ಜೆನ್‌ ಝಡ್‌ನತ್ತ ಮೋದಿ ಫೋಕಸ್: 1 ಕೋಟಿ ಯುವಕರಿಗೆ ಎಐ(AI) ತರಬೇತಿ, ಉಚಿತ ಕೋಚಿಂಗ್ ಸೇರಿ 6 ಘೋಷಣೆಗಳು

ನವದೆಹಲಿ : ಕಳೆದ ತಿಂಗಳು ಪರೀಕ್ಷಾ ಪತ್ರಿಕೆ ಸೋರಿಕೆಯ ವಿರುದ್ಧ ನಡೆದ ಬೃಹತ್ ವಿದ್ಯಾರ್ಥಿಗಳ ಪ್ರತಿಭಟನೆಯ ಹಿನ್ನೆಲೆಯಲ್ಲಿ, ಶನಿವಾರ ಪ್ರಧಾನಿ ನರೇಂದ್ರ ಮೋದಿಯವರ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಜನರಲ್ ಝಡ್ ಅವರ ಆಕಾಂಕ್ಷೆಗಳು ಮತ್ತು ‘ಯುವ ಶಕ್ತಿ’ಗೆ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದರು. ದೇಶದ ಯುವಶಕ್ತಿ, ಶಿಕ್ಷಣ, ಕ್ರೀಡೆ, ತಂತ್ರಜ್ಞಾನ, ನಾಗರಿಕ ರಕ್ಷಣೆ ಹಾಗೂ ಇಂಧನ … Continued

ಭಾರತದ ಅಭಿವೃದ್ಧಿಗೆ ‘ಸಪ್ತಧಾರೆ’ ಮಂತ್ರ : ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ ಮುಂದಿಟ್ಟ 7 ʼಶಕ್ತಿ ಸೂತ್ರʼಗಳು

ನವದೆಹಲಿ: ಭಾರತವನ್ನು ಆತ್ಮನಿರ್ಭರ ಹಾಗೂ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಗುರಿಯೊಂದಿಗೆ ದೇಶದ ಆರ್ಥಿಕತೆ, ತಂತ್ರಜ್ಞಾನ, ರಕ್ಷಣಾ ಸಾಮರ್ಥ್ಯ ಮತ್ತು ಜಾಗತಿಕ ಪ್ರಭಾವವನ್ನು ಮತ್ತಷ್ಟು ಬಲಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರು ‘ಶಕ್ತಿಯ ಸಪ್ತಧಾರೆ’ ಎಂಬ ಏಳು ಪ್ರಮುಖ ಶಕ್ತಿಧಾರೆಗಳನ್ನು ದೇಶದ ಮುಂದಿಟ್ಟಿದ್ದಾರೆ. ಶನಿವಾರ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪುಕೋಟೆಯ ಆವರಣದಿಂದ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, … Continued

ಅಮಿತ್ ಶಾ ವಿರುದ್ಧದ ಹೇಳಿಕೆ: ರಾಹುಲ್ ಗಾಂಧಿಗೆ ಹಕ್ಕುಚ್ಯುತಿ ನೋಟಿಸ್, ಆ.28ರೊಳಗೆ ಉತ್ತರಿಸಲು ಲೋಕಸಭೆ ಸಚಿವಾಲಯ ಸೂಚನೆ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಲೋಕಸಭೆಯಲ್ಲಿ ಮಾಡಿರುವ ಹೇಳಿಕೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ (LoP) ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಂಸದರಾದ ಅನುರಾಗ ಠಾಕೂರ್ ಮತ್ತು ಸಂಜಯ ಜೈಸ್ವಾಲ್ ಸಲ್ಲಿಸಿರುವ ಪ್ರತ್ಯೇಕ ಹಕ್ಕುಚ್ಯುತಿ ದೂರುಗಳ ಕುರಿತು ಲೋಕಸಭೆ ಕಾರ್ಯಾಲಯ ಸ್ಪಷ್ಟನೆ ಕೇಳಿದ್ದು, ಆಗಸ್ಟ್ 28ರೊಳಗೆ ಉತ್ತರ … Continued

ಪಾಕಿಸ್ತಾನದಿಂದ ಹಿಡಿದು ಅಮೆರಿಕದವರೆಗೆ ಜಗತ್ತು ʼಭಾರತʼವನ್ನು ಹೇಗೆ ನೋಡುತ್ತದೆ ? 36 ದೇಶಗಳ ಸಮೀಕ್ಷೆಯಲ್ಲಿ ಬಹಿರಂಗ

ನವದೆಹಲಿ: ಜಗತ್ತು ಭಾರತವನ್ನು ಹೇಗೆ ನೋಡುತ್ತದೆ? ಪ್ಯೂ ರಿಸರ್ಚ್ ಸೆಂಟರ್ ನಡೆಸಿದ 2026ರ ‘ಸ್ಪ್ರಿಂಗ್ ಗ್ಲೋಬಲ್ ಅಟಿಟ್ಯೂಡ್ಸ್ ಸರ್ವೇ’ಯ ಅಂಕಿ-ಅಂಶಗಳು ಜಗತ್ತಿನ ಹಲವಾರು ದೇಶಗಳು ಭಾರತವನ್ನು ಹೇಗೆ ನೋಡುತ್ತವೆ ಎಂಬುದನ್ನು ವೈವಿಧ್ಯಮಯವಾಗಿ ತೋರಿಸಿವೆ. ವರದಿಯ ಪ್ರಕಾರ, ಫೆಬ್ರವರಿ 9ರಿಂದ ಮೇ 13, 2026ರವರೆಗೆ 36 ದೇಶಗಳಲ್ಲಿ 42,092 ಜನರನ್ನು ಒಳಗೊಂಡ ಸಮೀಕ್ಷೆಯಲ್ಲಿ, ಸರಾಸರಿ 45% ಮಂದಿ … Continued

ಬ್ರಿಕ್ಸ್‌ ಶೃಂಗಸಭೆಗಾಗಿ ಇರಾನ್ ಅಧ್ಯಕ್ಷರು ಭಾರತಕ್ಕೆ : ಯುದ್ಧದ ನಡುವೆ ಪೆಝೆಶ್ಕಿಯನ್ ಭೇಟಿ ಯಾಕೆ ಮಹತ್ವದ್ದು ?

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಅಮೆರಿಕ–ಇರಾನ್ ನಡುವಿನ ಉದ್ವಿಗ್ನತೆ ಮುಂದುವರಿದಿರುವ ಸಮಯದಲ್ಲಿ ಇರಾನ್ ಅಧ್ಯಕ್ಷ ಮಸೂದ್ ಪೆಝೆಶ್ಕಿಯನ್ ಅವರು ಸೆಪ್ಟೆಂಬರ್‌ನಲ್ಲಿ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಸೆಪ್ಟೆಂಬರ್ 12 ಮತ್ತು 13ರಂದು ನಡೆಯಲಿರುವ 18ನೇ ಬ್ರಿಕ್ಸ್‌ (BRICS) ಶೃಂಗಸಭೆಯಲ್ಲಿ ಭಾಗವಹಿಸಲು ಅವರು ದೆಹಲಿಗೆ ಆಗಮಿಸಲಿದ್ದಾರೆ ಎಂದು ಕೆಲವು ವರದಿಗಳು ತಿಳಿಸಿವೆ. ಪೆಝೆಶ್ಕಿಯನ್ ಅವರ ಭಾರತ ಭೇಟಿ … Continued

ಕೇಂದ್ರ ಆರೋಗ್ಯ ಸಚಿವ ಜೆ ಪಿ ನಡ್ಡಾ ದೆಹಲಿ ಏಮ್ಸ್‌ಗೆ ದಾಖಲು

ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಅವರು ಅಸ್ವಸ್ಥತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS)ಗೆ ದಾಖಲಾಗಿದ್ದಾರೆ. 65 ವರ್ಷದ ನಡ್ಡಾ ಅವರನ್ನು ಆಗಸ್ಟ್ 13ರ ಗುರುವಾರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗಿದೆ. ಅವುಗಳಲ್ಲಿ ಹೃದಯದ ಕೊರೊನರಿ ಆಂಜಿಯೋಗ್ರಫಿ ಪರೀಕ್ಷೆಯೂ ಸೇರಿದೆ. … Continued

ಕರ್ನಾಟಕದಲ್ಲಿ ಗುಟ್ಕಾ-ಪಾನ್‌ ಮಸಾಲಾ ಮಾರಾಟ ನಿಷೇಧ ಆದೇಶ ಶೀಘ್ರವೇ ವಾಪಸ್…?!

ಬೆಂಗಳೂರು: ಗುಟ್ಕಾ-ಪಾನ್ ಮಸಾಲ ಮಾರಾಟ ನಿಷೇಧ (Gutka Ban) ಆದೇಶವನ್ನು ರಾಜ್ಯ ಸರ್ಕಾರ ವಾಪಸ್‌ ಪಡೆಯುವ ಸಾಧ್ಯತೆಯಿದೆ. ರಾಜ್ಯಾದ್ಯಂತ ನಿಕೋಟಿನ್‌ಯುಕ್ತ ಗುಟ್ಕಾ ಮತ್ತು ಪಾನ್ ಮಸಾಲ ಮಾರಾಟವನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿ ಹೊರಡಿಸಲಾಗಿದ್ದ ಸರ್ಕಾರದ ಆದೇಶವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ. ಆದರೆ ಅಧಿಕೃತವಾಗಿ ನಿಷೇಧ ಆದೇಶ ರದ್ದುಗೊಂಡಿರುವ … Continued

“ಇದು ವಿದ್ಯಾರ್ಥಿಗಳು ಮತ್ತು ನನ್ನ ನಡುವಿನ ವಿಚಾರ”: ಬಾರ್ ಕೌನ್ಸಿಲ್ ಆದೇಶಕ್ಕೆ ಸಿಜೆಐ ಸೂರ್ಯಕಾಂತ ತೀವ್ರ ಅಸಮಾಧಾನ

ನವದೆಹಲಿ : ಹೈದರಾಬಾದಿನ ನ್ಯಾಷನಲ್ ಅಕಾಡೆಮಿ ಆಫ್ ಲೀಗಲ್ ಸ್ಟಡೀಸ್ ಆ್ಯಂಡ್ ರಿಸರ್ಚ್ (NALSAR) ವಿಶ್ವವಿದ್ಯಾಲಯದ 2026ರ ಬ್ಯಾಚ್‌ನ ಕಾನೂನು ಪದವೀಧರರನ್ನು ಯಾವುದೇ ರಾಜ್ಯ ಬಾರ್ ಕೌನ್ಸಿಲ್‌ನಲ್ಲಿ ನೋಂದಣಿ ಮಾಡಿಕೊಳ್ಳಬಾರದು ಎಂದು ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈ ಕ್ರಮದ ಕುರಿತು ಮುಖ್ಯ ನ್ಯಾಯಮೂರ್ತಿ … Continued

ಚಮೋಲಿ ಜಲವಿದ್ಯುತ್ ಯೋಜನೆಯ ಸುರಂಗಕ್ಕೆ ನೀರು; 7 ಮಂದಿ ಸಾವು, 13 ಮಂದಿಗೆ ಗಾಯ

ಚಮೋಲಿ (ಉತ್ತರಾಖಂಡ): ಉತ್ತರಾಖಂಡದ ಚಮೋಲಿ ಜಿಲ್ಲೆಯ ಪಿಪಲ್ಕೋಟಿ ಪ್ರದೇಶದಲ್ಲಿರುವ ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್‌ (THDC)ನ ಜಲವಿದ್ಯುತ್ ಯೋಜನಾ ಸ್ಥಳದಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗಕ್ಕೆ ನೀರು ಏಕಾಏಕಿ ನುಗ್ಗಿದ ಪರಿಣಾಮ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದು, 13 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಈ ಘಟನೆ ಗುರುವಾರ ಸಂಜೆ ನಡೆದಿದೆ.ಗುರುವಾರ ಸಂಜೆ … Continued

ಸಿಜೆಐ ಆಹ್ವಾನಿಸಿದ್ದಕ್ಕೆ ವಿರೋಧಿಸಿದ ನಾಲ್ಸಾರ್ ವಿದ್ಯಾರ್ಥಿಗಳ ವಿರುದ್ಧ ದೊಡ್ಡ ಕ್ರಮಕ್ಕೆ ಮುಂದಾಗಿ ನಂತರ ಹಿಂಪಡೆದ ಬಿಸಿಐ

ನವದೆಹಲಿ: ಹೈದರಾಬಾದ್‌ನ ನ್ಯಾಷನಲ್ ಅಕಾಡೆಮಿ ಆಫ್ ಲೀಗಲ್ ಸ್ಟಡೀಸ್ ಆ್ಯಂಡ್ ರಿಸರ್ಚ್ (NALSAR) ವಿಶ್ವವಿದ್ಯಾಲಯದ 2026ನೇ ಬ್ಯಾಚ್‌ನ ಕಾನೂನು ಪದವೀಧರರು ವಕೀಲರಾಗಿ ನೋಂದಣಿ ಮಾಡುವುದಕ್ಕೆ ಹೇರಿದ್ದ ನಿರ್ಬಂಧವನ್ನು ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ಗುರುವಾರ ಸಂಜೆ ಹಿಂಪಡೆದಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ ಅವರನ್ನು ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಆಹ್ವಾನಿಸುವುದನ್ನು ಕೆಲ ವಿದ್ಯಾರ್ಥಿಗಳು ವಿರೋಧಿಸಿದ ಹಿನ್ನೆಲೆಯಲ್ಲಿ, … Continued