ತಿರುಪತಿ ದೇವಸ್ಥಾನದಲ್ಲಿ ಭಕ್ತರ ನೂಕು ನುಗ್ಗಲು, ಮೂವರಿಗೆ ಗಾಯ, ದರ್ಶನಕ್ಕೆ ಟೋಕನ್ ವಿತರಣೆ ಸ್ಥಗಿತ…ವೀಕ್ಷಿಸಿ

ಹೈದರಾಬಾದ್: ತಿರುಪತಿಯ ತಿರುಮಲ ದೇಗುಲದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಂತಹ ಪರಿಸ್ಥಿತಿಯಲ್ಲಿ ಕನಿಷ್ಠ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸರ್ವದರ್ಶನ ಟಿಕೆಟ್ ಪಡೆಯಲು ದೇಗುಲದ ಟಿಕೆಟ್ ಕೌಂಟರ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಾರ್ಥಿಗಳು ಜಮಾಯಿಸಿದ್ದರಿಂದ ನೂಕುನುಗ್ಗಲು ಉಂಟಾಯಿತು.ತಿರುಪತಿಯ ತಿರುಮಲದಲ್ಲಿನ ಟಿಕೆಟ್ ಕೌಂಟರ್‌ಗಳಲ್ಲಿ ಸರ್ವದರ್ಶನ ಟಿಕೆಟ್ ಪಡೆಯಲು 10,000 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಜಮಾಯಿಸಿದ್ದರಿಂದ ನೂಕುನುಗ್ಗಲು ಉಂಟಾಯಿತು ಎಂದು … Continued

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ವಂಚನೆ ಪ್ರಕರಣ: ನೀರವ್ ಮೋದಿಯ ಆಪ್ತನನ್ನು ಈಜಿಪ್ಟಿನಲ್ಲಿ ಬಂಧಿಸಿ ಮುಂಬೈಗೆ ಕರೆತಂದ ಸಿಬಿಐ

ನವದೆಹಲಿ: ಪರಾರಿಯಾಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿಯ ಆಪ್ತ ಸಹಾಯಕ ಸುಭಾಷ್ ಶಂಕರ ಅವರನ್ನು ಕೈರೋದಲ್ಲಿ ಬಂಧಿಸಿದ ನಂತರ ಕೇಂದ್ರೀಯ ತನಿಖಾ ದಳ (ಸಿಬಿಐ) ಮುಂಬೈಗೆ ಕರೆತಂದಿದೆ. ಪ್ರಮುಖ ಕಾರ್ಯಾಚರಣೆಯಲ್ಲಿ ಸಿಬಿಐ ಶಂಕರ ಅವರನ್ನು ಬಂಧಿಸಿದೆ. 2018ರಲ್ಲಿ ಪ್ರಕರಣ ದಾಖಲಾದಾಗಿನಿಂದ ಶಂಕರ ಪರಾರಿಯಾಗಿ ಕೈರೋದಲ್ಲಿ ತಲೆಮರೆಸಿಕೊಂಡಿದ್ದ. ಪಿಎನ್‌ಬಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ಅವರನ್ನು ಮುಂಬೈ … Continued

100 ಬಸ್ಕಿ ಹೊಡೆಯುವ ಶಿಕ್ಷೆ ನೀಡಿದ ಶಿಕ್ಷಕ : ಪ್ರಜ್ಞಾಹೀನರಾದ 7 ವಿದ್ಯಾರ್ಥಿನಿಯರು..!

ಒಡಿಶಾದ ಬೋಲಂಗಿರ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರು ಶಿಕ್ಷೆಯ ರೂಪದಲ್ಲಿ ಬಸ್ಕಿ ತೆಗೆಸಿದ ನಂತರ ಏಳು ವಿದ್ಯಾರ್ಥಿನಿಯರು ಪ್ರಜ್ಞಾಹೀನರಾಗಿದ್ದು, ನಂತರ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಬೇಕಾಯಿತು. ಬೋಲಂಗಿರ್ ಜಿಲ್ಲೆಯ ಪಟ್ನಾಗರ್ ಪ್ರದೇಶದ ಬಾಪೂಜಿ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದೆ. ಶಿಕ್ಷಕನನ್ನು ಬಿಕಾಶ್ ಧರುವಾ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಪ್ರಾರ್ಥನಾ ಅವಧಿ ಮುಗಿದ ನಂತರ ತಡವಾಗಿ ಶಾಲೆಗೆ … Continued

ಯುರೋಪಿನ ಒಂದು ಮಧ್ಯಾಹ್ನಕ್ಕಿಂತ ಕಡಿಮೆ ತೈಲವನ್ನು ಭಾರತ ಒಂದು ತಿಂಗಳಲ್ಲಿ ರಷ್ಯಾದಿಂದ ಖರೀದಿಸುತ್ತದೆ: ಅಮೆರಿಕಕ್ಕೆ ಜೈಶಂಕರ್ ತಿರುಗೇಟು

ವಾಷಿಂಗ್ಟನ್: ಒಂದು ತಿಂಗಳಲ್ಲಿ ರಷ್ಯಾದಿಂದ ಭಾರತದ ಒಟ್ಟು ತೈಲ ಖರೀದಿಯು ಯುರೋಪಿನ ಒಂದು ಮಧ್ಯಾಹ್ನಕ್ಕಿಂತ ಕಡಿಮೆಯಾಗಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಸೋಮವಾರ ಹೇಳಿದ್ದಾರೆ. ನೀವು ತೈಲ ಖರೀದಿಗಳನ್ನು ಉಲ್ಲೇಖಿಸುತ್ತೀರಿ ಎಂದು ನಾನು ಗಮನಿಸಿದ್ದೇನೆ. ನೀವು ರಷ್ಯಾದಿಂದ ಇಂಧನ ಖರೀದಿಯನ್ನು ನೋಡುತ್ತಿದ್ದರೆ, ನಿಮ್ಮ ಗಮನವನ್ನು ಯುರೋಪ್ ಮೇಲೆ ಕೇಂದ್ರೀಕರಿಸಬೇಕೆಂದು ನಾನು ಸಲಹೆ ನೀಡುತ್ತೇನೆ. ನಾವು … Continued

ಇದು ಭರವಸೆ-ಕನಸುಗಳ ಚಿತ್ರ :ಗಂಗಾನದಿ ದಡಕ್ಕೆ ಎಷ್ಟೊಂದು ಓದುಗರ ದಂಡು…ಪರೀಕ್ಷೆಗಾಗಿ ನಡೆಯುತ್ತಿದೆ ಈ ಪರಿಶ್ರಮ..!

ಸರ್ಕಾರಿ ಉದ್ಯೋಗ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಆಕಾಂಕ್ಷಿಗಳ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇತ್ತೀಚೆಗೆ, ಪಾಟ್ನಾದ ಗಂಗಾ ನದಿಯ ದಡದಲ್ಲಿ ನೂರಾರು ವಿದ್ಯಾರ್ಥಿಗಳು ಕುಳಿತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದುತ್ತಿರುವ ಚಿತ್ರಗಳನ್ನು ಪ್ರಸಿದ್ಧ ಉದ್ಯಮಿ ಹರ್ಷ ಗೋಯೆಂಕಾ ಹಂಚಿಕೊಂಡಿದ್ದಾರೆ. ಉದ್ಯಮಿ ಹರ್ಷ ಅವರು ಸಾಮಾಜಿಕ ಮಾಧ್ಯಮದಲ್ಲಿ ಸ್ಫೂರ್ತಿದಾಯಕ ವಿಷಯಗಳನ್ನು ಹಂಚಿಕೊಳ್ಳಲು ಹೆಸರಾಗಿದ್ದಾರೆ. ಬಿಹಾರದ ಪಾಟ್ನಾದಲ್ಲಿ ಗಂಗಾ ನದಿಯ … Continued

ವೇಗವಾಗಿ ಬರುತ್ತಿದ್ದ ರೈಲಿಗೆ ಸಿಲುಕಿ ಐವರು ಸಾವು

ನವದೆಹಲಿ: ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಜಿ ಸಿಗದಂ ಮಂಡಲದ ಬತುವ ಬಳಿ ಸೋಮವಾರ ರಾತ್ರಿ ವೇಗವಾಗಿ ಬರುತ್ತಿದ್ದ ರೈಲಿಗೆ ಸಿಲುಕಿ ಕನಿಷ್ಠ ಐವರು ಮೃತಪಟ್ಟಿದ್ದಾರೆ ಮತ್ತು ಇನ್ನೂ ಕೆಲವರು ಗಾಯಗೊಂಡಿದ್ದಾರೆ. ತಾಂತ್ರಿಕ ದೋಷದಿಂದಾಗಿ ಸಿಕಂದರಾಬಾದ್-ಗುವಾಹತಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಬಟುವಾ ರೈಲ್ವೇ ಗೇಟ್ ಬಳಿ ನಿಲುಗಡೆಯಾಗಿದೆ. ಹೆಚ್ಚಿನ ಉಷ್ಣತೆ ಕಾರಣ, ಕೆಲವು ಪ್ರಯಾಣಿಕರು ತಂಪಾದ ಗಾಳಿಯನ್ನು ಪಡೆಯಲು … Continued

ಉಕ್ರೇನ್ ಯುದ್ಧದ ಬಗ್ಗೆ ಇರುವ ಭಿನ್ನಾಭಿಪ್ರಾಯ ಬದಿಗೆ ಸರಿಸಿ, ಪ್ರಧಾನಿ ಮೋದಿ ಜೊತೆಗಿನ ಶೃಂಗಸಭೆಯಲ್ಲಿ ಭಾರತದ ಮಾನವೀಯ ನೆರವಿನ ಬಗ್ಗೆಯೇ ಮಾತನಾಡಿದ ಅಮೆರಿಕ ಅಧ್ಯಕ್ಷ ಬೈಡನ್‌..!

ನವದೆಹಲಿ: ಉಕ್ರೇನ್‌ ಮೇಲೆ ರಷ್ಯಾದ ಆಕ್ರಮಣದ ವಿಧಾನಗಳ ಕುರಿತು ಭಾರತ ಮತ್ತು ಅಮೆರಿಕ ನಡುವಿನ ಭಿನ್ನಾಭಿಪ್ರಾಯಗಳನ್ನು ಬದಿಗೆ ಸರಿಸಿದ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಉಕ್ರೇನ್‌ಗೆ ಭಾರತದ ಮಾನವೀಯ ನೆರವನ್ನು ಎತ್ತಿ ತೋರಿಸುವ ಮೂಲಕ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ತಮ್ಮ ವರ್ಚುವಲ್ ಶೃಂಗಸಭೆಯನ್ನು ಪ್ರಾರಂಭಿಸಿದರು. ಉಕ್ರೇನ್‌ ಜನರಿಗೆ ಭಾರತದ ಮಾನವೀಯ ಬೆಂಬಲವನ್ನು ನಾನು … Continued

ಪಾಕ್ ನೂತನ ಪ್ರಧಾನಿ ಶೆಹಬಾಜ್ ಷರೀಫ್ ಅಭಿನಂದಿಸಿದ ಮೋದಿ; ಭಾರತ ಭಯೋತ್ಪಾದನೆ ಮುಕ್ತ ಪ್ರದೇಶದಲ್ಲಿ ಶಾಂತಿ ಬಯಸುತ್ತದೆ ಎಂದ ಪ್ರಧಾನಿ

ನವದೆಹಲಿ: ಪಾಕಿಸ್ತಾನದ ಪ್ರಧಾನಿಯಾಗಿ ಆಯ್ಕೆಯಾಗಿರುವ ಶೆಹಬಾಜ್ ಷರೀಫ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಭಿನಂದಿಸಿದ್ದಾರೆ ಮತ್ತು ಭಯೋತ್ಪಾದನೆ ಮುಕ್ತ ಪ್ರದೇಶದಲ್ಲಿ ಭಾರತ ಶಾಂತಿ ಮತ್ತು ಸ್ಥಿರತೆಯನ್ನು ಬಯಸುತ್ತದೆ ಎಂದು ಹೇಳಿದ್ದಾರೆ. ಪಾಕಿಸ್ತಾನದ ಪ್ರಧಾನಿಯಾಗಿ ಆಯ್ಕೆಯಾದ ಮುಹಮ್ಮದ್ ಶೆಹಬಾಜ್ ಷರೀಫ್ ಅವರಿಗೆ ಅಭಿನಂದನೆಗಳು” ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಭಾರತವು ಭಯೋತ್ಪಾದನೆ ಮುಕ್ತ ಪ್ರದೇಶದಲ್ಲಿ ಶಾಂತಿ … Continued

ರೋಪ್‌ವೇ ಅಪಘಾತದ ರಕ್ಷಣಾ ಕಾರ್ಯಾಚರಣೆ ವೇಳೆ ಹೆಲಿಕಾಪ್ಟರ್‌ನಿಂದ ಬಿದ್ದು ವ್ಯಕ್ತಿ ಸಾವು : ಭಯಾನಕ ದೃಶ್ಯ ಸೆರೆ

ನವದೆಹಲಿ: ರಕ್ಷಣಾ ಕಾರ್ಯಾಚರಣೆ ವೇಳೆ ಭಾರತೀಯ ವಾಯುಪಡೆಯ (ಐಎಎಫ್) ಹೆಲಿಕಾಪ್ಟರ್‌ನಿಂದ ವ್ಯಕ್ತಿಯೊಬ್ಬರು ಬಿದ್ದು ಸಾವಿಗೀಡಾದ ಘಟನೆ ಜಾರ್ಖಂಡ್‌ನ ದಿಯೋಘರ್‌ನಲ್ಲಿ ಸೋಮವಾರ ನಡೆದಿದೆ. ಅವರು Mi-17 V5 ಹೆಲಿಕಾಪ್ಟರ್‌ನಿಂದ ರಕ್ಷಣೆ ಮಾಡುವ ಸಮಯದಲ್ಲಿ ಜಾರಿ ಕೆಳಗಿನ ಒರಟಾದ ಬಂಡೆಯ ಮೇಲೆ ಮೇಲೆ ಬಿದ್ದು ಮೃತಪಟ್ಟಿದ್ದಾನೆ, ಇದು ದುರಂತದಲ್ಲಿ ಮೂರನೇ ಸಾವಾಗಿದೆ. ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯ ಬಾಬಾ ಬೈದ್ಯನಾಥ … Continued

ಟಿಎಂಸಿ ನಾಯಕನ ಮಗನ ಜನ್ಮದಿನದ ಪಾರ್ಟಿಯಲ್ಲಿ ಸಾಮೂಹಿಕ ಅತ್ಯಾಚಾರದ ನಂತರ 9ನೇ ತರಗತಿ ಬಾಲಕಿ ಸಾವು; ಬಲವಂತವಾಗಿ ದಹನ

ನಾಡಿಯಾ: ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಹಂಸಖಾಲಿ ಎಂಬಲ್ಲಿ ಇತ್ತೀಚೆಗೆ ಜನ್ಮದಿನದ ಸಮಾರಂಭವೊಂದರಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಸಂತ್ರಸ್ತೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಮುಖ ಆರೋಪಿ ತೃಣಮೂಲ ಕಾಂಗ್ರೆಸ್ ಪಕ್ಷದ ಪಂಚಾಯಿತಿ ಸದಸ್ಯನ ಮಗ ಎಂದು ಬಾಲಕಿಯ ಕುಟುಂಬ ಆರೋಪಿಸಿದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಘಟನೆ ನಡೆದ … Continued