ಗಡಿ ಸಮಸ್ಯೆ ಬಗೆಹರಿಯಲು ಪರಸ್ಪರ ನಂಬಿಕೆ ಹೆಚ್ಚಬೇಕು: ಚೀನಾ ರಾಯಭಾರಿ

ಚೀನಾ ಹಾಗೂ ಭಾರತ ಗಡಿ ಸಮಸ್ಯೆಗಳನ್ನು ಬಗೆಹರಿಸಲು ಪರಸ್ಪರ ಗೌರವ, ನಂಬಿಕೆ ಹೆಚ್ಚಬೇಕು, ರಚನಾತ್ಮಕ ರೀತಿಯಲ್ಲಿ ಭಿನ್ನಾಭಿಪ್ರಾಯಗಳನ್ನು ನಿವಾರಿಸಿಕೊಳ್ಳಬೇಕು ಎಂದು ಚೀನಾದ ರಾಯಭಾರಿ ಸನ್‌ ವೀಡಾಂಗ್‌ ಹೇಳಿದ್ದಾರೆ. ಗಡಿ ಸಮಸ್ಯೆ ಬಗೆಹರಿಸಿಕೊಳ್ಳುವ ದಿಸೆಯಲ್ಲಿ ಎರಡೂ ದೇಶಗಳು ಒಂದೊಂದು ಹೆಜ್ಜೆ ಮುಂದಿಡಬೇಕು ಎಂದು ತಿಳಿಸಿದ್ದಾರೆ. ಲದಾಖ್‌ ಸೆಕ್ಟರ್‌ನಲ್ಲಿ ವಾಸ್ತವ ನಿಯಂತ್ರಣ ಗಡಿರೇಖೆ ಕುರಿತು ವಿವಾದ ಉಂಟಾಗಿರುವ ಸಂದರ್ಭದಲ್ಲಿ … Continued

ಗಣರಾಜ್ಯೋತ್ಸವ ಹಿಂಸಾಚಾರ: ಮತ್ತೊಬ್ಬ ಆರೋಪಿ ಬಂಧನ

ಗಣರಾಜ್ಯೋತ್ಸವದಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಪಂಜಾಬ್‌ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ಇಕ್ಬಾಲ್‌ ಸಿಂಗ್‌ನನ್ನು ಹೋಶಿಯಾರ್ಪುರದಿಂದ ಬಂಧಿಸಲಾಗಿದೆ ಎಂದು ಉಪ ಪೊಲೀಸ್‌ ಆಯುಕ್ತ ಸಂಜೀವಕುಮಾರ ಯಾದವ ತಿಳಿಸಿದ್ದಾರೆ. ಇಕ್ಬಾಲ್ ಸಿಂಗ್ ಅವರು ಕಥಾ ವಚಕ್ ಆಗಿ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು ಧಾರ್ಮಿಕ ಪ್ರಾರ್ಥನೆ ನಡೆಸುತ್ತಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಜನವರಿ … Continued

ಟ್ವಿಟ್ಟರ್‌ ಕ್ರಮ ತೃಪ್ತಿ ತಂದಿಲ್ಲ

ನವ ದೆಹಲಿ: ಟ್ವಿಟ್ಟರ್‌ ಬ್ಲಾಗ್‌ ಪೋಸ್ಟ್‌ ಸರ್ಕಾರದ ಆದೇಶಕ್ಕೆ ಅನುಗುಣವಾಗಿ ನಡೆದುಕೊಡಿಲ್ಲ ಎಂದು ಎಲೆಕ್ಟ್ರಾನಿಕ್ಸ್‌ ಹಾಗೂ ಐಟಿ ಸಚಿವರು ಹೇಳಿದ್ದಾರೆ. ಟ್ವಿಟ್ಟರ್‌ಗೆ ಸರಿಸುಮಾರು ೧೮೦೦ ಖಾತೆಗಳನ್ನು ತಡೆಹಿಡಿಯಬೇಕು ಎಂದು ಕೇಂದ್ರ ಸರ್ಕಾರ ಮೊನ್ನೆ ಆದೇಶ ಮಾಡಿತ್ತು. ಇದಾದ ನಂತರ ಟ್ವಿಟ್ಟರ್‌ ೫೦೦ ಟ್ವಿಟ್ಟರ್‌ ಖಾತೆಗಳನು ತಡೆಹಿಡಿದಿದೆ.  ಪತ್ರಕರ್ತರು, ಮಾಧ್ಯಮ ಸಂಸ್ಥೆಗಳು, ಸಾಮಾಜಿಕ ಕಾರ್ಯಕರ್ತರು ಹಾಗೂ ರಾಜಕಾರಣಿಗಳು … Continued

ಯೋಜನೆಗಳೊಂದಿಗೆ ಪ್ರಧಾನಿ ಪಶ್ಚಿಮ ಬಂಗಾಳಕ್ಕೆ ಬರ್ತಾರೆ: ನಡ್ಡಾ

ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ ಸಂದರ್ಭಗಳಲ್ಲಿ ಹಲವು ಯೋಜನೆಗಳನ್ನು ನೀಡಿದ್ದಾರೆ ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯಕ್ಕೆ ಪ್ರಧಾನಿ ಭೇಟಿಯನ್ನು ಆಕ್ಷೇಪಿಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು. ದ್ವಿತಿಯ ಹಂತದ ಪರಿವರ್ತನ ಯಾತ್ರೆಗೆ ಚಾಲನೆ ನೀಡಿದ ನಡ್ಡಾ, ಮಮತಾ ಪ್ರಧಾನಿ ಹಾಗೂ ಗೃಹಸಚಿವರ ರಾಜ್ಯದ ಭೇಟಿಯ ಬಗ್ಗೆ ಆಕ್ಷೇಪ … Continued

ಮುಂಬೈ ಸೆಲೆಬ್ರಿಟಿಗಳ ಟ್ವೀಟ್‌ಗಳ ತನಿಖೆ ನಿರ್ಧಾರವೂ…ಮಹಾರಾಷ್ಟ್ರದ ಸರ್ಕಾರದ ತುಘಲಕ್‌ ದರ್ಬಾರವೂ..

ಮೂರು ಪಕ್ಷಗಳು ಸೇರಿ ರಚನೆಯಾಗಿರುವ ಮಹಾರಾಷ್ಟ್ರ ವಿಕಾಸ್ ಅಘಾಡಿ ಸರ್ಕಾರವು ಮೂರು ಕುದುರೆಗಳ ಮೇಲೆ ನಡೆಯುತ್ತಿದೆ. ಆದರೆ ಪ್ರತಿ ಕುದುರೆಯೂ ಒಂದೊಂದು ದಿಕ್ಕಿನತ್ತ ಸಾಗಿದರೆ ಸರ್ಕಾರದ ನಿಲುವುಗಳು ಹಾಗೂ ನಿರ್ಧಾರಗಳು ಸಹ ಅಸಂಭದ್ಧವಾಗಿಯೇ ಇರುತ್ತದೆ ಎಂಬುದಕ್ಕೆ ತಾಜಾ ಉದಾಹರಣೆ ಮಹಾರಾಷ್ಟ್ರದ ಉದ್ಧವ ಠಾಕ್ರೆ ಸರ್ಕಾರ ಎರಡು ದಿನಗಳ ಹಿಂದೆ ಮುಂಬೈ ಸೆಲೆಬ್ರಿಟಿಗಳು ಕೇಂದ್ರ ಸರ್ಕಾರ ಬೆಂಬಲಿಸಿ … Continued

500ಕ್ಕೂ ಹೆಚ್ಚು ಖಾತೆ ತಡೆಹಿಡಿದ ಟ್ವಟ್ಟರ್‌

ನವ ದೆಹಲಿ: ಸರ್ಕಾರ ನೀಡಿದ ನೋಟಿಸ್‌ನಲ್ಲಿ ಗುರುತಿಸಲಾದ ಕೆಲವು ಖಾತೆಗಳನ್ನು ತಡೆಹಿಡಿಯಲಾಗಿದೆ ಎಂದು ಟ್ವಿಟ್ಟರ್‌ ಬುಧವಾರ ತಿಳಿಸಿದೆ. ಆದಾಗ್ಯೂ, ಸುದ್ದಿ ಮಾಧ್ಯಮ ಸಂಸ್ಥೆಗಳು, ಪತ್ರಕರ್ತರು, ಕಾರ್ಯಕರ್ತರು ಮತ್ತು ರಾಜಕಾರಣಿಗಳ ಖಾತೆಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ; ತಡೆಹಿಡಿಯಲಾದ ಖಾತೆಗಳು ಭಾರತದ ಹೊರಗೆ ಲಭ್ಯವಿದೆ. ಟ್ವಿಟರ್ ನಿಯಮಗಳ ಸ್ಪಷ್ಟ ಉಲ್ಲಂಘನೆಗಾಗಿ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯದ ಆದೇಶಗಳಂತೆ … Continued

ಟ್ವಿಟ್ಟರ್‌ ಬದಲಾಗಿ ದೇಶೀಯ ಕೂ ಬಳಸಲಾರಂಭಿಸಿದ ಸಚಿವರು, ಅಧಿಕಾರಿಗಳು

ನವ ದೆಹಲಿ: ರೈತರ ಪ್ರತಿಭಟನೆಗೆ ಸಂಬಂಧಿಸಿದ ವಿಷಯ ಮತ್ತು ಖಾತೆಗಳನ್ನು ನಿರ್ಬಂಧಿಸುವುದರ ಕುರಿತು ಸರ್ಕಾರ ಮತ್ತು ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಟ್ವಿಟರ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ಕೇಂದ್ರ ಸಚಿವರು ಮತ್ತು ಸರ್ಕಾರಿ ಇಲಾಖೆಗಳು ಟ್ವಿಟರ್‌ಗೆ ಮೇಡ್-ಇನ್-ಇಂಡಿಯಾ ಪರ್ಯಾಯವಾದ ಕೂನಲ್ಲಿ ಖಾತೆಗಳನ್ನು ತೆರೆಯಲು ಆರಂಭಿಸಿದ್ದಾರೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಮಂಗಳವಾರ ಟ್ವಿಟ್ಟರ್ ನಲ್ಲಿ, “ನಾನು ಈಗ … Continued

೪೦ ಲಕ್ಷ ಟ್ರ್ಯಾಕ್ಟರ್‌ಗಳೊಂದಿಗೆ ಮತಪ್ರದರ್ಶನ:ಟಿಕಾಯಿತ್

ರಾಷ್ಟ್ರದ ರಾಜಧಾನಿಯ ಗಡಿಯಲ್ಲಿ ಕೇಂದ್ರದ ವಿವಾದಾತ್ಮಕ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ ಮುಂದುವರಿಯುತ್ತದೆ ಮತ್ತು ಉಳಿದ ಭಾಗಗಳಿಗೆ ಹರಡಲಿದೆ. ರೈತರು ಈಗ ಇನ್ನೂ ದೊಡ್ಡದಾದ ಟ್ರಾಕ್ಟರ್ ರ್ಯಾಲಿಯನ್ನು ಕೈಗೊಳ್ಳಲಿದ್ದಾರೆ ಎಂದು ರಾಕೇಶ ಟಿಕಾಯಿತ್‌ ಹೇಳಿದರು. ಹರಿಯಾಣದ ಪೆಹೋವಾದಲ್ಲಿ ‘ಕಿಸಾನ್ ಮಹಾಪಂಚಾಯತ್’ ಉದ್ದೇಶಿಸಿ ಮಾತನಾಡಿದ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಅವರು, ಈಗ, … Continued

ಹಿಮನದಿ ದುರಂತ: ೩೧ ಜನರ ಮೃತದೇಹ ಪತ್ತೆ, ೧೭೫ ಜನರು ಇನ್ನೂ ನಾಪತ್ತೆ

ಉತ್ತರಾಖಂಡ: ಉತ್ತರಾಖಂಡದ ಹಿಮನದಿಯ ದುರಂತದಿಂದ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿದೆ. ವಿದ್ಯುತ್ ಯೋಜನಾ ಸ್ಥಳದಲ್ಲಿ ಸುರಂಗದೊಳಗೆ ಸಿಕ್ಕಿಬಿದ್ದ ಸುಮಾರು 30 ಕಾರ್ಮಿಕರನ್ನು ತಲುಪಲು ಅನೇಕ ಏಜೆನ್ಸಿಗಳು ಸಮಯಕ್ಕೆ ವಿರುದ್ಧವಾಗಿ ಸ್ಪರ್ಧಿಸುತ್ತಿದ್ದು, 175 ಜನರು ಕಾಣೆಯಾಗಿದ್ದಾರೆ. ರೈನಿ ಗ್ರಾಮದಲ್ಲಿನ ಅವಶೇಷಗಳಿಂದ ಎರಡು ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್) ಅಧಿಕಾರಿಗಳು ತಿಳಿಸಿದ್ದು, ಎರಡು … Continued

ಉತ್ತರಾಖಂಡ ವಿಪತ್ತು ನಿಧಿಗೆ ಹರ್ಯಾಣದಿಂದ ೧೧ ಕೋಟಿ ನೆರವು

ಹರಿಯಾಣ ಮುಖ್ಯಮಂತ್ರಿ ಮನೋಹರ ಲಾಲ್‌ ಖಟ್ಟರ್‌ ಉತ್ತರಾಖಂಡ ರಾಜ್ಯ ವಿಪತ್ತು ನಿಧಿಗೆ ೧೧ ಕೋಟಿ ರೂ. ದೇಣಿಗೆ ನೀಡಿದ್ದು, ವಿಪತ್ತು ಪೀಡಿತ ರಾಜ್ಯಕ್ಕೆ ಸಂಪೂರ್ಣ ಬೆಂಬಲ ನೀಡುವ ಭರವಸೆ ನೀಡಿದ್ದಾರೆ. ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠದಲ್ಲಿ ಭಾನುವಾರ ಹಿಮಬಂಡೆ ಕುಸಿದು ಧೌಲಿ ಗಂಗಾ ನದಿಯಲ್ಲಿ ಭಾರಿ ಪ್ರವಾಹ ಉಂಟಾಗಿದ್ದು, ಇದರಿಂದ ೨೮ ಜನರು ಜೀವ ಕಳೆದುಕೊಂಡಿದ್ದು, … Continued