20 ರೂ. ಲಂಚದ ಆರೋಪಕ್ಕೆ 30 ವರ್ಷಗಳ ಕಾನೂನು ಹೋರಾಟ : ಸುಪ್ರೀಂಕೋರ್ಟಿನಿಂದ ಇಬ್ಬರು ಸರ್ಕಾರಿ ನೌಕರರ ಖುಲಾಸೆ

ನವದೆಹಲಿ: ಸುಮಾರು 30 ವರ್ಷಗಳ ಹಿಂದೆ ದಾಖಲಾಗಿದ್ದ 20 ರೂ.ಲಂಚದ ಆರೋಪದ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ಅಂತ್ಯ ಹಾಡಿದೆ. ಲಂಚದ ಬೇಡಿಕೆ ಇಡಲಾಗಿತ್ತು ಎಂಬುದು ಸಾಬೀತಾಗದ ಹಿನ್ನೆಲೆಯಲ್ಲಿ, ಕೇವಲ 20 ರೂ.ಹಣ ವಸೂಲಾತಿ ಆಧಾರದ ಮೇಲೆ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಸುಪ್ರೀಂ ಕೋರ್ಟ್, ಗುಜರಾತ್ ಸರ್ಕಾರದ ಇಬ್ಬರು ನೌಕರರನ್ನು ಖುಲಾಸೆಗೊಳಿಸಿದೆ. ನ್ಯಾಯಮೂರ್ತಿಗಳಾದ ಉಜ್ಜಲ್ … Continued

ವಿದ್ಯಾರ್ಥಿನಿಯರಿಗೆ ಮೂತ್ರ ಬೆರೆಸಿದ ನೀರು ಕುಡಿಸಿದ ಸಹಪಾಠಿ ; ದೂರು ನೀಡಿದರೆ ‘ಬಾಯಿ ರುಚಿ ಕೆಟ್ಟಿದ್ರೆ ಚಾಕೊಲೇಟ್ ತಿನ್ನಿ’ ಎಂದ ಪ್ರಾಂಶುಪಾಲ

ಗುಣಾ: 5ನೇ ತರಗತಿಯ ವಿದ್ಯಾರ್ಥಿಯೊಬ್ಬ ನೀರಿನ ಬಾಟಲಿಗೆ ಮೂತ್ರ ಬೆರೆಸಿ ತನ್ನ ಇಬ್ಬರು ಸಹಪಾಠಿ ವಿದ್ಯಾರ್ಥಿನಿಯರಿಗೆ ಕುಡಿಸಿದ ಆರೋಪ ಮಧ್ಯಪ್ರದೇಶದ ಗುಣಾ ಜಿಲ್ಲೆಯ ಆರೋನ್ ಡೆವಲಪ್‌ಮೆಂಟ್‌ ಬ್ಲಾಕ್‌ ಸರ್ಕಾರಿ ಪ್ರಾಥಮಿಕ ಶಾಲೆಯೊಂದರಲ್ಲಿ ಕೇಳಿಬಂದಿದೆ. ಈ ಬಗ್ಗೆ ವಿದ್ಯಾರ್ಥಿನಿಯರು ಶಾಲೆಯ ಪ್ರಾಂಶುಪಾಲರಿಗೆ ದೂರು ನೀಡಿದಾಗ, ಅವರು ಅಸಂವೇದನಾಶೀಲವಾಗಿ ಪ್ರತಿಕ್ರಿಯಿಸಿ, ಬಾಯಿ ಕೆಟ್ಟ ರುಚಿ ಬರುತ್ತಿದ್ದರೆ ₹10ರ ಚಾಕೊಲೇಟ್ … Continued

ವಿಡಿಯೋ | ಹಫೀಜ್ ಸಯೀದ್ ಕಾಶ್ಮೀರಕ್ಕೆ 10 ಸಾವಿರ ಉಗ್ರರನ್ನು ಕಳುಹಿಸಿದ್ದಾನೆ : ಪಾಕಿಸ್ತಾನದ ನಸೀರ್ ಮದನಿ ಬಹಿರಂಗ ಹೇಳಿಕೆ

ಬಹವಾಲನಗರ: ಈ ತಿಂಗಳ ಆರಂಭದಲ್ಲಿ ಶುಕ್ರವಾರದ ಧಾರ್ಮಿಕ ಪ್ರವಚನ ನೀಡುತ್ತಿದ್ದ ವೇಳೆ ಗಂಭೀರ ಹೃದಯ ಸಂಬಂಧಿತ ತೊಂದರೆಗೆ ಒಳಗಾಗಿದ್ದಾಗಿ ವರದಿಯಾಗಿದ್ದ ಪಾಕಿಸ್ತಾನದ ನಸೀರ್ ಮದನಿ ಮತ್ತೆ ಸಾರ್ವಜನಿಕ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾನೆ. ಆಗಸ್ಟ್ 14ರಂದು ಬಹವಾಲನಗರದಲ್ಲಿ ನಡೆದ ನಿಷೇಧಿತ ಭಯೋತ್ಪಾದಕ ಸಂಘಟನೆಗೆ ಸಂಬಂಧಿಸಿದ ಸಭೆಯಲ್ಲಿ ಮಾತನಾಡಿದ ಮದನಿ, ಲಷ್ಕರ್-ಎ-ತೊಯ್ಬಾ (LeT) ಸಂಸ್ಥಾಪಕ ಹಫೀಜ್ ಸಯೀದ್ ಕುರಿತು ಗಂಭೀರ … Continued

ದೆಹಲಿ ಜಲ ಮಂಡಳಿ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಎಎಪಿ ನಾಯಕ ಸತ್ಯೇಂದ್ರ ಜೈನ್ ಸೇರಿ 6 ಮಂದಿ ಬಂಧನ

ನವದೆಹಲಿ: ಆಮ್ ಆದ್ಮಿ ಪಕ್ಷದ (AAP) ಹಿರಿಯ ನಾಯಕ ಹಾಗೂ ದೆಹಲಿಯ ಮಾಜಿ ಜಲ ಸಚಿವ ಸತ್ಯೇಂದ್ರ ಜೈನ್ ಅವರನ್ನು ದೆಹಲಿ ಜಲ ಮಂಡಳಿ (DJB) ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ಹಾಗೂ ಅವ್ಯವಹಾರ ನಡೆದಿದೆ ಎಂಬ ಆರೋಪದ ಮೇಲೆ ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳ (ACB) ಬಂಧಿಸಿದೆ. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸುಮಾರು 18 … Continued

ಪ್ರಿಯಕರನ ಜೊತೆ ಸೇರಿ ಗಂಡ, 4 ವರ್ಷದ ಮಗನನ್ನು ಉಸಿರುಗಟ್ಟಿಸಿ ಕೊಂದ ಪತ್ನಿ

ಬೆಂಗಳೂರು : ನಗರದ ಚಿಕ್ಕಬಾಣಾವರದಲ್ಲಿ ಗಂಡ ಹಾಗೂ ನಾಲ್ಕು ವರ್ಷದ ಮಗನನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ ಆರೋಪದ ಮೇಲೆ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಮಲಗಿದ್ದಲ್ಲೇ ಪತಿ ಮತ್ತು ನಾಲ್ಕು ವರ್ಷದ ಮುಗ್ಧ ಕಂದಮ್ಮನ ಜೀವ ತೆಗೆದ ಪತ್ನಿ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಆರೋಪಿಗಳನ್ನು ಹರಿಣಿ ಮತ್ತು ವಿನಯಕುಮಾರ ಎಂದು ಗುರುತಿಸಲಾಗಿದೆ. … Continued

ಕೆಪಿಎಸ್‌ಸಿ ಅಧ್ಯಕ್ಷರ ಹುದ್ದೆಯಿಂದ ಶಿವಶಂಕರಪ್ಪ ಸಾಹುಕಾರ ಅಮಾನತುಗೊಳಿಸಿದ್ದ ರಾಜ್ಯಪಾಲರ ಆದೇಶ ರದ್ದುಗೊಳಿಸಿದ ಹೈಕೋರ್ಟ್‌

ಬೆಂಗಳೂರು : ಅಧಿಕಾರ ದುರುಪಯೋಗ ಹಾಗೂ ಸ್ವಜನಪಕ್ಷಪಾತದ ಆರೋಪದಡಿ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಮಂಗಳವಾರ ರದ್ದುಪಡಿಸಿದೆ. ಕೆಪಿಎಸ್‌ಸಿ ಅಧ್ಯಕ್ಷ ಹುದ್ದೆಯಿಂದ ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಶಿವಶಂಕರಪ್ಪ ಎಸ್. ಸಾಹುಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು … Continued

ಎರಡು ಬಾರಿ ಕಚ್ಚಿದ ವಿಷಪೂರಿತ ಹಾವು ; ತೀವ್ರ ಅಸ್ವಸ್ಥಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ ಜೀವ ಉಳಿಸಲು ನೆರವಾದ ಎಐ(AI)

ಗ್ವಾಲಿಯರ್ : ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ವಿಷಕಾರಿ ಹಾವು ಎರಡು ಬಾರಿ ಕಚ್ಚಿದ ಪೊಲೀಸ್ ಹೆಡ್ ಕಾನ್‌ಸ್ಟೆಬಲ್‌ ಒಬ್ಬರಿಗೆ ತುರ್ತು ಸಂದರ್ಭದಲ್ಲಿ ಎಐ (AI) ಉಪಕರಣದಿಂದ ಪಡೆದ ಮಾಹಿತಿಯು ಚಿಕಿತ್ಸೆಗೆ ನೆರವಾದ ಘಟನೆ ವರದಿಯಾಗಿದೆ. ಹಾವಿನ ಚಿತ್ರವನ್ನು ಎಐ (AI) ಟೂಲ್‌ ಮೂಲಕ ವಿಶ್ಲೇಷಿಸಿ, ಅದರ ಜಾತಿ ಹಾಗೂ ವಿಷದ ಪರಿಣಾಮಗಳ ಕುರಿತು ಮಾಹಿತಿ ಪಡೆಯಲಾಗಿತ್ತು. ಈ … Continued

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: ಚಂಪತ್ ರೈಗೆ ಕ್ಲೀನ್ ಚಿಟ್

ಅಯೋಧ್ಯೆ : ಅಯೋಧ್ಯೆಯ ರಾಮ ಮಂದಿರದಲ್ಲಿ ಕಾಣಿಕೆ ಕಳವು ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT), ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರಿಗೆ ಕ್ಲೀನ್‌ಚಿಟ್ ನೀಡಿದೆ ಹಾಗೂ ಟ್ರಸ್ಟ್‌ನ ಮಾಜಿ ಸದಸ್ಯ ಅನಿಲ ಮಿಶ್ರಾ ಅವರ ಮೇಲಿದ್ದ ಆರೋಪಗಳಿಗೂ ಎಸ್‌ಐಟಿ ತನಿಖೆಯಲ್ಲಿ … Continued

ಭಾರತದ ಚುನಾವಣಾ ವ್ಯವಸ್ಥೆ ಕೊಂಡಾಡಿದ ಟ್ರಂಪ್‌ ; ಅಮೆರಿಕದಲ್ಲೂ ಕಡ್ಡಾಯ ʼವೋಟರ್‌ ಐಡಿ ಕಾರ್ಡ್‌ʼ ವ್ಯವಸ್ಥೆ ಜಾರಿಗೆ ಒತ್ತಾಯ

ವಾಷಿಂಗ್ಟನ್ : ಅಮೆರಿಕದ ಚುನಾವಣೆಯಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಪೌರತ್ವದ ದೃಢೀಕರಣವನ್ನು ಕಡ್ಡಾಯಗೊಳಿಸುವ ಉದ್ದೇಶದ ‘ಸೇವ್ ಅಮೆರಿಕಾ ಆಕ್ಟ್’ (SAVE America Act) ಜಾರಿಗೆ ತರಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಒತ್ತಾಯಿಸಿದ್ದಾರೆ. ತಮ್ಮ ವಾದಕ್ಕೆ ಭಾರತದ ಚುನಾವಣಾ ವ್ಯವಸ್ಥೆಯನ್ನು ಉದಾಹರಣೆಯಾಗಿ ನೀಡಿರುವ ಟ್ರಂಪ್, ಅಮೆರಿಕದ ಮತದಾನ ಪ್ರಕ್ರಿಯೆಯಲ್ಲಿ ಕಡ್ಡಾಯ ಫೋಟೋ ಗುರುತಿನ … Continued

ನಿತಿನ್ ನಬಿನ್ ಸಾರಥ್ಯದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ತಂಡದ ಪುನರ್ರಚನೆ : ಇದು ಮೋದಿ ಸಂಪುಟದ ಪುನರ್ರಚನೆಗೆ ಮುನ್ನುಡಿಯೇ ?

ನವದೆಹಲಿ: ಭಾರತೀಯ ಜನತಾ ಪಕ್ಷ(BJP)ದ ರಾಷ್ಟ್ರೀಯ ಪದಾಧಿಕಾರಿಗಳ ತಂಡಕ್ಕೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರನ್ನು ರಾಷ್ಟ್ರೀಯ ಖಜಾಂಚಿಯಾಗಿ ನೇಮಕ ಮಾಡಿರುವುದು ಇದೀಗ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಸೋಮವಾರ ಪಕ್ಷದ ನೂತನ ರಾಷ್ಟ್ರೀಯ ಸಂಘಟನಾ ತಂಡವನ್ನು ಪ್ರಕಟಿಸಿದ್ದು, ಅದರಲ್ಲಿ ಕೇಂದ್ರ … Continued