‘ಅವರು ಬಹಳ ಬುದ್ಧಿವಂತ ವ್ಯಕ್ತಿ’: ಪ್ರಧಾನಿ ಮೋದಿ ನಾಯಕತ್ವ ಹೊಗಳಿದ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಶ್ಲಾಘಿಸಿದ್ದಾರೆ ಹಾಗೂ ಪ್ರಧಾನಿ ಮೋದಿ ಅವರನ್ನು “ಅತ್ಯಂತ ಬುದ್ಧಿವಂತ ವ್ಯಕ್ತಿ” ಎಂದು ಬಣ್ಣಿಸಿದ್ದಾರೆ. ರಷ್ಯಾದ ಸುದ್ದಿ ಪ್ಲಾಟ್‌ಫಾರ್ಮ್, ಆರ್‌ಟಿ ನ್ಯೂಸ್ ಹಂಚಿಕೊಂಡ ವೀಡಿಯೊದಲ್ಲಿ, ಪ್ರಧಾನಿ ಮೋದಿಯವರ “ಮಾರ್ಗದರ್ಶನ” ಅಡಿಯಲ್ಲಿ ಭಾರತವು ಮಾಡಿದ ಮಹತ್ವದ ಪ್ರಗತಿಯ ಬಗ್ಗೆ ಪುತಿನ್ ಮಾತನಾಡಿದ್ದಾರೆ. ಸೋಚಿಯಲ್ಲಿ … Continued

ಮುಂಬೈಯಲ್ಲಿ ಘೋರ ಅಗ್ನಿ ದುರಂತ: 7 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ | ವೀಡಿಯೊ

ಮುಂಬೈ: ಶುಕ್ರವಾರ ಮುಂಜಾನೆ ಮುಂಬೈನ ಗೋರೆಗಾಂವ ಪಶ್ಚಿಮದ ಪ್ರದೇಶದಲ್ಲಿ ಬಹುಮಹಡಿ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡದಲ್ಲಿ ಇಬ್ಬರು ಅಪ್ರಾಪ್ತರು ಸೇರಿದಂತೆ ಕನಿಷ್ಠ ಏಳು ಜನರು ಮೃತಪಟ್ಟಿದ್ದಾರೆ. ಗೋರೆಗಾಂವ್ ವೆಸ್ಟ್‌ನ ಆಜಾದ್ ನಗರ ಪ್ರದೇಶದಲ್ಲಿರುವ ಜಯ ಭವಾನಿ ಕಟ್ಟಡದಲ್ಲಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) … Continued

ಸತತ 4ನೇ ಬಾರಿಗೆ ರೆಪೊ ದರವನ್ನು ಯಥಾಸ್ಥಿತಿಯಲ್ಲಿ ಇರಿಸಿದ ಆರ್‌ಬಿಐ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಕೇಂದ್ರ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿ (ಎಂಪಿಸಿ) ಪ್ರಮುಖ ರೆಪೊ ದರವನ್ನು ಯಥಾಸ್ಥಿತಿಯಲ್ಲಿ ಇರಿಸಲು ನಿರ್ಧರಿಸಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಶುಕ್ರವಾರ ತಿಳಿಸಿದ್ದಾರೆ. ಆರ್‌ಬಿಐನ ಹಣಕಾಸು ನೀತಿ ಸಮಿತಿ (ಎಂಪಿಸಿ) 6.5%ರಲ್ಲಿ ನಿರ್ವಹಿಸಲು ಸರ್ವಾನುಮತದಿಂದ ನಿರ್ಧರಿಸಿದೆ. ಇದು ಅರ್ಥಶಾಸ್ತ್ರಜ್ಞರ ನಿರೀಕ್ಷೆಗಳಿಗೆ ಅನುಗುಣವಾಗಿರುತ್ತದೆ ಎಂದು ಅವರು ತಿಳಿಸಿದರು. … Continued

ರಾಜಸ್ಥಾನದಲ್ಲಿ 17,000 ಶತಾಯುಷಿ ಮತದಾರರು…! ಪುರುಷರಿಗೆ ಹೋಲಿಸಿದರೆ ಮಹಿಳಾ ಶತಾಯುಷಿಗಳ ಸಂಖ್ಯೆ ನಾಲ್ಕು ಪಟ್ಟು ಹೆಚ್ಚು..!!

ಜೈಪುರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜಸ್ಥಾನವು ಇದೇ ಮೊದಲ ಬಾರಿಗೆ ಮತದಾನ ಮಾಡುವ 22 ಲಕ್ಷ ಹೊಸ ಮಾತದಾರರನ್ನು ಹೊಂದಿದೆ ಮತ್ತು ಅದೇ ಸಮಯದಲ್ಲಿ 100 ವರ್ಷಕ್ಕಿಂತ ಮೇಲ್ಪಟ್ಟ 17,241 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ವಿಧಾನಸಭಾ ಚುನಾವಣೆ-2023ರ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಅಂತಿಮಗೊಳಿಸಿದೆ. 2018ರ ವಿಧಾನಸಭೆ ಚುನಾವಣೆಗೆ ಹೋಲಿಸಿದರೆ ಈ ಬಾರಿ 48,91,545 … Continued

ಮಹಾದೇವ ಆ್ಯಪ್‌ ಪ್ರಕರಣ: ಕಪಿಲ್ ಶರ್ಮಾ, ಹುಮಾ ಖುರೇಷಿ, ಹಿನಾ ಖಾನ್ ಗೆ ಇ.ಡಿ.ಸಮನ್ಸ್: ವರದಿ

ನವದೆಹಲಿ: ಆನ್‌ಲೈನ್ ಬೆಟ್ಟಿಂಗ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಿನೆಮಾ ನಟಿಯರಾದ ಶ್ರದ್ಧಾ ಕಪೂರ್, ಹುಮಾ ಖುರೇಷಿ, ಹಿನಾ ಖಾನ್ ಮತ್ತು ಹಾಸ್ಯ ಶೋ ನಡೆಸುವ ಕಪಿಲ್ ಶರ್ಮಾ ಅವರಿಗೆ ಜಾರಿ ನಿರ್ದೇಶನಾಲಯವು ಸಮನ್ಸ್ ನೀಡಿದೆ ಎಂದು ವರದಿಯಾಗಿದೆ. ಕಳೆದ ಸೆಪ್ಟೆಂಬರ್‌ನಲ್ಲಿ ದುಬೈನಲ್ಲಿ ನಡೆದ ಮಹಾದೇವ ಬುಕ್ ಆ್ಯಪ್‌ನ ಸಕ್ಸಸ್ ಪಾರ್ಟಿಯಲ್ಲಿ ಭಾಗವಹಿಸಿದ್ದಕ್ಕಾಗಿ ಆ್ಯಪ್‌ನ ಪ್ರಚಾರಕ್ಕಾಗಿ ಹುಮಾ … Continued

ಅಕ್ಟೋಬರ್ 9 ರಂದು ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ

ನವದೆಹಲಿ: ಪ್ರಸ್ತುತ ರಾಜಕೀಯ ಪರಿಸ್ಥಿತಿ, ಜಾತಿ ಗಣತಿ ಮತ್ತು ಐದು ರಾಜ್ಯಗಳಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಕಾಂಗ್ರೆಸ್‌ನ ಉನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆ ಸಿಡಬ್ಲ್ಯುಸಿ (CWC) ಅಕ್ಟೋಬರ್ 9 ರಂದು ದೆಹಲಿಯಲ್ಲಿ ಸಭೆ ನಡೆಸಲಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಅಧಿಕಾರವನ್ನು ಬರಲು ಹಾಗೂ ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಅಧಿಕಾರವನ್ನು … Continued

ಬೆಂಗಳೂರು : ಪೊಲೀಸ್‌ ಆಯುಕ್ತರ ಕಚೇರಿ ಬಳಿಯ ಬಸ್‌ ಶೆಲ್ಟರ್‌ ಅನ್ನೇ ಕದ್ದೊಯ್ದ ಕಳ್ಳರು…!

ಬೆಂಗಳೂರು: ಬೆಂಗಳೂರಿನಲ್ಲಿ ಬಸ್ ತಂಗುದಾಣವನ್ನು ನಿರ್ಮಿಸಿದ ಒಂದು ವಾರದ ನಂತರ 10 ಲಕ್ಷ ರೂ.ವೆಚ್ಚದಲ್ಲಿ ಸ್ಟೀಲ್ ರಚನೆಯೊಂದಿಗೆ ನಿರ್ಮಾಣವಾಗಿದ್ದ ಬಸ್‌ ನಿಲ್ದಾಣ ನಾಪತ್ತೆಯಾಗಿದೆ…! ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಬಳಿಯಲ್ಲೇ ನೂತನವಾಗಿ ನಿರ್ಮಿಸಲಾಗಿದ್ದ ಬಿಎಂಟಿಸಿ ಬಸ್ ತಂಗುದಾಣ (ಬಸ್ ಶೆಲ್ಟರ್)ವನ್ನು ಇತ್ತೀಚಿಗೆ ಕಳ್ಳರು ನಾಪತ್ತೆ ಮಾಡಿದ್ದಾರೆ. ಈ ಜಾಗದಲ್ಲಿದ್ದ … Continued

ಏಷ್ಯನ್ ಗೇಮ್ಸ್ 2023 : ಸಂಯುಕ್ತ ಬಿಲ್ಲುಗಾರಿಕೆಯಲ್ಲಿ ಚಿನ್ನ ಗೆದ್ದ ಭಾರತದ ಪುರುಷ, ಮಹಿಳಾ ತಂಡ, ಮಿಶ್ರ ಸ್ಕ್ವಾಶ್‌ ನಲ್ಲೂ ಬಂಗಾರದ ಪದಕ

ಹ್ಯಾಂಗ್‌ಝೌ : ​ಚೀನಾದಲ್ಲಿ ಹ್ಯಾಂಗ್‌ಝೌ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023ರಲ್ಲಿ ಓಜಸ್ ದಿಯೋತಾಲೆ, ಅಭಿಷೇಕ ವರ್ಮಾ ಮತ್ತು ಪ್ರಥಮೇಶ ಜಾವ್ಕರ್ ಅವರ ಭಾರತೀಯ ಪುರುಷರ ಸಂಯುಕ್ತ ಬಿಲ್ಲುಗಾರಿಕೆ ತಂಡವು ಭಾರತಕ್ಕೆ ಮತ್ತೊಂದು ಚಿನ್ನದ ಪದಕವನ್ನು ಗೆದ್ದುಕೊಟ್ಟಿದೆ. ಇದು ಭಾರತದ 23ನೇ ಚಿನ್ನದ ಪದಕವಾಗಿದೆ. ಭಾರತದ ಮೂವರು ಕೊರಿಯಾದ ಜೇಹೂನ್ ಜೂ, ಜೇವೊನ್ ಯಾಂಗ್ ಮತ್ತು ಜೊಂಗೊ … Continued

ಇಂತಿಷ್ಟು ವರ್ಷಗಳ ನಂತರ ʼಬೆನ್ನುʼ ಕ್ಷುದ್ರಗ್ರಹವು 24 ʼಪರಮಾಣು ಬಾಂಬ್‌ʼಗಳಿಗೆ ಸಮಾನವಾದ ʼಬಲʼದೊಂದಿಗೆ ಭೂಮಿಗೆ ಅಪ್ಪಳಿಸಬಹುದು ಎಂದ ನಾಸಾ

ನಾಸಾ ವಿಜ್ಞಾನಿಗಳು ʼಬೆನ್ನುʼ ಎಂಬ ಕ್ಷುದ್ರಗ್ರಹವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ, ಇದು ಸರಿಸುಮಾರು 159 ವರ್ಷಗಳ ನಂತರ ಭೂಮಿಗೆ ಅಪ್ಪಳಿಸಬಹುದು ಎಂದು ಅವರು ಹೇಳಿದ್ದಾರೆ. ಇದು 1,610 ಅಡಿ ಅಗಲದ ಕಾಸ್ಮಿಕ್ ವಸ್ತುವಾದ ‘ಬೆನ್ನು’ ಹೆಸರಿನ ಈ ಕ್ಷುದ್ರಗ್ರಹವನ್ನು ನಾಸಾ ವಿಜ್ಞಾನಿಗಳು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ನಾಸಾ (NASA)ದ OSIRIS-REx ವಿಜ್ಞಾನ ತಂಡದ ಪ್ರಕಾರ, 1999 ರಲ್ಲಿ ಮೊದಲ … Continued

ಸಿಕ್ಕಿಂನಲ್ಲಿ ಮೇಘಸ್ಫೋಟ, ಹಠಾತ್ ಪ್ರವಾಹ : 14 ಜನರು ಸಾವು, 23ಯೋಧರ ಸಹಿತ 102 ಮಂದಿ ನಾಪತ್ತೆ

ಗ್ಯಾಂಗ್ಟಕ್‌: ಸಿಕ್ಕಿಂನಲ್ಲಿ ಬುಧವಾರ ಸಂಭವಿಸಿದ ಹಠಾತ್ ಪ್ರವಾಹದ ನಂತರ 14 ಜನರು ಸಾವಿಗೀಡಾಗಿದ್ದಾರೆ ಮತ್ತು 23 ಸೇನಾ ಸಿಬ್ಬಂದಿ ಸೇರಿದಂತೆ 120 ಜನರು ನಾಪತ್ತೆಯಾಗಿದ್ದಾರೆ. ಅಧಿಕಾರಿಗಳ ಪ್ರಕಾರ, ಲ್ಹೋನಕ್ ಸರೋವರದ ಮೇಲೆ ಸಂಭವಿಸಿದ ಮೇಘಸ್ಫೋಟವು ತೀಸ್ತಾ ನದಿಯ ಜಲಾನಯನ ಪ್ರದೇಶದಲ್ಲಿ ಹಠಾತ್ ಪ್ರವಾಹಕ್ಕೆ ಕಾರಣವಾಯಿತು, ಇದು ಅಂತಿಮವಾಗಿ ಮಾರಣಾಂತಿಕ ಪ್ರಹಾವಾಗಿ ಮಾರ್ಪಟ್ಟಿತು. ಸಿಕ್ಕಿಂನಲ್ಲಿ ಮಂಗಳವಾರ ತಡರಾತ್ರಿ … Continued