ತುಳಿತಕ್ಕೊಳಗಾದವರಿಗೆ ಮೀಸಲಾತಿ ಸಿಗಲಿ: ಸುತ್ತೂರು ಶ್ರೀ

ಮೈಸೂರು: ಎಲ್ಲ ಸಮುದಾಯಗಳಲ್ಲಿಯೂ ತುಳಿತಕ್ಕೊಳಗಾದವರಿದ್ದು, ಅಂಥವರಿಗೆ ಮೀಸಲಾತಿ ಸೌಲಭ್ಯ ದೊರೆಯಬೇಕು ಎಂದು ಸುತ್ತೂರು ಶ್ರೀ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ರಾಜ್ಯದಲ್ಲಿ ಮೀಸಲಾತಿಗಾಗಿ ಹಲವು ಸಮುದಾಯದವರು ಹೋರಾಟ ನಡೆಸುತ್ತಿದ್ದಾರೆ. ಸೌಲಭ್ಯ ವಂಚಿತರಿಗೆ ಸೌಲಭ್ಯ ಒದಗಿಸುವ ಕೆಲಸವನ್ನು ಸರಕಾರ ಸಮರ್ಪಕವಾಗಿ ಮಾಡಬೇಕು ಎಂದರು. ಒಂದು ಸಮುದಾಯದಲ್ಲಿ ನಾಲ್ಕಾರು ಜನರು ಸೌಲಭ್ಯ ಪಡೆದುಕೊಂಡಿದ್ದಾರೆಂದರೆ ಎಲ್ಲರೂ ಸೌಲಭ್ಯ ಪಡೆದುಕೊಂಡಂತಲ್ಲ. ತುಳಿತಕ್ಕೊಳಗಾದವರನ್ನು ಗುರುತಿಸಿ … Continued

ಸಂಘ ಪರಿವಾರ ಸಾಮಾಜಿಕ ನ್ಯಾಯ ಹೋರಾಟದ ದಾರಿ ತಪ್ಪಿಸುತ್ತಿದೆ: ಸಿದ್ದರಾಮಯ್ಯ ಆರೋಪ

ನಾವೆಲ್ಲ ಹಿಂದೂ ನಾವೆಲ್ಲ ಒಂದು ಎಂದು ಹೇಳುತ್ತಿದ್ದ ಸಂಘ ಪರಿವಾರ ಈಗ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ವಹಿಸುತ್ತಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮೀಸಲಾತಿಯನ್ನು ನೇರವಾಗಿ ವಿರೋಧಿಸದ ಸಂಘ ಪರಿವಾರದ ಮುಖಂಡರು ಜಾತಿ ಜಾತಿಗಳ ಮಧ್ಯೆ ವಿವಾದ ಸೃಷ್ಟಿಸಿ ಸಾಮಾಜಿಕ ನ್ಯಾಯ ಹೋರಾಟದ ದಾರಿ ತಪ್ಪಿಸುತ್ತಿದ್ದಾರೆ. … Continued

ಹಿಂದಿ ಹೇರಿದರೆ ರಕ್ತಪಾತವಾದೀತು: ಸಿದ್ದರಾಮಯ್ಯ ಅಬ್ಬರ

ಮಂಡ್ಯ: ಹಿಂದಿ ರಾಷ್ಟ್ರೀಯ ಭಾಷೆಯಲ್ಲ, ಅದನ್ನು ಬಲವಂತವಾಗಿ ರಾಜ್ಯದ ಜನರ ಮೇಲೆ ಹೇರಿದರೆ ರಕ್ತಪಾತ ಉಂಟಾಗುವ ಸಾಧ್ಯತೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಬ್ಬರಿಸಿದ್ದಾರೆ. ಉತ್ತರ ಭಾರತದ ಐದಾರು ರಾಜ್ಯಗಳನ್ನು ಹೊರತುಪಡಿಸಿದರೆ ಪಂಜಾಬ್‌, ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಹಿಂದಿ ಮಾತಾಡುವವರೇ ಇಲ್ಲ. ಇದರಿಂದಾಗಿ ಹಿಂದಿ ರಾಷ್ಟ್ರ ಭಾಷೆಯಾಗಲು … Continued

ಮುಂದಿನ ಚುನಾವಣೆಯಲ್ಲಿ ನಿಮ್ಮ ತಾಕತ್‌ ತೋರಿಸಿ: ಕಾರ್ಯಕರ್ತರಿಗೆ ದೇವೆಗೌಡ ಮನವಿ

ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ನಮ್ಮ ತಾಕತ್ತು ಏನು ಎಂಬುದನ್ನು ತೋರಿಸಬೇಕಿದೆ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಕಾರ್ಯಕರ್ತರಲ್ಲಿ ಕೋರಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಜೆಡಿಎಸ್ ಸಮಾವೇಶವನ್ನು ಉದ್ಘಾಟಿಸಿದ ನಂತರ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕೆಂದು ಕಾರ್ಯಕರ್ತರು, ಮುಖಂಡರಲ್ಲಿ ಮನವಿ ಮಾಡಿದರು. ನಾನು ಮುಂದೆ ನಿಮಗೆ ಮಾರ್ಗದರ್ಶನ ಮಾಡಬಹುದು … Continued

ಮನಸು ಮಾಡಿದ್ರೆ ೨೪ ಗಂಟೆಗಳಲ್ಲಿ ೫ ಕಾಂಗ್ರೆಸ್‌ ಶಾಸಕರ ರಾಜೀನಾಮೆ ಕೊಡಿಸಬಲ್ಲೆ

ಬೆಳಗಾವಿ: ನಾನು ಮನಸು ಮಾಡಿದರೆ ೨೪ ಗಂಟೆಗಳಲ್ಲಿ ಐದು ಕಾಂಗ್ರೆಸ್‌ ಶಾಸಕರ ರಾಜಿನಾಮೆ ಕೊಡಿಸಬಲ್ಲೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಕಾಂಗ್ರೆಸ್‌ನಿಂದ ಬಿಜೆಪಿಗೆ ೧೭ ಶಾಸಕರು ಖುಷಿಯಿಂದ ಇಲ್ಲ ಎಂದು ಕೆಲವರು ಹೇಳುತ್ತಾರೆ. ಆದರೆ ಬೇಕೆನಿಸಿದರೆ ೨೪ ತಾಸುಗಳಲ್ಲಿ ಐವರು ಕಾಂಗ್ರೆಸ್‌ ಶಾಸಕರ ರಾಜಿನಾಮೆ ಕೊಡಿಸಬಲ್ಲೆ ಎಂದರು. ಕಾಂಗ್ರೆಸ್ನ ಉನ್ನತ ಹಂತದ … Continued

ಉಪ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಕಣಕ್ಕೆ: ಎಚ್‌ಡಿಕೆ

ಬೆಂಗಳೂರು: ಬಸವಕಲ್ಯಾಣ, ಮಸ್ಕಿ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಜೆಡಿಎಸ್‌ ಮುಖಂಡ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಅವರು ಅರಮನೆ ಮೈದಾನದಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಮಾತನಾಡಿ, ಆರ್ಥಿಕ ಸಾಮರ್ಥ್ಯದ ಕೊರತೆಯಿಂದಾಗಿ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರಲು ನಿರ್ಧರಿಸಲಾಗಿತ್ತು. ಆದರೆ ಈಗ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಸೆಣೆಸಲಿದ್ದಾರೆ … Continued

ಡಿಸಿಎಂ ದಿಢೀರ್‌ ದೆಹಲಿ ಭೇಟಿ ತಂದ ಕುತೂಹಲ

ಬೆಂಗಳೂರು: ದಿಢೀರ್ ಬೆಳವಣಿಗೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ದಿಢೀರನೆ ದೆಹಲಿಗೆ ತೆರಳಿರುವುದು ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ವರಿಷ್ಠರ ಸೂಚನೆಯಂತೆ ಶನಿವಾರ ಬೆಳಗ್ಗೆ ನವದೆಹಲಿಗೆ ತೆರಳಿರುವ ಅವರು ಎರಡು ದಿನಗಳ ಕಾಲ ರಾಷ್ಟ್ರ ರಾಜಧಾನಿಯಲ್ಲೇ ಉಳಿಯಲಿದ್ದು, ಪಕ್ಷದ ಕೆಲವು ನಾಯಕರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ. ಯಾವ ಕಾರಣಕ್ಕಾಗಿ ಅವರು ದೆಹಲಿಗೆ ತೆರಳಿದ್ದಾರೆ ಎಂಬುದು ಖಚಿತಪಟ್ಟಿಲ್ಲ. … Continued

18 ಸಾವಿರ  ಕೋಟಿ  ಅದಿರು ನಿಧಿ ಬಳಕೆಗೆ ಕೇಂದ್ರದಿಂದ ಕಾನೂನು ನೆರವು ಕೋರಿದ ನಿರಾಣಿ 

ನವದೆಹಲಿ: ಸುಪ್ರೀಂಕೋರ್ಟ್ ನಿದೇರ್ಶನದಂತೆ ಕಳೆದ ಆರು ವರ್ಷಗಳಿಂದ ಕಬ್ಬಿಣದ ಅದಿರು ಗಣಿ ಕಂಪನಿಗಳಿಂದ  ಸಂಗ್ರಹಿಸಿರುವ ಸುಮಾರು 18 ಸಾವಿರ ಕೋಟಿ ರೂಪಾಯಿಯನ್ನು ಕರ್ನಾಟಕಕ್ಕೆ ನೀಡುವ ನಿಟ್ಟಿನಲ್ಲಿ ಕಾನೂನು ಮತ್ತು ಆಡಳಿತಾತ್ಮಕ ನೆರವು ನೀಡಬೇಕೆಂದು ಗಣಿ ಮತ್ತು ಭೂ ವಿಜ್ಞಾನ ಸಚಿವ  ಮುರುಗೇಶ್ ನಿರಾಣಿ, ಕೇಂದ್ರ ಗಣಿ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಮಾಡಿದ್ದಾರೆ. … Continued

ಮೀಸಲಾತಿ ಬೇಡಿಕೆ: ಕಾನೂನು ಚೌಕಟ್ಟಿನೊಳಗೆ ನ್ಯಾಯ ಒದಗಿಸುವ ಭರವಸೆ

ಮೈಸೂರು:ರಾಜ್ಯದಲ್ಲಿ ವಿವಿಧ ಸಮುದಾಯಗಳು ಮೀಸಲಾತಿ ಹೋರಾಟ ಆರಂಭಿಸಿವೆ. ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ‌ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಮೀಸಲಾತಿ ಹೋರಾಟ ಸಂಬಂಧ ತಜ್ಞರ ಜೊತೆ ಚರ್ಚೆಗಳು ನಡೆದಿವೆ. ಎಲ್ಲ ಸಮುದಾಯಗಳಿಗೆ ಕಾನೂನು ಚೌಕಟ್ಟಿನಲ್ಲಿ ಏನೆಲ್ಲ ಸಾಧ್ಯವೂ ಅದನ್ನು ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.. ಮೀಸಲಾತಿಗಾಗಿ ನಾಯಕ, ಕುರುಬ, ವೀರಶೈವ ಪಂಚಮ‌ಸಾಲಿ ಸೇರಿದಂತೆ … Continued

ಫೆ.೨೧ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಪಂಚಸಾಲಿಗಳ ಬೃಹತ್‌ ಸಮಾವೇಶ

ತುಮಕೂರು: ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ ೨ಎ ಮೀಸಲಾತಿಗಾಗಿ ಆಗ್ರಹಿಸಿ ಪಾದಯಾತ್ರೆ ಕೈಗೊಂಡಿದ್ದು, ಫೆ. ೨೧ ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುವ ತೀರ್ಮಾನವನ್ನು ಕೈಗೊಂಡಿದೆ. ನಗರದ ಸಿದ್ದಗಂಗಾ ಮಠದಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದ ಪಾದಯಾತ್ರಿಗಳುಶುಕ್ರವಾರ ಬೆಳಿಗ್ಗೆ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ, ವಚನಾನಂದ ಸ್ವಾಮೀಜಿ ಹಾಗೂ ವಿಜಯಾನಂದ ಕಾಶಪ್ಪನವರ್ ನೇತೃತ್ವದಲ್ಲಿ ಸಭೆ ನಡೆಸಿ … Continued