ಚೆಂಬೆಳಕಿನ‌ ಕವಿ, ನಾಡೋಜ ಚೆನ್ನವೀರ ಕಣವಿ ಅಸ್ತಂಗತ

ಹುಬ್ಬಳ್ಳಿ: ಚೆಂಬೆಳಕಿನ‌ ಕವಿ ಎಂದೇ ಹೆಸರಾಗಿದ್ದ ನಾಡೋಜ ಚೆನ್ನವೀರ ಕಣವಿ(93) ಅಸ್ತಂಗತರಾಗಿದ್ದಾರೆ. ಅನಾರೋಗ್ಯದಿಂದ ದಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿದ್ದ ನಾಡೋಜ ಚೆನ್ನವೀರ ಕಣವಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಣವಿ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಧಾರವಾಡದ ಎಸ್​ಡಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್​ ಬಿಡುಗಡೆ ಮಾಡಿತ್ತು. ಉಸಿರಾಟ ಸಮಸ್ಯೆಯಿಂದ ಸರಿಯಾಗಿ ತಿಂಗಳು ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ … Continued

ಖ್ಯಾತ ಸಂಗೀತ ನಿರ್ದೇಶ ಬಪ್ಪಿ ಲಹರಿ ನಿಧನ

ಮುಂಬೈ: ಗಾಯಕ- ಸಂಗೀತ ಸಂಯೋಜಕ ಬಪ್ಪಿ ಲಾಹಿರಿ ಅವರು ಮಂಗಳವಾರ ಮುಂಬೈ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 69 ವರ್ಷವಾಗಿತ್ತು. ಅವರು ಮಂಗಳವಾರ ರಾತ್ರಿ 11.45ರ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಹಿರಿಯ ಗಾಯಕ ಕಳೆದ ವರ್ಷ ಏಪ್ರಿಲ್‌ನಲ್ಲಿ ಕೋವಿಡ್ -19 ಗೆ ಧನಾತ್ಮಕ ಪರೀಕ್ಷೆ ನಡೆಸಿದ್ದರು, ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ … Continued

ಕಿರುರಸ್ತೆಯಲ್ಲಿ ಇಬ್ಬರು ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಎದುರಾದ ಸಿಂಹಿಣಿ, ಮುಂದೇನಾಯ್ತು..? ವೀಕ್ಷಿಸಿ

ರಸ್ತೆ ಮಧ್ಯೆ ಸಿಂಹಿಣಿ ಎದುರಾದರೆ ಏನು ಮಾಡುತ್ತೇವೆ? ಸಹಜವಾಗಿ, ಆಘಾತಕ್ಕೊಳಗಾಗುತ್ತೇವೆ ಮತ್ತು ಭಯಭೀತರಾಗುತ್ತೇವೆ, ನಮ್ಮ ಜೀವನದ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇವೆ. ಗುಜರಾತ್‌ನಲ್ಲಿ ಸಿಂಹಿಣಿಯೊಂದು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಎದುರಿಗೆ ಥಟ್ಟನೆ ಕಾಣಿಸಿಕೊಂಡಿದೆ. ಟ್ವಿಟರ್‌ನಲ್ಲಿ ಕಂಡುಬಂದ ವಿಡಿಯೊದಲ್ಲಿ, ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಪ್ರಯಾಣಿಕರ ಕಡೆಗೆ ಸಿಂಹಿಣಿಯೊಂದು ನಡೆದುಕೊಂಡು ಬರುತ್ತಿದನ್ನು ಕಾಣಬಹುದು. ಸಿಂಹಿಣಿಯು ಅವರನ್ನು ಸಮೀಪಿಸುತ್ತಿದ್ದಂತೆ, ಪಿಲಿಯನ್ ರೈಡರ್, ಭಯಭೀತರಾಗುವುದು ಮತ್ತು … Continued

ಕೆಂಪು ಕೋಟೆ ಹಿಂಸಾಚಾರದ ಪ್ರಮುಖ ಆರೋಪಿ ಪಂಜಾಬಿ ನಟ ದೀಪ್ ಸಿಧು ರಸ್ತೆ ಅಪಘಾತದಲ್ಲಿ ಸಾವು

ನವದೆಹಲಿ: ಜನವರಿ 26, 2021 ರಂದು ನಡೆದ ಗಣರಾಜ್ಯೋತ್ಸವದ ಕೆಂಪು ಕೋಟೆ ಹಿಂಸಾಚಾರದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾಗಿದ್ದ ಪಂಜಾಬಿ ನಟ ದೀಪ್ ಸಿಧು ಅವರು ಮಂಗಳವಾರ ರಾತ್ರಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ವರದಿಗಳ ಪ್ರಕಾರ, ಅವರು ಹರಿಯಾಣದ ಸೋನಿಪತ್ ಬಳಿ ಮೃತಪಟ್ಟಿದ್ದಾರೆ ಎಂದು ಸೋನಿಪತ್ ಪೊಲೀಸರು ಖಚಿತಪಡಿಸಿದ್ದಾರೆ. ಹರಿಯಾಣ ಪೊಲೀಸರ ಪ್ರಕಾರ, ಅವರು (ದೀಪ್ ಸಿಧು) … Continued

ವೇಗದ ರೈಲು ಡಿಕ್ಕಿ ಹೊಡೆಯುವುದರಿಂದ ಕೂದಲೆಳೆಯಲ್ಲಿ ಪಾರಾದ ಬೈಕ್‌ ಸವಾರ, ಬೈಕ್‌ ಛಿದ್ರ ಛಿದ್ರ, ದೃಶ್ಯ ವಿಡಿಯೊದಲ್ಲಿ ಸೆರೆ

ಮುಂಬೈ: ವೇಗವಾಗಿ ಬರುತ್ತಿದ್ದ ರಾಜಧಾನಿ ಎಕ್ಸ್ ಪ್ರೆಸ್ ರೈಲಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಕೂದಲೆಳೆಯ ಹಂತರದಲ್ಲಿ ಸಾವಿನ ದವಡೆಯಿಂದ ಪಾರಾದ ಘಟನೆ ಮುಂಬೈನ ರೈಲ್ವೆ ಕ್ರಾಸಿಂಗ್‌ ಬಳಿ ನಡೆದಿದೆ. ಘಟನೆಯ ಸಿಸಿಟಿವಿ ವಿಡಿಯೊದಲ್ಲಿ ಸೆರೆಯಾಗಿದ್ದು, ಅದರಲ್ಲಿ ಸವಾರ ಸ್ವಲ್ಪದರಲ್ಲೇ ಪಾರಾಗಿರುವುದು ಕಂಡುಬರುತ್ತದೆ. ಗೇಟ್‌ಗಳಿಲ್ಲದ ರೈಲ್ವೆ ಕ್ರಾಸಿಂಗ್ ಆಗಿದ್ದು, ಮುನ್ನೆಚರಿಕೆ ಇದ್ದರೂ ಈತ ರೈಲ್ವೆ … Continued

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಛೋಟಾ ಶಕೀಲ್‌ನ ಸೋದರ ಮಾವನ ವಶಕ್ಕೆ ಪಡೆದ ಇಡಿ

ಮುಂಬೈ: ಭೂಗತ ಜಗತ್ತಿನ ಕಾರ್ಯಾಚರಣೆಗಳು ಮತ್ತು ಸಂಬಂಧಿತ ಆಸ್ತಿ ವಹಿವಾಟುಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ಮುಂಬೈನಲ್ಲಿ ಅನೇಕ ಕಡೆ ದಾಳಿಗಳನ್ನು ನಡೆಸಿತು. ಇಡಿ ಅಧಿಕಾರಿಯೊಬ್ಬರ ಪ್ರಕಾರ, ಭೂಗತ ದೊರೆ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಂಬೈನಲ್ಲಿ 9 ಮತ್ತು ಥಾಣೆಯಲ್ಲಿ 10 … Continued

ಕಾಂಗ್ರೆಸ್‌ಗೆ ಮತ್ತೊಂದು ಆಘಾತ… ಕೇಂದ್ರದ ಮಾಜಿ ಕಾನೂನು ಸಚಿವ ಅಶ್ವನಿಕುಮಾರ ಕಾಂಗ್ರೆಸ್‌ಗೆ ರಾಜೀನಾಮೆ

ನವದೆಹಲಿ: ಕೇಂದ್ರದ ಮಾಜಿ ಕಾನೂನು ಸಚಿವ ಅಶ್ವನಿ ಕುಮಾರ್ ಫೆಬ್ರವರಿ 15 ರಂದು, ಮಂಗಳವಾರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಅವರು ಕಾಂಗ್ರೆಸ್‌ ಪಕ್ಷದೊಂದಿಗಿನ 46 ವರ್ಷಗಳ ಸುದೀರ್ಘ ಒಡನಾಟವನ್ನು ಕೊನೆಗೊಳಿಸಿದ್ದಾರೆ. ಅಶ್ವನಿ ಕುಮಾರ್ ಅವರು ಇಂದು ಬೆಳಿಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ತಮ್ಮ ರಾಜೀನಾಮೆಯನ್ನು ಕಳುಹಿಸಿದ್ದಾರೆ, ಅವರು ಪಕ್ಷದಿಂದ ಹೊರಬಂದೂ ರಾಷ್ಟ್ರೀಯ ಉದ್ದೇಶಗಳಿಗಾಗಿ … Continued

ಮೇವು ಹಗರಣ: ಡೊರಾಂಡಾ ಖಜಾನೆ ಪ್ರಕರಣದಲ್ಲಿ ಲಾಲು ಯಾದವ್ ದೋಷಿ; ಫೆಬ್ರವರಿ 18 ರಂದು ಶಿಕ್ಷೆ ಪ್ರಕಟ

ರಾಂಚಿ: ಮೇವು ಹಗರಣ ಪ್ರಕರಣದಲ್ಲಿ ಡೊರಾಂಡಾ ಖಜಾನೆಯಿಂದ 139.35 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ಹಿಂಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರನ್ನು ವಿಶೇಷ ಸಿಬಿಐ ನ್ಯಾಯಾಲಯ ಮಂಗಳವಾರ ದೋಷಿ ಎಂದು ಘೋಷಿಸಿದೆ. ಲಾಲು ಮತ್ತು ಇತರರ ವಿರುದ್ಧದ ಮೇವು ಹಗರಣ ಪ್ರಕರಣದಲ್ಲಿ ನ್ಯಾಯಾಲಯ ತನ್ನ ತೀರ್ಪು ನೀಡಿದೆ. … Continued

ಆಸ್ಟ್ರೇಲಿಯಾ ಕ್ರಿಕೆಟ್ ಸೂಪರ್ ಸ್ಟಾರ್ ಮ್ಯಾಕ್ಸ್‌ವೆಲ್ ಇನ್ಮುಂದೆ ತಮಿಳುನಾಡಿನ ಅಳಿಯ..! ತಮಿಳಿನಲ್ಲಿ ಮದುವೆ ಆಮಂತ್ರಣ ಪತ್ರಿಕೆ ವೈರಲ್..!!

ನವದೆಹಲಿ: ಆಸ್ಟ್ರೇಲಿಯಾದ ಕ್ರಿಕೆಟ್ ಸೂಪರ್ ಸ್ಟಾರ್ ಗ್ಲೆನ್ ಮ್ಯಾಕ್ಸ್ ವೆಲ್ ಶೀಘ್ರದಲ್ಲೇ ಭಾರತೀಯ ಮೂಲದ ಹುಡುಗಿ ವಿನಿ ರಾಮನ್ ಅವರನ್ನು ವಿವಾಹವಾಗಲಿದ್ದಾರೆ. ತಮಿಳಿನಲ್ಲಿ ಮುದ್ರಿತವಾಗಿರುವ ಅವರ ಮದುವೆ ಕಾರ್ಡ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮ್ಯಾಕ್ಸ್‌ವೆಲ್ ಮತ್ತು ವಿನಿ ರಾಮನ್‌ 2017 ರಿಂದ ಪರಸ್ಪರ ಡೇಟಿಂಗ್ ಮಾಡುತ್ತಿದ್ದಾರೆ ಮತ್ತು ಫೆಬ್ರವರಿ 2020 ರಲ್ಲಿ ಇಬ್ಬರೂ ನಿಶ್ಚಿತಾರ್ಥ … Continued

ವೈದ್ಯನಂತೆ ನಟಿಸಿ 7 ರಾಜ್ಯಗಳ 14 ಮಹಿಳೆಯರ ಮದುವೆಯಾಗಿ ವಂಚನೆ…ವಕೀಲರು, ವೈದ್ಯರು, ಉನ್ನತಾಧಿಕಾರಿಗಳೇ ಈತನ ಟಾರ್ಗೆಟ್‌..!

ಭುವನೇಶ್ವರ: ಆಘಾತಕಾರಿ ಸಂಗತಿಯೊಂದರಲ್ಲಿ, ಒಡಿಶಾದ ವ್ಯಕ್ತಿಯೊಬ್ಬರು ವೈದ್ಯರಂತೆ ನಟಿಸುವ ಮೂಲಕ ಏಳು ನಗರಗಳಲ್ಲಿ ಹಲವಾರು ಮಹಿಳೆಯರಿಗೆ ಮದುವೆಯಾಗಿ, ನಂತರ ಅವರನ್ನು ವಂಚಿಸಿದ ಘಟನೆ ಬೆಳಕಿಗೆ ಬಂದಿದೆ, ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಒಡಿಶಾದ ಕೇಂದ್ರಪಾರ ಜಿಲ್ಲೆಯ ನಿವಾಸಿ ಬಿಧು ಪ್ರಕಾಶ್ ಸ್ವೈನ್ (54) ಅಲಿಯಾಸ್ ರಮೇಶ್ ಸ್ವೈನ್ ಎಂದು ಗುರುತಿಸಲಾಗಿದೆ. ಅವರು ಹೆಚ್ಚಿನ ಸಮಯ ಒಡಿಶಾದ ಹೊರಗೆ … Continued