ಚಂಡೀಗಡ ವಿಮಾನ ನಿಲ್ದಾಣಕ್ಕೆ ಶಹೀದ್‌ ಭಗತ್ ಸಿಂಗ್ ಹೆಸರು: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ಮಾಸಿಕ ‘ಮನ್ ಕಿ ಬಾತ್’ ರೇಡಿಯೊ ಕಾರ್ಯಕ್ರಮದಲ್ಲಿ, ಸೆಪ್ಟೆಂಬರ್ 28 ರಂದು ಶಹೀದ್ ಭಗತ್ ಸಿಂಗ್ ಅವರ ಜನ್ಮದಿನದ ಸಂದರ್ಭದಲ್ಲಿ ಚಂಡೀಗಢ ವಿಮಾನ ನಿಲ್ದಾಣಕ್ಕೆ ಅವರ ಹೆಸರನ್ನು ಇಡಲಾಗುವುದು ಎಂದು ಪ್ರಕಟಿಸಿದ್ದಾರೆ. ತಮ್ಮ ರೇಡಿಯೋ ಭಾಷಣದಲ್ಲಿ ಪ್ರಧಾನಿ ಮೋದಿ, “ನನ್ನ ಪ್ರೀತಿಯ ದೇಶವಾಸಿಗಳೇ, ಮೂರು ದಿನಗಳ … Continued

ಒಎನ್​ಜಿಸಿಯಲ್ಲಿ 871 ಹುದ್ದೆಗಳಿಗೆ ಅರ್ಜಿ ಆಹ್ವಾನ

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(Oil and Natural Gas Corporation)ದ ಎಇಇ, ಪ್ರೋಗ್ರಾಮಿಂಗ್​ ಆಫೀಸರ್​ 871 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಪದವೀಧರ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 12 ಆಗಿದೆ. ಸಂಸ್ಥೆ- ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC) … Continued

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸ್ಥಾನ: ಭಾರತವನ್ನು ಬೆಂಬಲಿಸಿದ ರಷ್ಯಾ

ನ್ಯೂಯಾರ್ಕ್: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯತ್ವಕ್ಕೆ ರಷ್ಯಾ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಭಾರತವನ್ನು ಬೆಂಬಲಿಸಿದ್ದಾರೆ. 77 ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಲಾವ್ರೊವ್, “ಆಫ್ರಿಕಾ, ಏಷ್ಯಾ ಮತ್ತು ಲ್ಯಾಟಿನ್ ಅಮೆರಿಕದ ದೇಶಗಳ ಪ್ರಾತಿನಿಧ್ಯದ ಮೂಲಕ ಭದ್ರತಾ ಮಂಡಳಿಯನ್ನು ಹೆಚ್ಚು ಪ್ರಜಾಪ್ರಭುತ್ವಗೊಳಿಸುವ ನಿರೀಕ್ಷೆಯನ್ನು ನಾವು ನೋಡುತ್ತೇವೆ. ಭಾರತ ಮತ್ತು ಬ್ರೆಜಿಲ್, ನಿರ್ದಿಷ್ಟವಾಗಿ, … Continued

ಅಶೋಕ್ ಗೆಹ್ಲೋಟ್ ವರ್ಸಸ್‌ ಸಚಿನ್ ಪೈಲಟ್: ರಾಜಸ್ಥಾನದ ಮುಖ್ಯಮಂತ್ರಿ ಹುದ್ದೆಗೆ ಯಾರು..? ಇಂದು ಸಂಜೆ ಕಾಂಗ್ರೆಸ್‌ ಮಹತ್ವದ ಸಭೆ

ನವದೆಹಲಿ: ಅಶೋಕ್‌ ಗೆಹ್ಲೋಟ್‌ ಅವರು ಕಾಂಗ್ರೆಸ್‌ ಅಧ್ಯಕ್ಷರಾದ ನಂತರ ಸಚಿನ್‌ ಪೈಲಟ್‌ ಮುಖ್ಯಮಂತ್ರಿಯಾಗಬಹುದು ಎಂಬ ಗುಸುಗುಸು ನಡುವೆಯೇ ಭಾನುವಾರ ಸಂಜೆ ಜೈಪುರದಲ್ಲಿ ರಾಜಸ್ಥಾನದ ಶಾಸಕರ ಸಭೆಯನ್ನು ಕಾಂಗ್ರೆಸ್‌ ಕರೆದಿದೆ. ದೆಹಲಿಯಲ್ಲಿರುವ ಪಕ್ಷದ ಕೇಂದ್ರ ಕಚೇರಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ವೀಕ್ಷಕರನ್ನಾಗಿ ನೇಮಿಸಿದ್ದು, ರಾಜ್ಯ ಉಸ್ತುವಾರಿ ಅಜಯ್ ಮಾಕನ್ ಕೂಡ ಪಾಲ್ಗೊಳ್ಳಲಿದ್ದಾರೆ. ಅಶೋಕ್ ಗೆಹ್ಲೋಟ್ … Continued

ಅಕ್ಟೋಬರ್ 1ರಂದು ಭಾರತದಲ್ಲಿ 5G ಇಂಟರ್ನೆಟ್ ಸೇವೆ ಆರಂಭ, ಪ್ರಧಾನಿ ಮೋದಿ ಚಾಲನೆ

ನವದೆಹಲಿ: ಅಕ್ಟೋಬರ್ 1ರಂದು ಇಂಡಿಯಾ ಮೊಬೈಲ್ ಕಾಂಗ್ರೆಸ್ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದಲ್ಲಿ 5G ಸೇವೆಗಳನ್ನು ಪ್ರಾರಂಭಿಸಲಿದ್ದಾರೆ. ಬಿಡುಗಡೆ ಸಂದರ್ಭದಲ್ಲಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಅದರ ಅಧಿಕೃತ ವೆಬ್‌ಸೈಟ್ ಪ್ರಕಾರ, ಇಂಡಿಯಾ ಮೊಬೈಲ್ ಕಾಂಗ್ರೆಸ್ (IMC) ಏಷ್ಯಾದ ಅತಿದೊಡ್ಡ ಟೆಲಿಕಾಂ, ಮಾಧ್ಯಮ ಮತ್ತು ತಂತ್ರಜ್ಞಾನ ವೇದಿಕೆಯಾಗಿದೆ, ಇದನ್ನು ದೂರಸಂಪರ್ಕ ಇಲಾಖೆ (DoT) ಮತ್ತು … Continued

ರೆಸಾರ್ಟ್‌ ಅತಿಥಿಗಳಿಗೆ ʼವಿಶೇಷ ಸೇವೆʼಗೆ ಬಲವಂತ ಮಾಡುತ್ತಿದ್ದರು”: ಕೊಲೆಯಾದ ಉತ್ತರಾಖಂಡ ಸ್ವಾಗತಕಾರಿಣಿಯ ವಾಟ್ಸಾಪ್ ಸಂದೇಶ

ಋಷಿಕೇಶ: ಹತ್ಯೆಗೀಡಾದ ಉತ್ತರಾಖಂಡ ಮಹಿಳೆಯಿಂದ ಆಕೆಯ ಸ್ನೇಹಿತೆಗೆ ಕಳುಹಿಸಿದ ವಾಟ್ಸಾಪ್ ಸಂದೇಶಗಳು ಬಂಧಿತ ಆರೋಪಿಗಳು 19  ವರ್ಷದ ಹುಡುಗಿಯನ್ನು ವೇಶ್ಯಾವಾಟಿಕೆಗೆ ಬಲವಂತ ಮಾಡುತ್ತಿದ್ದರು ಎಂಬ ಆರೋಪವನ್ನು ದೃಢಪಡಿಸುವಂತಿದೆ. “ಅವರು ನನ್ನನ್ನು ವೇಶ್ಯೆಯನ್ನಾಗಿ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ತನ್ನ ಸ್ನೇಹಿತರಿಗೆ ಕಳುಹಿಸಿದ ಸಂದೇಶ ಹೇಳುತ್ತದೆ ಎಂದು ವರದಿಯಾಗಿದೆ, ಈಗ ಪಕ್ಷದಿಂದ ಉಚ್ಚಾಟಿಸಲ್ಪಟ್ಟ ಹಿರಿಯ ಬಿಜೆಪಿ ನಾಯಕನ ಮಗನ … Continued

ಪುಣೆಯಲ್ಲಿ ಪಿಎಫ್‌ಐ ಪ್ರತಿಭಟನೆ ವೇಳೆ ಪಾಕಿಸ್ತಾನ ಪರ ಘೋಷಣೆ : ತನಿಖೆ ಆರಂಭ

ಪುಣೆ: ಕೇಂದ್ರೀಯ ತನಿಖಾ ಸಂಸ್ಥೆಗಳಿಂದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಚೇರಿ ಹಾಗೂ ನಾಯಕರ ಮೇಲೆ ನಡೆದ ಬೃಹತ್‌ ದಾಳಿಯ ನಡುವೆ ಶುಕ್ರವಾರ ಪುಣೆಯಲ್ಲಿ ಪಿಎಫ್‌ಐ ಸಂಘಟನೆಯ ಪ್ರತಿಭಟನೆಯ ಸಂದರ್ಭದಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಲಾಯಿತು. ವರದಿಗಳ ಪ್ರಕಾರ, ನಗರದ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆಗಳು ಕೇಳಿಬಂದವು, ಅಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ … Continued

ಏಕನಾಥ್ ಶಿಂಧೆ ಪುತ್ರ ಸಿಎಂ ಕುರ್ಚಿ ಮೇಲೆ ಕುಳಿತಿರುವ ಫೋಟೋ ವೈರಲ್: ಶ್ರೀಕಾಂತ ಶಿಂಧೆ ಹೇಳಿದ್ದೇನು..?

ಥಾಣೆ: ‘ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಹಾಗೂ ಶಿವಸೇನಾದ ಸಂಸದ ಶ್ರೀಕಾಂತ್ ಶಿಂಧೆ ಅವರು ಮುಖ್ಯಮಂತ್ರಿಗಳಿಗೆ ಮೀಸಲಾದ ಖುರ್ಚಿಯಲ್ಲಿ ಕುಳಿತಿದ್ದಾರೆ. ಅವರು ಸೂಪರ್ ಸಿಎಂ ಆಗಿದ್ದಾರೆ’ ಎಂದು ಟೀಕಿಸಿರುವ ಫೋಟೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ‘ಈ ಫೋಟೊವನ್ನೇ ಇಟ್ಟುಕೊಂಡು ಪ್ರತಿಪಕ್ಷಗಳು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿವೆ. … Continued

ಅಯ್ಯೋ ದೇವ್ರೆ…: ಬೈದು ಬುದ್ದಿ ಹೇಳಿದ್ದಕ್ಕೆ ಶಿಕ್ಷಕನಿಗೆ ಗುಂಡು ಹಾರಿಸಿ ಗಾಯಗೊಳಿಸಿದ 10ನೇ ತರಗತಿ ವಿದ್ಯಾರ್ಥಿ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಲಕ್ನೊ: ಉತ್ತರ ಪ್ರದೇಶದ ಸೀತಾಪುರದಲ್ಲಿ ಶಾಲಾ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕರ ಮೇಲೆ ದೇಶಿ ನಿರ್ಮಿತ ಪಿಸ್ತೂಲ್‌ನಿಂದ ಗುಂಡು ಹಾರಿಸಿರುವ ಘಟನೆ ಇಂದು, ಶನಿವಾರ ನಡೆದಿದೆ. 10ನೇ ತರಗತಿಯ ಬಾಲಕ ಮತ್ತೊಬ್ಬ ವಿದ್ಯಾರ್ಥಿಯೊಂದಿಗೆ ಜಗಳವಾಡಿದ ಬಳಿಕ ಶಿಕ್ಷಕ ಆತನಿಗೆ ಬೈದಿದ್ದರಿಂದ ಮನನೊಂದಿದ್ದ ಎನ್ನಲಾಗಿದೆ. ಆರೋಪಿ ವಿದ್ಯಾರ್ಥಿ ಶಿಕ್ಷಕರ ಮೇಲೆ ಮೂರು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ಈ … Continued

ಚೀನಾದಲ್ಲಿ ಗೃಹ ಬಂಧನದಲ್ಲಿದ್ದಾರೆಯೇ ಕ್ಸಿ ಜಿನ್‌ಪಿಂಗ್ ? ಸಾಮಾಜಿಕ ಜಾಲತಾಣಗಳಲ್ಲಿ ಬಿರುಗಾಳಿ ಎಬ್ಬಿಸುತ್ತಿದೆ ಸುದ್ದಿ

ನವದೆಹಲಿ: ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂಬ ಊಹಾಪೋಹಗಳು ಸಾಮಾಜಿಕ ಮಾಧ್ಯಮದಲ್ಲಿ ಬಿರುಗಾಳಿ ಎಬ್ಬಿಸಿದೆ. ಇಂಟರ್ನೆಟ್‌ನಲ್ಲಿನ ಹಲವಾರು ಪೋಸ್ಟ್‌ಗಳ ಪ್ರಕಾರ, ಶಾಂಘೈ ಸಹಕಾರ ಸಂಸ್ಥೆ ಅಥವಾ SCO, ಶೃಂಗಸಭೆಗಾಗಿ ಇತ್ತೀಚೆಗೆ ಸಮರ್‌ಕಂಡ್‌ನಲ್ಲಿದ್ದ ಜಿನ್‌ಪಿಂಗ್ ಅವರನ್ನು ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ ಅಥವಾ PLA ಮುಖ್ಯಸ್ಥ ಸ್ಥಾನದಿಂದ ತೆಗೆದುಹಾಕಲಾಗಿದೆ. ಆದಾಗ್ಯೂ, ಚೀನಾದ ಕಮ್ಯುನಿಸ್ಟ್ … Continued