ಬಸ್ ಕಮರಿಗೆ ಉರುಳಿ 10 ಮಂದಿ ಸಾವು, 20 ಮಂದಿಗೆ ಗಾಯ

ಶ್ರೀನಗರ: ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಜ್ಜರ್ ಕೋಟ್ಲಿ ಬಳಿ ಮಂಗಳವಾರ ಬಸ್ ಕಮರಿಗೆ ಬಿದ್ದ ಪರಿಣಾಮ 10 ಮಂದಿ ಸಾವಿಗೀಡಾಗಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಅಪಘಾತದ ಸಮಯದಲ್ಲಿ 75 ಪ್ರಯಾಣಿಕರನ್ನು ಹೊತ್ತ ಬಸ್ ಅಮೃತಸರದಿಂದ ಕತ್ರಾಕ್ಕೆ ತೆರಳುವವರಾಗಿದ್ದರು. ಅವರೆಲ್ಲ ಮಾತಾ ವೈಶ್ನವೋದೇವಿ ಮಂದಿರಕ್ಕೆ ತೆರಳುತ್ತಿದ್ದರು. ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. … Continued

1 ಲಕ್ಷ ಬೆಲೆಯ ಮೊಬೈಲ್ ಅಣೆಕಟ್ಟೆ ನೀರಿನಲ್ಲಿ ಬಿತ್ತು: 21 ಲಕ್ಷ ಲೀಟರ್ ನೀರು ಹೊರಬಿಟ್ಟು ತನ್ನ ಮೊಬೈಲ್ ಹುಡುಕಿಸಿದ ಅಧಿಕಾರಿ…!

ಯಾವುದು ಹೆಚ್ಚು ಅಮೂಲ್ಯ ..? ಮೊಬೈಲ್ ಫೋನ್ ಅಥವಾ ಒಣಗಿದ ಹೊಲಗಳಿಗೆ ಸಂಗ್ರಹಿಸಿಟ್ಟ ಲಕ್ಷಾಂತರ ಗ್ಯಾಲನ್ ನೀರು? ಛತ್ತೀಸ್‌ಗಢದ ವಿಲಕ್ಷಣ ಘಟನೆಯೊಂದರಲ್ಲಿ, ಅಣೆಕಟ್ಟಿನ ನೀರಿನಲ್ಲಿ ಬಿದ್ದ ಸರ್ಕಾರಿ ಅಧಿಕಾರಿಯ ದುಬಾರಿ ಫೋನ್ ಅನ್ನು ಮರಳಿ ಪಡೆಯಲು ಜಲಾಶಯದಿಂದ 21 ಲಕ್ಷ ಲೀಟರ್ ನೀರನ್ನು ಹೊರಕ್ಕೆ ಬಿಡಲಾಗಿದೆ …! ಹೇಳಿಕೆಯಲ್ಲಿ, ಅಧಿಕಾರಿಯು ನೀರು ‘ಬಳಕೆಗೆ ಯೋಗ್ಯವಾಗಿಲ್ಲ’ ಮತ್ತು … Continued

ಅಮಿತ್ ಶಾ ಭೇಟಿಗೂ ಮುನ್ನ ಮಣಿಪುರದಲ್ಲಿ ಬಂದೂಕು ಸಮೇತ 25 ಮಂದಿ ಬಂಧನ

ಇಂಫಾಲ: ಮಣಿಪುರದ ಇಂಫಾಲದ ಪೂರ್ವ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಯೋಜಿಸುತ್ತಿದ್ದ 25 ಶಸ್ತ್ರಸಜ್ಜಿತ ವ್ಯಕ್ತಿಗಳನ್ನು ಸೇನೆಯ ಬಹು ಮೊಬೈಲ್ ವೆಹಿಕಲ್ ಚೆಕ್ ಪೋಸ್ಟ್‌ಗಳು (MVCP) ವಶಪಡಿಸಿಕೊಂಡಿವೆ ಮತ್ತು ಅವರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭಾರತೀಯ ಸೇನೆಯ ಅಧಿಕೃತ ಹೇಳಿಕೆ ತಿಳಿಸಿದೆ. .”ಇಂಫಾಲದ ಪೂರ್ವ ಜಿಲ್ಲೆಯ ಗುಡ್ಡಗಾಡು ಪ್ರದೇಶದ ಸನಾಸಾಬಿ, ಗ್ವಾಲ್ಟಾಬಿ ಮತ್ತು … Continued

ಜೆಡಿಯು ಸಂಸತ್ ಉದ್ಘಾಟನಾ ಕಾರ್ಯಕ್ರಮ ಬಹಿಷ್ಕರಿಸಿದ್ದರೂ ಹಾಜರಾದ ರಾಜ್ಯಸಭೆಯ ಉಪಸಭಾಪತಿ : ಜೆಡಿಯು ತೀವ್ರ ಅಸಮಾಧಾನ

ಪಾಟ್ನಾ: ಪಕ್ಷವು ನೂತನ ಸಂಸತ್ ಭವನದ ಉದ್ಘಾಟನಾ ಕಾರ್ಯಕ್ರಮವನ್ನು ಬಹಿಷ್ಕರಿಸಿದರೂ ಸಮಾರಂಭದಲ್ಲಿ ಪಾಲ್ಗೊಂಡಿದ್ದಕ್ಕಾಗಿ ರಾಜ್ಯಸಭೆ ಉಪ ಸಭಾಪತಿ ಹರಿವಂಶ್ ವಿರುದ್ಧ ಜೆಡಿಯು ಮುಖ್ಯ ವಕ್ತಾರ ನೀರಜಕುಮಾರ ಅವರು ಸೋಮವಾರ ವಾಗ್ದಾಳಿ ನಡೆಸಿದ್ದಾರೆ. “ಪತ್ರಿಕೋದ್ಯಮಕ್ಕೆ ನಿಮ್ಮ ಕೊಡುಗೆಯನ್ನು ಗುರುತಿಸಿ ಪಕ್ಷವು ನಿಮ್ಮನ್ನು ರಾಜ್ಯಸಭೆಗೆ ಕಳುಹಿಸಿದೆ. ಆದರೆ ದೇಶದ ಸಂಸದೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಕರಾಳ ಅಧ್ಯಾಯವಾದಾಗ, ನಿಮ್ಮ ಉನ್ನತ … Continued

ಮೈಸೂರು: ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿ 10 ಮಂದಿ ಸಾವು

ಮೈಸೂರು: ಮೈಸೂರಿನ ಟಿ ನರಸಿಪುರ ಸಮೀಪ ಖಾಸಗಿ ಬಸ್‌ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಹತ್ತು ಜನರು ಹತ್ತು ಮಂದಿ ಮೃತಪಟ್ಟ ಘಟನೆ ವರದಿಯಾಗಿದ್ದು, ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಇನ್ನೋವಾ ಕಾರಿನಲ್ಲಿ ಒಂದೇ ಕುಟುಂಬದ ಪ್ರಯಾಣಿಕರು ಮೈಸೂರು ಪ್ರವಾಸಕ್ಕೆ ಆಗಮಿಸಿದ್ದರು. ಟಿ ನರಸಿಪುರ ಸಮೀಪದಕುರುಬೂರು ಗ್ರಾಮದ ಪಿಂಜರ ಪೋಳ … Continued

ಮುಂದಿನ ಪೀಳಿಗೆಯ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಇಸ್ರೋ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಜಿಎಸ್‌ಎಲ್‌ವಿ ರಾಕೆಟ್‌ನಲ್ಲಿ ನ್ಯಾವಿಗೇಷನ್ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಹಾರಾಟದ ಸುಮಾರು 20 ನಿಮಿಷಗಳ ನಂತರ, ರಾಕೆಟ್ ಸುಮಾರು 251 ಕಿಮೀ ಎತ್ತರದಲ್ಲಿ ಜಿಯೋಸಿಂಕ್ರೋನಸ್ ವರ್ಗಾವಣೆ ಕಕ್ಷೆಯಲ್ಲಿ (ಜಿಟಿಒ) ಉಪಗ್ರಹವನ್ನು ನಿಯೋಜಿಸಿತು ಎಂದು ಇಸ್ರೋ ಹೇಳಿದೆ. ನ್ಯಾವಿಗೇಷನ್ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಯಲ್ಲಿ ಇರಿಸಲಾಗಿದೆ.”ನಾವು ಈಗ … Continued

ಮಣಿಪುರದಲ್ಲಿ ಮತ್ತೆ ಹಿಂಸಾಚಾರ, ಪೊಲೀಸರು ಸೇರಿ 5 ಮಂದಿ ಸಾವು, 12 ಮಂದಿಗೆ ಗಾಯ

ಇಂಫಾಲ: ಮಣಿಪುರದಲ್ಲಿ ನಿನ್ನೆ, ಭಾನುವಾರ ಹೊಸದಾಗಿ ಹಿಂಸಾಚಾರ ಭುಗಿಲೆದ್ದಿದ್ದು,ಓರ್ವ ಪೊಲೀಸ್ ಸೇರಿದಂತೆ ಕನಿಷ್ಠ ಐವರು ಸಾವಿಗೀಡಾಗಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ. ಹಿಂಸಾಚಾರ ಪೀಡಿತ ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗೆ ಗಂಟೆಗಳ ಮೊದಲು ಮತ್ತೆ ಹಿಂಸಾಚಾರ ನಡೆದಿದೆ. ಗೃಹ ಸಚಿವ ಅಮಿತ್ ಶಾ ಇಂದು ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ. ಕಳೆದ ತಿಂಗಳಲ್ಲಿ … Continued

ನೂತನ ಸಂಸತ್ ಭವನ ಉದ್ಘಾಟನೆ ಸ್ಮರಣಾರ್ಥ 75 ರೂ. ನಾಣ್ಯ ಬಿಡುಗಡೆ ಮಾಡಲಿರುವ ಕೇಂದ್ರ ಸರ್ಕಾರ: ಇದರ ವಿಶೇಷತೆ ಏನು..?

ನವದೆಹಲಿ : ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ ಆಚರಿಸುತ್ತಿರುವ ಭಾರತದ ಗೌರವದ ಗುರುತಾಗಿಯೂ ಕಾರ್ಯನಿರ್ವಹಿಸುತ್ತದೆ. ನಾಣ್ಯದ ಒಂದು ಬದಿಯು ಅಶೋಕ ಸ್ತಂಭದ ಸಿಂಹದ ಲಾಂಛನ ಹೊಂದಿರುತ್ತದೆ, ಅದರ ಕೆಳಗೆ “ಸತ್ಯಮೇವ … Continued

ನೂತನ ಸಂಸತ್ತಿನ ಉದ್ಘಾಟನೆ: ಮೇ 28ರ ಸಮಾರಂಭದಲ್ಲಿ ಯಾವ ಪಕ್ಷಗಳು ಪಾಲ್ಗೊಳ್ಳುತ್ತಿವೆ..? ಯಾವ್ಯಾವ ಪಕ್ಷಗಳು ಬಹಿಷ್ಕರಿಸುತ್ತಿವೆ..?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಕಟ್ಟಡವನ್ನು ಉದ್ಘಾಟನೆ ಮಾಡುವುದನ್ನು ಪ್ರತಿಪಕ್ಷಗಳು ವಿರೋಧಿಸುತ್ತಿರುವ ಕಾರಣ ನೂತನ ಸಂಸತ್ ಭವನದ ಉದ್ಘಾಟನೆ ಈಗ ಚರ್ಚೆಗೆ ಗ್ರಾಸವಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಕಟ್ಟಡವನ್ನು ಉದ್ಘಾಟಿಸಬೇಕೇ ಹೊರತು ಪ್ರಧಾನಿಯಲ್ಲ ಎಂಬುದು ವಿರೋಧ ಪಕ್ಷದ ಅಭಿಪ್ರಾಯವಾಗಿದೆ. ಪ್ರತಿಭಟನೆಯ ಸಂಕೇತವಾಗಿ, 21 ವಿರೋಧ ಪಕ್ಷಗಳು ಸಮಾರಂಭವನ್ನು ಬಹಿಷ್ಕರಿಸುವುದಾಗಿ ಘೋಷಿಸಿವೆ, … Continued

ಶನಿವಾರ 24 ಶಾಸಕರಿಂದ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ: ಮೂಲಗಳು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಇನ್ನೂ 24 ಸಚಿವರು ಶನಿವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ದೆಹಲಿಯಲ್ಲಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮತ್ತು ಪಕ್ಷದ ಕೇಂದ್ರ ನಾಯಕರ ನಡುವೆ ನಡೆದ ಸಭೆಯಲ್ಲಿ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿಗಳು ಶುಕ್ರವಾರ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ನಂತರ … Continued