ದೀದಿಗೆ ಸವಾಲು ; ಟಿಎಂಸಿಯಲ್ಲಿ ‘ಶಿವಸೇನೆ ಮಾದರಿ’ ಬಂಡಾಯ..? ‘ಅಸಲಿ ತೃಣಮೂಲ’ ಬಣ ರಚನೆಗೆ ರೆಬೆಲ್‌ ಶಾಸಕರ ಸಿದ್ಧತೆ ?

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ವಿಧಾನಸಭೆಯಲ್ಲಿ ಪಕ್ಷವು ಇಬ್ಭಾಗವಾಗುವತ್ತ ಹೆಜ್ಜೆ ಇಟ್ಟಿದೆಯೇ ಎಂಬ ಬಲವಾದ ಅನುಮಾನಗಳು ಮೂಡಿವೆ. ವಿಧಾನಸಭೆಯ ವಿಪಕ್ಷದ ನಾಯಕನ (Leader of Opposition) ಆಯ್ಕೆಯ ವಿಷಯವು ಪಕ್ಷದೊಳಗಿನ ಆಂತರಿಕ ಭಿನ್ನಮತವನ್ನು ಬೀದಿಗೆ ತಂದಿದೆ. ಪಕ್ಷದ ಸುಪ್ರೀಮೋ ಮಮತಾ ಬ್ಯಾನರ್ಜಿ ಅವರ ಆಪ್ತ … Continued

ತ್ವಿಶಾ ಶರ್ಮಾ ಸಾವಿನ ಪ್ರಕರಣ ; ಪ್ರಮುಖ ಸಾಕ್ಷಿಯ ಮೇಲೆ ಹಲ್ಲೆ, ಬೆದರಿಕೆ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಭೋಪಾಲ್ : ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿರುವ ತ್ವಿಶಾ ಶರ್ಮಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಆರೋಪಿ ಸಮರ್ಥ ಸಿಂಗ್‌ನ ಸ್ನೇಹಿತರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಹಾಗೂ ಕೋರ್ಟ್‌ನಲ್ಲಿ ಸಾಕ್ಷಿ ಹೇಳದಂತೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಪ್ರಕರಣದ ಪ್ರಮುಖ ಸಾಕ್ಷಿಯೊಬ್ಬರು ಆರೋಪಿಸಿದ್ದಾರೆ. ಯುವತಿಯ ಕುಟುಂಬಸ್ಥರು … Continued

ಮುಂಗಾರು ಕಣ್ಣಾಮುಚ್ಚಾಲೆ ? ಕೇರಳಕ್ಕೆ ಮುಂಗಾರು ಪ್ರವೇಶ ಮತ್ತಷ್ಟು ವಿಳಂಬ: ಹೊಸ ಟೈಮ್‌ಲೈನ್ ನೀಡಿದ ಹವಾಮಾನ ಇಲಾಖೆ

ನವದೆಹಲಿ: ಮಾನ್ಸೂನ್ ಆರಂಭಕ್ಕೆ ಅಗತ್ಯವಿರುವ ಬಲವಾದ ಮೇಲ್ಮಟ್ಟದ ಗಾಳಿ ಜೂನ್ 5–6 ರ ನಂತರವೇ ರೂಪುಗೊಳ್ಳುತ್ತದೆ ಮತ್ತು ಹೀಗಾಗಿ ಕೇರಳಕ್ಕೆ ಮಾನ್ಸೂನ್‌ ಪ್ರವೇಶ ಮಳೆ ವಿಳಂಬವಾಗುತ್ತದೆ ಎಂದು ಐಎಂಡಿ ಹೇಳಿದೆ. ನೈಋತ್ಯ ಮಾನ್ಸೂನ್‌ ಮುನ್ನಡೆಯಲು ಬೇಕಾದ ನಿರ್ಣಾಯಕವಾಗಿರುವ ಬಲವಾದ ಮೇಲ್ಮಟ್ಟದ ಗಾಳಿಯು ಜೂನ್ 5–6 ರ ನಂತರವೇ ದಕ್ಷಿಣ ಭಾರತದ ಮೇಲೆ ರಚನೆಯಾಗುವ ಸಾಧ್ಯತೆಯಿದೆ ಎಂದು … Continued

ಜೂ.6 ರಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ ದಿಪ್ಕೆ ಭಾರತಕ್ಕೆ ; ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ

 ನವದೆಹಲಿ: ದೇಶದಲ್ಲಿ ಇತ್ತೀಚೆಗೆ ನಡೆದ ಪರೀಕ್ಷಾ ಅಕ್ರಮಗಳು ಹಾಗೂ ವಿವಾದಗಳಿಗೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ (ಜಿರಳೆ ಜನತಾ ಪಾರ್ಟಿ) ಸಂಸ್ಥಾಪಕ ಅಭಿಜೀತ ದಿಪ್ಕೆ ಅವರು ಜೂನ್ 6 ರಂದು ದೆಹಲಿಯಲ್ಲಿ ಬೃಹತ್ … Continued

‘ಹಾರ್ಮುಜ್ ಜಲಸಂಧಿ’ ಬಿಕ್ಕಟ್ಟು : ಭಾರತ-ಒಮಾನ್ ಒಪ್ಪಂದದಿಂದ ಕೊಲ್ಲಿ ರಾಷ್ಟ್ರಗಳ ತೈಲ ಸಾಗಾಟಕ್ಕೆ ಭಾರತಕ್ಕೆ ಸಿಕ್ಕಿತು ಹೊಸ ದಾರಿ

 ನವದೆಹಲಿ: ಭಾರತದ ಶ್ರಮ-ಆಧಾರಿತ (ಲಾಭರ್-ಇಂಟೆನ್ಸಿವ್) ರಫ್ತು ಉತ್ಪನ್ನಗಳಿಗೆ ಶೂನ್ಯ-ಸುಂಕದ ಮುಕ್ತ ಪ್ರವೇಶವನ್ನು ಕಲ್ಪಿಸುವ ಭಾರತ ಮತ್ತು ಒಮಾನ್ ನಡುವಿನ ಐತಿಹಾಸಿಕ ‘ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ’ (CEPA) ಸೋಮವಾರದಿಂದ (ಜೂನ್‌ ೧) ಜಾರಿಗೆ ಬಂದಿದೆ. ಕಳೆದ ವರ್ಷದ ಡಿಸೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಸ್ಕತ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಮಹತ್ವದ ವ್ಯಾಪಾರ ಒಪ್ಪಂದಕ್ಕೆ … Continued

ಮೇ ತಿಂಗಳಲ್ಲಿ ₹1.94 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ: ಶೇ. 3.2 ರಷ್ಟು ಪ್ರಗತಿ

ನವದೆಹಲಿ: ದೇಶದ ಆರ್ಥಿಕತೆಯ ಸದೃಢತೆಯನ್ನು ಬಿಂಬಿಸುವಂತೆ, ಮೇ 2026ರ ಅವಧಿಯಲ್ಲಿ ಭಾರತದ ಒಟ್ಟು ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಸಂಗ್ರಹವು ವರ್ಷದಿಂದ ವರ್ಷಕ್ಕೆ (YoY) ಶೇಕಡಾ 3.2 ರಷ್ಟು ಹೆಚ್ಚಳವಾಗಿದ್ದು, ₹1.94 ಲಕ್ಷ ಕೋಟಿಗೆ ತಲುಪಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ, ಅಂದರೆ ಮೇ 2025 ರಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹವು ₹1.88 ಲಕ್ಷ … Continued

“ಎರಡು ದಿನ ಕಾಯಿರಿ…” : ದೆಹಲಿಗೆ ತೆರಳುವ ಮುನ್ನ ಹೊಸ ಪಕ್ಷ ಸ್ಥಾಪನೆ ವದಂತಿಗಳಿಗೆ ಉತ್ತರಿಸಿದ ಅಣ್ಣಾಮಲೈ

ಚೆನ್ನೈ: ಬಿಜೆಪಿಗೆ ರಾಜೀನಾಮೆ ನೀಡಿ ತಾವೇ ಸ್ವತಃ ಹೊಸ ಪಕ್ಷವನ್ನು ಸ್ಥಾಪಿಸಲಿದ್ದಾರೆ ಎಂಬ ಊಹಾಪೋಹಗಳಿಗೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಕೆ. ಅಣ್ಣಾಮಲೈ ಸೋಮವಾರ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ತಮಿಳುನಾಡು ಘಟಕದ ಮಾಜಿ ಅಧ್ಯಕ್ಷ ಅಣ್ಣಾಮಲೈ, “ದಯವಿಟ್ಟು ಸ್ವಲ್ಪ ಕಾಯಿರಿ. ಇನ್ನು ಎರಡು ದಿನಗಳಲ್ಲಿ ನಾವೆಲ್ಲರೂ ಒಟ್ಟಿಗೆ ಕುಳಿತು … Continued

ದೀದಿ ಪಕ್ಷದಲ್ಲಿ ಬೀದಿಗೆ ಬಂದ ಒಳಜಗಳ ; ಇಬ್ಬರು ಶಾಸಕರನ್ನು ಉಚ್ಚಾಟಿಸಿದ ಟಿಎಂಸಿ…!

ಕೋಲ್ಕತ್ತಾ:  ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಸೋಮವಾರ ತನ್ನ ಇಬ್ಬರು ಶಾಸಕರನ್ನು ಪಕ್ಷದಿಂದ ಉಚ್ಚಾಟಿಸಿದೆ. ಶಾಸಕರಾದ ಸಂದೀಪನ್ ಸಹಾ ಮತ್ತು ರಿತಬ್ರತಾ ಬ್ಯಾನರ್ಜಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಟಿಎಂಸಿ ಹೇಳಿದೆ.  2026ರ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಅಧಿಕಾರ ಕಳೆದುಕೊಂಡ ಬೆನ್ನಲ್ಲೇ, ಪಕ್ಷದ ನಾಯಕರಲ್ಲಿ … Continued

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ

ನವದೆಹಲಿ: ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಉಪಾಹಾರ ಮಂದಿರಗಳಲ್ಲಿ ಬಳಸಲಾಗುವ ವಾಣಿಜ್ಯ ಬಳಕೆಯ (Commercial) ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಸೋಮವಾರದಿಂದ ಏರಿಕೆಯಾಗಿದೆ. ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು 42 ರೂಪಾಯಿಯಷ್ಟು ಹೆಚ್ಚಳ ಮಾಡಿವೆ. ಆದರೆ, ಗೃಹಬಳಕೆಯ ಅಡುಗೆ ಅನಿಲದ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮೆಟ್ರೋ ನಗರಗಳಲ್ಲಿನ … Continued

ಭಾರತೀಯ ಚಿತ್ರರಂಗದ ಮಧುರ ಧ್ವನಿ ಸುಮನ್ ಕಲ್ಯಾಣಪುರ ಇನ್ನಿಲ್ಲ

ಮುಂಬೈ: ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಭಾವಂತ ಹಾಗೂ ಜನಪ್ರಿಯ ಹಿನ್ನೆಲೆ ಗಾಯಕಿ, ಪದ್ಮಭೂಷಣ ಪುರಸ್ಕೃತೆ ಸುಮನ್ ಕಲ್ಯಾಣಪುರ (89) ಅವರು ವಯೋಸಹಜ ಕಾಯಿಲೆಯಿಂದ ಭಾನುವಾರ ಸಂಜೆ ಮುಂಬೈನ ಲೋಖಂಡ್‌ವಾಲಾದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರ ಆಪ್ತ ಒಡನಾಡಿ ಹಾಗೂ ಲೇಖಕಿ ಮಂಗಲಾ ಖಾಡಿಲ್ಕರ ಈ ವಿಷಯವನ್ನು ಖಚಿತಪಡಿಸಿದ್ದು, ಭಾನುವಾರ ರಾತ್ರಿ ಸುಮಾರು 8 ಗಂಟೆಯ ಸುಮಾರಿಗೆ … Continued