ತಡರಾತ್ರಿ ಮೊಬೈಲ್‌ನಲ್ಲಿ ಮಾತಾಡಬೇಡ ಎಂದು ಹೇಳಿದ್ದಕ್ಕೆ ಅತ್ತೆಯನ್ನೇ ಕೊಂದ ಸೊಸೆ…!

ದಾಮೋಹ್ (ಮಧ್ಯಪ್ರದೇಶ) : ತನ್ನ ಅತ್ತೆ ತಡರಾತ್ರಿ ಮೊಬೈಲ್ ಫೋನ್‌ನಲ್ಲಿ ನಿರಂತರವಾಗಿ ಮಾತನಾಡುವುದನ್ನು ವಿರೋಧಿಸಿದ್ದಕ್ಕೆ ಮಹಿಳೆಯೊಬ್ಬಳು ತನ್ನ ಅತ್ತೆಯನ್ನೇ ಕೊಲೆ ಮಾಡಿದ ಘಟನೆ ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ನಡೆದಿದೆ. ಮೃತನ ಮಗ ಅಜಯ್ ಬರ್ಮನ್ ತನ್ನ ತಾಯಿಯ ಅನುಮಾನಾಸ್ಪದ ಸಾವಿನ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದಾಗ ವಿಷಯ ಬೆಳಕಿಗೆ ಬಂದಿದೆ. ಸ್ಥಳಕ್ಕಾಗಮಿಸಿದ ಪೊಲೀಸರಿಗೆ ಗಾಯದ ಗುರುತುಗಳಿದ್ದ … Continued

ಪ್ರವಾದಿ ಹೇಳಿಕೆ ವಿವಾದ: ಜಾರ್ಖಂಡ್‌ನ ರಾಂಚಿಯಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರ ಸಾವು

ರಾಂಚಿ: ಇಬ್ಬರು ಅಮಾನತುಗೊಂಡಿರುವ ಬಿಜೆಪಿ ವಕ್ತಾರರು ಪ್ರವಾದಿ ಮೊಹಮ್ಮದ್ ಕುರಿತು ಮಾಡಿದ ಹೇಳಿಕೆಗಳಿಗೆ ಸಂಬಂಧಿಸಿದಂತೆ ರಾಂಚಿಯಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು ಭದ್ರತಾ ಸಿಬ್ಬಂದಿ ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಯಾವುದೇ ಪರಿಸ್ಥಿತಿಯನ್ನು ನಿಯಂತ್ರಿಸಲು ಸಿಆರ್‌ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಆದೇಶಗಳನ್ನು ಜಾರಿಗೊಳಿಸಲಾಗಿದ್ದು, ಸುಖದೇವ್ … Continued

ಭಾರತದಲ್ಲಿ ಏರುತ್ತಿದೆ ಕೊರೊನಾ ಪ್ರಕರಣ… ಕಳೆದ 24 ಗಂಟೆಗಳಲ್ಲಿ 8,329 ಹೊಸ ಪ್ರಕರಣಗಳು ದಾಖಲು. ಸಕ್ರಿಯ ಪ್ರಕರಣಗಳಲ್ಲಿ ಹೆಚ್ಚಳ

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 8,329 ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದಾಗಿ 10 ಸಾವುಗಳು ಸಂಭವಿಸಿವೆ. ಭಾರತದಲ್ಲಿ ಕೋವಿಡ್‌-19 ನ ಒಟ್ಟು ಸಕ್ರಿಯ ಪ್ರಕರಣಗಳು 40,370 ಕ್ಕೆ ಏರಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳು ಇಂದು ತೋರಿಸಿವೆ. ನಿನ್ನೆ 36,267 ಸಕ್ರಿಯ ಪ್ರಕರಣಗಳು ದಾಖಲಾಗಿತ್ತು. 24 ಗಂಟೆಗಳ ಅವಧಿಯಲ್ಲಿ ಸಕ್ರಿಯ ಕೋವಿಡ್‌-19 … Continued

ರಾಜ್ಯಸಭಾ ಚುನಾವಣೆ: ಮಹಾರಾಷ್ಟ್ರದಲ್ಲಿ 3 ಸ್ಥಾನಗಳನ್ನು ಗೆದ್ದು ಆಡಳಿತಾರೂಢ ಎಂವಿಎ ಮೈತ್ರಿಕೂಟಕ್ಕೆ ಆಘಾತ ನೀಡಿದ ಬಿಜೆಪಿ, ಹತ್ಯಾಣದಲ್ಲಿ ಕಾಂಗ್ರೆಸ್‌ಗೆ ಶಾಕ್‌…!

ನವದೆಹಲಿ: ಕ್ರಾಸ್ ವೋಟಿಂಗ್, ನಿಯಮ ಉಲ್ಲಂಘನೆ, ಆರೋಪ-ಪ್ರತ್ಯಾರೋಪಗಳಿಂದಾಗಿ ಗಂಟೆಗಟ್ಟಲೆ ಮತ ಎಣಿಕೆ ನಂತರ, ತೀವ್ರ ಹೋರಾಟದ ರಾಜ್ಯಸಭಾ ಚುನಾವಣೆಯ ಫಲಿತಾಂಶವನ್ನು ಶನಿವಾರ ನಸುಕಿನಲ್ಲಿ ಪ್ರಕಟಿಸಲಾಯಿತು. ಮಹಾರಾಷ್ಟ್ರ, ರಾಜಸ್ಥಾನ, ಹರಿಯಾಣ ಮತ್ತು ಕರ್ನಾಟಕ ಈ ನಾಲ್ಕು ರಾಜ್ಯಗಳ 16 ಸ್ಥಾನಗಳಲ್ಲಿ ಬಿಜೆಪಿ ಎಂಟನ್ನು ಗೆದ್ದು ಸಂಸತ್ತಿನ ಮೇಲ್ಮನೆಯಲ್ಲಿ ತನ್ನ ಸ್ಥಾನವನ್ನು ಬಲಪಡಿಸಿಕೊಂಡಿತು. ಸಾಂಪ್ರದಾಯಿಕ ಎದುರಾಳಿ ಕಾಂಗ್ರೆಸ್ ಐದು … Continued

ಪ್ರವಾದಿ ಇಂದು ಬದುಕಿದ್ದರೆ…: ಪ್ರತಿಭಟನೆ ಭುಗಿಲೇಳುತ್ತಿದ್ದಂತೆ ತಸ್ಲೀಂ ನಸ್ರೀನ್ ಹೇಳಿಕೆ

ನವದೆಹಲಿ: ಬಾಂಗ್ಲಾದೇಶದ ಲೇಖಕಿ ತಸ್ಲೀಮಾ ನಸ್ರೀನ್ ಅವರು ಪ್ರವಾದಿ ಮುಹಮ್ಮದ್ ಕುರಿತು ಭಾರತೀಯ ಜನತಾ ಪಕ್ಷದ ಅಮಾನತುಗೊಂಡಿರುವ ವಕ್ತಾರರಾದ ನೂಪುರ್ ಶರ್ಮಾ ಹೇಳಿಕೆಗಳ ಕುರಿತು ನಡೆಯುತ್ತಿರುವ ಪ್ರತಿಭಟನೆಯನ್ನು ಖಂಡಿಸಿದ್ದಾರೆ. ಟ್ವಿಟರ್‌ನಲ್ಲಿ ತಸ್ಲೀಮಾ ನಸ್ರೀನ್ ಪ್ರವಾದಿ ಮುಹಮ್ಮದ್ ಕುರಿತಾದ ಹೇಳಿಕೆಗಳ ಬಗ್ಗೆ ಭುಗಿಲೆದ್ದಿರುವ ಹಿಂಸಾತ್ಮಕ ಪ್ರತಿಭಟನೆ ಖಂಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಪ್ರವಾದಿ ಮುಹಮ್ಮದ್ … Continued

ಸೋನಿಯಾ ಗಾಂಧಿಗೆ ಹೊಸ ಸಮನ್ಸ್ ನೀಡಿದ ಇಡಿ: ಜೂನ್ 23ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋವಿಡ್-19 ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಹಾಜರಾಗಲು ಜಾರಿ ನಿರ್ದೇಶನಾಲಯ (ಇಡಿ) ಹೊಸ ದಿನಾಂಕ ನಿಗದಿ ಮಾಡಿದ್ದು ಜೂನ್ 23 ರಂದು ಹಾಜರಾಗಲು ಸೋನಿಯಾ ಗಾಂಧಿಯವರಿಗೆ ಸಮನ್ಸ್ ನೀಡಿದೆ. ಇದಕ್ಕೂ ಮೊದಲು, ಜೂನ್ 8 ಕ್ಕೆ … Continued

ಕೋಲ್ಕತ್ತಾದ ಬಾಂಗ್ಲಾದೇಶದ ಡೆಪ್ಯುಟಿ ಹೈಕಮಿಷನ್ ಹೊರಗೆ ಬೇಕಾಬಿಟ್ಟಿ ಗುಂಡು ಹಾರಿಸಿದ ಪೊಲೀಸ್‌, ನಂತರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಕೋಲ್ಕತ್ತಾ: ಇಂದು, ಶುಕ್ರವಾರ ಮಧ್ಯಾಹ್ನ ಕೋಲ್ಕತ್ತಾದ ಬಾಂಗ್ಲಾದೇಶ ಹೈಕಮಿಷನ್‌ನ ಹೊರಗೆ ಕೋಲ್ಕತ್ತಾ ಪೊಲೀಸ್ ಸಶಸ್ತ್ರ ಪೊಲೀಸ್ ಪೇದೆಯೊಬ್ಬರು ಗುಂಡಿನ ದಾಳಿ ನಡೆಸಿದ್ದು, ಓರ್ವ ಮಹಿಳೆ ಸೇರಿದಂತೆ ಇಬ್ಬರು ಸಾವಿಗೀಡಾಗಿದ್ದಾರೆ. ಚೋಡುಪ್ ಲೆಪ್ಚಾ ಎಂದು ಗುರುತಿಸಲಾದ ಪೊಲೀಸ್, ಒಂದು ಗಂಟೆ ಕಾಲ ಪ್ರದೇಶದಲ್ಲಿ ಅಡ್ಡಾಡುತ್ತಿದ್ದ ಎಂದು ಹೇಳಲಾಗಿದೆ. ನಂತರ ಇದ್ದಕ್ಕಿದ್ದಂತೆ ಗುಂಡು ಹಾರಿಸಿದ್ದಾನೆ. ನಂತರ ಅವನು ತನ್ನ … Continued

ಹಿಂಸಾಚಾರಕ್ಕೆ ತಿರುಗಿದ ಪ್ರವಾದಿ ಕುರಿತ ಹೇಳಿಕೆಗಳ ವಿರುದ್ಧದ ಪ್ರತಿಭಟನೆ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಚೇರಿಗೆ ಬೆಂಕಿ

ಕೋಲ್ಕತ್ತಾ: ಶುಕ್ರವಾರ, ಜೂನ್ 10 ರಂದು ಹೌರಾದ ಉಲುಬೇರಿಯಾ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷದ ಕಚೇರಿಯನ್ನು ಪ್ರತಿಭಟನಾಕಾರರು ಧ್ವಂಸಗೊಳಿಸಿದ್ದಾರೆ ಮತ್ತು ಸುಟ್ಟು ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಬಿಜೆಪಿ ನಾಯಕರೊಬ್ಬರು ಸುಟ್ಟ ಪಕ್ಷದ ಕಚೇರಿಯ ವೀಡಿಯೊವನ್ನು ಟ್ವೀಟ್ ಮಾಡಿದ್ದಾರೆ ಹಾಗೂ ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಗೃಹ-ಪೊಲೀಸ್ ಸಚಿವೆ ಮಮತಾ ಬ್ಯಾನರ್ಜಿ … Continued

ಪ್ರವಾದಿ ಕುರಿತು ವಿವಾದಾತ್ಮ ಹೇಳಿಕೆ ವಿರುದ್ಧ ದೆಹಲಿ, ಉತ್ತರ ಪ್ರದೇಶ, ಕೋಲ್ಕತ್ತಾ ಬೀದಿಗಳಲ್ಲಿ ಪ್ರತಿಭಟನೆ

ನವದೆಹಲಿ: ಇದೀಗ ಅಮಾನತುಗೊಂಡಿರುವ ಬಿಜೆಪಿ ನಾಯಕ ನೂಪುರ್ ಶರ್ಮಾ ಅವರು ಪ್ರವಾದಿ ಮುಹಮ್ಮದ್ ಕುರಿತು ಮಾಡಿದ ಹೇಳಿಕೆಗಳ ವಿರುದ್ಧ ಶುಕ್ರವಾರ ಹಲವು ರಾಜ್ಯಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಶುಕ್ರವಾರದ ಪ್ರಾರ್ಥನೆಯ ನಂತರ ದೆಹಲಿ, ಉತ್ತರ ಪ್ರದೇಶ, ತೆಲಂಗಾಣ ಮತ್ತು ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆಗಳನ್ನು ನಡೆಸಲಾಯಿತು. ಬಿಜೆಪಿಯು ವಿವಾದದಿಂದ ದೂರವಿರಲು ಪ್ರಯತ್ನಿಸಿತು, ಟೀಕೆಗಳು “ವೈಯಕ್ತಿಕ ಹೇಳಿಕೆಗಳು” ಎಂದು ಬಿಜೆಪಿ … Continued

ಮೂರು ತಿಂಗಳ ಬಳಿಕ ಭಾರತದಲ್ಲಿ ಹೊಸದಾಗಿ 7,584 ಕೊರೊನಾ ಸೋಂಕು ದಾಖಲು…!

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 7,584 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಮೂರು ತಿಂಗಳ ಬಳಿಕ ಅತಿ ಹೆಚ್ಚು ದೈನಂದಿನ ಪ್ರಕರಣಗಳು ದಾಖಲಾದಂತಾಗಿದೆ. ಕಳೆದ ಮೂರು ತಿಂಗಳಿನಿಂದ ಪ್ರತಿನಿತ್ಯ 3 ಸಾವಿರ ಆಸು-ಪಾಸಿನಲ್ಲಿ ಪ್ರಕರಣಗಳು ವರದಿಯಾಗುತ್ತಿದ್ದು. ಈಗ ದಿಢೀರ್ ಏರಿಕೆ ಕಂಡಿದೆ. ಕಳೆದ 24 ಗಂಟೆಗಳಲ್ಲಿ 24 ಮಂದಿ ಕೊರೊನಾದಿಂದ ಸಾವಿಗೀಡಾಗಿದ್ದಾರೆ. ಒಟ್ಟು ಸೋಂಕಿತರ … Continued