ಮಾರ್ಚ್‌ನಲ್ಲಿ ಪಂಚರಾಜ್ಯಗಳ ಪ್ರವಾಸ ಕೈಗೊಳ್ಳಲಿರುವ ರಾಕೇಶ್‌ ಟಿಕಾಯತ್‌

ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಇನ್ನಷ್ಟು ಬೆಂಬಲ ಪಡೆಯಲು ಭಾರತೀಯ ಕಿಸಾನ್‌ ಯೂನಿಯನ್‌ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್‌ ಮಾರ್ಚ್‌ನಲ್ಲಿ ಐದು ರಾಜ್ಯಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಟಿಕಾಯತ್ ಮಾರ್ಚ್ 1 ರಿಂದ ಪ್ರವಾಸವನ್ನು ಪ್ರಾರಂಭಿಸಲಿದ್ದಾರೆ. ರೈತರ ಸಭೆಗಳು ಉತ್ತರಾಖಂಡ, ರಾಜಸ್ಥಾನ, ಮಧ್ಯಪ್ರದೇಶ, ಕರ್ನಾಟಕ ಮತ್ತು ತೆಲಂಗಾಣದಲ್ಲಿ ನಡೆಯಲಿದ್ದು, ಮಾರ್ಚ್‌ನಲ್ಲಿ ಉತ್ತರಪ್ರದೇಶದಲ್ಲಿ … Continued

ಪಿಎಸ್‌ಎಲ್‌ವಿಸಿ-೫೧ ಉಪಗ್ರಹ ಯಶಸ್ವಿ ಉಡಾವಣೆ: ಇಸ್ರೊ ಮತ್ತೊಂದು ಸಾಧನೆ

ಅಮೆಜೋನಿಯಾ-1 ಮತ್ತು ಇತರ 18 ಉಪಗ್ರಹಗಳನ್ನು ಹೊತ್ತ ಪಿಎಸ್ ಎಲ್ ವಿ-ಸಿ51 ಉಡಾವಣಾ ವಾಹಕವನ್ನು ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಸ್ರೊ ಸಂಸ್ಥೆ ಭಾನುವಾರ ಯಶಸ್ವಿಯಾಗಿ ಉಡಾಯಿಸಿದೆ. ಬ್ರೆಜಿಲ್ ವಿನ್ಯಾಸಗೊಳಿಸಿ ಸಂಯೋಜಿಸಿರುವ ಮೊಟ್ಟಮೊದಲ ಉಪಗ್ರಹ ಇದಾಗಿದೆ. ಇದನ್ನು ಯಶಸ್ವಿಯಾಗಿ ಉಡಾಯಿಸಿರುವುದು ತೀವ್ರ ಸಂತಸ ಉಂಟುಮಾಡುತ್ತಿದೆ. ಉಪಗ್ರಹ ಉತ್ತಮ ಸ್ಥಿತಿಯಲ್ಲಿದ್ದು ಇದಕ್ಕಾಗಿ ನಾನು … Continued

ನಟ ಅಮಿತಾಭ ಬಚ್ಚನ್‌ಗೆ ಶಸ್ತ್ರಚಿಕಿತ್ಸೆ

ಮುಂಬೈ: ಬಾಲಿವುಡ್‌ ಹಿರಿಯ ನಟ ಅಮಿತಾಬ್‌ ಬಚ್ಚನ್‌ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಈ ಕುರಿತು ಸ್ವತಃ ಅಮಿತಾಬ್ ಬಚ್ಚನ್ ಅವರು ಟ್ವೀಟ್ ಮಾಡಿದ್ದು, ‘ಆರೋಗ್ಯ ಸ್ಥಿತಿಯಲ್ಲಿ ವ್ಯತ್ಯಯವಾಗಿದೆ. ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಿದೆ. ಟ್ವೀಟ್‌ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ತಮ್ಮ ಬ್ಲಾಗ್‌ನಲ್ಲಿ ಪ್ರಕಟಿಸಿದ್ದಾರೆ. 78 ವರ್ಷದ ಅಮಿತಾಬ್ ಬಚ್ಚನ್ ಇತ್ತೀಚೆಗೆ ಕೋವಿಡ್‌ಗಾಗಿ ಹಲವು ದಿನಗಳವರೆಗೂ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆದು … Continued

ಪರಿಸರ ಸ್ನೇಹಿ ಸೌರ ಟೆಂಟ್‌, ಲಡಾಕ್‌ನಲ್ಲಿ ಸೈನಿಕರಿಗೆ ಹೆಚ್ಚು ಉಪಯುಕ್ತ

ಬಾಲಿವುಡ್‌ ಸುಪರ್‌ಹಿಟ್‌ ಸಿನೆಮಾ  3 ಈಡಿಯಟ್ಸ್‌  ಫುನ್ಸುಖ್ ವಾಂಗ್ಡು, ನಿಜ ಜೀವನದ ಅನ್ವೇಷಕ ಮತ್ತು ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್ ಅವರು ಪರಿಸರ ಸ್ನೇಹಿ ಸೌರ ಬಿಸಿ ಟೆಂಟ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. ಇದನ್ನು ಲಡಾಖ್ ಪ್ರದೇಶದ ಸಿಯಾಚಿನ್ ಮತ್ತು ಗಾಲ್ವಾನ್ ಕಣಿವೆಯಂತಹ ಅತ್ಯಂತ ಶೀತ ಸ್ಥಳಗಳಲ್ಲಿ ಸೇನಾ ಸಿಬ್ಬಂದಿ ಬಳಸಬಹುದಾಗಿದೆ. ತನ್ನ ಹೆಸರಿಗೆ ಪರಿಸರ ಸ್ನೇಹಿ … Continued

ತಮಿಳುನಾಡು ವಿಧಾನಸಭೆ ಚುನಾವಣೆ: ಎಐಎಡಿಎಂಕೆ-ಪಿಎಂಕೆ ಮಧ್ಯೆ ಸೀಟುಗಳ ಹೊಂದಾಣಿಕೆ

ತಮಿಳುನಾಡಿನ ಮುಂಬರುವ ವಿಧಾನಸಭಾ ಚುನಾವಣೆಗೆ ಪಟ್ಟಾಲಿ ಮಕ್ಕಲ್ ಕಚ್ಚಿ (ಪಿಎಂಕೆ)ಯು ಎಐಎಡಿಎಂಕೆ ವಿಧಾಸಬೆ ಸೀಟು ಹಂಚಿಕೆ ನಿಗದಿ ಮಾಡಿಕೊಂಡಿದೆ. ಪಿಎಂಕೆಗೆ ಒಟ್ಟಾರೆಯಾಗಿ 23 ಸ್ಥಾನಗಳನ್ನು ನೀಡಲಾಗಿದೆ. ಜಂಟಿ ಸಂಯೋಜಕ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರ ಸಮ್ಮುಖದಲ್ಲಿ ಎಐಎಡಿಎಂಕೆ ಸಂಯೋಜಕ ಒ ಪನ್ನೀರಸೆಲ್ವಂ ಈ ಘೋಷಣೆ ಮಾಡಿದ್ದಾರೆ. ಪ್ರಕಟಣೆ ಮಾಡಿದಾಗ ಪಿಎಂಕೆ ಅಅನ್ಬುಮಣಿ ರಾಮದಾಸ್ ಸಹ ಹಾಜರಿದ್ದರು. … Continued

ಸಂಭಾವ್ಯ ಕೊರೊನಾ ಹರಡುವಿಕೆ ತಡೆಗೆ ಪರಿಣಾಮಕಾರಿ ಕ್ರಮಕ್ಕೆ ಕೊರೊನಾ ಹೆಚ್ಚುತ್ತಿರುವ ರಾಜ್ಯಗಳಿಗೆ ಸೂಚನೆ

ಕೊವಿಡ್‌-೧೯ ಸಂಭಾವ್ಯ ಸೂಪರ್ ಹರಡುವಿಕೆಯ ಘಟನೆಗಳ ಸಂದರ್ಭದಲ್ಲಿ ಪರಿಣಾಮಕಾರಿ ಕಣ್ಗಾವಲು ಖಾತ್ರಿಪಡಿಸಿಕೊಳ್ಳಲು ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತಗಳಿಗೆ ಕೇಂದ್ರ ಸರ್ಕಾರ ಶನಿವಾರ ಸೂಚನೆ ನೀಡಿದೆ. ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬಾ ಮಹಾರಾಷ್ಟ್ರ, ಪಂಜಾಬ್, ಗುಜರಾತ್, ಮಧ್ಯಪ್ರದೇಶ, ಛತ್ತೀಸ್‌ಗಡ, ಪಶ್ಚಿಮ ಬಂಗಾಳ, ತೆಲಂಗಾಣ ಮತ್ತು ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿಗಳು ಮತ್ತು … Continued

ಅಯೋಧ್ಯ ರಾಮ ದೇಗುಲದ ದೇಣಿಗೆ ಅಭಿಯಾನ: ಸಂಗ್ರಹ 2500 ಕೋಟಿ ರೂ.ದಾಟುವ ಸಾಧ್ಯತೆ

ಲಕ್ನೋ: ಜನವರಿ 15 ರಂದು ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ಪ್ರಾರಂಭವಾದ ವಿಶ್ವದ ಅತಿದೊಡ್ಡ ನಿಧಿ ಸಂಗ್ರಹ ಡ್ರೈವ್ ಎಂದು ಹೆಸರಿಸಲ್ಪಟ್ಟ 44 ದಿನಗಳ ಸಮರ್ಪಣ ನಿಧಿ ಅಭಿಯಾನದಲ್ಲಿ ಇದುವರೆಗೆ 1900 ಕೋಟಿ ರೂ. ಗಳನ್ನು ಶ್ರೀರಾಮ್ ಲಲ್ಲಾ ಬ್ಯಾಂಕ್ ಖಾತೆಗಳಲ್ಲಿ ಜಮಾ ಮಾಡಲಾಗಿದೆ ಎಂದು ಶ್ರೀ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಖಜಾಂಚಿ ಸ್ವಾಮಿ … Continued

ಅಸ್ಸಾಂ:ಬೋಡೋ ಲ್ಯಾಂಡ್ ಪೀಪಲ್ಸ್ ಫ್ರಂಟ್ ಕಾಂಗ್ರೆಸ್‌ ತೆಕ್ಕೆಗೆ..!

ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಮೈತ್ರಿಕೂಟವಾಗಿದ್ದ ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (ಬಿಪಿಎಫ್) ಕೇಸರಿ ಪಕ್ಷದೊಂದಿಗಿನ ಸಂಬಂಧವನ್ನು ಮುರಿದಿದೆ. ಪಕ್ಷವು ಈಗ ಕಾಂಗ್ರೆಸ್ ನೇತೃತ್ವದ ಒಕ್ಕೂಟಕ್ಕೆ ಸೇರಲಿದೆ ಎಂದು ಬಿಪಿಎಫ್ ಅಧ್ಯಕ್ಷ ಹಗ್ರಾಮ ಮೊಹಿಲರಿ ಶನಿವಾರ ಪ್ರಕಟಿಸಿದ್ದಾರೆ. ಶಾಂತಿ, ಏಕತೆ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡಲು ಮುಂಬರುವ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬೊಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (ಬಿಪಿಎಫ್) … Continued

ಕೊವಿಡ್‌ ಲಸಿಕೆ: ಖಾಸಗಿ ಆಸ್ಪತ್ರೆಗಳಲ್ಲಿ ೨೫೦ ರೂ.ದರ ನಿಗದಿ

ನವ ದೆಹಲಿ: ದೇಶದಲ್ಲಿ ಮಾರ್ಚ್ 1 ರಿಂದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೊವಿಡ್‌ ಲಸಿಕೆ ಹಾಕುವ ಎರಡನೇ ಹಂತದ ಅಭಿಯಾನ ನಡೆಯಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಪ್ರತಿ ಡೋಸ್ ಗೆ 250 ರೂಪಾಯಿ ನಿಗದಿಪಡಿಸಿ ಕೇಂದ್ರ ಆರೋಗ್ಯ ಸಚಿವಾಲಯ ಆದೇಶ ಹೊರಡಿಸಿದೆ. ದೇಶದ 10,000 ಸರ್ಕಾರಿ ಆಸ್ಪತ್ರೆಗಳು ಹಾಗೂ 20,000 … Continued

ಪಕೋಡಾ ಮಾರುತ್ತಿರುವ ಚಿನ್ನ ವಿಜೇತ ಬಿಲ್ಲುಗಾರ್ತಿ ಮಮತಾ ಟುಡ್ಡು..!

ರಾಷ್ಟ್ರ ಮಟ್ಟದಲ್ಲಿ ಚಿನ್ನದ ಪದಕ ಜಯಿಸಿರುವ ಬಿಲ್ಲುಗಾರ್ತಿ ಮಮತಾ ಟುಡ್ಡು ತೀವ್ರ ಬಡತನದ ಕಾರಣದಿಂದಾಗಿ ಧನಬಾದ್‌ ದಾಮೋದರಪುರ ಗ್ರಾಮದಲ್ಲಿ ಪಕೋಡಾ ಮಾರಾಟ ಮಾಡುತ್ತಿದ್ದಾಳೆ. 2010 ಮತ್ತು 2014 ರಲ್ಲಿ ಜೂನಿಯರ್ ಮತ್ತು ಸಬ್ ಜೂನಿಯರ್ ಮಟ್ಟದಲ್ಲಿ ಚಿನ್ನದ ಪದಕ ಗೆದ್ದ ರಾಷ್ಟ್ರಮಟ್ಟದ ಬಿಲ್ಲುಗಾರ್ತಿ ೨೩ರ ಹರೆಯದ ಮಮತಾ, ಪಕೋಡಾ, ಶೇಂಗಾ ಮಾರಾಟ ಮಾರುತ್ತಿದ್ದಾಳೆ. ನಿವೃತ್ತ ಬಿಸಿಸಿಎಲ್ … Continued