ಜ್ಞಾನವಾಪಿ ಮಸೀದಿ ವಿವಾದ: ಇಂದು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ

ನವದೆಹಲಿ: ವಾರಾಣಸಿಯ ಗ್ಯಾನವಾಪಿ ಮಸೀದಿಯ ಸರ್ವೆ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು, ಮಂಗಳವಾರ ವಿಚಾರಣೆ ನಡೆಸಲಿದೆ. ಜ್ಞಾನವಾಪಿ ಮಸೀದಿಯ ಸಮೀಕ್ಷೆಗೆ ವಾರಾಣಸಿ ನ್ಯಾಯಾಲಯದ ಆದೇಶದ ವಿರುದ್ಧ ಅಂಜುಮನ್ ಮಸೀದಿ ಸಮಿತಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ. ಸೋಮವಾರ ಮುಂಜಾನೆ, ವಾರಾಣಸಿಯ ನ್ಯಾಯಾಲಯವು ‘ಶಿವಲಿಂಗ’ ಪತ್ತೆಯಾದ ಜಾಗವನ್ನು … Continued

ಆಪ್ಟಿಕಲ್ ಇಲ್ಯೂಷನ್: ಈ ಕಪ್ಪು ಮತ್ತು ಬಿಳಿ ಚಿತ್ರದಲ್ಲಿ 8 ಪ್ರಾಣಿಗಳು ಅಡಗಿವೆ, ಎಲ್ಲವನ್ನೂ ಕಂಡುಹಿಡಿಯಬಹುದೇ..?

ವೈರಲ್ ಆಪ್ಟಿಕಲ್ ಇಲ್ಯೂಷನ್: ಆಪ್ಟಿಕಲ್ ಭ್ರಮೆಗಳು (ಇಲ್ಯೂಷನ್ಸ್‌) ಮತ್ತು ಪಿಕ್ಚರ್ ಪಜಲ್‌ಗಳು ನಮ್ಮ ಮನಸ್ಸಿಗೆ ಸವಾಲು ಹಾಕುವ ಕಾರಣ ಅಂತರ್ಜಾಲದಲ್ಲಿ ಜನಪ್ರಿಯ. ನಮ್ಮ ವ್ಯಕ್ತಿತ್ವದ ವಿವಿಧ ಅಂಶಗಳನ್ನು ಬಹಿರಂಗಪಡಿಸುವ ಇಂತಹ ಮನಸ್ಸಿಗೆ ಮುದ ನೀಡುವ ಮತ್ತು ಆಸಕ್ತಿದಾಯಕ ಆಪ್ಟಿಕಲ್ ಇಲ್ಯೂಷನ್ ಪರೀಕ್ಷೆಗಳಿಂದ ಇಂಟರ್ನೆಟ್ ತುಂಬಿದೆ. ಕೆಲವರು ಕಣ್ಣಿನ ದೃಷ್ಟಿ, ಏಕಾಗ್ರತೆಯ ಮಟ್ಟ, ವೀಕ್ಷಣಾ ಕೌಶಲ್ಯ ಮತ್ತು … Continued

ಶರದ್ ಪವಾರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ನಟಿಯನ್ನು ಮನೆಗೆ ಕರೆದೊಯ್ದು ಎಲೆಕ್ಟ್ರಾನಿಕ್ಸ್ ಸಾಕ್ಷ್ಯ ಸಂಗ್ರಹ

ಮುಂಬೈ: ಎನ್‌ಸಿಪಿ ಅಧ್ಯಕ್ಷ ಶರದ ಪವಾರ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದ ಮೇಲೆ ಎರಡು ದಿನಗಳ ಹಿಂದೆ ಬಂಧನಕ್ಕೊಳಗಾಗಿದ್ದ ಮರಾಠಿ ನಟಿ ಕೇತಕಿ ಚಿತಳೆ ಅವರನ್ನು ಇಂದು, ಸೋಮವಾರ ನವಿ ಮುಂಬೈನ ಕಲಾಂಬೋಲಿಯಲ್ಲಿರುವ ಅವರ ಮನೆಗೆ ಕರೆತರಲಾಯಿತು. ಪೊಲೀಸರು ಎಲೆಕ್ಟ್ರಾನಿಕ್ ಪುರಾವೆಗಳನ್ನು ಸಂಗ್ರಹಿಸಿದರು. ಒಂದು ಗಂಟೆ ಕಾಲ ಕೇತಕಿ ನಿವಾಸದಲ್ಲಿದ್ದ … Continued

ಸತ್ತ ತಾಯಿ ತನ್ನೊಂದಿಗೆ ಶಾಶ್ವತವಾಗಿರುವಂತೆ ಮಾಡಲು ಪ್ಲಾಸ್ಟಿಕ್ ಬ್ಯಾರೆಲ್‌ನಲ್ಲಿ ಸಿಮೆಂಟ್‌ ಹಾಕಿ ಶವ ಹೂತಿಟ್ಟ ಮಗ…!

ಚೆನ್ನೈ: ವಿಲಕ್ಷಣ ಘಟನೆಯೊಂದರಲ್ಲಿ, 53 ವರ್ಷದ ವ್ಯಕ್ತಿಯೊಬ್ಬರು ತನ್ನ ಮೃತ ತಾಯಿಯ ಶವವನ್ನು ಪ್ಲಾಸ್ಟಿಕ್ ಬ್ಯಾರೆಲ್‌ನಲ್ಲಿ ಎಸೆದು ಕಾಂಕ್ರೀಟ್ ಮಿಶ್ರಣವನ್ನು ಸುರಿದು, ‘ತನ್ನ ತಾಯಿಯನ್ನು ಶಾಶ್ವತವಾಗಿ ತನ್ನೊಂದಿಗೆ ಇಟ್ಟುಕೊಳ್ಳುವುದಾಗಿ ಹೇಳಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 86 ವರ್ಷದ ವೃದ್ಧೆ ಕೆ. ಶೆಂಬಗಂ ಅವರು ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ಹೆಚ್ಚಿನ ಸಮಯ ಮನೆಯಲ್ಲಿಯೇ … Continued

ಭಾರತದಿಂದ ರಫ್ತು ನಿಷೇಧದ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗೋಧಿ ಬೆಲೆ ದಾಖಲೆ ಏರಿಕೆ

ನವದೆಹಲಿ: ತೀವ್ರ ತಾಪಮಾನದಿಂದಾಗಿ ಗೋಧಿ ಉತ್ಪನ್ನದ ಮೇಲೆ ಪರಿಣಾಮದಿಂದ ಗೋಧಿ ರಫ್ತು ನಿಷೇಧಿಸಲು ಭಾರತ ನಿರ್ಧರಿಸಿದ ನಂತರ ಜಾಗತಿಕ ಮಾರುಕಟ್ಟೆಯಲ್ಲಿ ಸೋಮವಾರ ಗೋಧಿ ಬೆಲೆ ದಾಖಲೆಯ ಮಟ್ಟಕ್ಕೆ ಏರಿದೆ. ಯುರೋಪ್ ಮಾರುಕಟ್ಟೆ ಸೋಮವಾರ ಬೆಳಗ್ಗೆ ವಹಿವಾಟು ಆರಂಭವಾಗುತ್ತಿದ್ದಂತೆ ಗೋಧಿ ಬೆಲೆ ಪ್ರತಿ ಟನ್‌ಗೆ 435 ಯುರೋಗಳಿಗೆ ($453) ಜಿಗಿದಿದೆ. ಈ ಹಿಂದೆ ಜಾಗತಿಕ ರಫ್ತಿನ ಶೇಕಡ … Continued

ಕಾಶ್ಮೀರ್ ಫೈಲ್ಸ್ ಸಿನಿಮಾದಿಂದ ಜಮ್ಮು -ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಪ್ರಚೋದನೆ: ಮೆಹಬೂಬಾ ಮುಫ್ತಿ

ಜಮ್ಮು: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರ್ ಫೈಲ್ಸ್ ಸಿನಿಮಾ ಭಯೋತ್ಪಾದನೆಗೆ ಪ್ರಚೋದನೆ ನೀಡಿದೆ ಎಂದು ಪಿಡಿಪಿ ಮುಖ್ಯಸ್ಥೆ ಮೆಹಾಬೂಬಾ ಮುಫ್ತಿ ಆರೋಪಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ವಾಸ್ತವ ಸಂಗತಿಯನ್ನು ಮುಚ್ಚಿಡುವ ಮೂಲಕ ಹಿಂದೂ-ಮುಸ್ಲಿಂರ ವಿವಾದವನ್ನಾಗಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಜಮ್ಮು ಮತ್ತು ಕಅಶ್ಮೀರದಲ್ಲಿ ನಾವು ಕಾಶ್ಮೀರಿ ಪಂಡಿತರಿಗೆ ಸುರಕ್ಷಿತ … Continued

ಜ್ಞಾನವಾಪಿ ಮಸೀದಿ ವೀಡಿಯೊಗ್ರಫಿ ಸಮೀಕ್ಷೆ: ಶಿವಲಿಂಗ ಪತ್ತೆಯಾಗಿದೆ ಎಂದು ಹಿಂದೂ ಅರ್ಜಿದಾರರ ಹೇಳಿಕೆ; ಪ್ರದೇಶ ಸೀಲ್‌ ಮಾಡಲು ಕೋರ್ಟ್‌ ಆದೇಶ

ವಾರಾಣಸಿ: ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ಕೊಳದಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ಹಿಂದೂ ಅರ್ಜಿದಾರರು ನೀಡಿದ ಹೇಳಿಕೆಯ ನಂತರ, ನ್ಯಾಯಾಲಯವು ಅದನ್ನು ಸಾರ್ವಜನಿಕರಿಗೆ ನಿರ್ಬಂಧಿಸಿ ಸೀಲ್‌ ಮಾಡುವಂತೆ ಇಂದು, ಸೋಮವಾರ ಆದೇಶಿಸಿದೆ. ಮಸೀದಿಯ ಹಿಂದಿರುವ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಲು ಪ್ರವೇಶ ಕೋರಿ ಅರ್ಜಿ ಸಲ್ಲಿಸಿದ ನಂತರ ಮಸೀದಿ ಸಂಕೀರ್ಣದ ನ್ಯಾಯಾಲಯದ ಆದೇಶದ ಪ್ರಕಾರ … Continued

49 ಡಿಗ್ರಿ ಸೆಲ್ಸಿಯಸ್ ದಾಟಿದ ದೆಹಲಿಯ ತಾಪಮಾನ: ಮನೆಯಿಂದ ಹೊರಬರದಂತೆ ಮನವಿ

ನವದೆಹಲಿ: ಉತ್ತರ ಭಾರತದ ಕೆಲವು ಭಾಗಗಳು ಭಾನುವಾರ ತೀವ್ರ ಶಾಖದ ಅಲೆಯಿಂದ ಬೇಯುತ್ತಿದ್ದು, ದೆಹಲಿ ಮತ್ತು ಉತ್ತರ ಪ್ರದೇಶದ ಸ್ಥಳಗಳಲ್ಲಿ 49 ಡಿಗ್ರಿ ಸೆಲ್ಸಿಯಸ್ ಮತ್ತು ಅದಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗಿದೆ.ಕೇರಳದಾದ್ಯಂತ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಮತ್ತು ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ದೆಹಲಿಯಲ್ಲಿ, ಸಫ್ದರ್‌ಜಂಗ್ ವೀಕ್ಷಣಾಲಯವು 45.6 … Continued

ಪೋಪ್‌ರಿಂದ ಸಂತ ಎಂದು ಘೋಷಿಸಲ್ಪಟ್ಟ ಮೊದಲನೇ ಭಾರತೀಯ ದೇವಸಹಾಯಂ ಪಿಳ್ಳೈ

ವ್ಯಾಟಿಕನ್ ಸಿಟಿ: 18ನೇ ಶತಮಾನದಲ್ಲಿ ಕ್ರೈಸ್ತ ಧರ್ಮ ಸ್ವೀಕರಿಸಿದ ದೇವಸಹಾಯಂ ಪಿಳ್ಳೈ ಅವರನ್ನು ಭಾನುವಾರ ವ್ಯಾಟಿಕನ್‌ನಲ್ಲಿ ಪೋಪ್ ಫ್ರಾನ್ಸಿಸ್ ಅವರು ಸಂತ ಎಂದು ಘೋಷಿಸಿದ್ದಾರೆ ಹಾಗೂ ಅವರು ಸಂತ ಪದವಿ ಪಡೆದ ಮೊದಲ ಭಾರತೀಯರಾಗಿದ್ದಾರೆ. ಕೊಟ್ಟಾರ್ ಡಯಾಸಿಸ್, ತಮಿಳುನಾಡು ಬಿಷಪ್ಸ್ ಕೌನ್ಸಿಲ್ ಮತ್ತು ಕಾನ್ಫರೆನ್ಸ್ ಆಫ್ ಕ್ಯಾಥೋಲಿಕ್ ಬಿಷಪ್ಸ್ ಆಫ್ ಇಂಡಿಯಾದ ಕೋರಿಕೆಯ ಮೇರೆಗೆ 2004 … Continued

ತೊರೆಯಿರಿ ಅಥವಾ ಸಾವನ್ನು ಎದುರಿಸಿ: ಪುಲ್ವಾಮಾದಲ್ಲಿ ಕಾಶ್ಮೀರಿ ಪಂಡಿತರಿಗೆ ಬೆದರಿಕೆ ಹಾಕಿದ ಭಯೋತ್ಪಾದಕರ ಗುಂಪು..!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಹವಾಲ್ ಟ್ರಾನ್ಸಿಟ್ ವಸತಿಗೃಹದಲ್ಲಿ ನೆಲೆಸಿರುವ ಕಾಶ್ಮೀರಿ ಪಂಡಿತರಿಗೆ ಲಷ್ಕರ್-ಎ-ಇಸ್ಲಾಂ ಎಂಬ ಭಯೋತ್ಪಾದಕ ಸಂಘಟನೆ ಬೆದರಿಕೆ ಹಾಕಿದೆ. ವಲಸಿಗರ ಕಾಲೋನಿ ಅಧ್ಯಕ್ಷರನ್ನು ಉದ್ದೇಶಿಸಿ ಬರೆದ ಪತ್ರದಲ್ಲಿ, ಗುಂಪು ಎಲ್ಲಾ ‘ವಲಸಿಗರು ಮತ್ತು ಆರ್‌ಎಸ್‌ಎಸ್ ಏಜೆಂಟರಿಗೆ’ “ತೊರೆಯಿರಿ ಅಥವಾ ಸಾವನ್ನು ಎದುರಿಸಿ” ಎಂದು ಹೇಳಲಾಗಿದೆ. ಅಲ್ಲದೆ, ಭಯೋತ್ಪಾದಕ ಗುಂಪು “ಕಾಶ್ಮೀರಿ … Continued