ಚಂದ್ರಯಾನ-3 ಮಿಷನ್‌ : 3 ಉದ್ದೇಶಗಳಲ್ಲಿ ಎರಡನ್ನು ಸಾಧಿಸಲಾಗಿದೆ, ಮೂರನೇ ಉದ್ದೇಶದ ಪ್ರಯೋಗಗಳು ನಡೆಯುತ್ತಿವೆ ; ಇಸ್ರೋ

ಬೆಂಗಳೂರು : ಚಂದ್ರಯಾನ-3 ಮಿಷನ್ ಮೂರು ಉದ್ದೇಶಗಳಲ್ಲಿ ಎರಡನ್ನು ಸಾಧಿಸಲಾಗಿದೆ ಮತ್ತು ಮೂರನೇ ಉದ್ದೇಶದ ವೈಜ್ಞಾನಿಕ ಪ್ರಯೋಗಗಳು ನಡೆಯುತ್ತಿವೆ ಎಂದು ಶನಿವಾರ ಇಸ್ರೋ ಹೇಳಿದೆ. ಇಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆಯು ಚಂದ್ರಯಾನ-3 ಮಿಷನ್‌ನ ಎಲ್ಲಾ ಪೇಲೋಡ್‌ಗಳು ಸಮಪರ್ಕವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಇಸ್ರೋ ಹೇಳಿದೆ. “ಚಂದ್ರಯಾನ-3 ಮಿಷನ್: ಕಾರ್ಯಾಚರಣೆಯ 3 ಉದ್ದೇಶಗಳಲ್ಲಿ, ಚಂದ್ರನ … Continued

ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ‘ನಾಗಿಣಿ ನೃತ್ಯ’ ಮಾಡಿದ ಮಹಿಳೆ : ವೀಡಿಯೊ ವೈರಲ್‌

ಸಹರಾನ್‌ಪುರದ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಅಚ್ಚರಿಯ ಘಟನೆಯೊಂದರಲ್ಲಿ ಮಹಿಳೆಯೊಬ್ಬರು ಅಲ್ಲಿ  ‘ನಾಗಿನ್ ಡ್ಯಾನ್ಸ್’ ಮಾಡಿದ್ದಾರೆ ಎಂದು ವರದಿಯಾಗಿದ್ದು, ಇದು ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯು ಆಗಸ್ಟ್ 24 ರಂದು ಮೇಲ್ಮನವಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚಾರಣೆಯ ಸಂದರ್ಭದಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದಾಗ, ಯಾರೋ ನೆಲದ ಮೇಲೆ ಬೀಳುವ ಶಬ್ದ … Continued

ಜೈಲಿನಲ್ಲಿ ಈಜುಕೊಳ ಬೇಕೆನ್ನುತ್ತಿದ್ದಾರೆ ಸತ್ಯೇಂದ್ರ ಜೈನ್: ಸುಪ್ರೀಂ ಕೋರ್ಟಿಗೆ ಇ.ಡಿ ಮಾಹಿತಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲಿನಲ್ಲಿರುವ ದೆಹಲಿಯ ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ಮಾಜಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರಿಗೆ ಮಧ್ಯಂತರ ವೈದ್ಯಕೀಯ ಜಾಮೀನು ವಿಸ್ತರಣೆ ಮಾಡಲು ಜಾರಿ ನಿರ್ದೇಶನಾಲಯ (ಇ.ಡಿ.) ವಿರೋಧ ವ್ಯಕ್ತಪಡಿಸಿದೆ. ಸತ್ಯೇಂದ್ರ ಜೈನ್ ಅವರು ಜೈಲಿನ ಆವರಣದಲ್ಲಿ ಈಜು ಕೊಳ ಬೇಕೆಂದು ಕೇಳುತ್ತಿದ್ದಾರೆ ಎಂದು ಅದು ಶುಕ್ರವಾರ … Continued

ಚಂದ್ರಯಾನ-3 ನೌಕೆ ಸೆರೆ ಹಿಡಿದ ಮೊದಲ ಚಿತ್ರವನ್ನು ಮೋದಿಗೆ ನೀಡಿದ ಇಸ್ರೋ

ಬೆಂಗಳೂರು : ಚಂದ್ರಯಾನ-3 ನೌಕೆ ಸೆರೆ ಹಿಡಿದ ಮೊದಲ ಫೋಟೊವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಸ್ರೋ ವಿಜ್ಞಾನಿಗಳು ಉಡುಗೊರೆಯಾಗಿ ನೀಡಿದ್ದಾರೆ. ಪ್ರಧಾನಿ ಮೋದಿ ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಶನಿವಾರ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಆಗಮಿಸಿದ್ದರು. ಈ ವೇಳೆ ಚಂದ್ರಯಾನ-3 ನೌಕೆ ಸೆರೆ ಹಿಡಿದ ಮೊದಲ ಫೋಟೊವನ್ನು ಇಸ್ರೋ ಅಧ್ಯಕ್ಷ ಎಸ್. … Continued

ಅಕ್ಟೋಬರಿನಲ್ಲಿ ಮಹಿಳಾ ರೋಬೋಟ್ ‘ವ್ಯೋಮಮಿತ್ರ’ ಬಾಹ್ಯಾಕಾಶಕ್ಕೆ ಹೋಗಲಿದೆ : ಮತ್ತೊಂದು ಮಹತ್ವದ ಘೋಷಣೆ ಮಾಡಿದ ಕೇಂದ್ರ ಸಚಿವರು

ನವದೆಹಲಿ : ಭಾರತವು ಗಗನಯಾನ ಮಿಷನ್‌ನಲ್ಲಿ ಮಹಿಳಾ ರೋಬೋಟ್ “ವ್ಯೋಮಮಿತ್ರ” ನನ್ನು ಬಾಹ್ಯಾಕಾಶಕ್ಕೆ ಕಳುಹಿಸಲಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. ಶನಿವಾರ ಎನ್‌ಡಿಟಿವಿ ಜಿ20 ಶೃಂಗಸಭೆ ಸಂವಾದದಲ್ಲಿ ಮಾತನಾಡಿದ ಅವರು, ಅಕ್ಟೋಬರ್ ಮೊದಲ ಅಥವಾ ಎರಡನೇ ವಾರದಲ್ಲಿ ಪ್ರಾಯೋಗಿಕವಾಗಿ ಗಗನಯಾನದ ಬಾಹ್ಯಾಕಾಶ ಹಾರಾಟಕ್ಕೆ ಪ್ರಯತ್ನಿಸಲಾಗುವುದು. ನಂತರದ ಕಾರ್ಯಾಚರಣೆಯಲ್ಲಿ … Continued

ರೈಲು ಕಂಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅನಾಹುತ: 10 ಸಾವು, 20 ಕ್ಕೂ ಹೆಚ್ಚು ಮಂದಿ ಗಾಯ

ಮಧುರೈ : ಮಧುರೈ ರೈಲು ನಿಲ್ದಾಣದಲ್ಲಿ ಇಂದು, ಶನಿವಾರ ಮುಂಜಾನೆ ನಿಶ್ಚಲ ರೈಲು ಕಂಪಾರ್ಟ್‌ಮೆಂಟ್‌ನಲ್ಲಿ ಸಂಭವಿಸಿದ ಭಾರೀ ಬೆಂಕಿ ಅನಾಹುತದಲ್ಲಿ ಕನಿಷ್ಠ 10 ಜನರು ಸಾವಿಗೀಡಾಗಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪ್ರಯಾಣಿಕರೊಬ್ಬರು ಕಾಫಿ ಮಾಡಲು ಗ್ಯಾಸ್ ಸ್ಟೌವ್ ಹೊತ್ತಿಸಿದಾಗ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ಅಕ್ರಮವಾಗಿ ತಂದ ಗ್ಯಾಸ್ ಸಿಲಿಂಡರ್” … Continued

ಚಂದ್ರಯಾನ-3ರ ವಿಕ್ರಂ ಚಂದ್ರನ ಸ್ಪರ್ಷಿಸಿದ ಸ್ಥಳಕ್ಕೆ ʼಶಿವಶಕ್ತಿʼ ಎಂದು ನಾಮಕರಣ: ಇಸ್ರೋದಲ್ಲಿ ಪ್ರಧಾನಿ ಮೋದಿ ಘೋಷಣೆ

ಬೆಂಗಳೂರು: ಚಂದ್ರಯಾನ-3 ರ ಲ್ಯಾಂಡರ್ ವಿಕ್ರಂ ಸ್ಪರ್ಶಿಸಿದ ಚಂದ್ರನ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ಕರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಇಂದು, ಶನಿವಾರ ಬೆಂಗಳೂರಿನಲ್ಲಿ ಇಸ್ರೋ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡುವಾಗ ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿರುವ ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್‌ನಲ್ಲಿ (ISTRAC) ಪ್ರಧಾನಿ ಮೋದಿಯವರು ಐತಿಹಾಸಿಕ ಚಂದ್ರಯಾನ-3 ಮಿಷನ್ ಹಿಂದೆ ವಿಜ್ಞಾನಿಗಳನ್ನು ಅಭಿನಂದಿಸಲು … Continued

ಸ್ಮಾರ್ಟ್ ಸಿಟಿ ಪ್ರಶಸ್ತಿಗಳ ಘೋಷಣೆ : ಇಂದೋರಿಗೆ ಅತ್ಯುತ್ತಮ “ರಾಷ್ಟ್ರೀಯ ಸ್ಮಾರ್ಟ್ ಸಿಟಿ ಪ್ರಶಸ್ತಿ, ಮಧ್ಯಪ್ರದೇಶ ಅತ್ಯುತ್ತಮ ರಾಜ್ಯ : 66 ವಿಜೇತರ ಸಂಪೂರ್ಣ ಪಟ್ಟಿ ಇಲ್ಲಿದೆ..

ನವದೆಹಲಿ: ಇಂದೋರ್ ನಗರವು ಶುಕ್ರವಾರ ಅತ್ಯುತ್ತಮ “ರಾಷ್ಟ್ರೀಯ ಸ್ಮಾರ್ಟ್ ಸಿಟಿ ಪ್ರಶಸ್ತಿ” ಪಡೆದುಕೊಂಡಿದೆ. ನಂತರದ ಸ್ಥಾನವನ್ನು ಸೂರತ್ ಮತ್ತು ಆಗ್ರಾ ನಗರಗಳು ಪಡೆದುಕೊಂಡವು. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು 2022 ರ ಭಾರತ ಸ್ಮಾರ್ಟ್ ಸಿಟಿ ಪ್ರಶಸ್ತಿಗಳನ್ನು ಶುಕ್ರವಾರ ಪ್ರಕಟಿಸಿದೆ. ಸೆಪ್ಟೆಂಬರ್ 27 ರಂದು ಇಂದೋರ್‌ನಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು … Continued

ಪ್ರಧಾನಿ ಪದವಿ ಮಾನನಷ್ಟ ಪ್ರಕರಣ : ದೆಹಲಿ ಸಿಎಂಅರವಿಂದ್ ಕೇಜ್ರಿವಾಲಗೆ ಸುಪ್ರೀಂ ಕೋರ್ಟಿನಲ್ಲಿ ಸಿಗದ ರಿಲೀಫ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಅರ್ಹತೆಯ ಕುರಿತು ಗುಜರಾತ್ ವಿಶ್ವವಿದ್ಯಾಲಯ ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ತಡೆಯಾಜ್ಞೆ ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನವಿಯನ್ನು ತಿರಸ್ಕರಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಆರ್‌ಟಿಐ ಕಾಯ್ದೆಯಡಿ ಮೋದಿಯ ಪದವಿಗಳ ಬಗ್ಗೆ ಮಾಹಿತಿ ನೀಡುವಂತೆ … Continued

ಚೀನಾವೇ ಮನವಿ ಮಾಡಿತ್ತು : ಪ್ರಧಾನಿ ಮೋದಿ-ಚೀನಾ ಅಧ್ಯಕ್ಷರ ಭೇಟಿ ಬಗ್ಗೆ ಬೀಜಿಂಗ್‌ ಹೇಳಿಕೆ ನಿರಾಕರಿಸಿದ ಭಾರತ ; ಸರ್ಕಾರಿ ಮೂಲಗಳು

ನವದೆಹಲಿ: ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ವೇಳೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವಿನ ದ್ವಿಪಕ್ಷೀಯ ಸಭೆ ನಡೆಸುವಂತೆ ಚೀನಾ ಮನವಿ ಮಾಡಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಹಾಗೂ ನವದೆಹಲಿಯ ಒತ್ತಾಯದ ಮೇರೆಗೆ ಸಭೆ ನಡೆದಿದೆ ಎಂಬ ಬೀಜಿಂಗ್ ಹೇಳಿಕೆಯನ್ನು ತಳ್ಳಿಹಾಕಿದೆ “ದ್ವಿಪಕ್ಷೀಯ ಸಭೆಗಾಗಿ ಚೀನಾದ … Continued