ರಾಜ ಭವನ ಚಲೋ ವೇಳೆ ಕೊಲ್ಕತ್ತಾದಲ್ಲಿ ಹಿಂಸಾಚಾರ

ಕೊಲ್ಕತ್ತ: ಎಡ ಪಕ್ಷಗಳ ವಿದ್ಯಾರ್ಥಿಗಳ ಸಂಘಟನೆ ಆಯೋಜಿಸಿದ್ದ ರಾಜಭವನ ಚಲೋ ಮೆರವಣಿಗೆಯಲ್ಲಿ  ಕೊಲ್ಕತ್ತಾದಲ್ಲಿ ಹಿಂಸಾಚಾರ ನಡೆದಿದೆ. ತೃಣಮೂಲ ಕಾಂಗ್ರೆಸ್ ಸರ್ಕಾರದ ನೀತಿಗಳನ್ನು ವಿರೋಧಿಸಿ ಯುವಕರಿಗೆ “ಉದ್ಯೋಗ” ನೀಡುವಂತೆ ಒತ್ತಾಯಿಸಲು ರಾಜಭವನ ಚಲೋ ಹಮ್ಮಿಕೊಳ್ಳಲಾಗಿತ್ತು.ಅಲ್ಲದೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎದುರು ಕೆಂಪು ಕಾರ್ಡ್‌ ಪ್ರದರ್ಶಿಸುವುದು ಅವರ ಉದ್ದೇಶವಾಗಿತ್ತು. ಕೋಲ್ಕತ್ತದಡೊರಿನಾ ಕ್ರಾಸಿಂಗ್‌ನಲ್ಲಿ ಹಿಂಸಾಚಾರ ಆರಂಭಗೊಂಡ ನಂತರ ಪ್ರತಿಭಟನಾ ನಿರತರನ್ನು … Continued

ಸಿರಿವಂತರಿಂದ ಸಿರಿವಂತರಿಗಾಗಿ ಸಿರಿವಂತರು ಮಂಡಿಸಿದ ಬಜೆಟ್‌

ನವದೆಹಲಿ: ಇತ್ತೀಚಿಗೆ ಮಂಡಿಸಲಾದ ಆಯವ್ಯಯ ಕುರಿತು ನಿರಾಸೆ ವ್ಯಕ್ತಪಡಿಸಿದ ಮಾಜಿ ವಿತ್ತ ಸಚಿವ ಪಿ.ಚಿದಂಬರಂ, ಪ್ರಸ್ತುತ ಬಜೆಟ್‌ ಸಿರಿವಂತರಿಂದ ಸಿರಿವಂತರಿಗಾಗಿ ಸಿರಿವಂತರು ಮಂಡಿಸಿದ್ದಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಅವರು ರಾಜ್ಯಸಭೆಯಲ್ಲಿ ಬಜೆಟ್‌ ಕುರಿತ ಚರ್ಚೆಯಲ್ಲಿ ಮಾತನಾಡಿ, ಪ್ರಸ್ತುತ ಬಜೆಟ್‌ ಆರ್ಥಿಕತೆಯನ್ನು ಸ್ಪರ್ಧಾತ್ಮಕವಾಗಿ ನಿರ್ವಹಣೆ ಮಾಡುವಲ್ಲಿ ವಿಫಲವಾಗಿದೆ ಎಂದು ದೂಷಿಸಿದರು. ಬಜೆಟ್‌ನಲ್ಲಿ ಬಡವರಿಗಾಗಿ ಏನೂ ಇಲ್ಲ. ಬಡವರು ಬಡತನದಲ್ಲಿಯೇ … Continued

ಸರ್ಕಾರಿ ವಿಮಾನದಲ್ಲಿ ರಾಜ್ಯಪಾಲರ ಪ್ರಯಾಣಕ್ಕೆ ಅನುಮತಿ ಕೊಡದ ಮಹಾ ಸರ್ಕಾರ

ಮುಂಬೈ: ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರಿಗೆ ಸರ್ಕಾರಿ ವಿಮಾನದಲ್ಲಿ ತೆರಳುವುದಕ್ಕೆ ಮಹಾರಾಷ್ಟ್ರ ಸರ್ಕಾರ ಅನುಮತಿ ನಿರಾಕರಿಸಿದೆ. ಫೆ.11ರಂದು ರಾಜ್ಯಪಾಲ ಕೋಶಿಯಾರಿಯವರು ಉತ್ತರಾಖಂಡ್ ನ ಡೆಹ್ರಾಡೂನ್ ಗೆ ಪ್ರಯಾಣ ಮಾಡಬೇಕಿತ್ತು, ಇದಕ್ಕಾಗಿ ಸರ್ಕಾರಿ ವಿಮಾನವನ್ನೂ ಕಾಯ್ದಿರಿಸಲಾಗಿತ್ತು. ಆದರೆ ರಾಜ್ಯಪಾಲರಿಗೆ ಅನುಮತಿ ಸಿಗದ ಕಾರಣ ವಾಣಿಜ್ಯ ಪ್ರಯಾಣಿಕರ ವಿಮಾನವನ್ನೇ ಬಳಸಿ ಪ್ರಯಾಣ ಮಾಡಿದ್ದಾರೆ. ಬಿಜೆಪಿ ಈ … Continued

ಕೆಂಪುಕೋಟೆ ಹಿಂಸಾಚಾರ:ಎಫ್ಐಆ‌ರ್‌ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲು ಕೋರ್ಟ್‌ ಸೂಚನೆ

ದೆಹಲಿ: ದೆಹಲಿಯಲ್ಲಿ ಜನವರಿ ೨೬ರಂದು ನಡೆದ ಹಿಂಸಾಚಾರ ಘಟನೆಗಾಗಿ ಬಂಧಿತ ಆರೋಪಿಗಳು ಪೊಲೀಸ್‌ ಠಾಣೆಗೆ ಅಲೆದಾಡುವುದನ್ನು ತಪ್ಪಿಸಲು ಅಂದಿನ ಎಲ್ಲ ಎಫ್‌ಐಆರ್‌ಗಳನ್ನು ವೆಬ್‌ಸೈಟ್‌ಗೆ ಅಪ್‌ಲೋಡ್‌ ಮಾಡುವಂತೆ ದೆಹಲಿ ನ್ಯಾಯಾಲಯ ಆದೇಶಿಸಿದೆ. ಬಂದಿತರು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ನಂಗ್ಲೊಯಿ ಪೊಲೀಸ್‌ ಠಾಣೆ ಜನವರಿ ೨೬ರ ಹಿಂಸಾಚಾರದ ಕುರಿತ ಆರೋಪಿಗಳ ಎಫ್‌ಐಆರ್‌ ವೆಬ್‌ಸೈಟ್‌ಗೆ ಅಪ್‌ಲೋಡ್‌ ಮಾಡಬೇಕು. ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ … Continued

ಮುಂಬೈ ಲೋಕಲ್‌ ಟ್ರೇನ್‌ ಆರಂಭದ ನಂತರ ಹೆಚ್ಚಿದ ಕೊರೋನಾ

ಮುಂಬೈ: ಸ್ಥಳೀಯ ರೈಲು ಸೇವೆ ಆರಂಭಗೊಂಡ ನಂತರ ಮೂಂಬೈನಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಂಡು ಬಂದಿದೆ. ಇತ್ತೀಚಿಗೆ ನಗರದಲ್ಲಿ ಧಿಡೀರನೇ ಕೊವಿಡ್‌-೧೯ ಪ್ರಕರಣಗಳ ಸಂಖ್ಯೆ ಹೆಚ್ಚಳಗೊಂಡಿರುವುದಕ್ಕೆ ಸ್ಥಳಿಯ ರೈಲು ಸೇವೆ ಆರಂಭಿಸಿರುವುದೇ ಕಾರಣ ಎಂದು ವೈದ್ಯಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಫೆ.೧೦ರಂದು ನಗರದಲ್ಲಿ ೫೫೮ ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ ೫೩೬೯ಕ್ಕೇರಿದೆ. … Continued

ಮಹಾರಾಷ್ಟ್ರಕ್ಕೆ ತೆರಳುವ ಕೇರಳದವರಿಗೆ ಕೊರೋನಾ ಪರೀಕ್ಷೆ ಕಡ್ಡಾಯ

ಮುಂಬೈ: ಕೇರಳದಿಂದ ಮಹಾರಾಷ್ಟ್ರಕ್ಕೆ ಬರುವ ಎಲ್ಲ ಪ್ರಯಾಣಿಕರು ಕೊರೊನಾ ಪರೀಕ್ಷೆ ನೆಗೆಟಿವ್‌ ವರದಿ ಹೊಂದಿರುವುದು ಕಡ್ಡಾಯ ಎಂದು ಮಹಾರಾಷ್ಟ್ರ ಸರಕಾರ ಸೂಚನೆ ನೀಡಿದೆ. ಸರಕಾರ ಹೊರಡಿಸಿದ ನೂತನ ಸ್ಟಾಂಡರ್ಡ್‌ ಆಪರೇಟಿಂಗ್‌ ಪ್ರಾಸಿಜರ್ಸ್‌ ಪ್ರಕಾರ ಕೇರಳದಿಂದ ರಾಜ್ಯಕ್ಕೆ ಬರುವವರು ಕಡ್ಡಾಯವಾಗಿ ಕೋವಿಡ್‌-೧೯ ಪರೀಕ್ಷೆಯ ನೆಗೆಟಿವ್‌ ವರದಿ ಹೊಂದಿರಬೇಕು. ಇದಕ್ಕೂ ಮೊದಲು ಮಹಾರಾಷ್ಟ್ರ ಸರ್ಕಾರ ದೆಹಲಿ, ರಾಜಸ್ಥಾನ, ಗುಜರಾತ್ … Continued

ತಪೋವನ ಸರಂಗ ರಕ್ಷಣಾ ಕಾರ್ಯ ತಾತ್ಕಾಲಿಕ ಸ್ಥಗಿತ

ಋಷಿಗಂಗಾ ನದಿಯ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದರಿಂದ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದೆ ಮತ್ತು ಹತ್ತಿರದ ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಎಚ್ಚರಿಸಲಾಗುತ್ತಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಚಮೋಲಿಯ ತಪೋವನ್ ಸುರಂಗದೊಳಗೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಐಟಿಬಿಪಿಯ ಪಡೆಗಳು ಚಮೋಲಿಯಲ್ಲಿ ಸಂಪರ್ಕ ಕಡಿತಗೊಂಡ ಹಳ್ಳಿಗಳಿಗೆ ಸೇತುವೆಯನ್ನು … Continued

ಚುನಾವಣೆ ನಂತರ ಮಮತಾರಿಂದ ರಾಮ ಜಪ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಮುಗಿದಾಗ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಜೈ ಶ್ರೀರಾಮ ಎಂದು ಜಪ ಮಾಡಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದರು. ಅವರು ಕೂಚ್‌ಬೆಹಾರ್‌ನಲ್ಲಿ ಪರಿವರ್ತನ್‌ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು. ಜೈ ಶ್ರೀರಾಮ ಪಠಣವು ಮಮತಾಗೆ ಮಾಡಿದ ಅವಮಾನವೇ ಎಂದು ಪ್ರಶ್ನಿಸಿದ ಶಾ, ಅನೇಕರು ರಾಮ ಜಪದಿಂದ … Continued

ಸ್ಥೂಲಕಾಯ, ವಯಸ್ಸು, ಕೊರೊನಾ ಸೋಂಕಿನ ಪ್ರಮಾಣ ವೈರಸ್‌ ಹರಡುವಿಕೆ ಮೇಲೆ ಪ್ರಭಾವ

ವ್ಯಕ್ತಿಯ ಸ್ಥೂಲಕಾಯ, ವಯಸ್ಸು ಹಾಗೂ ಕೊರೊನಾ ಸೋಂಕಿನ ಪ್ರಮಾಣ ಉಸಿರಾಡುವ ವೈರಸ್‌ ಕಣಗಳ ಮೇಲೆ ಪ್ರಭಾವ ಬೀರುತ್ತದೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ. ೧೯೪ ವ್ಯಕ್ತಿಗಳ ಅಧ್ಯಯನ ನಡೆಸಿದ ಪಿಎನ್‌ಎಎಸ್‌ ಸಂಶೋಧನಾ ನಿಯತಕಾಲಿಕೆ ವರದಿ ಮಾಡಿದೆ. ಸಂಶೋಧನೆಯನ್ವಯ ಏರೋಸಾಲ್‌ ಕಣಗಳು ವ್ಯಕ್ತಿಯ ವಯಸ್ಸು, ವೈರಸ್‌ ಸ್ಥಿತಿ, ದೇಹದ ಸ್ಥೂಲತೆಯನ್ನು ಆಧರಿಸಿ ಬದಲಾವಣೆಯಾಗುತ್ತಿರುತ್ತದೆ. ಇತರ ಸಾಂಕ್ರಾಮಿಕ ರೋಗಗಳಲ್ಲಿ … Continued

ಗಣರಾಜ್ಯೋತ್ಸವದಂದು ರೈತನ ಸಾವು:ಎಸ್‌ಐಟಿ ತನಿಖೆಗೆ ಒತ್ತಾಯಿಸಿ ಕುಟುಂಬಸ್ಥರಿಂದ ಹೈಕೋರ್ಟಿಗೆ ಮೊರೆ

ಜನವರಿ ೨೬ರಂದು ನಡೆದ ರೈತರ ಟ್ರಾಕ್ಟರ್‌ ರ್ಯಾಲಿಯಲ್ಲಿ ಮೃತಪಟ್ಟ ರೈತನ ಕುಟುಂದವರು ವಿಶೇಷ ತನಿಖಾ ತಂಡದಿಂದ ತನಿಖೆಯಾಗಬೇಕೆಂದು ದೆಹಲಿ ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದಾರೆ. ೨೫ ವರ್ಷದ ನವೀತ್‌ ಸಿಂಗ್‌ ರ್ಯಾಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟಿದ್ದಾರೆ. ದೆಹಲಿ ಪೊಲೀಸರ ಪ್ರಕಾರ ನವೀತ್‌ ಸಿಂಗ್‌ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಆದರೆ ಕಟುಂಬದ ಸದಸ್ಯರು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಪೊಲೀಸರು … Continued