ಐಪಿಎಲ್‌-2022 ಕ್ರಿಕಟ್‌ ಪಂದ್ಯಾವಳಿ ಮಾರ್ಚ್ 26 ರಿಂದ ಪ್ರಾರಂಭ, 2 ನಗರಗಳಲ್ಲಿ 70 ಪಂದ್ಯಗಳು

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ 2022 ಮಾರ್ಚ್ 26 ರಿಂದ ಆರಂಭವಾಗಲಿದೆ ಹಾಗೂ ಮೇ 29 ರಂದು ಫೈನಲ್ ಪಂದ್ಯ ನಡೆಯಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಶುಕ್ರವಾರ ಪ್ರಕಟಿಸಿದೆ. ಐಪಿಎಲ್‌-2022 ರಲ್ಲಿ 10 ತಂಡಗಳ ಈ ಸೀಸನ್ ಮುಂಬೈ ಮತ್ತು ಪುಣೆಯ ನಾಲ್ಕು ಸ್ಥಳಗಳಲ್ಲಿ 70 ಲೀಗ್ ಹಂತದ ಪಂದ್ಯಗಳು ಸೇರಿದಂತೆ … Continued

ಉಕ್ರೇನಿನ ಪಶ್ಚಿಮ ಭಾಗದ ನೆರೆಯ ದೇಶಗಳಿಂದ ಭಾರತೀಯರನ್ನು ಕರೆತರಲು ಪ್ರಯತ್ನ: ಹೊಸ ಮಾರ್ಗ ಕಂಡುಕೊಂಡ ಭಾರತ

ನವದೆಹಲಿ: ರಷ್ಯಾ ಅತಿಕ್ರಮಣದಿಂದ ಉಕ್ರೇನ್‌ನಲ್ಲಿ ಸಿಲುಕಿಕೊಂಡಿರುವ ಭಾರತದ ಪ್ರಜೆಗಳನ್ನು ಕರೆತರಲು ಕೇಂದ್ರ ಸರ್ಕಾರ ಮತ್ತೊಂದು ಪ್ರಯತ್ನಕ್ಕೆ ಮುಂದಾಗಿದೆ. ಉಕ್ರೇನ್‌ನಲ್ಲಿರುವ ಭಾರತೀಯರನ್ನು ಪಶ್ಚಿಮ ಗಡಿ ಮೂಲಕ ಅದರ ನೆರೆಯ ದೇಶಗಳಿಗೆ ಕರೆತಂದು, ಅಲ್ಲಿಂದ ವಿಮಾನಗಳಲ್ಲಿ ಭಾರತಕ್ಕೆ ಕರೆತರಲು ಈಗ ಕೇಂದ್ರ ಸರ್ಕಾರ ಮುಂದಾಗಿದೆ. ಯುದ್ಧದಲ್ಲಿ ಸಿಲುಕಿರುವ ಭಾರತೀಯರ ಸ್ಥಳಾಂತರಕ್ಕೆ ವಿಮಾನಗಳನ್ನು ಆಯೋಜನೆ ಮಾಡಲಾಗುತ್ತಿದೆ. ಇದರ ವೆಚ್ಚವನ್ನು ಸರ್ಕಾರವೇ … Continued

ಇದೇನು ಸೋಜಿಗ..? : ಪಶ್ಚಿಮ ಬಂಗಾಳದಲ್ಲಿ ಮಧ್ಯರಾತ್ರಿಗೆ ವಿಧಾನಸಭೆ ಅಧಿವೇಶನ ಆರಂಭ..! ಹೀಗಾದರೆ ದೇಶದ ಇತಿಹಾಸದಲ್ಲೇ ಮೊದಲು..!!

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ ಅಧಿವೇಶನವು ಮಾರ್ಚ್ 7 ರ  ರಾತ್ರಿಯ  2 ಗಂಟೆಗೆ ಪ್ರಾರಂಭವಾಗಲಿದೆ ಎಂದು ರಾಜ್ಯಪಾಲ ಜಗದೀಪ್ ಧನಕರ್ ಅವರು ಸಹಿ ಮಾಡಿರುವ ಟಿಪ್ಪಣಿಯಲ್ಲಿ ಸರ್ಕಾರಕ್ಕೆ ಕಳುಹಿಸಲಾಗಿದೆ..! ಫೆಬ್ರವರಿ 17ರಂದು ಪಶ್ಚಿಮ ಬಂಗಾಳ ಸರ್ಕಾರವು ರಾಜ್ಯಪಾಲರಿಗೆ ಕಳುಹಿಸಿದ ಟಿಪ್ಪಣಿಯೊಂದಿಗೆ ಮಾರ್ಚ್ 7 ರಂದು ಮಧ್ಯಾಹ್ನ 2 ಗಂಟೆಗೆ ವಿಧಾನಸಭೆ ಅಧಿವೇಶನವನ್ನು ಕರೆಯುವಂತೆ ಶಿಫಾರಸು … Continued

ಹಿಜಾಬ್ ವಿವಾದ: ವಿಚಾರಣೆ ಮುಕ್ತಾಯ, ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ ರಾಜ್ಯ ಸರ್ಕಾರ 2022ರ ಫೆಬ್ರವರಿ 5ರಂದು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ಶುಕ್ರವಾರ ಮುಕ್ತಾಯಗೊಳಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ಫೆಬ್ರವರಿ 10, 2022 ರಂದು ವಿಚಾರಣೆಯನ್ನು ಆರಂಭಿಸಿದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಜೆ.ಎಂ. … Continued

ಬಂಧಿತ ಎನ್‌ಸಿಪಿ ನಾಯಕ ನವಾಬ್ ಮಲಿಕ್ ಮುಂಬೈ ಆಸ್ಪತ್ರೆಗೆ ದಾಖಲು

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬುಧವಾರ ಬಂಧಿತರಾಗಿರುವ ಎನ್‌ಸಿಪಿ ನಾಯಕ ನವಾಬ್ ಮಲಿಕ್ ಅವರನ್ನು ಮುಂಬೈನ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಮೂಲಗಳು ತಿಳಿಸಿವೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ವೈದ್ಯರ ಸಲಹೆಯಂತೆ ಎನ್ ಸಿಪಿ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಅಧಿಕೃತ ದೃಢೀಕರಣವಿಲ್ಲ. … Continued

1988ರ ರೋಡ್ ರೇಜ್ ಪ್ರಕರಣದಲ್ಲಿ ಹೆಚ್ಚಿನ ಶಿಕ್ಷೆ ನೀಡಬೇಡಿ: ಸುಪ್ರೀಂ ಕೋರ್ಟ್‌ಗೆ ನವಜೋತ್ ಸಿದ್ದು ಮನವಿ

ನವದೆಹಲಿ: ಮಾಜಿ ಕ್ರಿಕೆಟಿಗ ಮತ್ತು ಪಂಜಾಬ್‌ ಕಾಂಗ್ರೆಸ್‌ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರು 33 ವರ್ಷಗಳ ಹಿಂದಿನ ರಸ್ತೆ ರೋಷ (road rage) ಪ್ರಕರಣದ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸುವಂತೆ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ತಮ್ಮ ವಿರುದ್ಧದ ರಸ್ತೆ ರೋಷ (road rage) ಪ್ರಕರಣದಲ್ಲಿ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ … Continued

ಭಾರತದಲ್ಲಿ ಮತ್ತಷ್ಟು ಕುಸಿದ ದೈನಂದಿನ ಕೋವಿಡ್‌ ಸೋಂಕಿನ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ತೀವ್ರಗತಿಯಲ್ಲಿ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಹೊಸದಾಗಿ 13,166 ಹೊಸ ಕೋವಿಡ್ ಸೋಂಕು ಪತ್ತೆಯಾಗಿದ್ದು, 302 ಮಂದಿಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಈಗ ದೇಶದಲ್ಲಿ ಒಟ್ಟು 1,34,235 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಈವರೆಗೆ ಕಾಣಿಸಿಕೊಂಡಿರುವ ಒಟ್ಟು ಸೋಂಕಿತರಲ್ಲಿ ಶೇಕಡಾ 0.31ರಷ್ಟು … Continued

ಉಕ್ರೇನ್-ರಷ್ಯಾ ಯುದ್ಧ: ಇಂದು ರಾತ್ರಿ ಪುಟಿನ್ ಜೊತೆ ಪ್ರಧಾನಿ ಮೋದಿ ಮಾತುಕತೆ ಸಾಧ್ಯತೆ

ನವದೆಹಲಿ: ರಷ್ಯಾದ ಆಕ್ರಮಣದ ನಂತರ ಉಕ್ರೇನ್‌ನಲ್ಲಿ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಸಂಜೆ ತಡವಾಗಿ ಮಾತನಾಡುವ ಸಾಧ್ಯತೆಯಿದೆ. ಪ್ರಸ್ತುತ ನಡೆಯುತ್ತಿರುವ ಕ್ಯಾಬಿನೆಟ್ ಸಭೆಯ ನಂತರ ಪ್ರಧಾನಿ ಮೋದಿ ಅಧ್ಯಕ್ಷ ಪುಟಿನ್ ಅವರೊಂದಿಗೆ ಮಾತನಾಡುವ ಸಾಧ್ಯತೆಯಿದೆ. ಈ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ … Continued

ಇಡಿ ಬಂಧನದಲ್ಲಿರುವ ಮಹಾರಾಷ್ಟ್ರ ಸಚಿವ ನವಾಬ್ ಮಲಿಕಗೆ ಮನೆ ಆಹಾರ ಕೊಡಲು ಕೋರ್ಟ್‌ ಅನುಮತಿ

ಮುಂಬೈ: ಮಹಾರಾಷ್ಟ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನವಾಬ್ ಮಲಿಕ್ ಅವರು ಜಾರಿ ನಿರ್ದೇಶನಾಲಯದ (ಇಡಿ) ವಶದಲ್ಲಿರುವಾಗ ಮನೆ ಆಹಾರ ಮತ್ತು ಔಷಧಿಗಳನ್ನು ಕೋರಿ ಸಲ್ಲಿಸಿದ ಮನವಿಯನ್ನು ಇಲ್ಲಿನ ವಿಶೇಷ ನ್ಯಾಯಾಲಯ ಗುರುವಾರ ಅಂಗೀಕರಿಸಿದೆ. ವಿಚಾರಣೆಯ ಸಮಯದಲ್ಲಿ ಅವರ ವಕೀಲರು ಗೋಚರ ದೂರದಲ್ಲಿ ಹಾಜರಿರಲು ಸಹ ನ್ಯಾಯಾಲಯವು ಅನುಮತಿ ನೀಡಿದೆ. ಪರಾರಿಯಾಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ … Continued

ಉಕ್ರೇನ್-ರಷ್ಯಾ ಯುದ್ಧ: ಶೇರು ಮಾರುಕಟ್ಟೆಯಲ್ಲಿ ಒಂದೇ ದಿನ 13.4 ಲಕ್ಷ ಕೋಟಿ ರೂ.ಗಳನ್ನು ಕಳೆದುಕೊಂಡ ಹೂಡಿಕೆದಾರರು…!

ಮುಂಬೈ: ಗುರುವಾರ ಬೆಳಿಗ್ಗೆ ಉಕ್ರೇನ್ ವಿರುದ್ಧ ರಷ್ಯಾ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸುತ್ತಿದ್ದಂತೆ ಜಾಗತಿಕ ಮಾರುಕಟ್ಟೆಗಳಲ್ಲಿ ಇದು ಪ್ರತಿಫಲನಗೊಂಡಿತು. ಭಾರತದ ಶೇರುಮಾರುಕಟ್ಟೆಯ ಬೆಂಚ್‌ಮಾರ್ಕ್ ಸೂಚ್ಯಂಕಗಳು ಶೇಕಡಾ 4.8 ರಷ್ಟು ಕುಸಿದವು, ಹೂಡಿಕೆದಾರರು 13.4 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಸಂಪತ್ತನ್ನು ಕಳೆದುಕೊಂಡರು ಎಂದು ವರದಿಗಳು ತಿಳಿಸಿವೆ. ಬಿಎಸ್‌ಇ ಸೆನ್ಸೆಕ್ಸ್ 2,702 ಪಾಯಿಂಟ್‌ಗಳು ಅಥವಾ ಶೇಕಡಾ 4.72 ರಷ್ಟು … Continued