ಮೀಸಲು ಚರ್ಚೆಗೆ ಅವಕಾಶಕ್ಕೆ ಒತ್ತಾಯಿಸಿ ಸದನದಲ್ಲಿ ಧರಣಿ

ಬೆಂಗಳೂರು: ರಾಜ್ಯದಲ್ಲಿ ಬೇರೆ ಬೇರೆ ಸಮುದಾಯವರು ಮೀಸಲಾತಿಗಾಗಿ ನಡೆಸುತ್ತಿರುವ ಪಾದಯಾತ್ರೆ ಕುರತು ಚರ್ಚೆಗೆ ಅವಕಾಶ ನೀಡುವಂತೆ ಹಾಗೂ ಅವರ ಬೇಡಿಕೆಗಳನ್ನು ಕಾಲಮಿತಿಯಲ್ಲಿ ಈಡೇರಿಸುವಂತೆ ಒತ್ತಾಯಿಸಿ ಆಡಳಿತ ಪಕ್ಷದವರು  ಪ್ರತಿಪಕ್ಷ ಸದಸ್ಯರ ಜತೆಗೆ ಧರಣಿಗೆ ನಡೆಸಿರುವುದಕ್ಕೆ ಮಂಗಳವಾರ ಸಾಕ್ಷಿಯಾಯಿತು. ಶೂನ್ಯವೇಳೆಯಲ್ಲಿ ಬಿಜೆಪಿಯ ರೆಬೆಲ್‌ ಶಾಸಕ ಎಂದೇ ಗುರುತಿಸಿಕೊಂಡಿರುವ  ಬಸನಗೌಡ ಪಾಟೀಲ್ ಯತ್ನಾಳ್ ವಿಷಯ ಪ್ರಸ್ತಾಪಿಸಿದರು. ಪಂಚಮಸಾಲಿಗರನ್ನು 2ಎಗೆ ಸೇರಿಸಬೇಕು … Continued

ಉಪ ಸ್ಪೀಕರ್ ವಿರುದ್ಧ ಹೇಳಿಕೆ ನೀಡಲ್ಲ:ಉದಯನಿಧಿ

ಚೆನ್ನೈ: ತಮಿಳುನಾಡು ವಿಧಾನಸಭೆ ಉಪ ಸ್ಪೀಕರ್ ಪೊಲ್ಲಾಚಿ ವಿ ಜಯರಾಮನ್ ಅವರು ಸಲ್ಲಿಸಿರುವ ಮಾನಹಾನಿ ಪ್ರಕರಣವನ್ನು ಎದುರಿಸುತ್ತಿರುವ ಉದಯನಿಧಿ ಸ್ಟಾಲಿನ್  ಮದ್ರಾಸ್ ಹೈಕೋರ್ಟ್‌ಗೆ ಉಪ ಸ್ಪೀಕರ್  ವಿರುದ್ಧ ಯಾವುದೇ ಮಾನಹಾನಿ ಹೇಳಿಕೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಕಳೆದ ತಿಂಗಳು ತಿರುಚ್ಚಿಯಲ್ಲಿ ನಡೆದ ಪ್ರಚಾರದ ಸಭೆಯಲ್ಲಿ  ತಮಿಳುನಾಡಿನಲ್ಲಿ ನಡೆದ ಪೊಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂದಿಸಿದಂತೆ ತಮ್ಮ … Continued

೭ ಅಧಿಕಾರಿಗಳ ಗುರಿಯಾಗಿಸಿ ೩೦ ಕಡೆ ಎಸಿಬಿ ದಾಳಿ

  ಬೆಂಗಳೂರು/ಹುಬ್ಬಳ್ಳಿ/ಧಾರವಾಡ/ಚಿತ್ರದುರ್ಗ/ಮಂಗಳೂರು/ಕೋಲಾರ: ಭ್ರಷ್ಟರ  ವಿರುದ್ಧ ಕಾರ್ಯಾಚರಣೆ ಕೈಗೊಂಡಿರುವ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ಏಕಕಾಲದಲ್ಲಿ ರಾಜ್ಯದ  ಏಳು ಅಧಿಕಾರಿಗಳು ಹಾಗೂ ಅವರ ಸಂಬಂಧಿಕರಿಗೆ ಸೇರಿದ ೩೦ ಕಡೆ  ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ, ಬಳ್ಳಾರಿ, ಕೋಲಾರ, ಧಾರವಾಡ, ದಕ್ಷಿಣ ಕನ್ನಡ, ಚಿತ್ರದುರ್ಗ ಹಾಗೂ ಬೀದರ್‌ನಲ್ಲಿ ಈ ಅಧಿಕಾರಿಗಳ ಕಚೇರಿ ನಿವಾಸ ಇನ್ನಿತರ ಸ್ಥಳಗಳು ಸೇರಿದಂತೆ  ೩೦ … Continued

 ಸ್ಟಾರ್ಟ್‌ ಅಪ್‌ ಕಂಪನಿಗಳ ಬೆಳವಣಿಗೆಗೆ ಉಪಯುಕ್ತ:ಶೆಟ್ಟರ

ಹುಬ್ಬಳ್ಳಿ:‌ಹೊಸ ದಶಕದಲ್ಲಿ ಹೊಸ ಯುಗ ಸೃಷ್ಟಿಸುವ ಬಜೆಟ್‌ ಇದಾಗಿದ್ದು, ಕೇಂದ್ರ ಸರಕಾರ ಕೋವಿಡ್‌ ನಂತರದ ಆರ್ಥಿಕತೆ ಉತ್ತೇಜನ ನೀಡಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿರುವುದು  ಕೇಂದ್ರ ಬಜೆಟ್ ನಲ್ಲಿ ಕಾಣಬಹುದಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ  ಸಚಿವ ಜಗದೀಶ್‌ ಶೆಟ್ಟರ್‌ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಆಯವ್ಯಯದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಆರೋಗ್ಯ, ಎಂಎಸ್‌ಎಂಇ, ಸ್ಟಾರ್ಟ್‌ ಅಪ್‌ … Continued

ಬಜೆಟ್‌ ಅಭಿವೃದ್ಧಿಗೆ ಪೂರಕ

ಹುಬ್ಬಳ್ಳಿ: ಕೇಂದ್ರ ವಿತ್ತೆ ಸಚಿವರಾದ ನಿರ್ಮಲಾ ಸೀತಾರಾಮನ್  ಮಂಡಿಸಿದ  ಬಜೆಟ್ ನ್ನು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ  ಶ್ಲಾಘಿಸಿದೆ.‌ ಆರೋಗ್ಯ, ಕೃಷಿ ಹಾಗೂ ಮೂಲ ಸೌಕರ್ಯಗಳಿಗೆ ಬಜೆಟ್ ನಲ್ಲಿ ವಿಶೇಷ ಆದ್ಯತೆ ನೀಡಿರುವುದು  ಬೆಳವಣಿಗೆಗೆ ಪೂರಕವಾಗಿದೆ. ಹಳೆಯ ವಾಹನಗಳಿಗೆ ಗಜರಿ ನೀತಿ ರೂಪಿಸಲು ಉದ್ದೇಶಿಸಿರುವುದು ಆಟೊಮೊಬೈಲ್ ಕ್ಷೇತ್ರದ ಬೆಳವಣಿಗೆಗೆ ಚಾಲನೆ  ಸಿಕ್ಕಂತಾಗಿದೆ ಎಂದು ವಾಣಿಜ್ಯೋದ್ಯಮ ಸಂಸ್ಥೆ ‌‌ಅಧ್ಯಕ್ಷ ಮಹೇಂದ್ರ … Continued

ಕೊರೋನಾ: ಕರ್ನಾಟಕದಲ್ಲಿ ೫೨೨ ಪಾಸಿಟಿವ್ ಪ್ರಕರಣ‌, ನಾಲ್ವರ ಸಾವು

ಬೆಂಗಳೂರು: ಕರ್ನಾಟಕದಲ್ಲಿ  522 ಹೊಸ ಕೋವಿಡ್ -19 ಪ್ರಕರಣಗಳು ಮತ್ತು ನಾಲ್ಕು ಸಂಬಂಧಿತ ಸಾವುಗಳಾಗಿವೆ ಎಂದು ವರದಿಯಾಗಿದೆ. ಚೇತರಿಕೆಯ ನಂತರ 465 ರೋಗಿಗಳನ್ನು ಬಿಡುಗಡೆ ಮಾಡಲಾಗಿದ್ದು, 6,029 ಸಕ್ರಿಯ ಪ್ರಕರಣಗಳಿವೆ. ಉಳಿದಿವೆ.ಒಟ್ಟಾರೆಯಾಗಿ  ಸೋಂಕಿತರ ಸಂಖ್ಯೆ   9,39,387  ತಲುಪಿದ್ದು,  12,217 ಮರಣಗಳು ಸಂಭವಿಸಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.ಸಕ್ರಿಯ ಪ್ರಕರಣಗಳಲ್ಲಿ, 145 ರೋಗಿಗಳು ವಿವಿಧ ಆಸ್ಪತ್ರೆಗಳ ತೀವ್ರ … Continued

ಬೆಂಗಳೂರು ಮೆಟ್ರೋ ಯೋಜನೆಗೆ ಧನಸಹಾಯ ದೊಡ್ಡ ಕೊಡುಗೆ:ಸಿಎಂ

ನವ ದೆಹಲಿ: ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರು ಮೆಟ್ರೋ ಯೋಜನೆಗೆ ಧನಸಹಾಯದ   ಘೋಷಣೆ  ರಾಜ್ಯಕ್ಕೆ ‘ಅತಿದೊಡ್ಡ ಕೊಡುಗೆ’ ಎಂದು ಕರೆದಿದ್ದಾರೆ. ಹೇಳಿಕೆ ಬಿಡುಗಡೆ ಮಾಡಿರುವ    ಬೆಂಗಳೂರು ಮೆಟ್ರೋ ಯೋಜನೆಗಾಗಿ 14,778 ಕೋಟಿ ರೂ.ಗಳನ್ನು ಘೋಷಿಸಲಾಗಿದೆ, ಈ ನಿಬಂಧನೆಯಿಂದಾಗಿ 58 ಕಿಮೀ … Continued