ನಿತೀಶ್ ಕುಮಾರ್​ಗೆ ಆಘಾತ: ಬಿಜೆಪಿ ಸೇರಿದ ಜೆಡಿಯುದ 15 ಜಿಲ್ಲಾ ಪಂಚಾಯತ​ ಸದಸ್ಯರು

ದಿಯು ಮತ್ತು ದಮನ್ : ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡು ಆರ್​ಜೆಡಿ ಹಾಗೂ ಕಾಂಗ್ರೆಸ್‌ ಸೇರಿದಂತೆ ಏಳು ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡು ಬಿಹಾರದಲ್ಲಿ ಹೊಸ ಸರ್ಕಾರ ರಚಿಸಿರುವ ಮುಖ್ಯಮಂತ್ರಿ ನಿತೀಶ್​ ಕುಮಾರ್​​ಗೆ ಆಘಾತದ ಮೇಲೆ ಆಘಾತವಾಗುತ್ತಿದೆ. ನಿತೀಶ್​ ಕುಮಾರ್​​ ನೇತೃತ್ವದ ಜನತಾ ದಳ ಯುನೈಟೆಡ್(ಜೆಡಿಯು)ಗೆ ಅನೇಕರು ಸಾಮೂಹಿಕವಾಗಿ ಪಕ್ಷ ತೊರೆಯುತ್ತಿದ್ದಾರೆ. ನಿತೀಶ್ ಕುಮಾರ್ ಬಿಜೆಪಿ … Continued

ಅಗತ್ಯ ಔಷಧಗಳ ಪಟ್ಟಿಯಿಂದ ಅಸಿಡಿಟಿ ಔಷಧ ರಾನಿಟಿಡಿನ್ ಸೇರಿದಂತೆ 26 ಔಷಧಿಗಳನ್ನು ಕೈಬಿಟ್ಟ ಕೇಂದ್ರ ಸರ್ಕಾರ

ನವದೆಹಲಿ: ಕ್ಯಾನ್ಸರ್-ಉಂಟುಮಾಡುವ ಕಳವಳದ ಹಿನ್ನೆಲೆಯಲ್ಲಿ ಕೇಂದ್ರವು ಜನಪ್ರಿಯ ಆಂಟಿಸಿಡ್ ರಾನಿಟಿಡಿನ್ ಅನ್ನು ಅಗತ್ಯ ಔಷಧ ಪಟ್ಟಿಯಿಂದ ತೆಗೆದುಹಾಕಿದೆ. 26 ಔಷಧಿಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ರಾನಿಟಿಡಿನ್ ಅನ್ನು ಅಸಿಲೋಕ್, ಜಿನೆಟಾಕ್ ಮತ್ತು ರಾಂಟಾಕ್ ಎಂಬ ಬ್ರ್ಯಾಂಡ್ ಹೆಸರುಗಳಲ್ಲಿ ಜನಪ್ರಿಯವಾಗಿ ಮಾರಾಟ ಮಾಡಲಾಗುತ್ತದೆ, ಮತ್ತು ಸಾಮಾನ್ಯವಾಗಿ ಆಮ್ಲೀಯತೆ ಮತ್ತು ಹೊಟ್ಟೆನೋವು-ಸಂಬಂಧಿತ ಸಮಸ್ಯೆಗಳಿಗೆ ಸೂಚಿಸಲಾಗುತ್ತದೆ. ಆರೋಗ್ಯ ಸಚಿವಾಲಯವು 384 ಔಷಧಗಳನ್ನು … Continued

ಭಾರತದ ಮುಂದಿನ ಅಟಾರ್ನಿ ಜನರಲ್ ಆಗಿ ಮುಕುಲ್ ರೋಹಟಗಿ ನೇಮಕ

ನವದೆಹಲಿ: ಮುಕುಲ್ ರೋಹಟಗಿ ಅವರನ್ನು ಭಾರತದ ಅಟಾರ್ನಿ ಜನರಲ್ ಆಗಿ ನೇಮಕ ಮಾಡಲಾಗಿದೆ. ಅವರು ಅಕ್ಟೋಬರ್ 1 ರಿಂದ ಅಟಾರ್ನಿ ಜನರಲ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಅಟಾರ್ನಿ ಜನರಲ್ ಆಗಿರುವ ಕೆ.ಕೆ. ವೇಣುಗೋಪಾಲ ಅವರ ಅಧಿಕಾರಾವಧಿಯು ಸೆಪ್ಟೆಂಬರ್ 30 ಕ್ಕೆ ಕೊನೆಗೊಳ್ಳಲಿದ್ದು, ಅವರ ಸ್ಥಾನಕ್ಕೆ ರೋಹಟಗಿ ಅವರನ್ನು ನೇಮಕ ಮಾಡಲಾಗಿದೆ. ರೋಹಟಗಿ ಅವರು ಈ ಹಿಂದೆ ಜೂನ್ … Continued

ಸಿಕಂದರಾಬಾದ್‌ ಇ-ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ: ಕನಿಷ್ಠ 8 ಜನರು ಸಾವು, 2ನೇ ಮಹಡಿಯಿಂದ ಜಿಗಿದು ರಕ್ಷಿಸಿಕೊಂಡ ಹಲವರು

ಹೈದರಾಬಾದ್‌: ಸೋಮವಾರ ರಾತ್ರಿ ಸಿಕಂದರಾಬಾದ್‌ನ ಎಲೆಕ್ಟ್ರಿಕ್ ಶೋರೂಮ್‌ನಲ್ಲಿ ಭಾರಿ ಬೆಂಕಿ ಅವಘಡದಲ್ಲಿ ಮಹಿಳೆ ಸೇರಿದಂತೆ ಕನಿಷ್ಠ ಎಂಟು ಜನರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 10 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಪಾಸ್‌ಪೋರ್ಟ್ ಕಚೇರಿಯ ಸಮೀಪವಿರುವ ಕಟ್ಟಡದ ಮೇಲಿನ ನಾಲ್ಕು ಮಹಡಿಗಳಲ್ಲಿರುವ ಲಾಡ್ಜ್ ಮತ್ತು ರೆಸ್ಟೋರೆಂಟ್‌ಗೆ ಬೆಂಕಿ ವ್ಯಾಪಿಸಿದೆ. ಬೆಂಕಿ ಮತ್ತು ಹೊಗೆ ಹೊರಹೊಮ್ಮುತ್ತಿರುವುದನ್ನು ಗಮನಿಸಿದ … Continued

ಎಸ್‌ಬಿಐನ 5008 ಜೂನಿಯರ್‌ ಕ್ಲರ್ಕ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ: ಪದವಿಧರರು ಅರ್ಜಿ ಸಲ್ಲಿಸಬಹುದು

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಕ್ಲರಿಕಲ್ ಕೇಡರ್‌ನಲ್ಲಿ ಜೂನಿಯರ್ ಅಸೋಸಿಯೇಟ್ ( ಕಸ್ಟಮರ್‌ ಸಪೋರ್ಟ್‌ ಮತ್ತು ಸೇಲ್ಸ್) ಹುದ್ದೆಗಳಿಗೆ ಅರ್ಜಿ‌ ಸ್ವೀಕರಿಸುವ ಪ್ರಕ್ರಿಯೆ ಪ್ರಾರಂಭಿಸಿದೆ. ದೇಶಾದ್ಯಂತ 5008 ಹುದ್ದೆಗಳಿಗೆ ಅಧಿಸೂಚನೆಯನ್ನು ಎಸ್‌ಬಿಐ ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳುಎಸ್‌ಬಿಐ ವೆಬ್‌ಸೈಟ್‌ನ ಕರಿಯರ್ಸ್‌ ಪೋರ್ಟಲ್, sbi.co.in ಅಥವಾ ibpsonline.ibps.in ನಲ್ಲಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ … Continued

ಸೌರಶಕ್ತಿ ಚಾಲಿತ ವಿದ್ಯುತ್ ಹೆದ್ದಾರಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯೋನ್ಮುಖ: ಗಡ್ಕರಿ

ನವದೆಹಲಿ: ಸೌರಶಕ್ತಿಯಿಂದ (Solar Energy) ಚಾಲಿತವಾಗಿರುವ ಎಲೆಕ್ಟ್ರಿಕ್ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೆಂದ್ರ ಸರ್ಕಾರ ಕಾರ್ಯ ಪ್ರವೃತ್ತವಾಗಿದೆಯಂತೆ. ಈ ಹೆದ್ದಾರಿಗಳ ಮೂಲಕ ಭಾರೀ ಟ್ರಕ್‌ಗಳು ಮತ್ತು ಬಸ್‌ಗಳನ್ನು ಚಾರ್ಜ್‌ ಮಾಡಲು ಅನುಕೂಲವಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೋಮವಾರ ಹೇಳಿದ್ದಾರೆ. ಇಂಡೋ-ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್ (IACC) ಆಯೋಜಿಸಿದ್ದ … Continued

2015ರ ಪೊಲೀಸ್ ಠಾಣೆ ಗಲಭೆ ಪ್ರಕರಣ: ಎಎಪಿಯ ಇಬ್ಬರು ಶಾಸಕರು ದೋಷಿಗಳು ಎಂದ ದೆಹಲಿ ನ್ಯಾಯಾಲಯ

ನವದೆಹಲಿ: ಏಳು ವರ್ಷಗಳ ಹಿಂದೆ ಪೊಲೀಸ್‌ ಠಾಣೆಯೊಂದಕ್ಕೆ ಗುಂಪೊಂದು ನುಗ್ಗಿ ಗಲಭೆ ನಡೆಸಿ, ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲು ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್‌ ಆದ್ಮಿ ಪಕ್ಷದ (ಎಎಪಿ) ಇಬ್ಬರು ಶಾಸಕರು ಹಾಗೂ ಇತರ 15 ಮಂದಿ ದೋಷಿಗಳು ಎಂದು ಸಂಸದರು ಮತ್ತು ಶಾಸಕರ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ದೆಹಲಿಯ ವಿಶೇಷ ನ್ಯಾಯಾಲಯವು … Continued

ಗೆಳೆತನ ಮಾಡದಿದ್ದರೆ ಕಿಡ್ನಾಪ್ ಮಾಡ್ತೇವೆ: ರಾಂಚಿಯ ಶಾಲೆಯಲ್ಲಿ ಹಿಂದೂ ಬಾಲಕಿಯರಿಗೆ ಬೆದರಿಕೆ

ರಾಂಚಿ: ಮುಸ್ಲಿಂ ಗೂಂಡಾಗಳ ಗುಂಪೊಂದು ಜಾರ್ಖಂಡ್‌ನ ರಾಂಚಿಯಲ್ಲಿ ಸರ್ಕಾರಿ ಶಾಲೆಯೊಂದಕ್ಕೆ ನುಗ್ಗಿ, ಶಸ್ತ್ರಾಸ್ತ್ರಗಳನ್ನು ಝಳಪಿಸಿ ತಮ್ಮನ್ನು ಸ್ನೇಹಿತರಾಗಿ ಮಾಡಿಕೊಳ್ಳಬೇಕು. ಒಂದುವೇಳೆ ಇದನ್ನು ಪಾಲಿಸದಿದ್ದರೆ ಅಪಹರಿಸುವುದಾಗಿ ಹುಡುಗಿಯರಿಗೆ ಬೆದರಿಕೆ ಹಾಕಿದ್ದಾರೆ. ಕೆಲವು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಈ ಗೂಂಡಾಗಳ ವಿರುದ್ಧ ನಿಂತಿದ್ದರಿಂದ, ಅವರಿಗೆ ಬೆದರಿಕೆ ಹಾಕಿ ನಂತರ ಥಳಿಸಲಾಗಿದೆ. 9ನೇ ತರಗತಿಯ ವಿದ್ಯಾರ್ಥಿನಿಯರ ಪ್ರಕಾರ, ಬುಡಕಟ್ಟು ಮತ್ತು … Continued

ಚಿಲ್ಲರೆ ಹಣದುಬ್ಬರ ಆಗಸ್ಟ್ ನಲ್ಲಿ ಶೇ.7ಕ್ಕೆ ಏರಿಕೆ

ನವದೆಹಲಿ : ಚಿಲ್ಲರೆ ಹಣದುಬ್ಬರ ಆಗಸ್ಟ್‌ನಲ್ಲಿ ಶೇಕಡಾ 7ಕ್ಕೆ ಏರಿದೆ, ಇದು ಜುಲೈನಲ್ಲಿ ಶೇಕಡಾ 6.71ರಷ್ಟು ಇತ್ತು. ಆಗಸ್ಟ್ ನಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳೆರಡರಲ್ಲೂ ಆಹಾರ ಹಣದುಬ್ಬರವು ಹೆಚ್ಚಾಗಿದೆ. ಜೂನ್ʼನಲ್ಲಿ ಇದು ಶೇ.7.01ರಷ್ಟಿತ್ತು. ಮೇನಲ್ಲಿ, ಶೇಕಡಾ 7.04 ಮತ್ತು ಏಪ್ರಿಲ್‌ನಲ್ಲಿ ಶೇಕಡಾ 7.79 ರಷ್ಟಿತ್ತು. ನಗರ-ಗ್ರಾಮೀಣ ಪ್ರದೇಶಗಳಲ್ಲಿ ಆಹಾರ ಹಣದುಬ್ಬರ ಹೆಚ್ಚಳವಾಗಿದೆ. ನಗರ ಪ್ರದೇಶಗಳಲ್ಲಿ … Continued

ಒಂದು ಕುಂಬಳಕಾಯಿ 47 ಸಾವಿರ ರೂಪಾಯಿಗೆ ಮಾರಾಟ….!

ತಿರುವನಂತಪುರ: ಕೇರಳದಲ್ಲಿ 5 ಕೆ.ಜಿ ಇರುವ ಒಂದು ಕುಂಬಳಕಾಯಿ ಬೆಲೆ 47 ಸಾವಿರ ರೂ.ಗಳಿಗೆ ಮಾರಾಟವಾಗಿದೆ…! ಕೇರಳದ ಇಡುಕ್ಕಿಯ ಗುಡ್ಡಗಾಡು ಪ್ರದೇಶದ ವಲಸೆ ಗ್ರಾಮವಾದ ಚೆಮ್ಮನ್ನಾರ್‌ನಲ್ಲಿ ನಡೆದ ಸಾರ್ವಜನಿಕ ಹರಾಜಿನಲ್ಲಿ ಒಂದು ಕುಂಬಳಕಾಯಿ 47 ಸಾವಿರ ರೂಪಾಯಿಗೆ ಮಾರಾಟವಾಗಿದೆ. ಇದು ಈ ಬಾರಿಯ ಓಣಂ ಹಬ್ಬದ ವಿಶೇಷತೆಯಾಗಿದೆ. ಕೇರಳದಲ್ಲಿ ಓಣಂ ಹಬ್ಬವನ್ನು ಎಲ್ಲ ಧರ್ಮೀಯರೂ ಸೇರಿ … Continued