ಮಹಾತ್ಮ ಗಾಂಧಿ ಹೆಸರೂ ಎಂʼನಿಂದಲೇ ಆರಂಭ: ರಾಹುಲ್‌ಗೆ ಜಾವಡೆಕರ್‌ ತಿರುಗೇಟು

ನವ ದೆಹಲಿ: ಮಹಾತ್ಮ ಗಾಂಧಿಯವರ ಹೆಸರು ಸಹ ಎಂ ನಿಂದಲೇ ಆರಂಭವಾಗುತ್ತದೆ ಎಂದು ಕೇಂದ್ರ ಸಚಿವ ಪ್ರಕಾಶ ಜಾವಡೆಕರ ರಾಹುಲ್‌ ಗಾಂಧಿಗೆ ತಿರುಗೇಟು ನೀಡಿದ್ದಾರೆ. ಜಗತ್ತಿನಲ್ಲಿರುವ  ಅನೇಕ ಸರ್ವಾಧಿಕಾರಿಗಳ   ಹೆಸರು ಎಂ ಇಂದ ಆರಂಭವಾಗುತ್ತದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಟ್ವೀಟ್‌  ಪ್ರಧಾನಿ ಮೋದಿ ಅವರಿಗೆ ಹೇಳುವ ಅರ್ಥದಲ್ಲಿತ್ತು.  ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಜಾವಡೆಕರ, … Continued

ಪ್ರಗತಿಗಾಗಿ ಭಾರತವು ಒಟ್ಟಾಗಿ ನಿಂತಿದೆ: ಅಮಿತ್‌ ಶಾ

ನವ ದೆಹಲಿ: ಪ್ರಚಾರವು ಭಾರತದ ಏಕತೆಗೆ ಭಂಗ ತರುವುದಿಲ್ಲ ಅಥವಾ ಭಾರತದ ಭವಿಷ್ಯವನ್ನೂ ನಿರ್ಧರಿಸುವುದಿಲ್ಲ. ಭಾರತವು ಒಗ್ಗಟ್ಟಿನಿಂದ ಮತ್ತು ಪ್ರಗತಿಯನ್ನು ಸಾಧಿಸಲು ಒಟ್ಟಾಗಿ ನಿಂತಿದೆ  ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಅವರು ಇಂಡಿಯಾ ಅಗೆನೆಸ್ಟ್‌ ಪ್ರೊಪಗಂಡ ಮತ್ತು   ಇಂಡಿಯಾ ಟುಗೆದರ್ ಎಂಬ ಹ್ಯಾಶ್‌ಟ್ಯಾಗ್‌ಗಳೊಂದಿಗೆ ಹೀಗೆ ಬರೆದಿದ್ದಾರೆ. ಅನೇಕ ಮಂತ್ರಿಗಳು ಮತ್ತು ಬಿಜೆಪಿ … Continued

ಇಂಡಿಯಾ ಟುಗೆದರ್‌: ಕೇಂದ್ರ ಸಚಿವರಿಂದ ಸೋಶಿಯಲ್‌ ಮೀಡಿಯಾ ಚಳವಳಿ

ನವ ದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ   ರೈತರ ಪ್ರತಿಭಟನೆಗೆ ‘ಅಂತಾರಾಷ್ಟ್ರೀಯ ಪ್ರಚೋದನೆ’ ಖಂಡಿಸಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿಕೆ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರದ ಎಲ್ಲ ಸಚಿವರು    ಈ ಹೇಳಿಕೆ ಖಂಡಿಸಿ  # ಇಂಡಿಯಾ ಟುಗೆದರ್ ಮತ್ತು # ಇಂಡಿಯಾ ಅಗೆನೆಸ್ಟ್‌ ಪ್ರೊಪಗೆಂಡ ಎಂಬ ಸಾಮಾಜಿಕ ಜಾಲತಾಣದ ಚಳವಳಿ ಆರಂಭಿಸಿದ್ದಾರೆ. ‌ ಇದು ಸಾಮಾಜಿಕ ಮಾಧ್ಯಮದ … Continued

ಎನ್‌ಸಿಪಿಗೆ ಬಿಜೆಪಿ ಶಾಸಕನ ೫ ಕೋಟಿ ರೂ. ದೇಣಿಗೆ !

ಮುಂಬೈ: ಶರದ್‌ ಪವಾರ್‌ ನೇತೃತ್ವದ ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷ (ಎನ್‌ಸಿಪಿ) ೨೦೧೯-೨೦ನೇ ಸಾಲಿನಲ್ಲಿ ೫೯.೯೪ ಕೋಟಿ ರೂ. ಪಕ್ಷದ ದೇಣಿಗೆ ಸಂಗ್ರಹ ಮಾಡಿದ್ದು, ಕಳೆದ ವರ್ಷ ಪಕ್ಷ ಕೇವಲ ೧೨.೦೫ ಕೋಟಿ ರೂ. ದೇಣಿಗೆ ಸಂಗ್ರಹಿಸಿತ್ತು. ಶಿವಸೇನಾ, ಕಾಂಗ್ರೆಸ್‌ ನೊಂದಿಗೆ ಮಹಾ ವಿಕಾಸ ಅಗಾಢಿ ಸರಕಾರ ನಡೆಸುತ್ತಿರುವ ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿಗೆ ಹಣ ಹರಿದು … Continued

ಟ್ವಿಟರ್‌ಗೆ ಕೇಂದ್ರದ ನೋಟಿಸ್‌

ನವದೆಹಲಿ: ರೈತರ ನರಮೇಧ ಎಂಬಂತೆ ತಪ್ಪು ಮಾಹಿತಿಯಿರುವ ಹ್ಯಾಷ್ ಟ್ಯಾಗ್ ಹೊಂದಿರುವ ಖಾತೆಗಳನ್ನು ತೆಗೆದು ಹಾಕುವಂತೆ ಕೇಂದ್ರ ಸರಕಾರ ಮೈಕ್ರೊ ಬ್ಲಾಗಿಂಗ್‌ ಸೈಟ್‌ ಟ್ವಿಟರ್‌ಗೆ ನೊಟೀಸ್‌ ನೀಡಿದ್ದು, ಆದೇಶ ಪಾಲನೆಗೆ ತಪ್ಪಿದರೆ ದಂಡ ವಿಧಿಸುವ ಎಚ್ಚರಿಕೆ ನೀಡಿದೆ. ಎಲೆಕ್ಟ್ರಾನಿಕ್ಸ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯ ಮಾಹಿತಿ ತಂತ್ರಜ್ಞಾನ-೨೦೦೦ರ ಕಾಯ್ದೆಯ ೬೯ ಎ ಅನುಚ್ಛೇದದಡಿ ತುರ್ತು ಮಧ್ಯಂತರ … Continued

ಬ್ಯಾರಿಕೇಡ್‌ ತೆರವು ಮಾಡದಿದ್ದರೆ ಮಾತುಕತೆಯಿಲ್ಲ: ರೈತ ಸಂಘಟನೆ

ನವ ದೆಹಲಿ: ದೆಹಲಿ ಗಡಿಯಲ್ಲಿ ಪೊಲೀಸರು ರಸ್ತೆಗಳಲ್ಲಿ ನಿರ್ಮಿಸಿದ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸುವವರೆಗೆ ಹಾಗೂ ಇಂಟರ್‌ನೆಟ್‌ ಸೇವೆಯ ತಡೆಯನ್ನು ತೆರವುಗೊಳಿಸುವವರೆಗೆ ಕೇಂದ್ರ ಸರಕಾರದೊಂದಿಗೆ ಯಾವುದೇ ಔಪಚಾರಿಕ ಮಾತುಕತೆ ನಡೆಸುವುದಿಲ್ಲ ಎಂದು ರೈತ ಹೋರಾಟದ ನೇತೃತ್ವ ವಹಿಸಿದ ಸಂಯುಕ್ತ ಕಿಸಾನ್‌ ಮೋರ್ಚಾ ತಿಳಿಸಿದೆ. ಭಾರತೀಯ ಕಿಸಾನ್‌ ಯೂನಿಯನ್‌ ಮುಖಂಡ ರಾಕೇಶ ಟಿಕಾಯತ್‌,  ಪೊಲೀಸರು ಬ್ಯಾರಿಕೇಡ್‌ ಹಾಕುವ ಮೂಲಕ ರೈತರ … Continued

ದೆಹಲಿ ಘರ್ಷಣೆ: ದೀಪ ಸಿಧು ಮಾಹಿತಿ ಕೊಟ್ಟವರಿಗೆ ೧ ಲಕ್ಷ ರೂ. ಬಹುಮಾನ

ನವ ದೆಹಲಿ:  ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದ ಸಂದರ್ಭದಲ್ಲಿ  ರೈತರ  ಪ್ರತಿಭಟನೆ ವೇಳೆ  ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನಟ, ಸಾಮಾಜಿಕ ಕಾರ್ಯಕರ್ತ ದೀಪ್ ಸಿಧು ಹಾಗೂ ಇತರ ಮೂವರ  ಮಾಹಿತಿ ನೀಡಿದವರಿಗೆ ಪೊಲೀಸರು ಒಂದು ಲಕ್ಷ ರೂ. ನಗದು ಬಹುಮಾನ ಘೋಷಿಸಿದ್ದಾರೆ.ಇದಲ್ಲದೆ ಬೂಟಾ ಸಿಂಗ್, ಸುಖ್‍ದೇವ್ ಸಿಂಗ್ ಹಾಗೂ ಮತ್ತಿಬ್ಬರ ಸುಳಿವು ನೀಡಿದವರಿಗೆ ಐವತ್ತು ಸಾವಿರ ರೂ.ಗಳ  … Continued

ಎಚ್‌ಎಎಲ್‌:ಮತ್ತೊಂದು ಯುದ್ಧವಿಮಾನ ಉತ್ಪಾದನಾ ಘಟಕ ಲೋಕಾರ್ಪಣೆ

ಬೆಂಗಳೂರು: ರಕ್ಷಣಾ ಸಚಿವ ರಾಜನಾಥ ಸಿಂಗ್‌ ಇಲ್ಲಿನ ಹಿಂದೂಸ್ಥಾನ ಏರೊನಾಟಿಕ್ಸ್‌ ಲಿಮಿಟೆಡ್‌ನಲ್ಲಿ ದ್ವಿತೀಯ ಯುದ್ಧವಿಮಾನ ಉತ್ಪಾದನಾ ಘಟಕವನ್ನು ಉದ್ಘಾಟಿಸಿದರು. ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು ಯುದ್ಧವಿಮಾನ ಉತ್ಪಾದನೆ ದ್ವಿಗುಣಗೊಳಿಸುವ ಗುರಿ ಹೊಂದಲಾಗಿದ್ದು, ಭಾರತೀಯ ಫೈಟರ್ಜೆ‌ಟ್‌ ಎಲ್‌ಸಿಎ ತೇಜಸ್‌ ಉತ್ಪಾದನೆಯನ್ನು ಪ್ರತಿ ವರ್ಷಕ್ಕೆ ೧೬ಕ್ಕೆ ಹೆಚ್ಚಿಸಲಾಗುವುದು ಎಂದರು. ನಾವು ಯುದ್ಧ ವಿಮಾನಗಳಿಗಾಗಿ ಅನ್ಯ ದೇಶಗಳನ್ನು ಅವಲಂಬಿಸುವುದಿಲ್ಲ ಎಂದು ಅವರು … Continued

ಟಿಎಂಸಿಯಿಂದ ಬಿಜೆಪಿಗೆ ಸಾಮೂಹಿಕ ವಲಸೆ ತಡೆಗೆ ನಿರ್ಧಾರ

ಕೋಲ್ಕತ್ತ: ತೃಣಮೂಲ ಕಾಂಗ್ರೆಸ್‌ನಿಂದ  ಬಿಜೆಪಿಗೆ ಸಾಮೂಹಿಕ ವಲಸೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿರು ತಮ್ಮ ಪಕ್ಷ ಆಡಳಿತ ಪಕ್ಷದ “ಬಿʼ ಟೀಮ್‌ ಆಗಲು ಇಷ್ಟಪಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಮುಂದೆ ಪಕ್ಷದ ಸ್ಥಳಿಯ  ಮುಖಂಡರ ಸಲಹೆ ಪಡೆದುಕೊಂಡು ಆಯ್ಕೆ ಮಾಡಿ ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಬಿಜೆಪಿ  ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್‌ ವಿಜಯವರ್ಗಿಯ ತಿಳಿಸಿದ್ದಾರೆ. ತೃಣಮೂಲ ಕಾಂಗ್ರೆಸ್‌ … Continued

ಗ್ರಾಪಂಗೆ ಸತಿ ಅಧ್ಯಕ್ಷೆ ಪತಿ ಉಪಾಧ್ಯಕ್ಷ

ಹುಬ್ಬಳ್ಳಿ: ಗ್ರಾಮ ಪಂಚಾಯತ ಚುನಾವಣೆಯಲ್ಲಿ ಜಯ ಸಾಧಿಸಿದ್ದ ದಂಪತಿಗಳಿಬ್ಬರು ಒಂದೇ ಗ್ರಾಮ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಗಮನ ಸೆಳೆದಿದ್ದಾರೆ. ತಾಲೂಕಿನ ವರೂರು ಗ್ರಾಮ ಪಂಚಾಯತಿಯ ಅಧ್ಯಕ್ಷೆಯಾಗಿ ವಿಶಾಲಾಕ್ಷಿ ಚನ್ನಬಸನಗೌಡ ಚನ್ನಬಸನಗೌಡರ ಅವಿರೋಧವಾಗಿ ಆಯ್ಕೆಯಾದರೆ, ಚನ್ನಬಸನಗೌಡ ಚನ್ನಬಸನಗೌಡರ ಕೂಡ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವುದು ವಿಶೇಷ. ವಿಶಾಲಾಕ್ಷಿ ೧ನೇ ವಾರ್ಡ್‌ ನಿಂದ ಆಯ್ಕೆಯಾದರೆ, ಚನ್ನಬಸನಗೌಡ ೨ನೇ ವಾರ್ಡ್‌ನಿಂದ … Continued