ಜಮ್ಮು ಬಸ್‌ ನಿಲ್ದಾಣದಲ್ಲಿ ಸುಧಾರಿತ ಸ್ಫೋಟಕ ಸಾಧನ ಪತ್ತೆ: ತಪ್ಪಿದ ಅನಾಹುತ

ಜಮ್ಮು: ಜಮ್ಮು ಬಸ್‌ ನಿಲ್ದಾಣದಲ್ಲಿ ೭ಕೆಜಿ ಸುಧಾರಿತ ಸ್ಫೋಟಕ ಸಾಧನ ಪತ್ತೆಯಾಗಿದೆ. ಜನಸಂದಣಿ ಪ್ರದೇಶದಲ್ಲಿ ಸ್ಫೋಟಕ ಸಾಧನವನ್ನು ಪತ್ತೆ ಮಾಡಲಾಗಿದ್ದು, ಅನಾಹುತ ತಪ್ಪಿಸಿದಂತಾಗಿದೆ. ಪುಲ್ವಾಮಾ ದಾಳಿಯ ೨ನೇ ವರ್ಷಾಚರಣೆ ಸಂದರ್ಭದಲ್ಲಿ ಭಯೋತ್ಪಾದಕರು ದಾಳಿ ನಡೆಸುವ ಸಾಧ್ಯತೆಯನ್ನು ವಿಫಲಗೊಳಿಸಲಾಗಿದೆ. ನಿರ್ದಿಷ್ಟ ಮಾಹಿತಿಯನ್ನಾಧರಿಸಿ ನಡೆದ ಕಾರ್ಯಚರಣೆಯಲ್ಲಿ ಸ್ಫೋಟಕವನ್ನು ಪತ್ತೆ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ೨೦೧೯ರ ಫೆಬ್ರವರಿ ೧೪ರಂದು … Continued

ಟೂಲ್‌ಕಿಟ್‌ ಸಂಪಾದನೆ ಆರೋಪ: ದಿಶಾ ರವಿ ೫ ದಿನ ಪೊಲೀಸ್‌ ವಶಕ್ಕೆ

ದೆಹಲಿ: ರೈತರ ಪ್ರತಿಭಟನೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟೂಲ್‌ಕಿಟ್‌ ಹಂಚಿಕೆ ಹಾಗೂ ಸಂಪಾದನೆ ಆರೋಪಕ್ಕಾಗಿ ಬಂಧಿತ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ದೆಹಲಿ ನ್ಯಾಯಾಲಯ ೫ ದಿನಗಳ ಪೊಲೀಸ್‌ ವಶಕ್ಕೆ ನೀಡಿದೆ. ಬೆಂಗಳೂರಿನಿಂದ ದೆಹಲಿ ಪೊಲೀಸರ ಸೈಬರ್ ಸೆಲ್ ತಂಡವು ೨೧ರ ಹರೆಯದ ದಿಶಾ ರವಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿತು. ಕೇಂದ್ರ ಸರ್ಕಾರದ ವಿರುದ್ಧ … Continued

ಪುಲ್ವಾಮಾ ಘಟನೆಗೆ ೨ ವರ್ಷ: ಹುತಾತ್ಮರಿಗೆ ಪ್ರಧಾನಿ ಗೌರವ

ನವದೆಹಲಿ: ಪುಲ್ವಾಮಾ ಭಯೋತ್ಪಾದಕರ ದಾಳಿಯ ೨ನೇ ವಾರ್ಷಿಕೋತ್ಸವದಂದು ಪ್ರಧಾನಿ ಮೋದಿ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದರು. ಯಾವುದೇ ಭಾರತೀಯನು ಈ ಕರಾಳ ದಿನವನ್ನು ಮರೆಯಲು ಸಾಧ್ಯವಿಲ್ಲ. ಎರಡು ವರ್ಷಗಳ ಹಿಂದೆ, ಪುಲ್ವಾಮಾ ದಾಳಿ ಸಂಭವಿಸಿದೆ. ಆ ದಾಳಿಯಲ್ಲಿ ನಾವು ಕಳೆದುಕೊಂಡ ಎಲ್ಲ ಹುತಾತ್ಮರಿಗೆ ನಾವು ಗೌರವ ಸಲ್ಲಿಸುತ್ತೇವೆ. ನಮ್ಮ ಭದ್ರತಾ … Continued

ತಮಿಳುನಾಡು ರೈತರನ್ನು ಶ್ಲಾಘಿಸಿದ ಪ್ರಧಾನಿ ಮೋದಿ

ಚೆನ್ನೈ: ಸಮರ್ಪಕವಾಗಿ ಜಲ ಸಂಪನ್ಮೂಲಗಳನ್ನು ಬಳಸಿಕೊಂಡು ದಾಖಲೆ ಪ್ರಮಾಣದ ಆಹಾರಧಾನ್ಯ ಉತ್ಪಾದನೆ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ರೈತರನ್ನು ಶ್ಲಾಘಿಸಿದ್ದಾರೆ. ಅವರು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿ, ರಾಜ್ಯದ ರೈತರು ದಾಖಲೆ ಪ್ರಮಾಣದಲ್ಲಿ ಆಹಾರಧಾನ್ಯ ಬೆಳೆದಿರುವುದು ಶ್ಲಾಘನೀಯ. ರೈತರು ಸಮರ್ಪಕವಾಗಿ ಜಲ ಸಂಪನ್ಮೂಲಗಳನ್ನು ಬಳಸಿಕೊಂಡು ಸಾಧನೆ ಮಾಡಿದ್ದಾರೆ ಎಂದರು. ಹೊಸ ಕೃಷಿ … Continued

ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿದ ಪ್ರಧಾನಿ: ಶಿವಸೇನೆ ಆರೋಪ

ಮುಂಬೈ: ಕೃಷಿ ಕಾನೂನುಗಳನ್ನು ಖಂಡಿಸಿ ಹೋರಾಟ ನಡೆಸುತ್ತಿರುವ ರೈತರಿಗೆ ಪ್ರಧಾನಿ “ಆಂದೋಲನಜೀವಿಗಳುʼ ಎಂದು ಕರೆದಿರುವುವುದು ದೇಶದ ಸ್ವಾತಂತ್ರ್ಯ ಹೋರಾಟ ಮಾಡಿದವರಿಗೂ ಮಾಡಿದ ಅವಮಾನ ಎಂದು ಶಿವಸೇನೆ ಆರೋಪ ಮಾಡಿದೆ. ಶಿವಸೇನೆ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ, ಪ್ರಧಾನಿ ಮೋದಿ ಅವರು ದೇಶದ ಆಂದೋಲನಗಳನ್ನು ಗೇಲಿ ಮಾಡಿದ್ದಾರೆ. ಬಿಜೆಪಿ ತುರ್ತು ಪರಿಸ್ಥಿತಿಯಿಂದ ಅಯೋಧ್ಯೆ ಚಳುವಳಿಯವರೆಗೆ, ಹಣದುಬ್ಬರದಿಂದ ಕಾಶ್ಮೀರದಿಂದ ಆರ್ಟಿಕಲ್-370 … Continued

ರೈತರ ಹೋರಾಟಕ್ಕೆ ಮಹಾತ್ಮ ಗಾಂಧಿ ಮೊಮ್ಮಗಳು ತಾರಾ ಭಟ್ಟಾಚಾರ್ಜಿ ಬೆಂಬಲ

ಗಾಜಿಯಾಬಾದ್‌: ಮಹಾತ್ಮಾ ಗಾಂಧಿ ಮೊಮ್ಮಗಳು ತಾರಾ ಭಟ್ಟಾಚಾರ್ಜಿ ಕೇಂದ್ರ ಸರಕಾರದ ವಿವಾದಾತ್ಮಕ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಗಾಜಿಯಾಬಾದ್‌ನಲ್ಲಿ ರೈತರು ನಡೆಸುತ್ತಿರುವ ಹೋರಾಟ ಸ್ಥಳಕ್ಕೆ ಭೇಟಿ ನೀಡಿದ ಅವರು, ಶಾಂತಿಯುತವಾಗಿ ಹೋರಾಟ ನಡೆಸುವಂತೆ ರೈತರಿಗೆ ಕರೆ ನೀಡಿದರು. ನಾನು ಯಾವುದೇ ರಾಜಕೀಯ ಪಕ್ಷದ ಪರವಾಗಿ ಇಲ್ಲಿಗೆ ಬಂದಿಲ್ಲ. ರೈತರು … Continued

ಉತ್ತರಾಖಂಡ ದುರಂತ: ೪೧ ಶವಗಳ ಪತ್ತೆ

ಉತ್ತರಾಖಂಡದ ಚಮೋಲಿಯಲ್ಲಿ ಹಿಮಬಂಡೆ ಕುಸಿದು ಉಂಟಾದ ಪ್ರವಾಹ ದುರಂತದಲ್ಲಿ ಈವರೆಗೆ ೪೧ ಶವಗಳನ್ನು ಹೊರತೆಗೆಯಲಾಗಿದೆ. ರವಿವಾರ ಮಧ್ಯಾಹ್ನದ ವೇಳೆಗೆ ೪೧ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ರಕ್ಷಣಾ ಕಾರ್ಯ ತೀವ್ರಗೊಳಿಸಲಾಗಿದೆ. ಫೆ.೭ರಂದು ಹಿಮಬಂಡೆ ಕುಸಿದು ಪ್ರವಾಹ ಉಂಟಾಗಿತ್ತು. ಪ್ರವಾಹದಿಂದಾಗಿ ಋಷಿಗಂಗಾ ವಿದ್ಯುತ್‌ ಯೋಜನೆ ಕಾಮಗಾರಿ ಹಾನಿಗೊಳಗಾಗಿದೆ. ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರು ಸುರಂಗದಲ್ಲಿ ಸಿಲುಕಿಕೊಂಡಿದ್ದಾರೆ. ಅವರನ್ನು ರಕ್ಷಣೆ ಮಾಡುವ … Continued

ಮೋದಿ ಲೂಟಿಕೋರ; ರಾಹುಲ್‌ ಗಾಂಧಿ ಆರೋಪ

ಕೊರೊನಾ ಸಂಕಷ್ಟದ ಸಮಯದಲ್ಲಿ ಸಾರ್ವಜನಿಕರ ಹಣವನ್ನು ಲೂಟಿ ಮಾಡಿದ ಪ್ರಧಾನಿ ಮೋದಿ ಕಾರ್ಪೋರೇಟ್‌ಗಳತ್ತ ಗಮನ ಹರಿಸಿ ತಮ್ಮ ಇಬ್ಬರು ಸ್ನೇಹಿತರ ಸಾಲವನ್ನು ಮನ್ನಾ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ನೇರ ಆರೋಪ ಮಾಡಿದ್ದಾರೆ. ಕೊವಿಡ್‌-೧೯ ಸಂದರ್ಭದಲ್ಲಿ ಮೋದಿ ಸಾರ್ವಜನಿಕರ ಹಣವನ್ನು ಲೂಟಿಗೈದಿದ್ದಾರೆ ಎಂದರು. ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ಆಸ್ಸಾಂ ರಾಜ್ಯವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದು, … Continued

ಟೂಲ್‌ಕಿಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಯುವತಿ ಬಂಧನ

ನೂತನ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರ ಪ್ರತಿಭಟನೆಯ “ಟೂಲ್ ಕಿಟ್‌ʼ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ೨೧ ವರ್ಷದ ಪರಿಸರ ಕಾರ್ಯಕರ್ತೆಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಪರಿಸರ ಕಾರ್ಯಕರ್ತೆ ಗ್ರೆಟಾ ಥನ್‌ಬರ್ನ್‌ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಫ್ರೈಡೇಸ್‌ ಫಾರ್‌ ಫ್ಯೂಚರ್‌ ಸಂಸ್ಥೆಯ ಸಂಸ್ಥಾಪಕರಲ್ಲೊಬ್ಬರಾದ ದಿಶಾ ರವಿ ಬಂಧಿತ ಯುವತಿ. ಇವರು ಟೂಲ್‌ಕಿಟ್‌ ಅನ್ನು ಸಂಪಾದಿಸಿದ್ದಲ್ಲದೇ ಅದನ್ನು … Continued

ಕೆನಡಾಕ್ಕೆ ಭಾರತದಿಂದ ೫ ಲಕ್ಷ ಕೊರೊನಾ ಲಸಿಕೆ ಪೂರೈಕೆ

ನವದೆಹಲಿ: ಪ್ರಧಾನಿ ಜಸ್ಟಿನ್‌ ಟ್ರುಡೊ ಅವರ ಕೋರಿಕೆ ಮೇರೆಗೆ ಫೆಬ್ರವರಿಯಲ್ಲಿ ೫ ಲಕ್ಷ ಕೊರೊನಾ ಲಸಿಕೆಗಳನ್ನು ಕೆನಡಾಕ್ಕೆ ಪೂರೈಸಲು ಭಾರತ ಒಪ್ಪಿಕೊಂಡಿದೆ. ಕೆನಡಾ ಮಾತ್ರವಲ್ಲದೇ ಕೋವಿಡ್ ಲಸಿಕೆಯನ್ನು ಬಾಂಗ್ಲಾದೇಶ, ನೇಪಾಳ, ಭೂತಾನ್ ಮತ್ತು ಇತರ ನೆರೆಯ ರಾಷ್ಟ್ರಗಳಿಗೆ ಪೂರೈಸಲು ಮೋದಿ ಸರ್ಕಾರ ನಿರ್ಧರಿಸಿದೆ. ಸರಬರಾಜು ಕೋವಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳ ಮಿಶ್ರಣವಾಗಿರುತ್ತದೆ. ಫೆಬ್ರವರಿ 10 ರಂದು … Continued