ಲಸಿಕೆ ಮೈತ್ರಿ ‘: ಭಾರತದಿಂದ ಬಾಂಗ್ಲಾದೇಶ, ನೇಪಾಳ, ಮ್ಯಾನ್ಮಾರ್, ಇರಾನ್‌ ದೇಶಗಳಿಗೆ ತಲಾ 10 ಕೋಟಿ ಕೋವಿಡ್ -19 ಡೋಸುಗಳ ಪೂರೈಕೆ

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕದ ಈ ಕಷ್ಟದ ಸಮಯದಲ್ಲಿ ನೆರೆಯ ರಾಷ್ಟ್ರಗಳಿಗೆ ಸಹಾಯ ಮಾಡುವ ನಮ್ಮ ಬದ್ಧತೆಯಲ್ಲಿ ದೃಢವಾಗಿ ನಿಂತು, ಭಾರತವು ಗುರುವಾರ ನಾಲ್ಕು ದೇಶಗಳಿಗೆ ಕೊರೊನಾ ವೈರಸ್ ವಿರೋಧಿ ಲಸಿಕೆಯ ಕೋಟ್ಯಂತರ ಡೋಸ್‌ಗಳನ್ನು ರಫ್ತು ಮಾಡಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ನೇಪಾಳ, ಮ್ಯಾನ್ಮಾರ್, ಇರಾನ್ ಮತ್ತು ಬಾಂಗ್ಲಾದೇಶಗಳು ಭಾರತದ ‘ಲಸಿಕೆ ಮೈತ್ರಿ’ ಕಾರ್ಯಕ್ರಮದ … Continued

ಅನಂತ್ ಕರ್ಮುಸ್ ಅಪಹರಣ -ಹಲ್ಲೆ ಪ್ರಕರಣ: ಮಹಾರಾಷ್ಟ್ರ ಸಚಿವ ಜಿತೇಂದ್ರ ಅವ್ಹದ್ ಬಂಧನ, ಜಾಮೀನು

ಮುಂಬೈ: ಮಹತ್ವದ ಬೆಳವಣಿಗೆಯೊಂದರಲ್ಲಿ ಅನಂತ್ ಕರ್ಮುಸ್ ಅವರ ಅಪಹರಣ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಚಿವ ಜಿತೇಂದ್ರ ಅವ್ಹದ್ ಅವರನ್ನು ಗುರುವಾರ ಬಂಧಿಸಲಾಗಿದೆ. ಅವರನ್ನು ಥಾಣೆ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು ಮತ್ತು ಜಾಮೀನು ನೀಡಲಾಗಿದೆ. ಈ ಪ್ರಕರಣವು ಕಳೆದ ವರ್ಷ ಫೇಸ್‌ಬುಕ್‌ನಲ್ಲಿ ಅವ್ಹದ್ ಅವರ ಮಾರ್ಫ್ ಮಾಡಿದ ಚಿತ್ರವನ್ನು ಪೋಸ್ಟ್ ಮಾಡಿದ ಆರೋಪಕ್ಕಾಗಿ ಕೆಲವು … Continued

ವಿಶ್ವಸಂಸ್ಥೆ ಮಾನವ ಹಕ್ಕುಗಳ ಮಂಡಳಿಗೆ ಭಾರತ ಪುನರಾಯ್ಕೆ

ನ್ಯೂಯಾರ್ಕ್: 2022-24ರ ಅವಧಿಯ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಗೆ ಭಾರತ ಗುರುವಾರ ಮರು ಆಯ್ಕೆಯಾಗಿದೆ. ಭಾರತವು ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ (2022-24) 6ನೇ ಅವಧಿಗೆ ಭಾರೀ ಬಹುಮತದಿಂದ ಆಯ್ಕೆಯಾಗಿದೆ. ಭಾರತದ ಮೇಲೆ ವಿಶ್ವಾಸವನ್ನು ಮತ್ತೊಮ್ಮೆ ತೋರಿದ್ದಕ್ಕಾಗಿ ವಿಶ್ವಸಂಸ್ಥೆಯ ಸದಸ್ಯ ರಾಷ್ಟ್ರಗಳಿಗೆ ಹೃದಯಪೂರ್ವಕ ಕೃತಜ್ಞತೆಗಳು. ವಿಶ್ವದಲ್ಲಿ ಸಮ್ಮಾನ, ಸಂವಾದ ಮತ್ತು ಸಹಯೋಗದ ಮೂಲಕ ಮಾನವ ಹಕ್ಕುಗಳ ರಕ್ಷಣೆಗೆ … Continued

ಸಿಬಿಎಸ್‌ಇ :ಆಫ್‌ಲೈನ್‌ನಲ್ಲಿ 10, 12ನೇ ತರಗತಿಯ ಮೊದಲ ಅವಧಿಯ ಬೋರ್ಡ್ ಪರೀಕ್ಷೆ; ಅ. 18ರಂದು ದಿನಾಂಕ ಪ್ರಕಟ, ಪ್ರಮುಖ ವಿಷಯಗಳಿಗೆ ಮಾತ್ರ ಪರೀಕ್ಷೆ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (Central Board of Secondary Education- CBSE) ಅ. 18ರಂದು ಪರೀಕ್ಷೆ ದಿನಾಂಕವನ್ನು ಪ್ರಕಟಿಸುವುದಾಗಿ ತಿಳಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಬೋರ್ಡ್​​​ ಸೋಮವಾರ 10 ಮತ್ತು 12 ನೇ ತರಗತಿಯ ಡೇಟ್​ ಶೀಟ್ (Board Exam date sheet) ​ ಬಿಡುಗಡೆ ಮಾಡಲಾಗುತ್ತದೆ. ಈ ವರ್ಷ … Continued

ಲಖೀಂಪುರ ಖೇರಿ ಹಿಂಸಾಚಾರ: ಎಸ್ಐಟಿಯಿಂದ ಘಟನೆ ಮರುಸೃಷ್ಟಿ; ಕೇಂದ್ರ ಸಚಿವರ ಪುತ್ರನನ್ನು ಸ್ಥಳಕ್ಕೆ ಕರೆದೊಯ್ದ ಅಧಿಕಾರಿಗಳು

ಲಖಿಂಪುರ ಖೇರಿ: ಲಿಖಿಂಪುರ ಖೇರಿ ಹಿಂಸಾಚಾರದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ) ಗುರುವಾರ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಮತ್ತು ಇನ್ನಿತರ ಮೂವರನ್ನು ಉತ್ತರ ಪ್ರದೇಶದ ತಿಕೋನಿಯಾ ಗ್ರಾಮಕ್ಕೆ ಕರೆದೊಯ್ದು ಘಟನೆಯನ್ನು ಮರುಸೃಷ್ಟಿಸಿದೆ. ಬಿಗಿ ಭದ್ರತೆಯ ನಡುವೆ ಮೂವರು ಆರೋಪಿಗಳನ್ನು ಲಖಿಂಪುರ ಜಿಲ್ಲಾ ಕೇಂದ್ರದಿಂದ ಸುಮಾರು 60 ಕಿ.ಮೀ. ದೂರದಲ್ಲಿರುವ … Continued

ಯುನಿಟೆಕ್ ಪ್ರಕರಣ; ತಿಹಾರ್ ಜೈಲಿನ 30 ಅಧಿಕಾರಿಗಳ ಅಮಾನತು…!

ನವದೆಹಲಿ: ವಂಚನೆ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಯುನಿಟೆಕ್​​ನ ಮಾಜಿ ಪ್ರವರ್ತಕರಿಗೆ ಸಹಾಯ ಮಾಡಿದ ಆರೋಪದಡಿ ತಿಹಾರ್​ ಜೈಲಿ​​ನ 30 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಯುನಿಟೆಕ್​ ಸಂಸ್ಥೆಯ ಮಾಜಿ ಮುಖ್ಯಸ್ಥರಾದ ಸಂಜಯ್​​ ಚಂದ್ರ ಮತ್ತು ಅಜಯ್​ ಚಂದ್ರ ಅವರಿಗೆ ಸಹಾಯ ಮಾಡಿದ ಆರೋಪದ ಮೇಲೆ ತಿಹಾರ್​ ಜೈಲು ಆಡಳಿತ ಮಂಡಳಿಯು 30 ಅಧಿಕಾರಿಗಳು ಸೇರಿದಂತೆ ಇಬ್ಬರು ಗುತ್ತಿಗೆ ನೌಕರರನ್ನು … Continued

ಕಾಶ್ಮೀರದಲ್ಲಿ ನಾಗರಿಕರ ಹತ್ಯೆ ಮಾಡಿದರೆ ಮತ್ತೊಮ್ಮೆ ಸರ್ಜಿಕಲ್​ ಸ್ಟ್ರೈಕ್​​ ನಡೆಸ್ತೇವೆ: ಪಾಕಿಸ್ತಾನಕ್ಕೆ ಅಮಿತ್​ ಶಾ ಖಡಕ್​ ವಾರ್ನಿಂಗ್‌

ಪಣಜಿ: ಗಡಿಯಲ್ಲಿ ಯಾವುದೇ ರೀತಿಯ ಉಪಟಳ, ದಾಳಿಗಳನ್ನೂ ನಾವು ಸಹಿಸುವುದಿಲ್ಲ. ಪದೇಪದೇ ನಿಯಮ ಉಲ್ಲಂಘನೆ ಮಾಡಿದರೆ, ನಾವು ಇನ್ನಷ್ಟು ಸರ್ಜಿಕಲ್​ ಸ್ಟ್ರೈಕ್​ ನಡೆಸುತ್ತೇವೆ’ ಎಂದು ಗೃಹಸಚಿವ ಅಮಿತ್​ ಶಾ ಪಾಕಿಸ್ತಾನಕ್ಕೆ ಖಡಕ್​ ಎಚ್ಚರಿಕೆ ನೀಡಿದ್ದಾರೆ. ಗೋವಾದ ಧರ್‌ಬಂದೋರಾದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ ಸಂಸ್ಥಾಪನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅತಿಕ್ರಮಣ, ಕಾಶ್ಮೀರದಲ್ಲಿ ನಾಗರಿಕರ ಹತ್ಯೆಯಂಥ ಕೃತ್ಯಗಳು … Continued

ದಿನನಿತ್ಯ ಶಾಲೆಗೆ ಬಾರದ ವಿದ್ಯಾರ್ಥಿಗೆ ಥಳಿಸಿ ಮನಸೋ ಇಚ್ಛೆ ಒದ್ದ ಶಿಕ್ಷಕ…ಈ ರಾಕ್ಷಸೀ ವರ್ತನೆ ವಿಡಿಯೊದಲ್ಲಿ ಸೆರೆ

ಶಾಲೆಗೆ ದಿನನಿತ್ಯ ಬರುತ್ತಿಲ್ಲ ಎಂಬ ಕಾರಣಕ್ಕೆ ಶಿಕ್ಷಕರೊಬ್ಬರು ವಿದ್ಯಾರ್ಥಿಯನ್ನು ಮನಸೋ ಇಚ್ಛೆ ಥಳಿಸಿದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ತಮಿಳುನಾಡಿನ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕ ವಿದ್ಯಾರ್ಥಿಯನ್ನು ಕೋಲಿನಿಂದ ಹೊಡೆದಿದ್ದಲ್ಲದೆ ಕಾಲಿನಿಂದ ಒದೆಯುವುದು ಸಹ ವಿಡಿಯೊದಲ್ಲಿ ಸೆರೆಯಾಗಿದೆ. ಹೊಡೆದ ಏಟಿಗೆ ವಿದ್ಯಾರ್ಥಿ ಅಳುವುದನ್ನು ಮತ್ತು ಕ್ಷಮೆ ಕೇಳುವುದನ್ನು ಸಹ ವಿಡಿಯೊದಲ್ಲಿ ನೋಡಬಹುದಾಗಿದೆ. ಈ … Continued

ಕ್ರೂಸ್‌ ಹಡಗಿನಲ್ಲಿ ಡ್ರಗ್ಸ್‌ ಪ್ರಕರಣ: ಶಾರುಖ್​ ಪುತ್ರನಿಗೆ ಇಂದೂ ಸಿಗಲಿಲ್ಲ ಬಿಡುಗಡೆ ಭಾಗ್ಯ, ಅ.20ರ ವರೆಗೆ ಜೈಲು ವಾಸ​

ಮುಂಬೈ: ಕ್ರೂಸ್ ಶಿಪ್​​​ನಲ್ಲಿ ಡ್ರಗ್ಸ್​ ಪಾರ್ಟಿ ನಡೆಸಿದ ಆರೋಪದಲ್ಲಿ ಬಂಧಿಸಲ್ಪಟ್ಟಿರುವ ಬಾಲಿವುಡ್​ ತಾರೆ ಶಾರುಖ್​ ಖಾನ್​ ಅವರ ಮಗ ಆರ್ಯನ್​ ಖಾನ್​ಗೆ ಇಂದು (ಗುರುವಾರ) ಸಹ ಜಾಮೀನು ಸಿಗಲಿಲ್ಲ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್​ಸಿಬಿ)ಗೆ ಹೇಳಿಕೆ ಸಲ್ಲಿಸಲು ಅವಕಾಶ ನೀಡಿದ ಮುಂಬೈನ ವಿಶೇಷ ಎನ್​ಡಿಪಿಎಸ್​ ಕೋರ್ಟ್​, ಜಾಮೀನು ಅರ್ಜಿ ವಿಚಾರಣೆ ಮುಂದೂಡಿತ್ತು. ಇಂದು (ಗುರವಾರ) ವಿಚಾರಣೆ ನಡೆಸಿದ … Continued

ಸಹಾಯಕ ಪ್ರಾಧ್ಯಾಪಕರ ನೇಮಕ: 2023ರ ವರೆಗೆ ಪಿಎಚ್‌ಡಿ ಕಡ್ಡಾಯವಲ್ಲ ಎಂದ ಯುಜಿಸಿ

ನವದೆಹಲಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಪಿಎಚ್‌ಡಿ ಕಡ್ಡಾಯ ಮಾಡಿದ್ದು, ಆದರೆ ಈ ಬಾರಿ ವಿಶ್ವವಿದ್ಯಾಲಯಗಳ ಅನುದಾನ ಆಯೋಗ (ಯುಜಿಸಿ) ನಿಯಮದಿಂದ ಸಡಿಲಿಕೆ ನೀಡಿದೆ. ಕಡ್ಡಾಯವಾಗಿ ಪಿಎಚ್‌ಡಿ ಹೊಂದಿರಲೇಬೇಕು ಎಂದು ತಾನೇ ಮಾಡಿದ್ದ ಆದೇಶವನ್ನು ತಾತ್ಕಾಲಿಕವಾಗಿ ತಡೆ ಹಿಡಿದಿರುವ ಆಯೋಗ, ಕಡ್ಡಾಯವಾಗಿ ಪಿಎಚ್‌ಡಿ ಹೊಂದುವ ಅಗತ್ಯವಿಲ್ಲ ಎಂದು ಹೇಳಿದೆ. ಕಳೆದ ಎರಡು … Continued