ಮಥುರಾ ಕೃಷ್ಣ ಜನ್ಮಭೂಮಿ ಪ್ರಕರಣ : ಜನವರಿ 2ರಿಂದ ಶಾಹಿ ಈದ್ಗಾ ಮಸೀದಿ ಸರ್ವೆ ಮಾಡಲು ಮಥುರಾ ಕೋರ್ಟ್ ಆದೇಶ

ಮಥುರಾ: ಉತ್ತರ ಪ್ರದೇಶದ ಮಥುರಾದ ನ್ಯಾಯಾಲಯವು ಶ್ರೀಕೃಷ್ಣ ಜನ್ಮಭೂಮಿ ಅಥವಾ ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾದ ಶಾಹಿ ಈದ್ಗಾ ಮಸೀದಿಯನ್ನು ಜನವರಿ 2ರಿಂದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ(ಎಎಸ್‌ಐ)ಯಿಂದ ಸಮೀಕ್ಷೆ ಮಾಡಲು ಆದೇಶಿದೆ. ಹಾಗೂ ಜನವರಿ 20 ರ ನಂತರ ವರದಿ ಸಲ್ಲಿಸಲು ಸೂಚಿಸಿದೆ. ಹಿಂದೂ ಸೇನೆಯ ವಿಷ್ಣು ಗುಪ್ತಾ ಅವರು ಸಲ್ಲಿಸಿದ ಮೊಕದ್ದಮೆಯ … Continued

40 ಅಡಿ ಆಳದ ಹೊಂಡಕ್ಕೆ ಕಾರು ಉರುಳಿ ಬಿದ್ದು 8 ಅಯ್ಯಪ್ಪ ಭಕ್ತರು ಸಾವು

ತೇಣಿ: ತಮಿಳುನಾಡಿನ ತೇಣಿ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ, ಅಯಪ್ಪ ಭಕ್ತರು ಪ್ರಯಾಣಿಸುತ್ತಿದ್ದ ಕಾರು 40 ಅಡಿ ಆಳದ ಹೊಂಡಕ್ಕೆ ಉರುಳಿದ ಪರಿಣಾಮ ಕನಿಷ್ಠ ಎಂಟು ಅಯಪ್ಪ ಭಕ್ತರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರನ್ನು ರಕ್ಷಿಸಿದ್ದಾರೆ. ಭಕ್ತರು ಸನ್ಮುಗಸುಂದರಪುರಂ ಗ್ರಾಮದ ನಿವಾಸಿಗಳಾಗಿದ್ದು, ಶಬರಿಮಲೆಗೆ ಭೇಟಿ ನೀಡಿದ ನಂತರ ಮನೆಗೆ ಮರಳುತ್ತಿದ್ದರು. ಶುಕ್ರವಾರ ತಡರಾತ್ರಿ ಕಾರು ಪಲ್ಟಿಯಾಗಿದೆ.ಗಾಯಗೊಂಡ … Continued

ಕೋವಿಡ್ -19 : ಚೀನಾ, ಇತರ ದಕ್ಷಿಣ ಏಷ್ಯಾದ ದೇಶಗಳಿಂದ ಬರುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ

ನವದೆಹಲಿ: ಚೀನಾದಲ್ಲಿ ಕೋವಿಡ್ -19 ಭಾರಿ ಉಲ್ಬಣದ ಸುದ್ದಿಯ ನಡುವೆ, ಭಾರತದ ಕೋವಿಡ್‌ ಸೋಂಕು ತಡೆಗಟ್ಟಲು ಕೇಂದ್ರ ಸರ್ಕಾರ ಕ್ರಮಗಳನ್ನು ಕೈಗೊಂಡಿದೆ. ದಕ್ಷಿಣ ಏಷ್ಯಾದ ದೇಶಗಳಿಂದ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಮಾಂಡವಿಯಾ ಶನಿವಾರ ಪ್ರಕಟಿಸಿದ್ದಾರೆ. ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್ ಕಾಂಗ್ ಮತ್ತು … Continued

ಸಾಲ ವಂಚನೆ ಪ್ರಕರಣ: ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್ ಬಂಧನ

ನವದೆಹಲಿ : ಐಸಿಐಸಿಐ ಬ್ಯಾಂಕ್‌ನ ಮುಖ್ಯಸ್ಥರಾಗಿದ್ದಾಗ ವೀಡಿಯೊಕಾನ್ ಗ್ರೂಪ್‌ಗೆ ಒದಗಿಸಿದ ₹ 3,000 ಕೋಟಿಗೂ ಹೆಚ್ಚು ಸಾಲದ ನೀಡಿದ ಪ್ರಕಣದಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿದ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚರ್ ಅವರನ್ನು ಸಿಬಿಐ ಶುಕ್ರವಾರ ಬಂಧಿಸಿದೆ. ಗ್ರಾಹಕ ಎಲೆಕ್ಟ್ರಾನಿಕ್ಸ್ ಮತ್ತು ತೈಲ ಮತ್ತು … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಕೇರಳ ಪತ್ರಕರ್ತ ಸಿದ್ದಿಕ್ ಕಪ್ಪನ್‌ಗೆ ಅಲಾಹಾಬಾದ್ ಹೈಕೋರ್ಟ್ ಜಾಮೀನು

ಅಲಹಾಬಾದ್‌: ಎರಡು ವರ್ಷಗಳಿಂದ ಉತ್ತರ ಪ್ರದೇಶದ ಜೈಲಿನಲ್ಲಿದ್ದ ಕೇರಳದ ಪತ್ರಕರ್ತನಿಗೆ ಕೊನೆಗೂ ಜಾಮೀನು ದೊರಕಿದೆ. ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಮಹಿಳೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವರದಿಗಾರಿಕೆಗೆಂದು ತೆರಳಿದ್ದ ವೇಳೆ ಬಂಧಿತರಾಗಿದ್ದ ಕೇರಳದ ಪತ್ರಕರ್ತ ಸಿದ್ದಿಕಿ ಕಪ್ಪನ್ ಅವರಿಗೆ ಶುಕ್ರವಾರ ಅಲಹಾಬಾದ್‌ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇವರಿಗೆ … Continued

1337.76 ಕೋಟಿ ರೂ.ಗಳಷ್ಟು ದಂಡ ವಿಧಿಸಿದ ಕೇಂದ್ರ ಸ್ಪರ್ಧಾ ಆಯೋಗದ ವಿರುದ್ಧ ಎನ್‌ಸಿಎಲ್‌ಎಟಿ ಮೊರೆ ಹೋದ ಗೂಗಲ್‌

ನವದೆಹಲಿ: 1,337.76 ಕೋಟಿ ರೂ.ಗಳಷ್ಟು ದಂಡ ವಿಧಿಸಿದ ಕೇಂದ್ರ ಸ್ಪರ್ಧಾ ಆಯೋಗದ ವಿರುದ್ಧ ಆಲ್ಫಾಬೆಟ್‌ ಮಾಲೀಕತ್ವದ ಗೂಗಲ್‌ ಕಂಪನಿಯು ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (ಎನ್‌ಸಿಎಲ್‌ಎಟಿ) ಮೊರೆ ಹೋಗಿದ್ದು, ಸಿಸಿಐ ಆದೇಶಕ್ಕೆ ತಡೆ ನೀಡುವಂತೆ ಎನ್‌ಸಿಎಲ್‌ಎಟಿಗೆ ಅರ್ಜಿ ಸಲ್ಲಿಸಿದೆ. ಮೇಲ್ಮನವಿ ಸಲ್ಲಿಸಲು ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿ (NCLAT) ಅನ್ನು ಸಂಪರ್ಕಿಸಲಾಗಿದೆ ಎಂದು ಗೂಗಲ್ … Continued

ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ : ಮೊದಲ ಬಾರಿ ಗೆದ್ದ ಮಹಿಳೆ ಎಎಪಿಯ ಮೇಯರ್ ಅಭ್ಯರ್ಥಿ

ನವದೆಹಲಿ : ಆಮ್‌ ಆದ್ಮಿ ಪಾರ್ಟಿಯು ದೆಹಲಿಯ ಪೂರ್ವ ಪಟೇಲ್ ನಗರ ವಾರ್ಡ್‌ನಿಂದ ಗೆದ್ದ ಕೌನ್ಸಿಲರ್ ಶೆಲ್ಲಿ ಒಬೆರಾಯ್ (39) ಅವರನ್ನು ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಮೇಯರ್ ಅಭ್ಯರ್ಥಿಯಾಗಿ ಘೋಷಿಸಿದೆ. ಉಪಮೇಯರ್ ಹುದ್ದೆಗೆ ಚಾಂದಿನಿ ಮಹಲ್ ವಾರ್ಡ್‌ನ ಕೌನ್ಸಿಲರ್ ಆಲೆ ಮೊಹಮ್ಮದ್ ಇಕ್ಬಾಲ್ ಅವರ ಹೆಸರನ್ನು ಪಕ್ಷದ ರಾಷ್ಟ್ರೀಯ ಘೋಷಿಸಲಾಯಿತು. ಎಎಪಿ ರಾಷ್ಟ್ರೀಯ ಸಂಚಾಲಕ … Continued

ಮಿನಿ ಹರಾಜು: ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದುಬಾರಿಗೆ ಖರೀದಿಯಾದ ಸ್ಯಾಮ್ ಕುರ್ರಾನ್, ಬಿಡ್ ದಾಖಲೆ ಮುರಿದ ಕ್ಯಾಮೆರಾನ್ ಗ್ರೀನ್, ಬೆನ್ ಸ್ಟೋಕ್ಸ್

ಕೊಚ್ಚಿಯಲ್ಲಿ ಐಪಿಎಲ್ ಮಿನಿ ಹರಾಜು ಆರಂಭವಾಗಿದ್ದು, ಇದುವರೆಗೆ ಸಾಕಷ್ಟು ಬೆಳವಣಿಗೆಗಳು ನಡೆದಿದೆ. ಮೂವರು ಆಟಗಾರರು ಐಪಿಎಲ್ ಸಾರ್ವಕಾಲಿಕ ಬಿಡ್ಡಿಂಗ್ ದಾಖಲೆಯನ್ನು ಮುರಿದಿದ್ದಾರೆ. ಇಂಗ್ಲೆಂಡ್ ಆಲ್ ರೌಂಡರ್ ಸ್ಯಾಮ್ ಕುರ್ರಾನ್ ಅವರು ಪಂಜಾಬ್ ಕಿಂಗ್ಸ್‌ಗೆ 18.50 ಕೋಟಿ ರೂ.ಗಳಿಗೆ ಈವರೆಗಿನ ಗರಿಷ್ಠ ಬೆಲೆಗೆ ಮಾರಾಟವಾದರು. ಆಸ್ಟ್ರೇಲಿಯನ್ ಕ್ಯಾಮರೂನ್ ಗ್ರೀನ್ ಅವರು ಮುಂಬೈ ಇಂಡಿಯನ್ಸ್‌ಗೆ 17.5 ಕೋಟಿಗೆ ಮಾರಾಟವಾದರು. … Continued

ಇಳಿಜಾರಿನಲ್ಲಿ ಸೇನಾ ವಾಹನ ಉರುಳಿ 16 ಯೋಧರು ಸಾವು, ನಾಲ್ಕು ಮಂದಿಗೆ ಗಾಯ

ನವದೆಹಲಿ: ಶುಕ್ರವಾರ ಉತ್ತರ ಸಿಕ್ಕಿಂ ಬಳಿ ಕಡಿದಾದ ಇಳಿಜಾರಿನಲ್ಲಿ ಸೇನಾ ವಾಹನವು ಉರುಳಿಬಿದ್ದು ಸೇನೆಯ 16 ಸೇನಾ ಸಾವಿಗೀಡಾಗಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ. ಈ ವಾಹನವು ಮೂರು ವಾಹನಗಳ ಬೆಂಗಾವಲು ಪಡೆಯ ಭಾಗವಾಗಿತ್ತು, ಅದು ಬೆಳಿಗ್ಗೆ ಚಾಟೆನ್‌ನಿಂದ ಥಾಂಗು ಕಡೆಗೆ ಚಲಿಸಿತು. ಝೀಮಾ ಮಾರ್ಗದಲ್ಲಿ ವಾಹನವು ಅಪಘಾತಕ್ಕೀಡಾಯಿತು.ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಪ್ರಾರಂಭಿಸಲಾಯಿತು, ಮತ್ತು ಗಾಯಗೊಂಡ ನಾಲ್ಕು … Continued

ವಾಯುಪಡೆಯ ಫೈಟರ್ ಪೈಲಟ್ ಆಗಿ ಸಾನಿಯಾ ಮಿರ್ಜಾ ಆಯ್ಕೆ : ಈ ಹುದ್ದೆಗೆ ಆಯ್ಕೆಯಾದ ದೇಶದ ಮೊದಲ ಮುಸ್ಲಿಂ ಮಹಿಳೆ

ನವದೆಹಲಿ: ಭಾರತೀಯ ವಾಯುಪಡೆಯಲ್ಲಿ (ಐಎಎಫ್) ಫೈಟರ್ ಪೈಲಟ್ ಆಗಲು ಆಯ್ಕೆಯಾಗಿರುವ ಉತ್ತರಪ್ರದೇಶದ ಮಿರ್ಜಾಪುರದ ಟಿವಿ ಮೆಕ್ಯಾನಿಕ್ ಪುತ್ರಿ ಸಾನಿಯಾ ಮಿರ್ಜಾ ಅವರು ದೇಶದ ಮೊದಲ ಮುಸ್ಲಿಂ ಮಹಿಳಾ ಫೈಟರ್ ಪೈಲಟ್ ಮತ್ತು ರಾಜ್ಯದ ಮೊದಲ ಐಎಎಫ್ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ. ಮಿರ್ಜಾಪುರ ದೇಹತ್ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಜಸೋವರ್ ಗ್ರಾಮದ ನಿವಾಸಿಯಾಗಿರುವ ಸಾನಿಯಾ ಮಿರ್ಜಾ … Continued