ಸಿದ್ದಾಪುರ : ಜನಮನ ಸೂರೆಗೊಂಡ ರಾಮಕಥಾ ಯಕ್ಷನೃತ್ಯ ರೂಪಕ

ಸಿದ್ದಾಪುರ : ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ನ ಕರ್ನಾಟಕದ ಶಿರಸಿ ಜಿಲ್ಲಾ ಹಾಗೂ ಸಿದ್ದಾಪುರ ತಾಲೂಕು ಸಮಿತಿಗಳ ಸಹಯೋಗದಲ್ಲಿ ಪಟ್ಟಣದ ಸಿದ್ಧಿವಿನಾಯಕ ಪ್ರೌಢಶಾಲೆಯಲ್ಲಿ ಯಕ್ಷ ರಾಮಕಥಾ ಯಕ್ಷನೃತ್ಯ ರೂಪಕ ಕಾರ್ಯಕ್ರಮ ಪ್ರದರ್ಶನಗೊಂಡಿತು. ಈ ಕಾರ್ಯಕ್ರಮದಲ್ಲಿ ಪೂರ್ವಭಾವಿಯಾಗಿ ಮಾತನಾಡಿದ ಶ್ರೀರಾಮಚಂದ್ರಾಪುರ ಮಠದ ಶಾಸನ ತಂತ್ರದ ಅಧ್ಯಕ್ಷ ಹಾಗೂ ವಾಗ್ಮಿ ಮೋಹನ ಹೆಗಡೆ ಹೆರವಟ್ಟಾ, ರಾಮಾಯಣವು ಕಾಲಾತೀತ ಮಹಾಕಾವ್ಯವಾಗಿದ್ದು, … Continued

ವಿದ್ಯಾರ್ಥಿನಿಗೆ ಕಿರುಕುಳ: ಕವಿವಿ ಪ್ರಾಧ್ಯಾಪಕ ಡಾ. ದೇವರಾಜನ್ ತಂಗದುರೈ ಅಮಾನತು

ಧಾರವಾಡ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಧಾರವಾಡದ ಕರ್ನಾಟಕ ವಿಶ್ವ ವಿದ್ಯಾನಿಲಯದ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ದೇವರಾಜನ್ ತಂಗದುರೈ ಅವರನ್ನು ಅಮಾನತು ಮಾಡಿ ಕವಿವಿ ಕುಲಸಚಿವರು ಬುಧವಾರ ಆದೇಶ ಹೊರಡಿಸಿದ್ದಾರೆ. ಪ್ರಾಧ್ಯಾಪಕರು ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿರುವುದು, ಪಿಎಚ್‌ಡಿ ವಿದ್ಯಾರ್ಥಿಗೆ ಹಿಂಸೆ ನೀಡುತ್ತಿರುವ ಬಗ್ಗೆ ಕುಲಪತಿಗಳಿಗೆ ದೂರು ಸಲ್ಲಿಕೆಯಾಗಿದ್ದವು. ಕಿರುಕುಳ ನೀಡಿದಕ್ಕೆ ವಿದ್ಯಾರ್ಥಿನಿ … Continued

ಒಪ್ಪಿಗೆಯಿಲ್ಲದೆ ಖಾಸಗಿ ವೀಡಿಯೊ-ಫೋಟೊ ಶೇರ್ ಮಾಡಿದ್ರೆ ಎಫ್‌ಐಆರ್ : ಪೊಲೀಸ್ ಇಲಾಖೆಯಿಂದ ಹೊಸ ಮಾರ್ಗಸೂಚಿ

ಬೆಂಗಳೂರು : ಬೇರೆಯವರ ಖಾಸಗಿ ಚಿತ್ರ, ವಿಡಿಯೋ ವೈರಲ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಇಲಾಖೆ ಮುಂದಾಗಿದೆ. ಬೇರೆಯವರ ಖಾಸಗಿ ಚಿತ್ರ-ವಿಡಿಯೋ ವೈರಲ್ ಮಾಡುವವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ. ಸಂತ್ರಸ್ತರು ಮೊದಲು ಖಾಸಗಿ ದೃಶ್ಯ ಚಿತ್ರೀಕರಣಕ್ಕೆ ಒಪ್ಪಿದ್ದರು ಎಂದ ಮಾತ್ರಕ್ಕೆ ದೂರು ಸ್ವೀಕರಿಸದೇ ಇರಬಾರದು. … Continued

ಧರ್ಮಸ್ಥಳ ಪ್ರಕರಣ; ಚಿನ್ನಯ್ಯ ನನಗೆ ಕರೆ ಮಾಡಿದ್ದ, ಆದರೆ ಎಸ್‌ಐಟಿ ಸಂಪರ್ಕಿಸಲು ಹೇಳಿದ್ದೆ- ನಟ ಪ್ರಕಾಶ್ ರಾಜ

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆರೋಪಗಳು ಹಾಗೂ ‘ಚಿನ್ನಯ್ಯ’ ಎಂಬಾತ ನೀಡಿರುವ ಹೇಳಿಕೆಗಳಿಗೂ ತನಗೂ ಸಂಬಂಧವಿಲ್ಲ ಎಂದು ನಟ ಪ್ರಕಾಶ ರೈ ಹೇಳಿದ್ದಾರೆ. ನಗರದ ಪ್ರೆಸ್ ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ತಮ್ಮ ಹೆಸರನ್ನು ಎಳೆದು ತರಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.“ಧರ್ಮಸ್ಥಳದ ಹೆಸರು ಹಾಳು ಮಾಡಲು … Continued

ಪೋಕ್ಸೊ ಪ್ರಕರಣ | ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು: ಆಘಾತ ವ್ಯಕ್ತಪಡಿಸಿದ ಹೈಕೋರ್ಟ್‌

ಬೆಂಗಳೂರು: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆ ಅಡಿ ದಾಖಲಾಗಿರುವ ಪ್ರಕರಣದಲ್ಲಿ ದಾವಣಗೆರೆ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ವಿಚಾರಣಾ ನ್ಯಾಯಾಲಯದ ಕ್ರಮಕ್ಕೆ ಹೈಕೋರ್ಟ್ ಮಂಗಳವಾರ ಆಘಾತ ವ್ಯಕ್ತಪಡಿಸಿದೆ. ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ 2026ರ ಮೇ 6ರಂದು ದಾವಣಗೆರೆಯ ಹೆಚ್ಚುವರಿ ಜಿಲ್ಲಾ ಮತ್ತು … Continued

ಧರ್ಮಸ್ಥಳ ಪ್ರಕರಣದ ತನಿಖಾ ತಂಡದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ

ಮಂಗಳೂರು : ಧರ್ಮಸ್ಥಳ ಗ್ರಾಮದ ವಿವಾದಿತ ಶವ ಹೂತಿಟ್ಟ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾರ್ಮಾಡಿ ಘಾಟಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆಯಲ್ಲಿ ನಾಲ್ವರು ಪೊಲೀಸ್‌ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಧರ್ಮಸ್ಥಳದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ … Continued

ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ ವಿರೋಧಿಸಿ ಸರ್ಕಾರಕ್ಕೆ 10 ಸಾವಿರಕ್ಕೂ ಅಧಿಕ ಪತ್ರ ಸಲ್ಲಿಕೆ

 ಶಿರಸಿ: ಬೇಡ್ತಿ-ವರದಾ ಹಾಗೂ ಅಘನಾಶಿನಿ-ವೇದಾವತಿ ನದಿ ತಿರುವು ಯೋಜನೆ ವಿರೋಧಿಸಿ ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಜನರು ಸೋಮವಾರ ಶಿರಸಿಯ ಸಹಾಯಕ ಆಯುಕ್ತರ ಕಚೇರಿಗೆ ತೆರಳಿ ಮುಖ್ಯಮಂತ್ರಿಗೆ ಸುಮಾರು 10 ಸಾವಿರಕ್ಕೂ ಅಧಿಕ ಪತ್ರಗಳನ್ನು ಸಲ್ಲಿಸಿದರು. ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳ ಸಮ್ಮುಖದಲ್ಲಿ ಸೇರಿದ್ದ ಸಾವಿರಾರು ಜನರು … Continued

ಕುಮಟಾ : ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಬೀಚ್‌ನಲ್ಲಿ ಸಮುದ್ರಕ್ಕೆ ಇಳಿದಿದ್ದ ಪುಣೆ ಮೂಲದ ಯುವಕನೊಬ್ಬ ಅಲೆಗಳ ಸೆಳೆತಕ್ಕೆ ಸಿಲುಕಿ ಸಮುದ್ರಪಾಲಾಗಿರುವ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಸಮುದ್ರದಲ್ಲಿ ಕೊಚ್ಚಿಹೋದ ಯುವಕನನ್ನು   ಪುಣೆ ಮೂಲದ ಐಟಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಜೀವನ್ ಭಟ್ಟಾರಾಯ (26) ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಇವರು ತಮ್ಮ ಸ್ನೇಹಿತರ ಜೊತೆಗೆ … Continued

ಮೈಸೂರು: ಪಬ್‌ನಲ್ಲಿ ಭೀಕರ ಅಗ್ನಿ ಅನಾಹುತ; ಇಬ್ಬರುಸಜೀವ ದಹನ, ಹಲವರಿಗೆ ಗಾಯ

ಮೈಸೂರು: ಇಲ್ಲಿನ ರೆಸ್ಟೋ ಪಬ್‌ (Restopub) ಒಂದರಲ್ಲಿ ಸೋಮವಾರ ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ ಇಬ್ಬರು ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ದುರದೃಷ್ಟಕರ ಘಟನೆ ಮೈಸೂರಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮಾಹಿತಿ ಪ್ರಕಾರ, ಮೃತರನ್ನು ಡಾರ್ಜಿಲಿಂಗ್ ಮೂಲದ 26 ವರ್ಷದ ಸಾಹಿನ್ ಮತ್ತು ನೇಪಾಳ ಮೂಲದ 24 ವರ್ಷದ ಪ್ರಕಾಶ ಎಂದು ಗುರುತಿಸಲಾಗಿದೆ. ಮೃತರಿಬ್ಬರೂ … Continued

ಆರ್‌ಎಸ್‌ಎಸ್‌ ನೋಂದಣಿ- ಕಾನೂನುಬದ್ಧ ಸ್ಥಿತಿಗತಿಯ ಬಗ್ಗೆ ಸ್ಪಷ್ಟನೆ ಕೋರಿ ಮುಖ್ಯಸ್ಥ ಮೋಹನ ಭಾಗವತ್‌ಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ತನ್ನ ಕಾನೂನಾತ್ಮಕ ಸ್ಥಾನಮಾನ, ಸಾಂಸ್ಥಿಕ ರಚನೆ ಹಾಗೂ ಆರ್ಥಿಕ ಮೂಲಗಳನ್ನು ಬಹಿರಂಗಪಡಿಸಬೇಕು ಎಂದು ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ. 100 ವರ್ಷಗಳನ್ನು ಪೂರೈಸಿದ್ದಕ್ಕಾಗಿ ಸಂಸ್ಥೆಯನ್ನು ಅಭಿನಂದಿಸುವುದರ ಜೊತೆಗೆ ಅದರ ಕಾನೂನು ಸ್ಥಿತಿ, ಸಾಂಸ್ಥಿಕ ರಚನೆ, ಹಣಕಾಸಿನ ಮೂಲಗಳು ಮತ್ತು ಭಾರತೀಯ ಕಾನೂನುಗಳ ಅನುಸರಣೆಯ ಬಗ್ಗೆ ಸ್ಪಷ್ಟೀಕರಣವನ್ನು … Continued