ಕಾರವಾರ | ರೈಲು ಡಿಕ್ಕಿ ಹೊಡೆದು ಚಿರತೆ ಸಾವು

ಕಾರವಾರ: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಚಿರತೆ ಸಾವಿಗೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಅಮದಳ್ಳಿ ಜಡಿಗದ್ದಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶುಕ್ರವಾರ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ ಎಂದು ಅರಣ್ಯಾಧಿಕಾರಿಗಳು ಶಂಕಿಸಿದ್ದಾರೆ. ರೈಲಿಗೆ ಡಿಕ್ಕಿಯಾಗಿ ಚಿರತೆ ಮೃತಪಟ್ಟಿರಬಹುದು ಎಂದು ಹೇಳಲಾಗಿದೆ. ಸುಮಾರು 8 ವರ್ಷದ ಗಂಡು ಚಿರತೆ ಹಲವು ದಿನಗಳಿಂದ ತೋಡೂರು … Continued

ವೀಡಿಯೊ | ವಿಶ್ವ ಸಂಸ್ಕೃತ ದಿನ 2025 : ಸಂಸ್ಕೃತದಲ್ಲೇ ಶುಭಾಶಯ ಕೋರಿ ಗಮನ ಸೆಳೆದ ಮಾಜಿ ಕ್ರಿಕೆಟರ್‌ ಅನಿಲ ಕುಂಬ್ಳೆ ದಂಪತಿ

ಬೆಂಗಳೂರು : ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಲೆಜೆಂಡರಿ ಲೆಗ್-ಸ್ಪಿನ್ನರ್ ಅನಿಲ ಕುಂಬ್ಳೆ ಹಾಗೂ ಅವರ ಪತ್ನಿ ಚೇತನಾ ಕುಂಬ್ಳೆ ಅವರೊಂದಿಗೆ, ವಿಶ್ವ ಸಂಸ್ಕೃತ ದಿನದ ಅಂಗವಾಗಿ ಎಲ್ಲರಿಗೂ ಸಂಸ್ಕೃತದಲ್ಲಿಯೇ ವಿಶೇಷ ವೀಡಿಯೊ ಸಂದೇಶ ಹಂಚಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ. ಈ ವರ್ಷ ಆಗಸ್ಟ್ 9 ರಂದು ಆಚರಿಸಲಾಗುವ ವಿಶ್ವ ಸಂಸ್ಕೃತ ದಿನವು … Continued

ಪತ್ನಿ, ಇಬ್ಬರು ಪುಟ್ಟ ಮಕ್ಕಳನ್ನು ಕೊಂದು ವ್ಯಕ್ತಿ ಪರಾರಿ

ನವದೆಹಲಿ: ಶುಕ್ರವಾರ ರಾತ್ರಿ ದೆಹಲಿಯ ಕರವಾಲ್ ನಗರ ಪ್ರದೇಶದ ಮನೆಯಲ್ಲಿ ವ್ಯಕ್ತಿಯೊಬ್ಬ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಮಕ್ಕಳು 5 ಮತ್ತು 7 ವರ್ಷದ ಹೆಣ್ಣು ಮಕ್ಕಳಾಗಿದ್ದಾರೆ. 28 ವರ್ಷದ ಪತ್ನಿ ಜಯಶ್ರೀ ಜೊತೆಗಿನ ದೀರ್ಘಕಾಲದ ಜಗಳವೇ ಈ ಕೊಲೆಗಳಿಗೆ ಕಾರಣವಾಗಿರಬಹುದು ಎಂದು ಅಧಿಕಾರಿಗಳು ಸೂಚಿಸಿದ್ದಾರೆ. ಆದಾಗ್ಯೂ, ನಿಖರವಾದ ಕಾರಣವನ್ನು … Continued

ಸಹಪಾಠಿಗಳಿಂದ ರ‍್ಯಾಗಿಂಗ್‌ ; ಡೆತ್‌ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

ಬಾಗಲಕೋಟೆ : ಸಹಪಾಠಿಗಳ ರ‍್ಯಾಗಿಂಗ್‌ಗೆ ಮನನೊಂದು ಬಿಎ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಜಿಲ್ಲೆಯ ಗುಳೇದಗುಡ್ಡ ಪಟ್ಟಣದ ಖಾಸಗಿ ಕಾಲೇಜಿನ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿ ಅಂಜಲಿ ಮುಂಡಾಸ (21) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ಶುಕ್ರವಾರ ಕಾಲೇಜಿನಲ್ಲಿ ಸಹಪಾಠಿಗಳು ವಿದ್ಯಾರ್ಥಿನಿಗೆ ರ‍್ಯಾಗಿಂಗ್ ಮಾಡಿದ್ದು, … Continued

ಮತಗಳ್ಳತನ ಆರೋಪ : ಚುನಾವಣಾ ಆಯೋಗಕ್ಕೆ ದೂರು ನೀಡಲು ಹಿಂದೇಟು ಹಾಕಿದರೇ ರಾಹುಲ್ ಗಾಂಧಿ…?

ಬೆಂಗಳೂರು : ಕಳೆದ ಲೋಕಸಭೆ ಚುನಾವಣೆಯಲ್ಲಿ (Lok Sabha Election) ಅಕ್ರಮವಾಗಿ ಮತದಾನ ನಡೆಸಲಾಗಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಕೆಲವು ದಾಖಲೆಗಳನ್ನು ಬಿಡುಗಡೆ ಮಾಡುವ ಮೂಲಕ ದೆಹಲಿಯಲ್ಲಿ ಗಂಭೀರ ಆರೋಪ ಮಾಡಿದ್ದರು. ಅಲ್ಲದೆ, ಇಂದು (ಆಗಸ್ಟ್ 8) ಬೆಂಗಳೂರಿನ ಮಹದೇವಪುರ ಹಾಗೂ ರಾಜಾಜಿನಗರದಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ … Continued

ಬೆಂಗಳೂರು | 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ ; ಬಾಲಕನ ಸಾವಿಗೆ ಕಾರಣವಾಯ್ತೇ ವೆಬ್‌ ಧಾರಾವಾಹಿ…?

ಬೆಂಗಳೂರು : ಬೆಂಗಳೂರಿನಲ್ಲಿ 7ನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಾಥಮಿಕ ತನಿಖೆ ವೇಳೆ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಬಾಲಕನ ಜಪಾನೀಸ್ ಭಾಷೆಯ ವೆಬ್ ಸಿರೀಸ್ (Web series) ಹುಚ್ಚಿನಿಂದ ಬಾಲಕ ಆತ್ಮಹತ್ಯೆ ಮಾಡುಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಸಿ.ಕೆ ಅಚ್ಚುಕಟ್ಟು ಪೊಲೀಸರಿಂದ ತನಿಖೆ ನಡೆಸುತ್ತಿದ್ದಾರೆ. ಆಗಸ್ಟ್ 3 ರ ಮಧ್ಯರಾತ್ರಿ ಸಿಕೆ … Continued

ಸಾಮಾಜಿಕ ಜಾಲತಾಣದಲ್ಲಿ ಅಶಾಂತಿ ಪ್ರೇರೇಪಿಸುವ ಹೇಳಿಕೆ ; ಮೂವರ ಮೇಲೆ ಪ್ರಕರಣ ದಾಖಲು

ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ದ್ವೇಷವನ್ನು ಪ್ರೇರೇಪಿಸುವಂತಹ ಹೇಳಿಕೆ ನೀಡಿದ್ದಕ್ಕಾಗಿ ಮತ್ತು ಅಶ್ಲೀಲವಾಗಿ ಮಾತನಾಡಿದ ವೀಡಿಯೊವನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಮೂವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಮಹೇಶ ಶೆಟ್ಟಿ ತಿಮರೋಡಿ, ಗಿರೀಶ ಮಟ್ಟಣ್ಣವರ, ಪುನೀತ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದ ಮಾಹಿತಿ ಲಭ್ಯವಾಗಿದೆ. ‘ಅಪರಾಧ ಕೃತ್ಯಗಳನ್ನು ನಡೆಸಲು ಪ್ರೇರಣೆಯಾಗುವಂತಹ ಮತ್ತು … Continued

ಮತಗಳ್ಳತನ ಆರೋಪ | ಘೋಷಣಾ ಪತ್ರದೊಂದಿಗೆ ದಾಖಲೆ ಸಲ್ಲಿಸಿ; ರಾಹುಲ್ ಗಾಂಧಿಗೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಸೂಚನೆ

ಬೆಂಗಳೂರು : ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಚುನಾವಣೆಯಲ್ಲಿ “ಭಾರಿ ವಂಚನೆ” ನಡೆದಿದೆ ಎಂದು ಆರೋಪಿಸಿ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಂಕಿ-ಅಂಶವನ್ನು ಉಲ್ಲೇಖಿಸಿ ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಕೈಜೋಡಿಸುತ್ತಿದೆ ಎಂದು ಆರೋಪಿಸಿದ ನಂತರ, ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ)ಯು ಇದನ್ನು ಘೋಷಣಾ ಪತ್ರದ ಮೂಲಕ ವಿವರಗಳನ್ನು ನೀಡುವಂತೆ ಹೇಳಿದ್ದಾರೆ. “ಗುರುವಾರ … Continued

ಡಿಸಿಎಂ ಶಿವಕುಮಾರ ಓಡಿಸಿದ್ದ ಸ್ಕೂಟರ್‌ ಮೇಲಿತ್ತು 34 ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ; ದಂಡ ಪಾವತಿಸಿದ ಮಾಲೀಕ

ಬೆಂಗಳೂರು: ಹೆಬ್ಬಾಳ ಮೇಲ್ಸೇತುವೆ ಲೂಪ್ ಪರಿಶೀಲನೆಯ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಚಲಾಯಿಸಿದ್ದ ದ್ವಿಚಕ್ರ ವಾಹನದ ಮೇಲಿದ್ದ 34 ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ವಿಧಿಸಲಾಗಿದ್ದ 18,500 ರೂ. ದಂಡವನ್ನು ವಾಹನ ಮಾಲೀಕರು ಪಾವತಿಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಆಗಸ್ಟ್ 5 ರಂದು ಹೆಬ್ಬಾಳ ಫ್ಲೈಓವರ್ ಲೂಪ್ ಪರಿಶೀಲನೆ ವೇಳೆ ಡಿಕೆ ಶಿವಕುಮಾರ ದ್ವಿಚಕ್ರ … Continued

ಕರ್ನಾಟಕದಲ್ಲಿ 125 ಕೃಷಿ ಸಹಕಾರ ಸಂಘಗಳು ದಿವಾಳಿ ಹಂತದಲ್ಲಿ….

ನವದೆಹಲಿ: ಕರ್ನಾಟಕದಲ್ಲಿರುವ ಒಟ್ಟು 6,291 ಪ್ರಾಥಮಿಕ ಕೃಷಿ ಸಹಕಾರ ಸಂಘಗಳ (ಪಿಎಸಿಎಸ್‌) ಪೈಕಿ 125 ಸಂಘಗಳು ದಿವಾಳಿ ಹಂತದಲ್ಲಿವೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಆಗಸ್ಟ್‌ 5ರಂದು ಸಂಸತ್ತಿಗೆ ಮಾಹಿತಿ ನೀಡಿದ್ದಾರೆ. ಲೋಕಸಭೆಗೆ ಮಾಹಿತಿ ನೀಡಿದ ದತ್ತಾಂಶದ ಪ್ರಕಾರ, ದಿವಾಳಿ ಹಂತದಲ್ಲಿರುವ 125 ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿ 28 ಸಂಘಗಳು ಚಿಕ್ಕಬಳ್ಳಾಪುರದಲ್ಲಿವೆ. … Continued