ವೀಡಿಯೊಕಾನ್ ಸಾಲ ಪ್ರಕರಣ: ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್, ಪತಿ ದೀಪಕ ಕೊಚ್ಚರ್‌ ಗೆ 3 ದಿನಗಳ ಸಿಬಿಐ ಕಸ್ಟಡಿ

ಮುಂಬೈ : ವೀಡಿಯೋಕಾನ್ ಗ್ರೂಪ್‌ಗೆ ಬ್ಯಾಂಕ್ ಮಂಜೂರು ಮಾಡಿದ ಸಾಲದಲ್ಲಿ ವಂಚನೆ ಮತ್ತು ಅಕ್ರಮಗಳಿಗೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ ಕೊಚ್ಚರ್ ಅವರನ್ನು (ಸಿಬಿಐ) ಮುಂಬೈ ವಿಶೇಷ ನ್ಯಾಯಾಲಯ ಶನಿವಾರ ಮೂರು ದಿನಗಳ ಸಿಬಿಐ ಕಸ್ಟಡಿಗೆ ನೀಡಿದೆ. ಸಾಲ ವಂಚನೆ ಪ್ರಕರಣದಲ್ಲಿ ಚಂದಾ ಕೊಚ್ಚರ್ ಮತ್ತು … Continued

ಆಮ್ಲಜನಕ ಸಿಲಿಂಡರ್‌ಗಳು, ವೆಂಟಿಲೇಟರ್‌ಗಳ ಸಿದ್ಧತೆ ಮೇಲೆ ಕೇಂದ್ರೀಕರಿಸಿ: ರಾಜ್ಯಗಳಿಗೆ ಕೇಂದ್ರದ ಕೋವಿಡ್ ಸಲಹೆ

ನವದೆಹಲಿ: ಚೀನಾದಲ್ಲಿ ಒಂದೇ ದಿನದಲ್ಲಿ ಗರಿಷ್ಠ ಉಲ್ಬಣ 3.7 ಕೋಟಿ ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿದ ವರದಿಗಳ ನಂತರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಶನಿವಾರ ರಾಜ್ಯಗಳಿಗೆ ಆರು ಅಂಶಗಳ ಕೋವಿಡ್ ಸಲಹೆಯನ್ನು ನೀಡಿದೆ. ಭವಿಷ್ಯದಲ್ಲಿ ಉದ್ಭವಿಸುವ ಯಾವುದೇ ಸವಾಲುಗಳನ್ನು ಎದುರಿಸಲು ಕೇಂದ್ರವು ರಾಜ್ಯಗಳಿಗೆ ಕೋವಿಡ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ದೇಶದಲ್ಲಿ ಕೋವಿಡ್ … Continued

ಚೀನಾದ ಕೋವಿಡ್ ಉಲ್ಬಣದ ಹಿಂದಿರುವ BF.7 ಎಂಬ ಒಮಿಕ್ರಾನ್ ಉಪ-ರೂಪಾಂತರಿ ವೈರಸ್‌ : ಭಾರತದಲ್ಲಿ ಇದು ಯಾಕೆ ಕಳವಳಕ್ಕೆ ಕಾರಣವಾಗಿದೆ..?

ನವದೆಹಲಿ: 2020ರಲ್ಲಿ ಜಗತ್ತನ್ನು ತಲ್ಲಣಗೊಳಿಸಿದ ಕೋವಿಡ್‌-19 ಸಾಂಕ್ರಾಮಿಕವು ಎರಡು ವರ್ಷಗಳ ನಂತರ ಮತ್ತೆ ಆತಂಕಕ್ಕೆ ಕಾರಣವಾಗಿದೆ. ಪ್ರಸ್ತುತ, ಚೀನಾದಲ್ಲಿ ಕೋವಿಡ್‌-19 ಸೋಂಕುಗಳ ಉಲ್ಬಣವು ದಾಖಲಾಗುತ್ತಿದೆ. ಈ ಸಂಖ್ಯೆಯ ಏರಿಕೆಗೆ ಕಾರಣವಾಗುವ ವೈರಸ್‌ನ ರೂಪಾಂತರವು BF.7 ಎಂದು ನಂಬಲಾಗಿದೆ. ಇದು ಒಮಿಕ್ರಾನ್ ಸ್ಟ್ರೈನ್ BA.5 ನ ರೂಪಾಂತರದ ರೂಪಾಂತರವಾಗಿದೆ. ಚೀನಾದಾದ್ಯಂತ ಕೋವಿಡ್‌-19 ಹರಡುವಿಕೆಗೆ “ಕಡಿಮೆ ಮಟ್ಟದ ರೋಗನಿರೋಧಕ … Continued

ಮಥುರಾ ಕೃಷ್ಣ ಜನ್ಮಭೂಮಿ ಪ್ರಕರಣ : ಜನವರಿ 2ರಿಂದ ಶಾಹಿ ಈದ್ಗಾ ಮಸೀದಿ ಸರ್ವೆ ಮಾಡಲು ಮಥುರಾ ಕೋರ್ಟ್ ಆದೇಶ

ಮಥುರಾ: ಉತ್ತರ ಪ್ರದೇಶದ ಮಥುರಾದ ನ್ಯಾಯಾಲಯವು ಶ್ರೀಕೃಷ್ಣ ಜನ್ಮಭೂಮಿ ಅಥವಾ ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾದ ಶಾಹಿ ಈದ್ಗಾ ಮಸೀದಿಯನ್ನು ಜನವರಿ 2ರಿಂದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ಎಎಸ್‌ಐ)ಯಿಂದ ಸಮೀಕ್ಷೆ ಮಾಡಲು ಆದೇಶಿದೆ. ಹಾಗೂ ಜನವರಿ 20 ರ ನಂತರ ವರದಿ ಸಲ್ಲಿಸಲು ಸೂಚಿಸಿದೆ. ಹಿಂದೂ ಸೇನೆಯ ವಿಷ್ಣು ಗುಪ್ತಾ ಅವರು ಸಲ್ಲಿಸಿದ ಮೊಕದ್ದಮೆಯ … Continued

40 ಅಡಿ ಆಳದ ಹೊಂಡಕ್ಕೆ ಕಾರು ಉರುಳಿ ಬಿದ್ದು 8 ಅಯ್ಯಪ್ಪ ಭಕ್ತರು ಸಾವು

ತೇಣಿ: ತಮಿಳುನಾಡಿನ ತೇಣಿ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ, ಅಯಪ್ಪ ಭಕ್ತರು ಪ್ರಯಾಣಿಸುತ್ತಿದ್ದ ಕಾರು 40 ಅಡಿ ಆಳದ ಹೊಂಡಕ್ಕೆ ಉರುಳಿದ ಪರಿಣಾಮ ಕನಿಷ್ಠ ಎಂಟು ಅಯಪ್ಪ ಭಕ್ತರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರನ್ನು ರಕ್ಷಿಸಿದ್ದಾರೆ. ಭಕ್ತರು ಸನ್ಮುಗಸುಂದರಪುರಂ ಗ್ರಾಮದ ನಿವಾಸಿಗಳಾಗಿದ್ದು, ಶಬರಿಮಲೆಗೆ ಭೇಟಿ ನೀಡಿದ ನಂತರ ಮನೆಗೆ ಮರಳುತ್ತಿದ್ದರು. ಶುಕ್ರವಾರ ತಡರಾತ್ರಿ ಕಾರು ಪಲ್ಟಿಯಾಗಿದೆ.ಗಾಯಗೊಂಡ … Continued

ಕೋವಿಡ್ -19 : ಚೀನಾ, ಇತರ ದಕ್ಷಿಣ ಏಷ್ಯಾದ ದೇಶಗಳಿಂದ ಬರುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ

ನವದೆಹಲಿ: ಚೀನಾದಲ್ಲಿ ಕೋವಿಡ್ -19 ಭಾರಿ ಉಲ್ಬಣದ ಸುದ್ದಿಯ ನಡುವೆ, ಭಾರತದ ಕೋವಿಡ್‌ ಸೋಂಕು ತಡೆಗಟ್ಟಲು ಕೇಂದ್ರ ಸರ್ಕಾರ ಕ್ರಮಗಳನ್ನು ಕೈಗೊಂಡಿದೆ. ದಕ್ಷಿಣ ಏಷ್ಯಾದ ದೇಶಗಳಿಂದ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಮಾಂಡವಿಯಾ ಶನಿವಾರ ಪ್ರಕಟಿಸಿದ್ದಾರೆ. ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್ ಕಾಂಗ್ ಮತ್ತು … Continued

ಸಾಲ ವಂಚನೆ ಪ್ರಕರಣ: ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್ ಬಂಧನ

ನವದೆಹಲಿ : ಐಸಿಐಸಿಐ ಬ್ಯಾಂಕ್‌ನ ಮುಖ್ಯಸ್ಥರಾಗಿದ್ದಾಗ ವೀಡಿಯೊಕಾನ್ ಗ್ರೂಪ್‌ಗೆ ಒದಗಿಸಿದ ₹ 3,000 ಕೋಟಿಗೂ ಹೆಚ್ಚು ಸಾಲದ ನೀಡಿದ ಪ್ರಕಣದಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿದ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚರ್ ಅವರನ್ನು ಸಿಬಿಐ ಶುಕ್ರವಾರ ಬಂಧಿಸಿದೆ. ಗ್ರಾಹಕ ಎಲೆಕ್ಟ್ರಾನಿಕ್ಸ್ ಮತ್ತು ತೈಲ ಮತ್ತು … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಕೇರಳ ಪತ್ರಕರ್ತ ಸಿದ್ದಿಕ್ ಕಪ್ಪನ್‌ಗೆ ಅಲಾಹಾಬಾದ್ ಹೈಕೋರ್ಟ್ ಜಾಮೀನು

ಅಲಹಾಬಾದ್‌: ಎರಡು ವರ್ಷಗಳಿಂದ ಉತ್ತರ ಪ್ರದೇಶದ ಜೈಲಿನಲ್ಲಿದ್ದ ಕೇರಳದ ಪತ್ರಕರ್ತನಿಗೆ ಕೊನೆಗೂ ಜಾಮೀನು ದೊರಕಿದೆ. ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಮಹಿಳೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವರದಿಗಾರಿಕೆಗೆಂದು ತೆರಳಿದ್ದ ವೇಳೆ ಬಂಧಿತರಾಗಿದ್ದ ಕೇರಳದ ಪತ್ರಕರ್ತ ಸಿದ್ದಿಕಿ ಕಪ್ಪನ್ ಅವರಿಗೆ ಶುಕ್ರವಾರ ಅಲಹಾಬಾದ್‌ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇವರಿಗೆ … Continued

1337.76 ಕೋಟಿ ರೂ.ಗಳಷ್ಟು ದಂಡ ವಿಧಿಸಿದ ಕೇಂದ್ರ ಸ್ಪರ್ಧಾ ಆಯೋಗದ ವಿರುದ್ಧ ಎನ್‌ಸಿಎಲ್‌ಎಟಿ ಮೊರೆ ಹೋದ ಗೂಗಲ್‌

ನವದೆಹಲಿ: 1,337.76 ಕೋಟಿ ರೂ.ಗಳಷ್ಟು ದಂಡ ವಿಧಿಸಿದ ಕೇಂದ್ರ ಸ್ಪರ್ಧಾ ಆಯೋಗದ ವಿರುದ್ಧ ಆಲ್ಫಾಬೆಟ್‌ ಮಾಲೀಕತ್ವದ ಗೂಗಲ್‌ ಕಂಪನಿಯು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (ಎನ್‌ಸಿಎಲ್‌ಎಟಿ) ಮೊರೆ ಹೋಗಿದ್ದು, ಸಿಸಿಐ ಆದೇಶಕ್ಕೆ ತಡೆ ನೀಡುವಂತೆ ಎನ್‌ಸಿಎಲ್‌ಎಟಿಗೆ ಅರ್ಜಿ ಸಲ್ಲಿಸಿದೆ. ಮೇಲ್ಮನವಿ ಸಲ್ಲಿಸಲು ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿ (NCLAT) ಅನ್ನು ಸಂಪರ್ಕಿಸಲಾಗಿದೆ ಎಂದು ಗೂಗಲ್ … Continued

ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ : ಮೊದಲ ಬಾರಿ ಗೆದ್ದ ಮಹಿಳೆ ಎಎಪಿಯ ಮೇಯರ್ ಅಭ್ಯರ್ಥಿ

ನವದೆಹಲಿ : ಆಮ್‌ ಆದ್ಮಿ ಪಾರ್ಟಿಯು ದೆಹಲಿಯ ಪೂರ್ವ ಪಟೇಲ್ ನಗರ ವಾರ್ಡ್‌ನಿಂದ ಗೆದ್ದ ಕೌನ್ಸಿಲರ್ ಶೆಲ್ಲಿ ಒಬೆರಾಯ್ (39) ಅವರನ್ನು ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಮೇಯರ್ ಅಭ್ಯರ್ಥಿಯಾಗಿ ಘೋಷಿಸಿದೆ. ಉಪಮೇಯರ್ ಹುದ್ದೆಗೆ ಚಾಂದಿನಿ ಮಹಲ್ ವಾರ್ಡ್‌ನ ಕೌನ್ಸಿಲರ್ ಆಲೆ ಮೊಹಮ್ಮದ್ ಇಕ್ಬಾಲ್ ಅವರ ಹೆಸರನ್ನು ಪಕ್ಷದ ರಾಷ್ಟ್ರೀಯ ಘೋಷಿಸಲಾಯಿತು. ಎಎಪಿ ರಾಷ್ಟ್ರೀಯ ಸಂಚಾಲಕ … Continued