ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಮರುಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ನಿರ್ಧಾರ

ನವದೆಹಲಿ: ಕೊವಿಡ್ -19 ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ರದ್ದು ಮಾಡಲಾಗಿದ್ದ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ (MPLADS) ಪುನಃಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಲ್ಲಿ ಮಾತನಾಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ 2021-22 ರ ಆರ್ಥಿಕ … Continued

ಟ್ವಿಟರ್‌ನಲ್ಲಿ ಜಾಗತಿಕ 50 ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಪ್ರಧಾನಿ ಮೋದಿಗೆ 2ನೇ ಸ್ಥಾನ, ತೆಂಡೂಲ್ಕರಗೆ 35ನೇ ಸ್ಥಾನ: ಪಟ್ಟಿ ಇಲ್ಲಿದೆ..

ನವದೆಹಲಿ: ಗ್ರಾಹಕ ಗುಪ್ತಚರ ಸಂಸ್ಥೆ ಬ್ರಾಂಡ್‌ವಾಚ್ (consumer intelligence company Brandwatch) ನಡೆಸಿದ ವಾರ್ಷಿಕ ಅಧ್ಯಯನದ ಪ್ರಕಾರ ಈ ವರ್ಷ ಟ್ವಿಟರ್‌ನಲ್ಲಿ ಅತ್ಯಂತ ಪ್ರಭಾವಶಾಲಿ 50 ವ್ಯಕ್ತಿಗಳ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಮಂಗಳವಾರ ಜಾಗತಿಕವಾಗಿ ಎರಡನೇ ಸ್ಥಾನದಲ್ಲಿದ್ದಾರೆ. ಇತ್ತೀಚೆಗಷ್ಟೇ ಶೇ.70ರಷ್ಟು ಜನಮನ್ನಣೆಯೊಂದಿಗೆ ವಿಶ್ವದ ಅತ್ಯಂತ ಮೆಚ್ಚುಗೆ ಪಡೆದ ನಾಯಕ … Continued

ಕರ್ನಾಟಕದ ನಕ್ಸಲ್‌ ನಾಯಕರಾದ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಬಂಧಿಸಿದ ಕೇರಳ ಭಯೋತ್ಪಾದನಾ ನಿಗ್ರಹ ಪಡೆ

ಬೆಂಗಳೂರು: ಕೇರಳ ಭಯೋತ್ಪಾದನಾ ನಿಗ್ರಹ ಪಡೆ ಕಾರ್ಯಾಚರಣೆಯಲ್ಲಿ ಕರ್ನಾಟಕ ಮೂಲದ ಇಬ್ಬರು ಕುಖ್ಯಾತ ನಕ್ಸಲ್ ನಾಯಕರನ್ನು ಮಂಗಳವಾರ ಬಂಧಿಸಲಾಗಿದೆ. ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಬಂಧಿತರು. ವಯನಾಡು ಜಿಲ್ಲೆಯ ಸುಲ್ತಾನ್ ಬತ್ತೇರಿ ಎಂಬಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ನಕ್ಸಲ್ ಸೆಂಟ್ರಲ್ ಕಮಿಟಿಯ ಪಶ್ಚಿಮ ಘಟ್ಟದ ಕಾರ್ಯದರ್ಶಿಯಾಗಿ ಬಿ.ಜಿ. ಕೃಷ್ಣಮೂರ್ತಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ. ಈತನ ವಿರುದ್ಧ … Continued

ಯುಮುನಾ ನದಿಯಲ್ಲಿ ವಿಷಯುಕ್ತ ನೊರೆ; ಬೋಟ್​​ಗಳನ್ನು ನಿಯೋಜಿಸಿ ಸ್ಛಗೊಳಿಸಲು ಮುಂದಾದ ದೆಹಲಿ ಸರ್ಕಾರ

ನವದೆಹಲಿ: ಬಿಹಾರ, ಉತ್ತರಪ್ರದೇಶ, ಜಾರ್ಖಂಡ ಸೇರಿ ಹಲವು ರಾಜ್ಯಗಳಲ್ಲಿ ಛಠ್​ ಜೋರಾಗಿ ನಡೆಯುತ್ತಿದೆ. ಹೀಗಾಗಿ ಜನರು ಯಮುನಾ ನದಿಯಲ್ಲಿ ಪವಿತ್ರ ಸ್ನಾನ ಮಾಡುತ್ತಿದ್ದಾರೆ. ಆದರೆ ಯಮುನಾ ನದಿ ವಿಷಪೂರಿತ ನೊರೆಯಿಂದ ತುಂಬಿ ಹೋಗಿದೆ. ವಿಷಯುಕ್ತ ನದಿಯಲ್ಲಿಯೇ ಜನ ಮುಳುಗೇಳುತ್ತಿದ್ದಾರೆ. ಬುರುಗು ನೊರೆಯ ಮಧ್ಯೆಯೇ ಭಕ್ತರು ಪವಿತ್ರ ಸ್ನಾನ ಮಾಡುತ್ತಿರುವ ವಿಡಿಯೋಗಳು ವೈರಲ್​ ಆದ ಬೆನ್ನಲ್ಲೇ ತೀವ್ರ … Continued

ಭಾರತದಲ್ಲಿ 11,466 ಹೊಸ ಕೋವಿಡ್ -19 ಪ್ರಕರಣಗಳು ದಾಖಲು, ನಿನ್ನೆಗಿಂತ 13.2% ಹೆಚ್ಚಳ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತವು 11,466 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ, ಇದು ನಿನ್ನೆ ದಾಖಲಾಗಿದ್ದಕ್ಕಿಂತ 13.2% ಹೆಚ್ಚಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ನೀಡಿದೆ. ಈ ಹೊಸ ಪ್ರಕರಣಗಳು ಒಟ್ಟು ಸೋಂಕಿನ ಸಂಖ್ಯೆಯನ್ನು 3,43,88,579 ಕ್ಕೆ ಒಯ್ದಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 460 ಮಂದಿ ಮೃತಪಟ್ಟಿದ್ದು, ಒಟ್ಟು ಸಾವಿನ … Continued

ರಫೇಲ್ ಒಪ್ಪಂದದ ವಿವಾದ ಮರಜೀವಗೊಳಿಸಿದ ಫ್ರೆಂಚ್ ಮಾಧ್ಯಮ ವರದಿ, 2007 – 2012 ರ ನಡುವೆ ಕಿಕ್‌ಬ್ಯಾಕ್‌- ಮೀಡಿಯಾಪಾರ್ಟ್ ವರದಿ!

ಫ್ರೆಂಚ್ ಮಾಧ್ಯಮದ ವರದಿಯೊಂದು ಭಾರತೀಯ ವಾಯುಪಡೆಗೆ (ಐಎಎಫ್) ಫ್ರೆಂಚ್ ನಿರ್ಮಿತ ರಫೇಲ್ ವಿಮಾನಗಳನ್ನು ಖರೀದಿಸುವ ಕುರಿತು ರಾಜಕೀಯ ಚರ್ಚೆಗೆ ಮತ್ತೆ ಕಾರಣವಾಗಿದೆ. ಭಾರತ ಸರ್ಕಾರವು ಸೆಪ್ಟೆಂಬರ್ 23, 2016 ರಂದು 36 ರಫೆಲ್‌ ಜೆಟ್‌ಗಳನ್ನು ಖರೀದಿಸಲು ಫ್ರೆಂಚ್ ಸರ್ಕಾರ ಮತ್ತು ಡಸಾಲ್ಟ್ ಏವಿಯೇಷನ್‌ನೊಂದಿಗೆ ಒಪ್ಪಂದ ಮಾಡಿಕೊಂಡಿತ್ತು. ಯುಪಿಎ ಆಡಳಿತಾವಧಿಯಲ್ಲಿ 126 ಮಧ್ಯಮ ಬಹು-ಪಾತ್ರ ಯುದ್ಧ ವಿಮಾನಗಳನ್ನು … Continued

ಕೃಷಿ ಕಾನೂನು ವಿರೋಧಿಸಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಒಂದು ವರ್ಷ: ನವೆಂಬರ್ 29 ರಂದು ಸಂಸತ್ತಿಗೆ ಮೆರವಣಿಗೆ ನಡೆಸಲು ಯೋಜನೆ

ನವದೆಹಲಿ: ಮೂರು ಕೃಷಿ ಕಾನೂನುಗಳ ವಿರುದ್ಧದ ತಮ್ಮ ಆಂದೋಲನಕ್ಕೆ ಒಂದು ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ, ದೆಹಲಿ ಗಡಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಒಂದು ವರ್ಷ ಪೂರೈಸಿದ ನಂತರ ನವೆಂಬರ್ 29 ರಂದು ಸಂಸತ್ತಿಗೆ ಮೆರವಣಿಗೆ ನಡೆಸಲು ರೈತ ಸಂಘಗಳು ನಿರ್ಧರಿಸಿವೆ. ರೈತ ಸಂಘಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾದ ಒಂಬತ್ತು ಸದಸ್ಯರ ಸಮಿತಿಯು ಮಂಗಳವಾರ ಈ ನಿರ್ಧಾರ … Continued

ತುಳಸಿ ಗೌಡ ಪದ್ಮಶ್ರೀ ಪಡೆದ ಫೋಟೋ ರಿಟ್ವೀಟ್‌ ಮಾಡಿ ಇಂಥವರ ಮುಂದೆ ತಾನು ಪದ್ಮಭೂಷಣ ಪ್ರಶಸ್ತಿಗೆ ‘ಅನರ್ಹ’ ಎಂದ ಆನಂದ ಮಹೀಂದ್ರ..!

ನವದೆಹಲಿ: ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಂದ ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ನಂತರ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಟ್ವಿಟರ್‌ನಲ್ಲಿ ಕೃತಜ್ಞತೆಯ ಟಿಪ್ಪಣಿ ಹಂಚಿಕೊಂಡಿದ್ದಾರೆ. ವ್ಯಾಪಾರ ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಭಾರತದ ಮೂರನೇ ಅತ್ಯುನ್ನತ ನಾಗರಿಕ ಗೌರವ ಪದ್ಮ ಭೂಷಣದೊಂದಿಗೆ ಆನಂದ ಮಹೀಂದ್ರಾ ಅವರನ್ನು ಸೋಮವಾರ ಗೌರವಿಸಲಾಯಿತು. ಆದಾಗ್ಯೂ, ಇತರ ಸ್ವೀಕರಿಸುವವರಿಗೆ ಹೋಲಿಸಿದರೆ ತಾವು “ನಿಜವಾಗಿಯೂ ಅನರ್ಹರು” … Continued

ನ್ಯೂಜಿಲೆಂಡ್ ವಿರುದ್ಧ ಭಾರತದ ಟಿ 20 ತಂಡ ಪ್ರಕಟ:ಕೊಹ್ಲಿ ಬದಲಿಗೆ ಹೊಸ ನಾಯಕನ ಆಯ್ಕೆ ಮಾಡಿದ ಬಿಸಿಸಿಐ

ನವದೆಹಲಿ: ನ್ಯೂಜಿಲೆಂಡ್ ವಿರುದ್ಧ ನಡೆಯುವ ಟಿ 20 ಸರಣಿಗಾಗಿ 16 ಸದಸ್ಯರ ಭಾರತದ ತಂಡವನ್ನು ಪ್ರಕಟಿಸಲಾಗಿದೆ. ಟೀಮ್ ಇಂಡಿಯಾ ಟಿ 20 ತಂಡದ ಹೊಸ ನಾಯಕನಾಗಿ ರೋಹಿತ್ ಶರ್ಮಾ ಆಯ್ಕೆಯಾಗಿದ್ದಾರೆ. ರವಿಶಾಸ್ತ್ರಿ ಬದಲಿಗೆ ರಾಹುಲ್ ದ್ರಾವಿಡ್‌ ಮುಖ್ಯ ಕೋಚ್ ಆಗಿ ತಂಕ್ಕೆ ಮಾರ್ಗದರ್ಶನ ನೀಡಲಿದ್ದಾರೆ.ಉಪನಾಯಕನಾಗಿ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ತಂಡದಲ್ಲಿ ವಿರಾಟ್ … Continued

ಮುಂಬೈ ಸ್ಫೋಟದ ಆರೋಪಿ, ದಾವೂದ್‌ ಬಂಟರೊಂದಿಗೆ ಸಚಿವ ನವಾಬ್​ ಮಲ್ಲಿಕ್​ ಆಸ್ತಿ ವ್ಯವಹಾರ: ಫಡ್ನವೀಸ್‌

ಮುಂಬೈ: ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರು 1993 ರ ಮುಂಬೈ ಬಾಂಬ್ ಸ್ಫೋಟದ ಆರೋಪಿ ಸರ್ದಾರ್ ಶಾವಾಲಿ ಖಾನ್ ಮತ್ತು ದಾವೂದ್ ಇಬ್ರಾಹಿಂ ಅವರ ಸಹೋದರಿ ಹಸೀನಾ ಪಾರ್ಕರ್ ಅವರ ಜೊತೆಯಲ್ಲಿದ್ದ ಮೊಹಮ್ಮದ್ ಸಲೀಂ ಇಶಾಕ್ ಪಟೇಲ್ ಅವರೊಂದಿಗೆ ಆಸ್ತಿ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ … Continued