ಕೊರೊನಾ ಲಸಿಕೆ ಪ್ರಕ್ರಿಯೆ ಚುರುಕಿಗೆ ಖಾಸಗಿ ಸಂಸ್ಥೆಗಳ ಸಹಭಾಗಿತ್ವ ಅವಶ್ಯ

ದೇಶದಲ್ಲಿ ಕೊರೊನಾ ಲಸಿಕೆ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಸಲಹೆ ನೀಡಿದ ವಿಪ್ರೋ ಸಂಸ್ಥಾಪಕ ಅಜೀಮ್‌ ಪ್ರೇಮ್‌ಜಿ, ಖಾಸಗಿ ವಲಯಗಳ ಸಹಭಾಗಿತ್ವದಿಂದ ಕೇವಲ ೨ ತಿಂಗಳುಗಳಲ್ಲಿ ೫೦ ಕೋಟಿ ಜನರಿಗೆ ಲಸಿಕೆ ಹಾಕಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ. ಸರ್ಕಾರವು ಖಾಸಗಿ ಉದ್ಯಮ ಕ್ಷೇತ್ರವನ್ನು ತ್ವರಿತವಾಗಿ ತೊಡಗಿಸಿಕೊಳ್ಳಬೇಕು. ಇದರಿಂದ 60 ದಿನಗಳಲ್ಲಿ 500 ಮಿಲಿಯನ್ … Continued

ತಮಿಳುನಾಡು ಚುನಾವಣೆಯಲ್ಲಿ ತೃತೀಯರಂಗಕ್ಕೆ ನನ್ನದೇ ನೇತೃತ್ವ: ಕಮಲ್‌ ಹಾಸನ್‌

ತಮಿಳುನಾಡಿನ ವಿಧಾನಸಭಾ ಚುನಾವಣೆಗೆ ತಮ್ಮ ನೇತೃತ್ವದಲ್ಲಿಯೇ ತೃತಿಯ ರಂಗ ರಚನೆಯಾಗಲಿದೆ ಎಂದು ನಟ ಹಾಗೂ ಮಕ್ಕಳ ನೀಧಿ ಮಯಂ ಪಕ್ಷದ ಸಂಸ್ಥಾಪಕ ಕಮಲ್‌ ಹಾಸನ್‌ ತಿಳಿಸಿದ್ದಾರೆ. ಮೈತ್ರಿ ಕುರಿತು ಡಿಎಂಕೆ ನಾಯಕರಿಂದ ಆಹ್ವಾನ ಬಂದರೆ ಅದನ್ನು ಪರಿಗಣಿಸಲಾಗುವುದು. ಪ್ರಸ್ತುತ ರಾಜ್ಯದಲ್ಲಿ ಎಐಎಡಿಎಂಕೆ-ಬಿಜೆಪಿ, ಡಿಎಂಕೆ-ಕಾಂಗ್ರೆಸ್‌ ಮೈತ್ರಿ ಅಸ್ತಿತ್ವದಲ್ಲಿವೆ. ತೃತಿಯ ರಂಗ ರೂಪಗೊಳ್ಳಲು ಪೂರಕ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದರು. … Continued

ಯತ್ನಾಳ್‌ ಕಾಂಗ್ರೆಸ್‌ ʼಬಿʼ ಟೀಮ್‌ನಂತೆ ಕೆಲಸ ಮಾಡುತ್ತಿದ್ದಾರೆ: ಸಚಿವ ನಿರಾಣಿ

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಾಂಗ್ರೆಸ್‌ “ಬಿʼ ಟೀಮ್‌ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ ಮುರಗೇಶ ನಿರಾಣಿ ಆರೋಪಿಸಿದರು. ಪಂಚಮಸಾಲಿ ಸಮುದಾಯದ ಶಾಸಕರು ಹಾಗೂ ಸಚಿವರು ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸನಗೌಡ ಪಾಟೀಲ ಯತ್ನಾಳ ಬೇರೆ ಪಕ್ಷದವರಿಗಿಂತ ನಮ್ಮ ಪಕ್ಷದವರ ಮೇಲೆ ನಿರಂತರ ವಾಗ್ದಾಳಿ ನಡೆಸುತ್ತ ಬಂದಿದ್ದಾರೆ. ಯತ್ನಾಳ ನಮ್ಮ … Continued

ಮಹಾರಾಷ್ಟ್ರ ಸಚಿವ ಛಗನ್‌ ಭುಜಬಲ್‌ಗೆ ಕೊರೊನಾ ಸೋಂಕು

ಮಹಾರಾಷ್ಟ್ರ ಸಚಿವ ಛಗನ್‌ ಭುಜಬಲ್‌ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಅವರು ತಮ್ಮ ಟ್ವೀಟರ್‌ನಲ್ಲಿ ಬರೆದುಕೊಂಡಿದ್ದಾರೆ. ಕಳೆದ ೨-೩ ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ಕೊವಿಡ್‌-೧೯ ಪರೀಕ್ಷೆ ಮಾಡಿಸಿಕೊಳ್ಳಬೇಕು. ನನ್ನ ಆರೋಗ್ಯ ಉತ್ತಮವಾಗಿದ್ದು, ನಾಗರಿಕರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಅವರು ತಿಳಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 14,199 … Continued

ಸೋನಿಯಾ ಅಳಿಯನ ಸೈಕಲ್‌ ಸವಾರಿ: ತೈಲ ಬೆಲೆ ಹೆಚ್ಚಳಕ್ಕೆ ಖಂಡನೆ

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್‌ ವಾಧ್ರಾ ಪೆಟ್ರೋಲ್‌, ಡೀಸೆಲ್‌ ಬೆಲೆ ಹೆಚ್ಚಳ ಖಂಡಿಸಿ ದೆಹಲಿಯಲ್ಲಿ ಬೈಸಿಕಲ್‌ ಸವಾರಿ ಮಾಡಿ ಪ್ರತಿಭಟಿಸಿದರು. ಸೋನಿಯಾ ಗಾಂಧಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಹೆಚ್ಚಳ ಖಂಡಿಸಿ ಹೇಳಿಕೆ ನೀಡಿದ ಮರುದಿನ ರಾಬರ್ಟ್‌ ವಾಧ್ರಾ ದೆಹಲಿಯ ಖಾನ್‌ ಮಾರುಕಟ್ಟೆಯಿಂದ ತಮ್ಮ ಕಚೇರಿಗೆ ಸೈಕಲ್‌ ಮೂಲಕ ತೆರಳಿದರು. ಪೆಟ್ರೋಲ್‌ ಬೆಲೆ … Continued

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಸೋನಿಯಾ, ರಾಹುಲ್‌ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್‌

ದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ ಕುರಿತು ದೆಹಲಿ ಉಚ್ಚ ನ್ಯಾಯಾಲಯ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಪುತ್ರ ರಾಹುಲ್‌ ಗಾಂಧಿ ಸೇರಿದಂತೆ ಆರೋಪಿಗಳ ಪ್ರತಿಕ್ರಿಯೆ ಕೇಳಿದೆ. ಬಿಜೆಪಿ ಸಂಸದ ಸುಬ್ರಮಣಿಯನ್‌ ಸ್ವಾಮಿ ಸಲ್ಲಿಸಿದ ಮನವಿ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಅರೋಪಿತರ ಪ್ರತಿಕ್ರಿಯೆ ಕೇಳಿದೆ. ಸುಬ್ರಮಣಿಯನ್‌ ಸ್ವಾಮಿ ಪರ ಸತ್ಯ ಸಭರ್ವಾಲ್‌ ಹಾಗೂ ಸೋನಿಯಾ ಗಾಂಧಿ … Continued

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ತಡೆಗೆ “ನಾನು ಜವಾಬ್ದಾರʼ ಅಭಿಯಾನ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ತೀವ್ರ ಗತಿಯಲ್ಲಿ ಹಡುತ್ತಿರುವುದರಿಂದ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ “ನಾನು ಜವಾಬ್ದಾರʼ ಅಭಿಯಾನ ಆರಂಭಿಸಲು ನಿರ್ಧರಿಸಿದ್ದಾರೆ. ಮಾಸ್ಕ್‌, ಸ್ಯಾನಿಟೈಜರ್‌ ಬಳಕೆ, ಸಾಮಾಜಿಕ ಅಂತರ ಕಾಪಾಡುವ ಅವಶ್ಯಕತೆ ತಿಳಿಸುವುದು ಅಭಿಯಾನದ ಉದ್ದೇಶವಾಗಿದೆ. ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಆತಂಕಕಾರಿ ಏರಿಕೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಿ, ನಾನು ಜವಾಬ್ದಾರ ಅಭಿಯಾನದ ಉದ್ದೇಶದ … Continued

ಜೈ ಶ್ರೀರಾಮ ಘೋಷಣೆ ಕೂಗಿದ ಟಿಎಂಸಿ ಮುಖಂಡ

ತೃಣಮೂಲ ಕಾಂಗ್ರೆಸ್‌ ಮುಖಂಡ ಬ್ರಾತ್ಯ ಬಸು ಚುನಾವಣಾ ಪ್ರಚಾರ ಬಹಿರಂಗ ಸಭೆಯಲ್ಲಿ ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿ ಅಚ್ಚರಿ ಮೂಡಿಸಿದ್ದಾರೆ. ನಾಡಿಯಾ ಜಿಲ್ಲೆಯ ಬಿರ್ನ್‌ ನಗರದಲ್ಲಿ ಟಿಎಂಸಿ ಮುಖಂಡ, ಖ್ಯಾತ ನಾಟಕಕಾರ, ಬರಹಗಾರ ಬಾತ್ಯ ಬಸು ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದರು. ಆದರೆ ಅವರು ಟಿಎಂಸಿಗೆ ಮತ ನೀಡುವಂತೆ, ಮತ್ತೊಮ್ಮೆ ಮಮತಾ ಬ್ಯಾನರ್ಜಿಯನ್ನು … Continued

ಪುದುಚೇರಿ: ಬಹುಮತ ಸೋತ ನಾರಾಯಣಸಾಮಿ, ಕಾಂಗ್ರೆಸ್‌ ಸರ್ಕಾರ ಪತನ

ಪುದುಚೇರಿಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಪತನವಾಗಿದೆ. ಮುಖ್ಯಮಂತ್ರಿ ವಿ. ನಾರಾಯಣಸಾಮಿ ಅವರು ಸೋಮವಾರ ಸದನದಲ್ಲಿ ಬಹುಮತ ಸಾಬೀತುಪಡಿಸುವಲ್ಲಿ ವಿಫಲರಾಗಿದ್ದಾರೆ. ಸದನದಲ್ಲಿ ಮುಖ್ಯಮಂತ್ರಿ ವಿ. ನಾರಾಯಣಸಾಮಿ ಮಂಡಿಸಿದ ವಿಶ್ವಾಸದ ನಿರ್ಣಯಕ್ಕೆ ಸೋಲಾಯಿತು. ಸದನದಲ್ಲಿ ಮಾತನಾಡಿದ ಮುಖ್ಯಮಂತ್ರಿ ನಾರಾಯಣಸಾಮಿ, ತಮ್ಮ ಸರ್ಕಾರ ಮತ್ತು ಪುದುಚೇರಿಯ ಜನರು ಎದುರಿಸುತ್ತಿರುವ ಅಡೆತಡೆಗಳನ್ನು ಪಟ್ಟಿ ಮಾಡಿದರು, ಆಡಳಿತದಲ್ಲಿ ಕೇಂದ್ರ ಸರ್ಕಾರದ ಹಸ್ತಕ್ಷೇಪ ಮತ್ತು … Continued

ವರವರ ರಾವ್‌ಗೆ ೬ ತಿಂಗಳ ಮಧ್ಯಂತರ ಜಾಮೀನು ನೀಡಿದ ಮುಂಬೈ ಹೈಕೋರ್ಟ್‌

ಎಲ್ಗರ್ ಪರಿಷತ್-ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ 81 ವರ್ಷದ ವರವರ ರಾವ್ ಅವರಿಗೆ ಮುಂಬೈ ಹೈಕೋರ್ಟ್ ಸೋಮವಾರ ಆರು ತಿಂಗಳ ಮಧ್ಯಂತರ ಜಾಮೀನು ನೀಡಿದೆ. ಆಗಸ್ಟ್ 2018ರಿಂದ ವಿಚಾರಣೆಗೆ ಕಾಯುತ್ತಿರುವ ರಾವ್, ಆರು ತಿಂಗಳ ಜಾಮೀನು ಅವಧಿಯ ನಂತರ ಶರಣಾಗಬೇಕು ಅಥವಾ ವಿಸ್ತರಣೆಗೆ ಅರ್ಜಿ ಸಲ್ಲಿಸಬೇಕು ಎಂದು ನ್ಯಾಯಪೀಠ ತಿಳಿಸಿದೆ. ರಾವ್ ಅವರು ಮುಂಬೈಯಲ್ಲಿಯೇ ಇರಬೇಕು … Continued