ಸೇನೆಯ ವಿರುದ್ಧ ದಾಳಿ ನಡೆಸಲು ಸಂಚು ರೂಪಿಸಿದ್ದನೆಂದು ಆರೋಪಿಸಲಾದ 25 ವರ್ಷದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ನೌಪುರ ಗ್ರಾಮದ ನಿವಾಸಿ ಅಸಾಫುಲ್ ಮಲ್ಲಿಕ್ ಎಂದು … Continued

ಕಾರವಾರ | ಸ್ವಾತಂತ್ರ್ಯ ದಿನಾಚರಣೆ : ಮೊಬೈಲ್ ಟಾರ್ಚ್ ಹಿಡಿದು ಭಾಷಣ ಓದಿದ ಸಚಿವ ಲಕ್ಷ್ಮಣ ಸವದಿ

 ಕಾರವಾರ: ಉತ್ತರ ಕನ್ನಡ ಜಿಲ್ಲಾ ಕೇಂದ್ರವಾದ ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಮಂದ ಬೆಳಕಿದ್ದ ಕಾರಣ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಲಕ್ಷ್ಮಣ ಸವದಿ ಅವರು ಮೊಬೈಲ್ ಟಾರ್ಚ್ ಬೆಳಕನ್ನು ಬಳಸಿ ಭಾಷಣ ಮಾಡಬೇಕಾಯಿತು. ನಗರದ ಕಾಜುಭಾಗದಲ್ಲಿರುವ ಪೊಲೀಸ್ ಪರೇಡ್ ಮೈದಾನದಲ್ಲಿ ಶನಿವಾರ 80ನೇ ಸ್ವಾತಂತ್ರ್ಯೋತ್ಸವವನ್ನು ಸಡಗರದಿಂದ ಆಚರಿಸಲಾಯಿತು. … Continued

ಬಿಜೆಪಿ ಶಾಸಕರ ಪುತ್ರಿಯಿಂದ ಮಹಿಳಾ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ : ಪ್ರಕರಣ ದಾಖಲು ; ಶಾಸಕರಿಂದ ಕ್ಷಮೆಯಾಚನೆ

ಬೆಂಗಳೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ದೇವಸ್ಥಾನದಲ್ಲಿ ವಿಶೇಷ ಭದ್ರತಾ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ (ಪಿಎಸ್‌ಐ) ಮೇಲೆ ಬಿಜೆಪಿ ಶಾಸಕ ಬಿ.ಎಸ್. ಸುರೇಶ್‌ ಗೌಡ ಅವರ ಪುತ್ರಿ ಐಶ್ವರ್ಯ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆಗಸ್ಟ್‌ 12ರಂದು ರಾತ್ರಿ ಸುಮಾರು 8:15ಕ್ಕೆ ದೇವಸ್ಥಾನದ ಆವರಣದಲ್ಲೇ ಈ ಘಟನೆ ನಡೆದಿದೆ ಎನ್ನಲಾಗಿದೆ. … Continued

ಪಾಕಿಸ್ತಾನ–ಐಸಿಸ್‌ ನಂಟಿನ ಶಂಕೆ : ಕಲಬುರಗಿಯಲ್ಲಿ ಇಬ್ಬರು ವಶಕ್ಕೆ

ಕಲಬುರಗಿ: ಪಾಕಿಸ್ತಾನದ ಜೊತೆ ಸಂಪರ್ಕ ಹೊಂದಿರುವ ಹಾಗೂ ಉಗ್ರ ಸಂಘಟನೆ ಐಸಿಸ್‌ (ISIS) ಜೊತೆ ಶಂಕಿತ ನಂಟು ಹೊಂದಿರುವ ಆರೋಪದ ಮೇರೆಗೆ ಉತ್ತರ ಪ್ರದೇಶ ಮೂಲದ ಇಬ್ಬರನ್ನು ಕಲಬುರಗಿ ಜಿಲ್ಲೆಯಲ್ಲಿ ಉತ್ತರ ಪ್ರದೇಶದ ಭಯೋತ್ಪಾದನೆ ನಿಗ್ರಹ ದಳ (UP ATS) ಬಂಧಿಸಿದೆ. ಕೇಂದ್ರ ಗುಪ್ತಚರ ಸಂಸ್ಥೆಯಿಂದ ಲಭಿಸಿದ ಮಾಹಿತಿಯ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆಸಲಾಗಿದೆ … Continued

ಕಾರವಾರ : ಬೀದಿ ಗೂಳಿಗಳ ಕಾಳಗಕ್ಕೆ ಪಾದಾಚಾರಿ ಮಹಿಳೆ ಸಾವು

ಕಾರವಾರ: ಬೀದಿ ಗೂಳಿಗಳ ಕಾಳಗಕ್ಕೆ ಸಿಲುಕಿ ಅಮಾಯಕ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಮಲ್ಲಾಪುರ ಗ್ರಾಮದ ನಿವಾಸಿ ರಾಜೇಶ್ವರಿ (29) ಎಂದು ಗುರುತಿಸಲಾಗಿದೆ. ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ವೇಳೆ ಗ್ರಾಮದ ಸುಭದ್ರಾ ಹೋಟೆಲ್ ಸಮೀಪ ರಸ್ತೆಯಲ್ಲಿ ಕಾದಾಡುತ್ತಿದ್ದ ಎರಡು ಗೂಳಿಗಳು … Continued

ಬೀದರ ಎಟಿಎಂ ದರೋಡೆ ಪ್ರಕರಣ ; 19 ತಿಂಗಳ ಬಳಿಕ ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ

ಬೀದರ: ಇಡೀ ರಾಜ್ಯವನ್ನೆ ಬೆಚ್ಚಿ ಬೀಳಿಸಿದ್ದ ಬೀದರ ಎಟಿಎಂ ದರೋಡೆ ಹಾಗೂ ವ್ಯಾನ್ ಸಿಬ್ಬಂದಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 19 ತಿಂಗಳ ನಂತರ ಪೊಲೀಸರು ಕೊನೆಗೂ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ್ದಾರೆ. ದರೋಡೆ ಮತ್ತು ಕೊಲೆ ಪ್ರಕರಣದ ಆರೋಪಿಗಳಾದ ಬಿಹಾರದ ವೈಶಾಲಿ ಜಿಲ್ಲೆಯ ಫತೇಪುರ್ ಫುಲ್ವಾರಿಯಾ ನಿವಾಸಿ ಅಮನ್ ಕುಮಾರ ಮತ್ತು ಬಿಹಾರದ … Continued

ಕರ್ನಾಟಕದ 4 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ ; ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಲವು ಜಿಲ್ಲೆಗಳಲ್ಲಿ ಆಗಸ್ಟ್ 13ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿವೆ. ಗುರುವಾರ ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ … Continued