ಲಖಿಂಪುರ್ ಹಿಂಸಾಚಾರ: ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಿಯೋಗ ಇಂದು ಜಿಲ್ಲೆಗೆ ಭೇಟಿ

ಲಖಿಂಪುರ್ ಖೇರಿ: ಲಖಿಂಪುರ್ ಹಿಂಸಾಚಾರದ ಕುರಿತು ರಾಜಕೀಯ ಆರಫ-ಪ್ರತ್ಯಾರೋಪಗಳ ನಡುವೆ, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ನೇತೃತ್ವದ ಐದು ಸದಸ್ಯರ ನಿಯೋಗವು ಬುಧವಾರ ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದೆ. ಏತನ್ಮಧ್ಯೆ, ಈ ಘಟನೆಯ ವಿರುದ್ಧ ದೇಶಾದ್ಯಂತ ರಾಜಕೀಯ ಪಕ್ಷಗಳು ಮತ್ತು ರೈತ ಸಂಘಗಳು ಪ್ರತಿಭಟನೆ ನಡೆಸುತ್ತಿದ್ದರೂ ಕೂಡ ಆ ಪ್ರದೇಶದಲ್ಲಿ ಸೆಕ್ಷನ್ 144 ಹೇರಲಾಗಿದೆ. ಮಂಗಳವಾರದಂದು, … Continued

ಕಾಮನ್ವೆಲ್ತ್ ಗೇಮ್ಸ್‌ ನಿಂದ ಹಿಂದೆ ಸರಿದ ಭಾರತದ ಹಾಕಿ ತಂಡ

ನವದೆಹಲಿ : ಬ್ರಿಟನ್ನಿನ ಬರ್ಮಿಂಗ್‌ಹ್ಯಾಮಿಲ್ಲಿ ನಡೆಯಲಿರುವ ಕಾಮನ್ವೆಲ್ತ್ ಗೇಮ್ಸ್‌ನ ಹಾಕಿ ಸ್ಪರ್ಧೆಯಲ್ಲಿ ಭಾರತದ ಹಾಕಿ ತಂಡ ಪಾಲ್ಗೊಳ್ಳುವುದಿಲ್ಲ ಎಂದು ಪ್ರಕಟಿಸಿದೆ. ಕೋವಿಡ್ -19 ಮತ್ತು ಬ್ರಿಟನ್‌ನ ತಾರತಮ್ಯದ ಕ್ಯಾರೆಂಟೈನ್ ನಿಯಮಗಳ ಕಾರಣದಿಂದಾಗಿ 2022 ಬರ್ಮಿಂಗ್‌ಹ್ಯಾಮ್ ಕಾಮನ್ವೆಲ್ತ್ ಗೇಮ್ಸ್‌ನ ಹಾಕಿ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಭಾರತ ಘೋಷಣೆ ಮಾಡಿದೆ. ಹಾಕಿ ಇಂಡಿಯಾ ಅಧ್ಯಕ್ಷ ಜ್ಞಾನಂದ್ರೊ ನಿಂಗೊಬಮ್ ಫೆಡರೇಶನ್ … Continued

ಸಾಗರ್‌ ರಾಣಾ ಕೊಲೆ ಪ್ರಕರಣ : ಒಲಿಂಪಿಕ್‌ ಕುಸ್ತಿಪಟು ಸುಶೀಲಕುಮಾರ್‌ಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್‌

ನವದೆಹಲಿ : ಸಾಗರ್‌ ರಾಣಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಲಿಂಪಿಕ್‌ ಕುಸ್ತಿಪಟು ಸುಶೀಲಕುಮಾರ್ ಅವರಿಗೆ ಜಾಮೀನು ನೀಡಲು ದೆಹಲಿ ಕೋರ್ಟ್ ನಿರಾಕರಿಸಿದೆ. ಸುಶೀಲ್ ಕುಮಾರ್ ತನ್ನ ವಿರುದ್ಧ ಸುಳ್ಳು ಪ್ರಕರಣವನ್ನು ಸೃಷ್ಟಿಸಲಾಗಿದೆ. ಹೀಗಾಗಿ ಪ್ರಕರಣದಲ್ಲಿ ತನಗೆ ಜಾಮೀನು ನೀಡಬೇಕು ಎಂದು ನ್ಯಾಯಾಲಯಕ್ಕೆ ಕೋರಿದ್ದರು. ಆದರೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶಿವಾಜಿ ಆನಂದ್ ಅವರು ಪ್ರಾಸಿಕ್ಯೂಷನ್ ಮತ್ತು … Continued

ಲಖಿಂಪುರ್ ಖೇರಿ ಪ್ರಕರಣ; ಸುಪ್ರೀಕೋರ್ಟ್‌ ಸುರ್ದಿಯಲ್ಲಿ ಸಿಬಿಐ ತನಿಖೆಗೆ ಒತ್ತಾಯಿಸಿ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದ ವಕೀಲರು

ನವದೆಹಲಿ: ಉತ್ತರ ಪ್ರದೇಶದ ಇಬ್ಬರು ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಅವರಿಗೆ ಪತ್ರ ಬರೆದಿದ್ದು, ಲಖಿಂಪುರ್ ಖೇರಿಯಲ್ಲಿ ( Lakhimpur Kheri) ನಡೆದ ಘಟನೆಗಳ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಉತ್ತರ ಪ್ರದೇಶ ಸರ್ಕಾರವು ನಿವೃತ್ತ ನ್ಯಾಯಾಧೀಶರಿಂದ ಈ ವಿಷಯದ ಬಗ್ಗೆ ತನಿಖೆಗೆ ಆದೇಶಿಸುವುದಾಗಿ … Continued

ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ, ಮೂವರು ನಾಗರಿಕರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ತೋರಿದ್ದು ಮೂವರು ನಾಗರಿಕರನ್ನು ಹತ್ಯೆ ಮಾಡಿದ್ದಾರೆ. ಮೂರು ಗಂಟೆಯ ಅವಧಿಯಲ್ಲಿ ಮೂವರನ್ನು ಹತ್ಯೆ ಮಾಡಲಾಗಿದೆ. ಶ್ರೀನಗರದಲ್ಲಿ ಉಗ್ರರ ಗುಂಡು ಹಾರಿಸಿ ಹಿಂದೂ ವ್ಯಾಪಾರಿಯನ್ನು ಹತ್ಯೆ ಮಾಡಿದ್ದಾರೆ. ಇಕ್ಬಾಲ್ ಪಾರ್ಕ್ ನಲ್ಲಿ ವ್ಯಾಪಾರಿ ಮಖನ್ ಲಾಲ್ ಬಿಂದ್ರೂನನ್ನು ಹತ್ಯೆ ಮಾಡಲಾಗಿದೆ. ಬಳಿಕ ಶ್ರೀನಗರದ ಹೊರವಲಯದಲ್ಲಿನ ಮದೀನ್ ಸಾಹೀಬ್ ನಲ್ಲಿ … Continued

ಕ್ರೂಸ್ ಡ್ರಗ್ ಪ್ರಕರಣ: ದೆಹಲಿ ಮೂಲದ ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ 4 ಉದ್ಯೋಗಿಗಳ ಬಂಧಿಸಿದ ಎನ್‌ಸಿಬಿ

ನವದೆಹಲಿ: :ಕ್ರೂಸ್ ಲೈನರ್ ಡ್ರಗ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಇನ್ನೂ ನಾಲ್ಕು ಜನರನ್ನು ಬಂಧಿಸಿದೆ. ಈ ಬೆಳವಣಿಗೆಯೊಂದಿಗೆ, ಪ್ರಕರಣದ ಒಟ್ಟು ಬಂಧನಗಳ ಸಂಖ್ಯೆ 16 ಕ್ಕೆ ಏರಿದೆ. ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಮತ್ತು ಆತನ ಸ್ನೇಹಿತ ಅರ್ಬಾಜ್ ಮರ್ಚೆಂಟ್ ಸೇರಿದಂತೆ ಎಂಟು ಜನರನ್ನು … Continued

ಆರ್ಯನ್‌ ಖಾನ್‌ಗೆ ವಿದೇಶಿ ಡ್ರಗ್ ಪೆಡ್ಲರ್‌ಗಳ ನಂಟು

ಮುಂಬೈ: ಐಷಾರಾಮಿ ಹಡಗಿನಲ್ಲಿ ನಡೆದ ಡ್ರಗ್ಸ್ ಪಾರ್ಟಿಯಲ್ಲಿ ಸಿಕ್ಕಿ ಬಿದ್ದಿರುವ ಬಾಲಿವುಡ್ ನಟ ಆರ್ಯನ್ ಖಾನ್ ಮತ್ತು ಇತರ ಇಬ್ಬರ ವಾಟ್ಸಾಪ್ ಚಾಟ್ ಬಹಿರಂಗವಾಗಿದ್ದು, ಈ ಮೂವರಿಗೆ ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್‌ಗಳ ಸಂಪರ್ಕವಿರುವ ಬಗ್ಗೆ ಮಾದಕ ವಸ್ತು ನಿಗ್ರಹದಳ ಪತ್ತೆ ಹಚ್ಚಿದೆ. ಈ ಬಗ್ಗೆ ತನಿಖೆ ಕೈಗೊಂಡಿರುವ ಎನ್‌ಸಿಬಿ ಮಧ್ಯವರ್ತಿಯೊಬ್ಬರಿಂದ ಡ್ರಗ್ ಸರಬರಾಜುರಾಗಿರುವುದು ಪತ್ತೆಯಾಗಿದೆ. ಈ … Continued

ವಾಹನಗಳಲ್ಲಿ ಸಂಗೀತಮಯ ಹಾರನ್ ಅಳವಡಿಸಲು ಕಾನೂನು:ಗಡ್ಕರಿ

ನವದೆಹಲಿ; ವಾಹನಗಳಲ್ಲಿ ಇನ್ನು ಮುಂದೆ ಸಂಗೀತಮಯ ಹಾರನ್ (ಶಬ್ದ) ಅಳವಡಿಸಲು ಅಗತ್ಯ ಕಾನೂನು ತಿದ್ದುಪಡಿ ತರುವುದಾಗಿ ಕೇಂದ್ರ ಸಾರಿಗೆ ಸಚಿವ ನಿತೀನ್ ಗಡ್ಕರಿ ತಿಳಿಸಿದ್ದಾರೆ. ನಾಸಿಕ್‍ನಲ್ಲಿ ಹೆದ್ಧಾರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಆಯಂಬ್ಯುಲೆನ್ಸ್ ಮತ್ತು ಪೊಲೀಸ್ ಅಧಿಕಾರಿಗಳ ವಾಹನಗಳಲ್ಲಿ ಬಳಸುವ ಸೈರನ್‍ಗಳನ್ನು ಬದಲಾವಣೆ ಮಾಡಲು ಅಧ್ಯಯನ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಪ್ರಸ್ತುತ ಆಂಬ್ಯುಲೆನ್ಸ್, ಪೊಲೀಸ್ … Continued

ಲಕ್ನೋ ವಿಮಾನ ನಿಲ್ದಾಣದ ಹೊರಗೆ ಧರಣಿ ಸತ್ಯಾಗ್ರಹಕ್ಕೆ ಕುಳಿತ ಛತ್ತೀಸ್‌ಗಡದ ಸಿಎಂ ಬಘೇಲ್

ನವದೆಹಲಿ: 130 ಕಿಮೀ ದೂರದಲ್ಲಿರುವ ಉತ್ತರ ಪ್ರದೇಶದ ಲಖಿಂಪುರ್ ಜಿಲ್ಲೆಯಲ್ಲಿ ಭಾನುವಾರ ಎಂಟು ಸಾವುಗಳ ವಿರುದ್ಧ ವ್ಯಾಪಕ ಪ್ರತಿಭಟನೆಗಳ ನಡುವೆ ಅಲ್ಲಿಗೆ ಭೇಟಿ ನೀಡಲು ಆಗಮಿಸಿದ್ದ ಛತ್ತೀಸ್‌ಗಡದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ಇಂದು (ಮಂಗಳವಾರ) ಮಧ್ಯಾಹ್ನ ಲಕ್ನೊ ವಿಮಾನ ನಿಲ್ದಾಣದದಲ್ಲಿ ಪೊಲೀಸರು ತಡೆದ ಹಿನ್ನಲೆಯಲ್ಲಿ ಅವರು ಸ್ಥಳದಲ್ಲಿಯೇ ಧರಣಿ ಸತ್ಯಾಗ್ರಹಕ್ಕೆ ಕುಳಿತ ಘಟನೆ ನಡೆದಿದೆ. … Continued

ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ರೈತರ ಮೇಲೆ ಕಾರು ಹಾಯಿಸಿದ ದೃಶ್ಯದ್ದು ಎನ್ನಲಾದ ವಿಡಿಯೋ ವೈರಲ್‌

ಲಕ್ನೋ: ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ರೈತರ ಮೇಲೆ ಕಾರು ಹರಿಸಿದ ವಿಡಿಯೋ ದೃಶಯವೊಂದು ವೈರಲ್‌ ಆಗಿದೆ.. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ರೈತರ ಮೇಲೆ ಜೀಪ್ ಹತ್ತಿಸಲಾಗಿದೆ. ಜೀಪ್ ರೈತರ ಮೇಲೆ ಹರಿದಾಗಲೇ ರೈತರು ರಸ್ತೆಯಲ್ಲಿ ಬಿದ್ದು ಮೃತಪಟ್ಟಿದ್ದಾರೆ. ಬಳಿಕ ತಕ್ಷಣವೇ ಕಾರ್ ಕೂಡ ಹೋಗಿದೆ. ಕೆಲವರು ರಸ್ತೆ ಪಕ್ಕಕ್ಕೆ ಜಂಪ್ ಮಾಡಿ ಜೀವ ಉಳಿಸಿಕೊಂಡಿದ್ದಾರೆ. … Continued