ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿ ಅದನ್ನೇ ನಿಗ್ರಹಿಸಿದ ಯುವಕ..! ದೃಶ್ಯ ವೀಡಿಯೊದಲ್ಲಿ ಸೆರೆ-ವೀಕ್ಷಿಸಿ

ಸೋಮವಾರ ಉತ್ತರಪ್ರದೇಶದ ಲಖಿಂಪುರ ಖೇರಿಯ ಧೌರಪುರ ಅರಣ್ಯ ಪ್ರದೇಶದ ಜುಗ್ನುಪುರದ ಇಟ್ಟಂಗಿ ತಯಾರಿಕೆ ಘಟಕದ ಕೆಲಸಗಾರರ ಮೇಲೆ ಕಪ್ಪು ಚಿರತೆಯೊಂದು ದಾಳಿ ನಡೆಸಿದೆ. ನಾಟಕೀಯ ಹಾಗೂ ಅಪರೂಪದ ವಿದ್ಯಮಾನದಲ್ಲಿ ಹೆದರದ ಯುವಕನೊಬ್ಬ ಚಿರತೆಯನ್ನು ಕೆಡವಿ ಬಾಯಿಯನ್ನು ಹಿಡಿದು ನೆಲಕ್ಕೆ ಒತ್ತಿ ಹಿಡಿದು ಅದನ್ನು ನಿಗ್ರಹಿಸುವಲ್ಲಿ ಯಶಸ್ವಿಯಾಗಿದ್ದಾನೆ. ಗದ್ದಲದಿಂದ ಎಚ್ಚೆತ್ತ ಗ್ರಾಮಸ್ಥರು ಒಟ್ಟುಗೂಡಿ ಚಿರತೆಯ ಮೇಲೆ ಇಟ್ಟಿಗೆಗಳು … Continued

ಮಾದಕ ವಸ್ತು ಪ್ರಕರಣ : ನಟ ಶ್ರೀಕಾಂತ ಬಂಧನ

ಚೆನ್ನೈ: ಕೊಕೇನ್ ಸಂಬಂಧಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರಿಯ ತಮಿಳು ಮತ್ತು ತೆಲುಗು ಚಲನಚಿತ್ರ ನಟ ಶ್ರೀಕಾಂತ ಅವರನ್ನು ಪೊಲೀಸರು ಬಂಧಿಸಿದ್ದು, ಚೆನ್ನೈ ನ್ಯಾಯಾಲಯವು ಜುಲೈ 7 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ನುಂಗಂಬಾಕ್ಕಂ ಪೊಲೀಸ್ ಠಾಣೆಯಲ್ಲಿ ನಟನನ್ನು ಹಲವಾರು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಯಿತು ಮತ್ತು ಅಧಿಕೃತವಾಗಿ ಬಂಧಿಸಲಾಯಿತು. ಸೋಮವಾರ ಮಧ್ಯಾಹ್ನ ನಟ ಶ್ರೀಕಾಂತ ಅವರನ್ನು … Continued

ತನ್ನ ಬಿಟ್ಟು ಬೇರೊಬ್ಬಳನ್ನು ಮದುವೆಯಾದ ವ್ಯಕ್ತಿ ಸಿಲುಕಿಸಲು 21 ಸಲ ಬಾಂಬ್ ಬೆದರಿಕೆ ಹಾಕಿದ್ದ ಮಹಿಳಾ ರೊಬೊಟಿಕ್ಸ್ ಎಂಜಿನಿಯರ್ ಬಂಧನ…!

ಅಹಮದಾಬಾದ್ : 30 ವರ್ಷದ ರೊಬೊಟಿಕ್ಸ್ ಎಂಜಿನಿಯರ್ ಒಬ್ಬಳ ಏಕಪಕ್ಷೀಯ ಪ್ರೀತಿ ಅಪಾಯಕಾರಿ ತಿರುವು ಪಡೆದುಕೊಂಡಿದೆ, ಏಕೆಂದರೆ ಅವಳು ಪ್ರೀತಿಸಿದ ವ್ಯಕ್ತಿಯ ಮೇಲೆ ಸುಳ್ಳು ಪ್ರಕರಣ ದಾಖಲಾಗುವಂತೆ ಮಾಡಲು ಆಕೆ ದೇಶಾದ್ಯಂತ ಹಲವಾರು ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಹಾಕಿದ್ದಾಳೆ…! ಚೆನ್ನೈನ ಉನ್ನತ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಹಿರಿಯ ಸಲಹೆಗಾರ್ತಿಯಾಗಿರುವ ರೆನೆ ಜೋಶಿಲ್ಡಾ ಎಂಬ ಮಹಿಳೆಯನ್ನು ಅಹಮದಾಬಾದ್ … Continued

ನೀಟ್ ಅಣಕು ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ 17 ವರ್ಷದ ಮಗಳನ್ನು ಹೊಡೆದು ಕೊಂದ ಶಿಕ್ಷಕ…!

ಸಾಂಗ್ಲಿ : ವಿದ್ಯಾರ್ಥಿನಿ ತನ್ನ 10 ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಶೇ. 92.60 ಅಂಕಗಳನ್ನು ಗಳಿಸಿದ್ದಾಳೆ. ಆದರೆ ಒಂದು ವರ್ಷದ ನಂತರ,  ಅಣಕು ಪರೀಕ್ಷೆ(mock test)ಯಲ್ಲಿ ಕಡಿಮೆ ಅಂಕಗಳನ್ನು ಗಳಿಸಿದ ಕಾರಣಕ್ಕೆ ಅವಳ ತಂದೆ ಅವಳನ್ನು ಹೊಡೆದು ಕೊಂದ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ವರದಿಯಾಗಿದೆ. ಮಹಾರಾಷ್ಟ್ರದ ಸಾಂಗ್ಲಿಯ ಸಾಧನಾ ಭೋಂಸ್ಲೆ – ಪೂರ್ವ ವೈದ್ಯಕೀಯ … Continued

ನೆಲಮಂಗಲ ಬಳಿ ರಸ್ತೆ ಜಗಳ-ಹಲ್ಲೆ ಆರೋಪ: ಮಾಜಿ ಸಂಸದ ಅನಂತಕುಮಾರ ಹೆಗಡೆ ಸೇರಿ ಮೂವರ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಬೆಂಗಳೂರಿನ ಹೊರವಲಯದ ಹಳೆ ನಿಜಗಲ್ ಬಳಿ ನಡೆದ ರಸ್ತೆ ಜಗಳದ ಘಟನೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಕೇಂದ್ರ ಮಾಜಿ ಸಚಿವ ಹಾಗೂ ಮಾಜಿ ಸಂಸದ ಅನಂತಕುಮಾರ್ ಹೆಗಡೆ, ಅವರ ಗನ್‌ಮ್ಯಾನ್ ಮತ್ತು ಚಾಲಕನ ವಿರುದ್ಧ ದಾಬಸ್‌ಪೇಟೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಹಳೆ ನಿಜಗಲ್ ಬಳಿ ಅನಂತಕುಮಾರ ಹೆಗಡೆ ಅವರು ಕಾರಿನಲ್ಲಿ … Continued

ವೀಡಿಯೊಗಳು..| ಇರಾನಿನ 6 ವಾಯುನೆಲೆಗಳ ಮೇಲೆ ಇಸ್ರೇಲ್‌ ದಾಳಿ ; 15 ವಿಮಾನಗಳು ನಾಶ

ಇಸ್ರೇಲ್ ರಕ್ಷಣಾ ಪಡೆಗಳು (IDF) ಇರಾನಿನ ಪಶ್ಚಿಮ, ಪೂರ್ವ ಮತ್ತು ಮಧ್ಯ ಭಾಗದಲ್ಲಿರುವ ಆರು ವಿಮಾನ ನಿಲ್ದಾಣಗಳ ಮೇಲೆ ಸಂಘಟಿತ ವಾಯುದಾಳಿ ನಡೆಸಿದ್ದು, 15 ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳನ್ನು ನಾಶಪಡಿಸಲಾಗಿದೆ ಎಂದು ಹೇಳಿದೆ. ದೂರದಿಂದಲೇ ಮಾನವಸಹಿತ ವಿಮಾನಗಳು, ರನ್‌ವೇಗಳು, ಭೂಗತ ಬಂಕರ್‌ಗಳು ಮತ್ತು F-14s, F-5s, AH-1 ಹೆಲಿಕಾಪ್ಟರ್‌ಗಳು ಮತ್ತು ಇಂಧನ ತುಂಬುವ ವಿಮಾನ ಸೇರಿದಂತೆ … Continued

ಬೆಂಗಳೂರು ಬಳಿ ಯುವತಿಗೆ ಕಿರುಕುಳ ನೀಡಿ, ಹಲ್ಲೆಗೈದ ಗ್ಯಾಂಗ್ ; ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ಬೆಂಗಳೂರು ಬಳಿ ಭಾನುವಾರ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ, ಥಳಿಸಿ, ಸಾರ್ವಜನಿಕವಾಗಿ ನಿಂದಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೆಂಗಳೂರಿನಿಂದ ಸುಮಾರು 12 ಕಿ.ಮೀ ದೂರದಲ್ಲಿರುವ ಮೈಲಸಂದ್ರ ಬಳಿಯ ರೇಣುಕಾ ಯೆಲ್ಲಮ್ಮ ಲೇಔಟ್‌ನಲ್ಲಿ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ನಡೆದಿದೆ ಎನ್ನಲಾಗಿದೆ. ಮಹಿಳೆ ದಿನಸಿ ಖರೀದಿಸಲು … Continued

ಕಸದ ರಾಶಿಯ ಮಧ್ಯೆ ಕ್ಯಾನ್ಸರ್ ಪೀಡಿತ ವೃದ್ಧ ಮಹಿಳೆ ಪತ್ತೆ : ಮೊಮ್ಮಗ ನನ್ನನ್ನು ಇಲ್ಲಿ ಬಿಟ್ಟು ಹೋದ ಎಂದ ವೃದ್ಧೆ…!

ಮುಂಬೈ: ಮುಂಬೈನಲ್ಲಿ ಕಸದ ರಾಶಿಗಳ ಮೇಲೆ ಬಿದ್ದಿದ್ದ ವೃದ್ಧ ಮಹಿಳೆಯೊಬ್ಬರ ದಯನೀಯ ಸ್ಥಿತಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಿಳೆಯನ್ನು ಅವರ ಮೊಮ್ಮಗ ಕಸ ಎಸೆಯುವ ಜಾಗದಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿ, ಮಹಿಳೆಯ ಕುಟುಂಬಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಶನಿವಾರ ಮುಂಬೈ ಪೊಲೀಸರು ನಗರದ ಆರೆ ಕಾಲೋನಿಯ ರಸ್ತೆಯಲ್ಲಿರುವ … Continued

ವೀಡಿಯೊ…| ವಂದೇ ಭಾರತ ರೈಲಿನಲ್ಲಿ ಬಿಜೆಪಿ ಶಾಸಕನ ಜೊತೆ ತನ್ನ ಸೀಟು ಬದಲಾಯಿಸಿಕೊಳ್ಳಲು ಒಪ್ಪದ ಪ್ರಯಾಣಿಕನ ಮೇಲೆ ಹಲ್ಲೆ

ನವದೆಹಲಿ: ದೆಹಲಿ-ಭೋಪಾಲ್ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ತನ್ನ ಸೀಟನ್ನು ಬಿಜೆಪಿ ಶಾಸಕನಿಗೆ ಬದಲಾಯಿಸಿಕೊಳ್ಳಲು ಒಪ್ಪದ ಕಾರಣಕ್ಕೆ ಆತನನ್ನು ಥಳಿಸಿದ ಘಟನೆ ಗುರುವಾರ (ಜೂನ್‌ 19) ನಡೆದಿದೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ಝಾನ್ಸಿಯ ಶಾಸಕ ರಾಜೀವ ಸಿಂಗ್ ತಮ್ಮ ಪತ್ನಿ ಮತ್ತು ಮಗನೊಂದಿಗೆ ತಮ್ಮ ಕ್ಷೇತ್ರಕ್ಕೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ. ಶಾಸಕರು … Continued

ವೀಡಿಯೊ..| ಛತ್ತೀಸ್‌ಗಡದಲ್ಲಿ 3 ತಿಂಗಳ ಪಡಿತರ ಒಂದೇ ಬಾರಿಗೆ ವಿತರಣೆ ; ಗೇಟ್‌ ಮುರಿದು ಒಳ ನುಗ್ಗಿದ ಜನ ಸಮೂಹ…!

ಗರಿಯಾಬಂದ್ : ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯ ಸಂಖ್ಯೆ 3 ರಲ್ಲಿರುವ ಸರ್ಕಾರಿ ಪಡಿತರ ಅಂಗಡಿಯಲ್ಲಿ ಭಾನುವಾರ ಅವ್ಯವಸ್ಥೆ ಭುಗಿಲೆದ್ದಿತು, ದೀರ್ಘ ಸಮಯದ ವರೆಗೆ ಕಾಯುವಿಕೆ ಮತ್ತು ಹೆಚ್ಚುತ್ತಿರುವ ಹತಾಶೆ ಕೋಪಕ್ಕೆ ತಿರುಗಿತು. ತಮ್ಮ ಮಾಸಿಕ ಆಹಾರ ಪಡಿತರಕ್ಕಾಗಿ ಗಂಟೆಗಟ್ಟಲೆ ಕಾಯುತ್ತಿದ್ದ ಜನಸಮೂಹ ಅಂಗಡಿಯ ಮುಖ್ಯ ದ್ವಾರವನ್ನು ಒಡೆದು ಒಳಗೆ ನುಗ್ಗಿದ್ದು ಕಾಲ್ತುಳಿತದಂತಹ ಪರಿಸ್ಥಿತಿಗೆ ಕಾರಣವಾಯಿತು. ಮೂರು … Continued