ಇಮಾಮರು, ಅರ್ಚಕರ ಸರ್ಕಾರಿ ಸಹಾಯಧನ ಸಂಪೂರ್ಣ ಸ್ಥಗಿತ ; ಪಶ್ಚಿಮ ಬಂಗಾಳ ಸರ್ಕಾರದ ನಿರ್ಧಾರ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ, ಇಂದು, ಸೋಮವಾರ ನಡೆದ ಮೊದಲ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ಪೈಕಿ, ಮುಂಬರುವ ಜೂನ್ ತಿಂಗಳಿನಿಂದ ಧಾರ್ಮಿಕ ಆಧಾರಿತ ಸರ್ಕಾರಿ ನೆರವುಗಳನ್ನು ಸ್ಥಗಿತಗೊಳಿಸುವುದು ಮತ್ತು ಕಲ್ಕತ್ತಾ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ … Continued

ತೈಲ ಬಿಕ್ಕಟ್ಟು ; ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ

ಮುಂಬೈ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ, ಭೌಗೋಳಿಕ ರಾಜಕೀಯ ಅನಿಶ್ಚಿತತೆ ಮತ್ತು ಅಮೆರಿಕನ್ ಡಾಲರ್‌ನ ಬಲವರ್ಧನೆಯಿಂದಾಗಿ ಭಾರತೀಯ ರೂಪಾಯಿ ಮೌಲ್ಯವು ಸೋಮವಾರದ ಆರಂಭಿಕ ವಹಿವಾಟಿನಲ್ಲಿ ದಾಖಲೆಯ ಕುಸಿತ ಕಂಡಿದೆ. ಡಾಲರ್ ಎದುರು ರೂಪಾಯಿ ಮೌಲ್ಯ 44 ಪೈಸೆ ಕುಸಿದು, 96.25 ರ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ತಲುಪಿದೆ. ವಿದೇಶಿ ವಿನಿಮಯ ಮಾರುಕಟ್ಟೆಯ ತಜ್ಞರ … Continued

ಪ್ರವಾಸಿಗರಿದ್ದ ಜೀಪ್ ಅನ್ನೇ ಮಗುಚಲು ಯತ್ನಿಸಿದ ಖಡ್ಗಮೃಗ ! ಮಾನಸ್‌ ರಾಷ್ಟ್ರೀಯ ಉದ್ಯಾನವನದ ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಅಸ್ಸಾಂನ ಮಾನಸ್ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಸಫಾರಿ ಜೀಪ್ ಮೇಲೆ ಖಡ್ಗಮೃಗವೊಂದು ಆಕ್ರಮಣಕಾರಿಯಾಗಿ ಮುನ್ನುಗ್ಗಿ ವಾಹನವನ್ನೇ ಎತ್ತಿದ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಬಾನ್ಸ್‌ಬಾರಿ ವಲಯದಲ್ಲಿ ನಡೆದಿರುವ ಈ ರೋಮಾಂಚನಕಾರಿ ಹಾಗೂ ಭಯಾನಕ ದೃಶ್ಯದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ವ್ಯಾಪಕ ಗಮನ ಸೆಳೆದಿದೆ. ವಿಶ್ವ ಪರಂಪರೆಯ ತಾಣವಾಗಿರುವ ಮಾನಸ್ ರಾಷ್ಟ್ರೀಯ … Continued

ತಾನು ಬದುಕಿರುವಾಗಲೇ ಮರಣಾ ನಂತರದ ಕ್ರಿಯಾ ಕರ್ಮ ನೆರವೇರಿಸಿ ಸಾವಿರಾರು ಜನರಿಗೆ ಊಟ ಹಾಕಿಸಿದ ವೃದ್ಧ ; ಕಾರಣ..?

ಶಿವಪುರಿ (ಮಧ್ಯಪ್ರದೇಶ) : ನನ್ನ ಮರಣದ ನಂತರ ಅಂತಿಮ ವಿಧಿವಿಧಾನಗಳನ್ನು ನೆರವೇರಿಸುವವರು ಯಾರು ಎಂಬ ಚಿಂತೆ ಆ 60 ವರ್ಷದ ವೃದ್ಧನನ್ನು ಬಹುವಾಗಿ ಕಾಡುತ್ತಿತ್ತು. ಇದೇ ಕಾರಣಕ್ಕೆ ಆತ ಬದುಕಿರುವಾಗಲೇ ತನಗಾಗಿ ಸ್ವತಃ ತಾನೇ ಮರಣೋತ್ತರ ಕ್ರಿಯಾ ಕರ್ಮಗಳನ್ನು ನೆರವೇರಿಸಿದ ಅಪರೂಪದ ಘಟನೆ ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆದಿದೆ. ಈ ವಿಲಕ್ಷಣ ಘಟನೆ ಶಿವಪುರಿಯ ಕರೇರಾ ವ್ಯಾಪ್ತಿಯ … Continued

ವಯನಾಡು ಮುಂದಿನ ಅಮೇಥಿ ‘: ರಾಹುಲ್-ಪ್ರಿಯಾಂಕಾ ವಿರುದ್ಧ ವಿವಾದಾತ್ಮಕ ಪೋಸ್ಟರ್ ; ಪೊಲೀಸರಿಂದ ಪ್ರಕರಣ ದಾಖಲು

ವಯನಾಡು (ಕೇರಳ): ಕೇರಳದ ವಯನಾಡ್‌ನಲ್ಲಿರುವ ಕಾಂಗ್ರೆಸ್ ಕಚೇರಿ (DCC) ಗೋಡೆ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ  ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಟಾರ್ಗೆಟ್‌ ಮಾಡಿ ವಿವಾದಾತ್ಮಕ ಪೋಸ್ಟರ್‌ಗಳನ್ನು ಅಂಟಿಸಲಾಗಿದ್ದು, ಈ ಸಂಬಂಧ ಪೊಲೀಸರು ಮೊಕದ್ದಮೆ ದಾಖಲಿಸಿದ್ದಾರೆ. ಕಾಂಗ್ರೆಸ್ ಶಾಸಕ ಟಿ. ಸಿದ್ದಿಕ್ ನೀಡಿದ ದೂರಿನ ಮೇರೆಗೆ ಕಲ್ಪೆಟ್ಟಾ ಪೊಲೀಸ್ … Continued

1000 ವರ್ಷಗಳ ಹಳೆಯ ಚೋಳರ ಕಾಲದ ತಾಮ್ರದ ಶಾಸನಗಳನ್ನು ಭಾರತಕ್ಕೆ ಮರಳಿ ನೀಡಿದ ನೆದರ್ಲ್ಯಾಂಡ್ಸ್

ನವದೆಹಲಿ/ಆಮ್ಸ್ಟರ್‌ಡ್ಯಾಮ್: ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಮರಳಿ ತರುವ ನಿಟ್ಟಿನಲ್ಲಿ ಮತ್ತೊಂದು ಐತಿಹಾಸಿಕ ಯಶಸ್ಸು ಸಿಕ್ಕಿದೆ. ನೆದರ್ಲ್ಯಾಂಡ್ಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ, 11ನೇ ಶತಮಾನದ ಚೋಳರ ಕಾಲದ ಅತ್ಯಂತ ಅಪರೂಪದ ತಾಮ್ರದ ಶಾಸನಗಳನ್ನು (ಕಾಪರ್ ಪ್ಲೇಟ್ಸ್) ನೆದರ್ಲ್ಯಾಂಡ್ಸ್ ಸರ್ಕಾರವು ಶನಿವಾರ ಅಧಿಕೃತವಾಗಿ ಭಾರತಕ್ಕೆ ಹಸ್ತಾಂತರಿಸಿದೆ. ಐರೋಪ್ಯ ದೇಶಗಳಲ್ಲಿ ‘ಲೈಡನ್ ಪ್ಲೇಟ್ಸ್’ (Leiden Plates) … Continued

ಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ

 ಕೇಂದ್ರ ಸಚಿವ ಬಂಡಿ ಸಂಜಯಕುಮಾರ ಪುತ್ರ ಭಗೀರಥ  ಸಾಯಿ ಶನಿವಾರ ಪೊಲೀಸರ ಮುಂದೆ ಶರಣಾಗಿದ್ದಾನೆ. ಪೋಕ್ಸೋ ಪ್ರಕರಣದ ಆರೋಪಿಯಾಗಿರುವ ಬಂಡಿ ಭಗೀರಥನಿಗೆ ಮಧ್ಯಂತರ ಪರಿಹಾರ ನೀಡಲು ತೆಲಂಗಾಣ ಹೈಕೋರ್ಟ್ ನಿರಾಕರಿಸಿದ ನಂತರ, ಅವರ ತಂದೆ ಹಾಗೂ ಕೇಂದ್ರಸಚುವ ಬಂಡಿ ಸಂಜಯಕುಮಾರ ಶನಿವಾರ ತಮ್ಮ ಮಗನಿಗೆ ಪೊಲೀಸರ ಮುಂದೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ಸೂಚಿಸಿದ್ದರು. ಅದರ ನಂತರ … Continued

3ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!

ವಿಜಯವಾಡ: ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ರಾಜ್ಯದ ಜನಸಂಖ್ಯೆಯನ್ನು ಹೆಚ್ಚಿಸುವ ಉದ್ದೇಶ ಹೊಂದಿರುವ ವಿಶಿಷ್ಟವಾದ ಹೊಸ ಯೋಜನೆಯೊಂದನ್ನು ಶನಿವಾರ ಪ್ರಕಟಿಸಿದ್ದಾರೆ. ನರಸನ್ನಪೇಟೆಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಕುಟುಂಬದಲ್ಲಿ ಮೂರನೇ ಮಗು ಜನಿಸಿದರೆ ಸರ್ಕಾರದಿಂದ 30,000 ರೂಪಾಯಿ ಹಾಗೂ ನಾಲ್ಕನೇ ಮಗು ಜನಿಸಿದರೆ 40,000 ರೂಪಾಯಿ ನಗದು ಪ್ರೋತ್ಸಾಹಧನ ನೀಡಲಾಗುವುದು” ಎಂದು ಘೋಷಿಸಿದ್ದಾರೆ. … Continued

2000 ರೂ. ಬಾಡಿಗೆ ಕಟ್ಟಲು ಸಾಧ್ಯವಾಗದೆ ಮನೆ ಮಾಲೀಕನಿಗೆ ಹೆಂಡತಿ, ಮಗಳ ಮೇಲೆ ಅತ್ಯಾಚಾರ ನಡೆಸಲು ಅವಕಾಶ ನೀಡಿದ ವ್ಯಕ್ತಿ…!

ಮೊರ್ಬಿ : ಮನೆಯ ಬಾಡಿಗೆ ಹಣವನ್ನು ಪಾವತಿಸಲು ಸಾಧ್ಯವಾಗದ ಕಾರಣಕ್ಕೆ ತನ್ನದೇ ಪತ್ನಿ ಮತ್ತು ಅಪ್ರಾಪ್ತ ಮಗಳ ಮೇಲೆ ಪದೇ ಪದೇ ಅತ್ಯಾಚಾರ ನಡೆಸಲು ಮನೆ ಮಾಲೀಕನಿಗೆ ಅವಕಾಶ ನೀಡಿದ ವ್ಯಕ್ತಿಯನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಮನೆ ಮಾಲೀಕನನ್ನೂ ಬಂಧಿಸಲಾಗಿದೆ. ಈ ಘಟನೆ ಗುಜರಾತ್‌ನ ಮೊರ್ಬಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಪೊಲೀಸರು ನೀಡಿರುವ ಮಾಹಿತಿಯ … Continued

ನೀಟ್‌ ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ: ಪುಣೆಯ ಮತ್ತೊಬ್ಬ ಕಿಂಗ್‌ಪಿನ್‌ ಶಿಕ್ಷಕಿ ಸಿಬಿಐ ವಶಕ್ಕೆ

ನವದೆಹಲಿ: ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿರುವ ನೀಟ್‌ ಯುಜಿ (NEET-UG) 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಮತ್ತೊಂದು ಪ್ರಮುಖ ಯಶಸ್ಸು ಸಾಧಿಸಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ತಜ್ಞೆಯಾಗಿ ಭಾಗಿಯಾಗಿದ್ದ ಪುಣೆಯ ಸಸ್ಯಶಾಸ್ತ್ರ (Botany) ಶಿಕ್ಷಕಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಇದರೊಂದಿಗೆ ಈ ಹಗರಣದಲ್ಲಿ ಬಂಧಿತರಾದ ಶಂಕಿತರ ಒಟ್ಟು ಸಂಖ್ಯೆ … Continued