ವಿಷಕಾರಿ ರಾಸಾಯನಿಕ ಬಳಸುತ್ತಿದ್ದಾರೆಂದು ಕುರಿತು ಬಿಜೆಪಿ ಸಂಸದರ ಆಕ್ರೋಶದ ನಂತರ ಯಮುನಾ ನೀರಿನಲ್ಲಿ ಸ್ನಾನ ಮಾಡಿ ತೋರಿಸಿದ ದೆಹಲಿ ಜಲ ಮಂಡಳಿ ಅಧಿಕಾರಿ| ವೀಕ್ಷಿಸಿ

ನವದೆಹಲಿ: ಛತ್ ಹಬ್ಬಕ್ಕೆ ಮುನ್ನ ಯಮುನಾ ನದಿ ನೊರೆ ತೆಗೆಯಲು ವಿಷಕಾರಿ ವಸ್ತುವನ್ನು ಬಳಸುತ್ತಿದ್ದಾರೆಂದು ಆರೋಪಿಸಿ ಬಿಜೆಪಿ ಸಂಸದ ಪರ್ವೇಶ್ ವರ್ಮಾ ಛೀಮಾರಿ ಹಾಕಿದ ಕೆಲವೇ ದಿನಗಳಲ್ಲಿ, ದೆಹಲಿ ಜಲ ಮಂಡಳಿಯ ಗುಣಮಟ್ಟ ನಿಯಂತ್ರಣ ನಿರ್ದೇಶಕ ಸಂಜಯ್ ಶರ್ಮಾ ಅವರು ನದಿಯಲ್ಲಿ ಸ್ನಾನ ಮಾಡುವ ಮೂಲಕ ಇದು ವಿಷಕಾರಿಯಲ್ಲ ಎಂದು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ … Continued

ಬಿಜೆಪಿ ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆಯನ್ನು ಯಾಕೆ ಜಾರಿಗೆ ತರುತ್ತಿಲ್ಲ: ಗುಜರಾತ್‌ನಲ್ಲಿ ಪ್ರಶ್ನಿಸಿದ ಕೇಜ್ರಿವಾಲ

ನವದೆಹಲಿ: ಗುಜರಾತ್‌ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗಾಗಿ ಸಮಿತಿಯನ್ನು ರಚಿಸಲು ಸಂಪುಟ ನಿರ್ಧರಿಸಿದೆ ಎಂದು ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಶನಿವಾರ ಘೋಷಿಸಿದ ನಂತರ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರೋಧ ಪಕ್ಷಗಳಿಂದ ದಾಳಿಗೆ ಒಳಗಾಗಿದೆ. ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ನಂತರ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ಗುಜರಾತ್‌ನಲ್ಲಿ … Continued

ಬಂಡೆಮಠ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ: ಕಣ್ಣೂರು ಶ್ರೀ, ಯುವತಿ ಸೇರಿ ಮೂವರ ಬಂಧನ

ರಾಮನಗರ: ಕೆಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಹಾಗೂ ಮಾಗಡಿಯ ಕಣ್ಣೂರು ಮಠದ ಪೀಠಾಧಿಪತಿಗಳಾದ ಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸ್ವಾಮೀಜಿಯವರ ಜೊತೆಗೆ ಬಂಧನಕ್ಕೀಡಾಗಿರುವ ಆರೋಪಿಗಳನ್ನು ನೀಲಾಂಬಿಕೆ ಅಲಿಯಾಸ್ ಚಂದು (21), ವಕೀಲ ಹಾಗೂ  ನಿವೃತ್ತ ಶಿಕ್ಷಕ ಮಹದೇವಯ್ಯ (61) ಎಂದು ಎಂದು ಹೇಳಲಾಗಿದೆ .ಬಸವಲಿಂಗ ಶ್ರೀಗಳು ಆತ್ಮಹತ್ಯೆಗೂ … Continued

ಜೈಲಿನಲ್ಲಿ ಮಸಾಜ್ ಸೌಲಭ್ಯ ಪಡೆಯುತ್ತಿರುವ ದೆಹಲಿ ಸಚಿವ ಸತ್ಯೇಂದ್ರ ಜೈನ್, ಸಹ-ಆರೋಪಿಗಳನ್ನೂ ಭೇಟಿ ಮಾಡ್ತಾರೆ: ಇ.ಡಿ.ಆರೋಪ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈ ವರ್ಷ ಮೇ ತಿಂಗಳಲ್ಲಿ ಬಂಧಿತರಾಗಿರುವ ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರು ಜೈಲಿನಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದಾರೆ ಮತ್ತು ಪ್ರಕರಣದ ಸಹ-ಆರೋಪಿಗಳನ್ನು ನಿಯಮಿತವಾಗಿ ಭೇಟಿ ಮಾಡುವ ಮೂಲಕ ತನಿಖೆ ಮೇಲೆ ಪ್ರಭಾವ ಬೀರುತ್ತಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ ದೆಹಲಿ … Continued

ಭಾರತ್ ಜೋಡೋ ಯಾತ್ರೆ: ಮಕ್ಕಳೊಂದಿಗೆ ರಾಹುಲ್‌ ಗಾಂಧಿ ರನ್ನಿಂಗ್‌ ರೇಸ್‌, ಅವರ ಹಿಂಬಾಲಿಸಿ ಓಡಿದ ಇತರರು | ವೀಕ್ಷಿಸಿ

ಹೈದರಾಬಾದ್‌: ಭಾರತ ಜೋಡೋ ಯಾತ್ರೆಯನ್ನು ಮುನ್ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಕೆಲವು ಶಾಲಾ ಮಕ್ಕಳೊಂದಿಗೆ ಇದ್ದಕ್ಕಿದ್ದಂತೆ ಓಡಲು ಪ್ರಾರಂಭಿಸಿದಾಗ ಪಾದಯಾತ್ರೆಯಲ್ಲಿ ಬಂದವರಿಗೆ ಕೆಲವು ರೋಚಕ ಕ್ಷಣಗಳನ್ನು ನೀಡಿತು. ಹಠಾತ್ ಓಟದ ಅರಿವಿಲ್ಲದೆ ಸಿಕ್ಕಿಬಿದ್ದ ರಾಹುಲ್‌ ಗಾಂಧಿ ಅವರ ಭದ್ರತಾ ಸಿಬ್ಬಂದಿ, ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರೇವಂತ್ ರೆಡ್ಡಿ ಮತ್ತು ಇತರರು … Continued

ತಾಯ್ತನ ಅಂದ್ರೆ ಇದೇ ಅಲ್ಲವೇ..: ಕೌಟುಂಬಿಕ ಕಲಹದ ಕಾರಣ ಅಪಹರಣಕ್ಕೊಳಗಾಗಿದ್ದ 12 ದಿನದ ಮಗುವಿಗೆ ತನ್ನ ಎದೆ ಹಾಲುಣಿಸಿ ಮಗು ಕಾಪಾಡಿದ ಮಹಿಳಾ ಪೋಲೀಸ್ ಅಧಿಕಾರಿ…!

ಕೋಝಿಕ್ಕೋಡ್: ಅಪಹರಣಕ್ಕೀಡಾಗಿದ್ದ 12 ದಿನಗಳ ಮಗುವಿಗೆ ಹೃದಯಸ್ಪರ್ಶಿ ತಾಯಿಯಾಗುವ ಮೂಲಕ ಚೇವಾಯೂರ್ ಪೊಲೀಸ್ ಠಾಣೆಯ ಸಿವಿಲ್ ಪೊಲೀಸ್ ಅಧಿಕಾರಿ (ಸಿಪಿಒ) ಎಂ. ರಮ್ಯಾ ಅವರು ಈಗ ಹೃದಯಗಳನ್ನು ಗೆಲ್ಲುತ್ತಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಪಹರಣಕ್ಕೊಳಗಾಗಿದ್ದ 12 ದಿನಗಳ ಮಗುವಿಗೆ ಈ ಮಹಿಳಾ ಪೊಲೀಸ್‌ ಅಧಿಕಾರಿ ತನ್ನ ಎದೆ ಹಾಲುಣಿಸಿ ತಾಯಿಯ ಆರೈಕೆ ಮಾಡಿದ್ದಾರೆ. ಮಾಧ್ಯಮಗಳು ಈ … Continued

ಹ್ಯಾಲೋವೀನ್ ದುರಂತ: ದಕ್ಷಿಣ ಕೊರಿಯಾದ ಕಾಲ್ತುಳಿತದ ಘಟನೆ, ಸಾವಿನ ಸಂಖ್ಯೆ 151ಕ್ಕೆ ಏರಿಕೆ

ಸಿಯೋಲ್‌: ಶನಿವಾರ ರಾತ್ರಿ ದಕ್ಷಿಣ ಕೊರಿಯಾದ ರಾಜಧಾನಿ ಸಿಯೋಲ್‌ನಲ್ಲಿ ಹ್ಯಾಲೋವೀನ್ ಹಬ್ಬದ ಆಚರಣೆ ದುರಂತವಾಗಿ ಮಾರ್ಪಟ್ಟಿತು. ಪ್ರಮುಖ ಮಾರುಕಟ್ಟೆಯಲ್ಲಿ ನೂಕುನುಗ್ಗಲು ಸಂಭವಿಸಿ ಕಾಲ್ತುಳಿತದಿಂದ 151 ಜನರು ಮೃತಪಟ್ಟಿದ್ದಾರೆ ಮತ್ತು 82 ಜನರು ಗಾಯಗೊಂಡಿದ್ದಾರೆ. 20 ರ ವಯೋಮಾನದವರು ಕಾಲ್ತುಳಿತದಿಂದ ಹೆಚ್ಚು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಯೋನ್ಹಾಪ್ ಸುದ್ದಿ ಸಂಸ್ಥೆ ವರದಿ ಮಾಡಿದೆ. ಕಾಲ್ತುಳಿತದಲ್ಲಿ 97 … Continued

ತಾನು ಮಯೋಸಿಟಿಸ್‌ ರೋಗದಿಂದ ಬಳಲುತ್ತಿರುವುದನ್ನು ಬಹಿರಂಗಪಡಿಸಿದ ಖ್ಯಾತ ನಟಿ ಸಮಂತಾ

ನವದೆಹಲಿ: ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ರುತ್ ಪ್ರಭು ಅವರು ತಾವು ಸ್ನಾಯುಗಳ ದುರ್ಬಲತೆಗೆ ಕಾರಣವಾಗುವ ಮೈಯೋಸಿಟಿಸ್ ಎಂಬ ರೋಗದಿಂದ ಬಳಲುತ್ತಿರುವುದಾಗಿ ಇನ್‌ಸ್ಟಾಗ್ರಾಂನಲ್ಲಿ ಬಹಿರಂಗಪಡಿಸಿದ್ದಾರೆ. ನಟಿ, ತಮ್ಮ ಆರೋಗ್ಯದ ಬಗ್ಗೆ ನವೀಕರಣವನ್ನು ಹಂಚಿಕೊಂಡಿದ್ದಾರೆ, “ನಾನು ಶೀಘ್ರದಲ್ಲೇ ಸಂಪೂರ್ಣ ಚೇತರಿಸಿಕೊಳ್ಳುತ್ತೇನೆ ಎಂದು ವೈದ್ಯರು ವಿಶ್ವಾಸ ಹೊಂದಿದ್ದಾರೆ” ಎಂದು ಅವರು ಬರೆದಿದ್ದಾರೆ. ಆಸ್ಪತ್ರೆಯ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. … Continued

ವಿಧಾನಸಭೆ ಚುನಾವಣೆಗೂ ಮುನ್ನ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಮಿತಿ ರಚಿಸಲು ನಿರ್ಧರಿಸಿದ ಗುಜರಾತ್ ಸರ್ಕಾರ

ಅಹಮದಾಬಾದ್: ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೆ ತರಲು ಸಮಿತಿ ರಚಿಸಲು ಗುಜರಾತ್ ಸರ್ಕಾರ ನಿರ್ಧರಿಸಿದೆ ಎಂದು ಶನಿವಾರ ತಿಳಿಸಿದೆ. ಮುಂದಿನ ವಾರದಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗುವ ನಿರೀಕ್ಷೆಯಿರುವುದರಿಂದ ಪ್ರಸ್ತುತ ಬಿಜೆಪಿ ಸರ್ಕಾರದ ಕೊನೆಯ ಸಭೆಯಾಗಬಹುದಾದ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಗುಜರಾತ್ ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಾಂಘವಿ ಮತ್ತು … Continued

ಕೋವಿಡ್ -19 ಸಮಯದಲ್ಲಿ ನೆರವಿನ ನೆಪದಲ್ಲಿ 400ಕ್ಕೂ ಹೆಚ್ಚು ಜನರ ಬಲವಂತದ ಧಾರ್ಮಿಕ ಮತಾಂತರಕ್ಕೆ ಯತ್ನ: 9 ಮಂದಿ ವಿರುದ್ಧ ಪ್ರಕರಣ ದಾಖಲು

ಮೀರತ್‌: ಉತ್ತರ ಪ್ರದೇಶದ ಮೀರತ್‌ನಲ್ಲಿ 400 ಜನರನ್ನು ಬಲವಂತವಾಗಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ ಆರೋಪದ ಮೇಲೆ ಒಂಬತ್ತು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತ್ರಸ್ತರು ಹಿರಿಯ ಪೊಲೀಸ್ ಅಧೀಕ್ಷಕರನ್ನು (ಎಸ್‌ಎಸ್‌ಪಿ) ಸಂಪರ್ಕಿಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳಲು ಆಮಿಷ ಒಡ್ಡಲಾಗಿದೆ ಎಂದು ದೂರಿದ ನಂತರ ಪ್ರಕರಣ ದಾಖಲಿಸಲಾಗಿದೆ. ಮಂಗಟ್ ಪುರಂನ ಮಲಿನ್ ಗ್ರಾಮದಲ್ಲಿ ಈ ಘಟನೆ … Continued