ನನ್ನ ವಜಾಗೊಳಿಸಿದ್ದರ ಹಿಂದೆ ದೊಡ್ಡ ಷಡ್ಯಂತ್ರವಿದೆ…’: ಮಾಜಿ ಸಚಿವ ಕೆ.ಎನ್. ರಾಜಣ್ಣ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಿಂದ ವಜಾಗೊಂಡ ಬಳಿಕ ಮೊದಲ ಪ್ರತಿಕ್ರಿಯೆ ನೀಡಿರುವ ಕೆ.ಎನ್. ರಾಜಣ್ಣ ಅವರು, ತಮನ್ನು ಸಂಪುಟದಿಂದ ವಜಾಗೊಳಿಸಿದ್ದರ ಹಿಂದೆ ದೊಡ್ಡ ಷಡ್ಯಂತ್ರವಿದೆ ಎಂದು ಹೇಳಿದ್ದಾರೆ. ಮತ ಕಳ್ಳತನ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಯಾನದ ವಿರುದ್ಧ ಹೇಳಿಕೆ ಕೊಟ್ಟ ನಂತರ ಹೈಕಮಾಂಡ್‌ ಸೂಚನೆ ಮೇರೆಗೆ ಕೆ.ಎನ್. ರಾಜಣ್ಣ ತಲೆ ದಂಡವಾಗಿದ್ದು, … Continued

ಸಚಿವ ಸ್ಥಾನದಿಂದ ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಎನ್‌.ರಾಜಣ್ಣ ವಜಾಗೊಳಿಸಿದ್ದರ ಹಿಂದಿನ ಕಾರಣಗಳೇನು..?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಷ್ಠಾವಂತರೆಂದು ಪರಿಗಣಿಸಲ್ಪಟ್ಟ ರಾಜ್ಯದ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಹೈಕಮಾಂಡ್‌ ಸೂಚನೆಯ ಮೇರೆಗೆ ರಾಜೀನಾಮೆ ನೀಡಿದ್ದಾರೆ. ರಾಜ್ಯದ ಒಂದು ವಿಧಾನಸಭಾ ಕ್ಷೇತ್ರದಲ್ಲಿ ನಡೆದ “ಮತ ಕಳ್ಳತನ”ಕ್ಕೆ ಕರ್ನಾಟಕದಲ್ಲಿ ತಮ್ಮದೇ ಪಕ್ಷದ ಸರ್ಕಾರವನ್ನು ದೂಷಿಸಿದ ಆರೋಪದ ಮೇಲೆ ಕಾಂಗ್ರೆಸ್ ಹೈಕಮಾಂಡ್ ಮುಜುಗರಕ್ಕೆ ಒಳಗಾದ ನಂತರ ಹೈಕಮಾಂಡ್‌ ಸೂಚನೆಯ ಮೇರೆಗೆ ಅವರನ್ನು … Continued

ವಿಜಯಪುರ ಮಹಾನಗರ ಪಾಲಿಕೆ ಇದೇ ಮೊದಲ ಬಾರಿಗೆ ಬಿಜೆಪಿ ತೆಕ್ಕೆಗೆ

ವಿಜಯಪುರ: ಗುಮ್ಮಟ ನಗರ ಎಂದೇ ಖ್ಯಾತಿ ಪಡೆದ ವಿಜಯಪುರ ಮಹಾನಗರ ಪಾಲಿಕೆ ಮೊದಲ ಬಾರಿಗೆ ಬಿಜೆಪಿ ತೆಕ್ಕೆಗೆ ಸೇರಿದೆ. ಬಿಜೆಪಿ ಸದಸ್ಯರಾದ ಎಂ.ಎಸ್. ಕರಡಿ ಮೇಯರ್ ಹಾಗೂ ಬಿಜೆಪಿ ಬೆಂಬಲಿತ ಪಕ್ಷೇತರ ಸದಸ್ಯೆ ಸುಮಿತ್ರಾ ಜಾಧವ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಜನವರಿ, ಫೆಬ್ರುವರಿಯಲ್ಲಿ ನಡೆದ ವಿಜಯಪುರ ಮಹಾನಗರ ಪಾಲಿಕೆಯ 22ನೇ ಮೇಯರ್ ಹಾಗೂ ಉಪ ಮೇಯರ್ … Continued

ಯಲ್ಲಾಪುರ | ಹಳ್ಳದಲ್ಲಿ ಕೊಚ್ಚಿ ಹೋದ ಇಬ್ಬರು ಯುವಕರು, ಒಬ್ಬನ ಶವ ಪತ್ತೆ

ಯಲ್ಲಾಪುರ : ಬೇಡ್ತಿ ನದಿಗೆ ಮೀನು ಹಿಡಿಯಲು ಹೋದಾಗ ಮೀನು ಹಿಡಿದು ವಾಪಸು ಬರುತ್ತಿರುವಾಗ ಕವಲಗಿ ಹಳ್ಳದಲ್ಲಿ ಒಮ್ಮೆಲೆ ನೀರು ಹೆಚ್ಚಾಗಿ ಇಬ್ಬರು ಕೊಚ್ಚಿ ಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾದನಸರದ ಬಳಿ ನಡೆದಿದ್ದು, ಸೋಮವಾರ ಒಬ್ಬನ ಶವ ಪತ್ತೆಯಾಗಿದೆ ಎಂದು ವರದಿಯಾಗಿದೆ. 8 ಮಂದಿ ಸೇರಿ ಕವಲಗಿ ಹಳ್ಳ ದಾಟಿ … Continued

ಸಚಿವ ಸ್ಥಾನಕ್ಕೆ ಕೆ.ಎನ್‌.ರಾಜಣ್ಣ ದಿಢೀರ್‌ ರಾಜೀನಾಮೆ..!

ಬೆಂಗಳೂರು: ಮತಗಳ್ಳತನ ಆರೋಪದ ವಿರುದ್ಧ ಕಾಂಗ್ರೆಸ್‌ ನಿಲುವಿನ ವಿರುದ್ಧ ಹೇಳಿಕೆ ನೀಡಿದ್ದ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಗೀಕರಿಸಿದ್ದಾರೆ. ಇಡೀ ಕಾಂಗ್ರೆಸ್‌‍ ಪಕ್ಷವೇ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಚುನಾವನಾ ಆಯೋಗದ ವಿರುದ್ಧವಾಗಿ ಹೋರಾಟ ನಡೆಸಿದರೆ, ಸಚಿವ ಕೆ.ಎನ್‌.ರಾಜಣ್ಣ ವ್ಯತಿರಿಕ್ತ ಹೇಳಿಕೆ … Continued

ಭಯಾನಕ ವೀಡಿಯೊ…| ಬಂಡೀಪುರ : ಫೋಟೋ ತೆಗೆಯಲು ಮುಂದಾದವನ ಅಟ್ಟಾಡಿಸಿಕೊಂಡು ಹೋಗಿ ಮೆಟ್ಟಿದ ಕಾಡಾನೆ

ಮೈಸೂರು: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕೇರಳದ ಪ್ರವಾಸಿಯೊಬ್ಬರ ಮೇಲೆ ಕಾಡು ಆನೆ ದಾಳಿ ನಡೆಸಿದೆ. ಪ್ರವಾಸಿಗನನ್ನು ನೆಲಕ್ಕೆ ತಳ್ಳಿದ ಆನೆ ಕಾಲಿನಿಂದ ತುಳಿದಿದೆ. ಆದರೆ ಉಳಿದ ಪ್ರವಾಸಿಗರು ಬೊಬ್ಬೆ ಹೊಡೆದ ನಂತರ ಆತನನ್ನು ಬಿಟ್ಟುಹೋಗಿದೆ. ಪ್ರವಾಸಿಗನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗ ವೈರಲ್ ಆಗಿರುವ ಘಟನೆಯ ವೀಡಿಯೊದಲ್ಲಿ, ವಾಹನಗಳು ಮತ್ತು ಜನರಿಂದ ತುಂಬಿದ್ದ ರಸ್ತೆಯಲ್ಲಿ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆಗಸ್ಟ್‌ 16ರ ವರೆಗೆ ಭಾರಿ ಗಾಳಿಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 16ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಉತ್ತರ ಒಳನಾಡು, ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆಯನ್ನು ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಸಹ ಈ ಅವಧಿಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ. … Continued

ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ್ದಾರೆಂಬ ಆರೋಪ ; ದಾಖಲೆ ನೀಡುವಂತೆ ರಾಹುಲ್​ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್

ಬೆಂಗಳೂರು : ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಭಾನುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದು ಆರೋಪಿಸಿರುವ ದಾಖಲೆಗಳನ್ನು ಸಲ್ಲಿಸುವಂತೆ ಕೋರಿದ್ದಾರೆ. ಈ ದಾಖಲೆಗಳು ವಿವರವಾದ ತನಿಖೆ ನಡೆಸಲು ಸಹಾಯ ಮಾಡುತ್ತದೆ ಎಂದು ರಾಹುಲ್‌ ಗಾಂಧಿಗೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ … Continued

ವೀಡಿಯೊ…| ಉಡುಪಿ ಶ್ರೀಕೃಷ್ಣ ಮಠದಲ್ಲಿ ದೇವರ ಪೂಜಾ ಪಾತ್ರೆ ತೊಳೆದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌, ಹೂವು ಕಟ್ಟಿದ ಸುಧಾಮೂರ್ತಿ

ಉಡುಪಿ: ಕರ್ನಾಟಕದ ಉಡುಪಿಗೆ ಭೇಟಿ ನೀಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಪೂಜಾ ಪಾತ್ರೆ ತೊಳೆಯುವ ಮೂಲಕ ಸರಳತೆ ಮೆರೆದಿದ್ದಾರೆ. ಅವರಿಗೆ ರಾಜ್ಯಸಭೆ ಸದಸ್ಯೆ ಹಾಗೂ ಇನ್ಫೋಸಿಸ್‌ ಫೌಂಡೇಶನ್‌ ಮುಖ್ಯಸ್ಥೆ ಸುಧಾಮೂರ್ತಿ ಸಾಥ್ ನೀಡಿದರು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಶನಿವಾರ ಶ್ರೀಕೃಷ್ಣ ಮಠದಲ್ಲಿ ಸಾಂಪ್ರದಾಯಿಕ ಹೊಸ್ತಿಲು ಪೂಜೆ, ದೇವರ … Continued

ಬೆಂಗಳೂರಿಗೆ ಬಂದ ಪ್ರಧಾನಿ ಮೋದಿಗೆ 5 ವರ್ಷದ ಬಾಲಕಿ ಬರೆದ ಪತ್ರ ವೈರಲ್‌; ಪತ್ರದಲ್ಲೇನಿದೆ ಗೊತ್ತೆ..?

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ, ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ಹಾಗೂ ಮೂರು ವಂದೇ ಭಾರತ ರೈಲುಗಳಿಗೆ ಇಂದು, (ಆಗಸ್ಟ್‌ 10) ಚಾಲನೆ ನೀಡಿದ್ದಾರೆ. ಬೆಂಗಳೂರಿಗೆ ಮೋದಿ ಆಗಮಿಸಿದ ಹಿನ್ನೆಲೆಯಲ್ಲಿ ನಗರದ 5 ವರ್ಷದ ಬಾಲಕಿ ಪ್ರಧಾನಿಗೆ ಪತ್ರ ಬರೆದಿದ್ದು, ಇದು ವೈರಲ್‌ ಆಗಿದೆ. ಬೆಂಗಳೂರಿನ ರಸ್ತೆಗಳ … Continued