ಐಡಿಬಿಐ ಬ್ಯಾಂಕ್‌ನ 60.72% ಷೇರು ಮಾರಾಟಕ್ಕೆ ಮುಂದಾದ ಕೇಂದ್ರ ಸರ್ಕಾರ-ಎಲ್‌ಐಸಿ

ಮುಂಬೈ: ಸರಕಾರಿ ಸ್ವಾಮ್ಯದ ಐಡಿಬಿಐ ಬ್ಯಾಂಕ್‌ನ (IDBI Bank) ಶೇಕಡ 60.72ರಷ್ಟು ಪಾಲನ್ನು ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಆಸಕ್ತರಿಂದ ಬಿಡ್‌ ಸಲ್ಲಿಕೆಗೆ ಆಹ್ವಾನಿಸಿರುವುದಾಗಿ ಶುಕ್ರವಾರದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಸಹ ತನ್ನ ಪಾಲಿನ ಷೇರುಗಳನ್ನು ವಿಕ್ರಯಗೊಳಿಸಲಿದೆ ಸರ್ಕಾರ ಮತ್ತು ಜೀವ ವಿಮಾ ನಿಗಮ (ಎಲ್‌ಐಸಿ) … Continued

ನಾಸಿಕ್ ಬಳಿ ಹೊತ್ತಿ ಉರಿದ ಬಸ್: 11 ಪ್ರಯಾಣಿಕರು ಸಜೀವ ದಹನ, 38 ಮಂದಿಗೆ ಗಾಯ

ನಾಸಿಕ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಇಂದು, ಶನಿವಾರ ಮುಂಜಾನೆ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಹನ್ನೊಂದು ಮಂದಿ ಮೃತಪಟ್ಟಿದ್ದು, 38 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಸಿಕ್-ಔರಂಗಾಬಾದ್ ಹೆದ್ದಾರಿಯಲ್ಲಿ ಡೀಸೆಲ್ ಸಾಗಿಸುತ್ತಿದ್ದ ಟ್ರೈಲರ್ ಟ್ರಕ್‌ಗೆ ಡಿಕ್ಕಿ ಹೊಡೆದ ನಂತರ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಸ್ಲೀಪರ್ ಕೋಚ್ ಬಸ್‌ನ ಪ್ರಯಾಣಿಕರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ … Continued

ಕೊಚ್ಚಿ ಬಳಿ ₹ 1,200 ಕೋಟಿ ಮೌಲ್ಯದ 200 ಕೆಜಿ ಹೆರಾಯಿನ್ ವಶ, 6 ಇರಾನಿ ಪ್ರಜೆಗಳ ಬಂಧನ

ಕೊಚ್ಚಿ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಮತ್ತು ಭಾರತೀಯ ನೌಕಾಪಡೆಯ ಜಂಟಿ ಕಾರ್ಯಾಚರಣೆಯಲ್ಲಿ ₹ 1,200 ಕೋಟಿಗೂ ಹೆಚ್ಚು ಮೌಲ್ಯದ ಸುಮಾರು 200 ಕೆಜಿ ಹೆರಾಯಿನ್ ಹೊಂದಿರುವ ಇರಾನ್ ಮೀನುಗಾರಿಕಾ ಹಡಗನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್‌ಸಿಬಿ ಶುಕ್ರವಾರ ತಿಳಿಸಿದೆ. ಸುದ್ದಿಗಾರರನ್ನು ಭೇಟಿ ಮಾಡಿದ ಎನ್‌ಸಿಬಿಯ ಉಪ ಮಹಾನಿರ್ದೇಶಕ (ಕಾರ್ಯಾಚರಣೆ) ಸಂಜಯ್ ಕುಮಾರ್ ಸಿಂಗ್, ಏಜೆನ್ಸಿ ಆರು … Continued

ಸುಧಾರಿತ ಮೇಲ್ವಿಚಾರಣಾ ಮಾನಿಟರಿಂಗ್ ಸಿಸ್ಟಮ್ ದಕ್ಷ್ ಆರಂಭಿಸಿದ ಆರ್‌ಬಿಐ

ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಶಕ್ತಿಕಾಂತ್ ದಾಸ್ ಅವರು ಗುರುವಾರ ಅಡ್ವಾನ್ಸ್ ಮೇಲುಸ್ತುವಾರಿ ಮಾನಿಟರಿಂಗ್ ಸಿಸ್ಟಮ್ ‘ದಕ್ಷ’ಕ್ಕೆ ಚಾಲನೆ ನೀಡಿದ್ದಾರೆ. DAKSH – ಬ್ಯಾಂಕಿನ ಮೇಲ್ವಿಚಾರಣಾ ಪ್ರಕ್ರಿಯೆಗಳನ್ನು ಹೆಚ್ಚು ಬಲಪಡಿಸುವ ನಿರೀಕ್ಷೆಯಿದೆ. ಮೇಲ್ವಿಚಾರಣೆಯನ್ನು ಬಲಪಡಿಸುವಲ್ಲಿ ವಿವಿಧ ಉಪಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಆರ್‌ಬಿಐ ಹೇಳಿದೆ. ಇತರ ಉಪಕ್ರಮಗಳಲ್ಲಿ ಇತ್ತೀಚಿನ ಡೇಟಾ ಮತ್ತು ವಿಶ್ಲೇಷಣಾತ್ಮಕ ಸಾಧನಗಳನ್ನು … Continued

ಜ್ಞಾನವಾಪಿ ಪ್ರಕರಣ: ಶಿವಲಿಂಗದ ಕಾಲಮಾನದ ವೈಜ್ಞಾನಿಕ ಪರಿಶೀಲನೆ ಮನವಿ ಕುರಿತ ಆದೇಶ ಮುಂದೂಡಿದ ವಾರಾಣಸಿ ನ್ಯಾಯಾಲಯ

ವಾರಾಣಸಿ: ಜ್ಞಾನವಾಪಿ ಮಸೀದಿ ಆವರಣದಲ್ಲಿ ಸಮೀಕ್ಷೆ ಕೈಗೊಂಡ ವೇಳೆ ಪತ್ತೆಯಾದ ವಸ್ತುವು ಶಿವಲಿಂಗವೋ ಅಥವಾ ಕಾರಂಜಿಯೋ ಎನ್ನುವುದನ್ನು ನಿರ್ಧರಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ಎಎಸ್‌ಐ) ವೈಜ್ಞಾನಿಕ ಪರಿಶೀಲನೆ ಕೈಗೊಳ್ಳುವಂತೆ ನಿರ್ದೇಶಿಸಲು ಕೋರಿ ಹಿಂದೂ ಪಕ್ಷಕಾರರು ಸಲ್ಲಿಸಿದ್ದ ಮನವಿಯ ಕುರಿತಾದ ಆದೇಶವನ್ನು ವಾರಾಣಸಿ ನ್ಯಾಯಾಲಯವು ಅಕ್ಟೋಬರ್‌ 11ಕ್ಕೆ ಮುಂದೂಡಿದೆ. ಪ್ರಕರಣದ ವಿಚಾರಣೆಯನ್ನು ಶುಕ್ರವಾರ ನಡೆಸಿದ ಜಿಲ್ಲಾ … Continued

ರೈಲ್ವೇ ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು ಯಾದವ್, ಕುಟುಂಬದ ಸದಸ್ಯರ ವಿರುದ್ಧ ನ್ಯಾಯಾಲಯಕ್ಕೆ ಸಿಬಿಐ ಆರೋಪಟ್ಟಿ ಸಲ್ಲಿಕೆ

ನವದೆಹಲಿ: 10 ವರ್ಷಗಳ ಹಿಂದೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಲಾಲು ಪ್ರಸಾದ ಯಾದವ್ ರೈಲ್ವೆ ಸಚಿವರಾಗಿದ್ದಾಗ ನಡೆದ ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಸಿಬಿಐ ಇಂದು, ಶುಕ್ರವಾರ ಅವರು ಮತ್ತು ಅವರ ಪತ್ನಿ ರಾಬ್ರಿ ದೇವಿ ಸೇರಿದಂತೆ 16 ಜನರ ವಿರುದ್ಧ ಇಲ್ಲಿನ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಸಂಸ್ಥೆಯು ಮೇ 18 ರಂದು ಪತಿ-ಪತ್ನಿ … Continued

ವಿಶ್ವಸಂಸ್ಥೆಯಲ್ಲಿ ಚೀನಾ ವಿರುದ್ಧದ ಮತದಾನಕ್ಕೆ ಗೈರಾದ ಒಂದು ದಿನದ ನಂತರ, ಉಯಿಘರ್ ಮುಸ್ಲಿಮರ ಮಾನವ ಹಕ್ಕುಗಳ ಪರ ಬ್ಯಾಟಿಂಗ್ ಮಾಡಿದ ಭಾರತ

ನವದೆಹಲಿ: ವಿಶ್ವ ಸಂಸ್ಥೆ ಮಾನವ ಹಕ್ಕುಗಳ ಕೌನ್ಸಿಲ್‌ನಲ್ಲಿ ಚೀನಾ ಉಯ್ಘರ್ ಮುಸ್ಲಿಮರನ್ನು ನಡೆಸಿಕೊಳ್ಳುವುದರ ವಿರುದ್ಧದ ಮತದಾನಕ್ಕೆ ಗೈರುಹಾಜರಾದ ಒಂದು ದಿನದ ನಂತರ, ಭಾರತವು ಶುಕ್ರವಾರ ಕ್ಸಿನ್‌ಜಿಯಾಂಗ್ ಜನರ ಮಾನವ ಹಕ್ಕುಗಳನ್ನು ಚೀನಾ ಗೌರವಿಸಬೇಕು ಎಂದು ಹೇಳಿದೆ. ಪತ್ರಿಕಾಗೋಷ್ಠಿಯಲ್ಲಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, “ಎಲ್ಲಾ ಮಾನವ ಹಕ್ಕುಗಳನ್ನು ಎತ್ತಿಹಿಡಿಯಲು ಭಾರತ ಬದ್ಧವಾಗಿದೆ. ದೇಶದ … Continued

ಭಾರತ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಪಾಲ್ಗೊಂಡ ಹತ್ಯೆಯಾದ ಹೋರಾಟಗಾರ್ತಿ ಗೌರಿ ಲಂಕೇಶ್ ತಾಯಿ, ಸಹೋದರಿ

ಬೆಂಗಳೂರು: ಹತ್ಯೆಗೀಡಾದ ಪತ್ರಕರ್ತೆ ಗೌರಿ ಲಂಕೇಶ್ ಅವರ ಸಹೋದರಿ ಕವಿತಾ ಮತ್ತು ತಾಯಿ ಇಂದಿರಾ ಅವರು ಶುಕ್ರವಾರ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ಮೆರವಣಿಗೆಯಲ್ಲಿ ಪಾಲ್ಗೊಂಡರು. ಭಾರತ್ ಜೋಡೋ ಯಾತ್ರೆಯು ಲಂಕೇಶ್ ಅವರಂತಹವರ ಧ್ವನಿಯಾಗಿದೆ ಮತ್ತು ಅದನ್ನು ಎಂದಿಗೂ ಮೌನಗೊಳಿಸಲು ಸಾಧ್ಯವಿಲ್ಲ ಎಂದು ರಾಹುಲ್‌ ಗಾಂಧಿ ಅವರು ಹೇಳಿದರು. ಗೌರಿ … Continued

ಎಎಪಿ ಸಚಿವರ ಉಪಸ್ಥಿತಿಯಲ್ಲಿ ‘ಧರ್ಮ ಪರಿವರ್ತನೆ’ ಕಾರ್ಯಕ್ರಮದ ವಿವಾದ; ಸಚಿವರ ವಜಾಕ್ಕೆ ಸಿಎಂ ಕೇಜ್ರಿವಾಲ್‌ಗೆ ಬಿಜೆಪಿ ಒತ್ತಾಯ

ನವದೆಹಲಿ: ಆಪ್‌ ಸಚಿವ ರಾಜೇಂದ್ರ ಪಾಲ್‌ ಗೌತಮ್‌ ಅವರು ಧಾರ್ಮಿಕ ಮತಾಂತರ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ವೀಡಿಯೋ ವೈರಲ್‌ ಆಗಿದ್ದು, ಸಾವಿರಾರು ಜನರು ಹಿಂದೂ ದೇವತೆಗಳನ್ನು ಪೂಜಿಸುವುದಿಲ್ಲ ಎಂದು ಪ್ರಮಾಣ ವಚನ ಸ್ವೀಕರಿಸಿದ್ದು, ಮುಖ್ಯಮಂತ್ರಿ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಶುಕ್ರವಾರ ದೆಹಲಿಯಲ್ಲಿ ರಾಜಕೀಯ ಗದ್ದಲ ಭುಗಿಲೆದ್ದಿದೆ. ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಕ್ಯಾಬಿನೆಟ್ ಸಹೋದ್ಯೋಗಿಯನ್ನು ವಜಾಗೊಳಿಸಬೇಕು … Continued

ಸರ್ವಪಕ್ಷ ಸಭೆಯಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ನಿರ್ಧಾರ: ಸಿಎಂ ಬಸವರಾಜ ಬೊಮ್ಮಾಯಿ ಪ್ರಕಟ

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಇಂದು, ಶುಕ್ರವಾರ ನಗರದಲ್ಲಿ ನಡೆದ ಸರ್ವಪಕ್ಷಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗಮೋಹನ್‌ ದಾಸ್‌ ವರದಿ ಅನುಷ್ಠಾನಕ್ಕೆ ಸರ್ಕಾರ ಒಪ್ಪಿದೆ. ನಾಳೆಯೇ ಸಂಪುಟ ಸಭೆ ಕರೆಯಲಾಗುತ್ತಿದ್ದು, ಸರ್ಕಾರಿ ಮೀಸಲಾತಿ ಹೆಚ್ಚಳಕ್ಕೆ ಅಧಿಕೃತ ಆದೇಶದ ಮುದ್ರೆ … Continued