ತೈಲೆ ಬೆಲೆ ಗ್ರಾಹಕರಿಗೆ ಹೊರೆ ಎಂದು ಒಪ್ಪಿದ ನಿರ್ಮಲಾ

ನವ ದೆಹಲಿ: ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆ ತಗ್ಗಿಸಬೇಕು ಎಂದು ಗ್ರಾಹಕರು ಒತ್ತಾಯಿಸಿರುವುದರಲ್ಲಿ ಅರ್ಥವಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಶುಕ್ರವಾರ ಒಪ್ಪಿಕೊಂಡರು. ಇಂಧನದ ಬೆಲೆ ಕಡಿಮೆಯಾಗಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಸುಂಕ ಮತ್ತು ತೆರಿಗೆ ಕಡಿಮೆ ಮಾಡಬೇಕು ಎಂದು ಅವರು ಹೇಳಿದರು. ಮುಕ್ತ ಮಾರುಕಟ್ಟೆಯಲ್ಲಿ ಮಾರಾಟವಾಗುವ ಪೆಟ್ರೋಲ್ ಬೆಲೆಯಲ್ಲಿ … Continued

ಅಯೋಧ್ಯೆಯಲ್ಲಿ ಅತಿಥಿ ಗೃಹ ನಿರ್ಮಾಣಕ್ಕೆ ಹೊರ ರಾಷ್ಟ್ರಗಳಿಗೆ ಅವಕಾಶ

ಲಖನೌ: ಅಯೋಧ್ಯೆ ಅಂತಾರಾಷ್ಟ್ರೀಯ ಧಾರ್ಮಿಕ ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಅತಿಥಿ ಗೃಹ ನಿರ್ಮಾಣಕ್ಕೆ ಕೋರಿದ್ದ ಸುಮಾರು ೧೨ ಹೊರ ರಾಷ್ಟ್ರಗಳಿಗೆ ಯೋಗಿ ಆದಿತ್ಯ ನಾಥ್ ಸರ್ಕಾರ ಅವಕಾಶ ನೀಡಿದೆ. ಭಗವಾನ್ ಶ್ರೀರಾಮನ ಜನ್ಮ ಸ್ಥಳವಾದ ಅಯೋಧ್ಯೆಯಲ್ಲಿ ತಮ್ಮ ಅತಿಥಿ ಗೃಹ ನಿರ್ಮಿಸಿಕೊಳ್ಳಲು ಮಾರಿಷಿಯಸ್‌, ಕೆನಡಾ, ನೇಪಾಳ, ಶ್ರೀಲಂಕಾ,ಫಿಜಿ, ಕೀನ್ಯಾ, ಇಂಡೋನೇಷ್ಯಾ, ಕೊರಿಯಾ, ಮಲೇಷ್ಯಾ, ಟ್ರಿನಿಡಿಯಾ, … Continued

ಭಾರತೀಯ ಮಹಿಳೆಯರು ಹೆಚ್ಚು ಮಾತನಾಡುವ ವಿಷಯ ಟ್ವಿಟರ್ ಸಮೀಕ್ಷೆಯಲ್ಲಿ ಬೆಳಕಿಗೆ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಟ್ವಿಟರ್ ನಡೆಸಿದ ಸಮೀಕ್ಷೆಯಲ್ಲಿ ಭಾರತೀಯ ಮಹಿಳೆಯರು ಯಾವುದರ ಬಗ್ಗೆ ಹೆಚ್ಚು ಆಸಕ್ತಿ ಕೊಟ್ಟು ಮಾತನಅಡುತ್ತಾರೆ ಎಂಬ ಕುತೂಹಲಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಟ್ವಿಟರಿನ ಸ್ವತಂತ್ರ ಸಮೀಕ್ಷೆ ಇದಾಗಿದ್ದು, ಮಹಿಳಾ ಟ್ವಿಟ್ಟರ್ ಖಾತೆಗಳಿಂದ ಜನವರಿ 2019 ಮತ್ತು ಫೆಬ್ರವರಿ 2021ರ ನಡುವೆ 10 ಭಾರತೀಯ ನಗರಗಳಲ್ಲಿ ಮಹಿಳೆಯರು ಕಳುಹಿಸಿದ 5, 22,992 … Continued

ಅಂಬಾನಿ ಮನೆ ಮುಂದೆ ಸ್ಫೋಟಕ ತುಂಬಿದ್ದ ಕಾರು ಪತ್ತೆ ಪ್ರಕರಣ: ಕಾರು ಮಾಲೀಕ ಶವವಾಗಿ ಪತ್ತೆ

ಮುಂಬೈ: ಏಶಿಯಾದ ಅಗರ್ಭ ಶ್ರೀಮಂತ ಮುಕೇಶ್ ಅಂಬಾನಿ ಅವರ ಮನೆ ಮುಂದೆ ಸ್ಫೋಟಕ ತುಂಬಿದ್ದ ಕಾರು ಪತ್ತೆಯಾಗಿ ಆತಂಕ ಸೃಷ್ಟಿಸಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು ಕಾರಿನ ಮಾಲೀಕನ ಶವ ಪತ್ತೆಯಾಗಿದೆ. ಪ್ರಕರಣ ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ತನಿಖೆ ಕೈಗೊಂಡಿದ್ದರು. ತನಿಖೆ ವೇಳೆ ಕಾರು ಮಾಲೀಕ ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಕಾರು ಮಾಲೀಕ ಮನ್ಸುಕ ಹಿರೆನ್ ಶವ ಥಾಣೆಯ … Continued

ತಮಿಳುನಾಡು: ಮೈತ್ರಿಯಲ್ಲಿ ಬಿರುಕು, ಏಕಾಂಗಿ ಸ್ಪರ್ಧೆಗೆ ಕಾಂಗ್ರೆಸ್‌ ರಾಜ್ಯ ಘಟಕದ ನಿರ್ಧಾರ?

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ಮತ್ತು ಡಿಎಂಕೆ ನಡುವೆ ಸೀಟು ಹಂಚಿಕೆ ವಿಚಾರದಲ್ಲಿ ತಿಕ್ಕಾಟ ಶುರುವಾಗಿದೆ. ಕೆಲವೇ ಕೆಲವು ಸ್ಥಾನಗಳನ್ನು ಕಾಂಗ್ರೆಸ್ಸಿಗೆ ಬಿಟ್ಟು ಕೊಡುವ ಮೂಲಕ ಪಕ್ಷಕ್ಕೆ ಡಿಎಂಕೆ ಅವಮಾನಿಸಿದೆ ಎಂದು ರಾಜ್ಯ ಘಟಕ ಸಿಡಿಮಿಡಿಗೊಂಡಿದೆ. ತಮಿಳುನಾಡಿನಲ್ಲಿ ಡಿಎಂಕೆ ಜೊತೆಗೆ ಮೈತ್ರಿ ಮಾಡಿಕೊಳ್ಳದೇ ಏಕಾಂಗಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಪಕ್ಷದ … Continued

ಆಸ್ತಿ ಮುಟ್ಟುಗೋಲು ಪ್ರಶ್ನಿಸಿ ಫಾರುಕ್‌ ಹೈಕೋರ್ಟಿಗೆ ಮೊರೆ

ಶ್ರೀನಗರ: ಆಸ್ತಿ ಮುಟ್ಟುಗೋಲು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವ್ಯಾಪ್ತಿಯನ್ನು ಪ್ರಶ್ನಿಸಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್‌ ಅಸೋಸಿಯೆಷನ್‌ನಲ್ಲಿ (ಜೆಕೆಸಿಎ) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕಳೆದಡಿಸೆಂಬರ್‌ 19ರಂದು … Continued

ಸಿಡಿ ಹಗರಣ: ಮಹಿಳಾ ಆಯೋಗದಿಂದ ಪ್ರಕರಣ ದಾಖಲು

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಕನ್ನಡ ರಕ್ಷಣಾ ವೇದಿಕೆ ಹಾಗೂ ವಕೀಲರು ನೀಡಿದ ಎರಡು ದೂರನ್ನು ಆಧರಿಸಿ, ರಾಜ್ಯ ಮಹಿಳಾ ಆಯೋಗವು ರಮೇಶ್ ಜಾರಕಿಹೊಳಿ ವಿರುದ್ಧ ಸುಮೋಟೋ ಕೇಸ್ ದಾಖಲಿಸಿಕೊಂಡಿದೆ. ಈ ಕುರಿತಂತೆ ಮಾಹಿತಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು, ಕನ್ನಡ ರಕ್ಷಣಾ … Continued

೨೯೧ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಟಿಎಂಸಿ

  ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ 291 ಅಭ್ಯರ್ಥಿಗಳ ಪಟ್ಟಿಯನ್ನು ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಬಿಡುಗಡೆ ಮಾಡಿದೆ. ಟಿಎಂಸಿ ತೊರೆದು ಬಿಜೆಪಿ ಸೇರಿರುವ ಸುವೆಂದು ಅಧಿಕಾರಿಯ ಭದ್ರಕೋಟೆ ನಂದಿಗ್ರಾಮ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ ಸ್ವತಃ ಸ್ಪರ್ಧಿಸುತ್ತಿದ್ದಾರೆ. ಕೊಲ್ಕತ್ತಾದ ಭವಾನಿಪುರಾ ಕ್ಷೇತ್ರದ ಬದಲಿಗೆ ಈ ಸಲ ನಂದಿಗ್ರಾಮದಿಂದ ಕಣಕ್ಕಿಳಿಯುವುದಾಗಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. 50 … Continued

ಚಿನ್ನ ಕಳ್ಳಸಾಗಣೆ ಪ್ರಕರಣ: ಕಸ್ಟಮ್ಸ್‌ ಅಧಿಕಾರಿಗಳ ಅಫಿಡ್‌ವಿಟ್‌ನಲ್ಲಿ ಸಿಎಂ ಪಿಣರಾಯಿ ವಿಜಯನ್‌, ಸ್ಪೀಕರ್‌ ಹೆಸರು

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಹಿಂದಿನ ಯುನೈಟೆಡ್ ಅರಬ್ ಎಮಿರೇಟ್ಸ್ ಕಾನ್ಸುಲ್ ಜನರಲ್ (ಯುಎಇ) ಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು ಮತ್ತು ಅಕ್ರಮ ವಿತ್ತೀಯ ವಹಿವಾಟು ನಡೆಸಿದ್ದಾರೆ ಎಂದು ಚಿನ್ನದ ಕಳ್ಳಸಾಗಣೆ ಪ್ರಕರಣದ ಪ್ರಧಾನ ಆರೋಪಿ ಸ್ವಪ್ನಾ ಸುರೇಶ್ ಹೇಳಿದ್ದಾರೆ ಎಂದು ಕಸ್ಟಮ್ಸ್ ಇಲಾಖೆ ಕೇರಳ ಹೈಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಹೇಳಿದೆ. ಆಕೆಯ ಹೇಳಿಕೆ … Continued

ಆರ್‌ಟಿಒ ೧೮ ಸೇವೆಗಳು ಈಗ ಆನ್‌ಲೈನ್‌ನಲ್ಲಿಯೂ ಲಭ್ಯ..!

ನವ ದೆಹಲಿ: ಡ್ರೈವಿಂಗ್ ಲೈಸ್ಸ್, ನವೀಕರಣ ಸೇರಿದಂತೆ ವಿವಿಧ 18 ಸೇವೆಗಳಿಗೆ ಆರ್ ಟಿ ಒ ಕಚೇರಿಗೆ ಹೋಗಿಯೇ ಮಾಡಿಸಬೇಕಿತ್ತು. ಇನ್ಮುಂದೆ ಆಧಾರ್ ದೃಢೀಕರಣದ ಮೂಲಕ 18 ಸೇವೆಗಳನ್ನು ಈಗ, ಸಂಪರ್ಕ ರಹಿತ ಸೇವೆಗನ್ನಾಗಿ ಪಡೆಯಬಹುದಾಗಿದೆ. ಇಂತಹ ಸೇವೆಯನ್ನು ಭಾರತೀಯ ನಾಗರಿಕರಿಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಆರಂಭಿಸಿದ್ದು, ದೇಶದ ಜನರು ಕುಳಿತಲ್ಲೇ, … Continued