ಮುಲಾಯಂ ಸಿಂಗ್ ಯಾದವ್ ಸೊಸೆ ಇಂದು ಬಿಜೆಪಿಗೆ ಸೇರ್ಪಡೆ..?: ಬಿಜೆಪಿ ನಾಯಕನ ಹೇಳಿಕೆ

ನವದೆಹಲಿ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಅವರು ಇಂದು ಅಥವಾ ನಾಳೆ ಬಿಜೆಪಿ ಸೇರಲಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಮಂಗಳವಾರ ರಾತ್ರಿ ಹೇಳಿದ್ದಾರೆ. ಯಾದವ್ ಅವರು ಬಿಜೆಪಿಗೆ ಸೇರ್ಪಡೆಯಾದರೆ, ರಾಜ್ಯ ಚುನಾವಣೆಗೆ ಕೆಲವೇ ವಾರಗಳಿರುವಾಗ ಸಮಾಜವಾದಿ ಪಕ್ಷಕ್ಕೆ ದೊಡ್ಡ ಹೊಡೆತ ಬೀಳಲಿದೆ. ಮುಲಾಯಂ ಸಿಂಗ್ … Continued

ಐಎನ್‌ಎಸ್‌ ರಣವೀರ್ ಹಡಗಿನಲ್ಲಿ ಸ್ಫೋಟ : ನೌಕಾಪಡೆಯ ಮೂವರು ಸಾವು

ನವದೆಹಲಿ: ಭಾರತೀಯ ನೌಕಾಪಡೆಯ ದಾಳಿ ನೌಕೆ ಐಎನ್​ಎಸ್ ರಣವೀರ್​ನಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ ಮೂವರು ಯೋಧರು ಮೃತಪಟ್ಟಿದ್ದಾರೆ, ಹಲವರಿಗೆ ಗಾಯವಾಗಿದೆ. ಮುಂಬೈನಲ್ಲಿ ನೌಕಾಪಡೆಯ ಧಕ್ಕೆಯಲ್ಲಿ ನಡೆದ ದುರಂತದಲ್ಲಿ ಮೂವರುಮೃತಪಟ್ಟಿದ್ದನ್ನು ರಕ್ಷಣಾ ಇಲಾಖೆಯು ಪತ್ರಿಕಾ ಹೇಳಿಕೆಯಲ್ಲಿ ದೃಢಪಡಿಸಿದೆ. ಯುದ್ಧನೌಕೆಯ ಕಂಪಾರ್ಟ್​ಮೆಂಟ್​ ಒಂದರಲ್ಲಿ ಸ್ಫೋಟ ಸಂಭವಿಸಿದೆ. ಆದರೆ ನೌಕೆಗೆ ದೊಡ್ಡಮಟ್ಟದಲ್ಲಿ ಹಾನಿಯಾಗಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ನೌಕೆಯಲ್ಲಿದ್ದ … Continued

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ.. ಪ್ರಾಯೋಗಿಕ ಪರೀಕ್ಷೆಗೂ ದಿನಾಂಕ ನಿಗದಿ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ (PUC Board) 2021-22 ನೇ ಸಾಲಿನ ದ್ವೀತಿಯ ಪಿಯುಸಿ (Second PUC)ಯ ತಾತ್ಕಾಲಿಕ ವೇಳಾಪಟ್ಟಿ (Exam Timetable) ಬಿಡುಗಡೆ ಮಾಡಿದೆ. ಆ ಪ್ರಕಾರ ಏಪ್ರಿಲ್ 16ರಿಂದ ಮೇ 4ರವರೆಗೆ ಪಿಯು ವಾರ್ಷಿಕ ಪರೀಕ್ಷೆ ನಡೆಯಲಿದೆ. ಏಪ್ರಿಲ್​ 14 ಗಣಿತ, ಏಪ್ರಿಲ್​ 18 ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಏ.20ರಂದು ಇತಿಹಾಸ, ಭೌತಶಾಸ್ತ್ರ, … Continued

ಭಾರತೀಯ ಸೇನೆಯಿಂದ ಹಿಮಪಾತದಲ್ಲಿ ಸಿಲುಕಿದ್ದ 14 ಮಂದಿ ರಕ್ಷಣೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ತಂಗ್ದಾರ್-ಚೌಕಿಬಲ್ ಹೆದ್ದಾರಿಯಲ್ಲಿ ಹಿಮ ಕುಸಿತದಲ್ಲಿ ಸಿಲುಕಿದ್ದ 14 ನಾಗರಿಕರನ್ನು ಭಾರತೀಯ ಸೇನೆ ರಕ್ಷಿಸಿದೆ. ಹಿಮಪಾತದಲ್ಲಿ 14 ಜನರು ಸಿಲುಕಿಕೊಂಡಿದ್ದರು. ಅವರನ್ನು ಭಾರತೀಯ ಸೈನಿಕರು ರಕ್ಷಣೆ ಮಾಡಿದ್ದು, ಅವರನ್ನು ಹತ್ತಿರದ ಸೇನಾ ಶಿಬಿರಕ್ಕೆ ಕರೆದೊಯ್ದು ಆಹಾರ ನೀಡಲಾಗಿದೆ. ಸಿಲುಕಿಕೊಂಡವರಲ್ಲಿ ಹೃದ್ರೋಗಿಗಳು, ಮಹಿಳೆಯರು, ಮಕ್ಕಳು ಮತ್ತು ವೃದ್ಧರು ಸಹ ಇದ್ದರು. ಪ್ರಯಾಣಿಕರು ತುಂಬಿರುವ … Continued

ಅಕ್ರಮ ಮರಳುಗಾರಿಕೆ ಪ್ರಕರಣ: ಪಂಜಾಬ್‌ ಸಿಎಂ ಚನ್ನಿ ಸೋದರಳಿಯ-ಇತರರ ಮನೆಗಳ ಮೇಲೆ ಇಡಿ ದಾಳಿ

ಚಂಡೀಗಢ: ಅಕ್ರಮ ಮರಳು ಗಣಿಗಾರಿಕೆ ಕಂಪನಿಗಳ ವಿರುದ್ಧ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆಗೆ ಕೇವಲ ಒಂದು ತಿಂಗಳು ಇರುವಾಗ ಜಾರಿ ನಿರ್ದೇಶನಾಲಯ ಮಂಗಳವಾರ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ತನಿಖಾ ಸಂಸ್ಥೆಯು ಇಂದು ಮುಂಜಾನೆ ಮೊಹಾಲಿಯಲ್ಲಿರುವ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರ ಸೋದರಳಿಯ ಭೂಪಿಂದರ್ ಸಿಂಗ್ ಹನಿ ಅವರ … Continued

ಆಘಾತಕಾರಿ ಘಟನೆ: ಪ್ರಾಣಿಬಲಿ ಕೊಡುವ ವೇಳೆ ಮೇಕೆ ಬದಲು ಮನುಷ್ಯನನ್ನೇ ಕತ್ತರಿಸಿದ ಕುಡುಕ..!

ಅಮರಾವತಿ (ಆಂಧ್ರಪ್ರದೇಶ): ಕುಡಿತದ ಅಮಲಿನಲ್ಲಿ ಬಲಿಕೊಡಬೇಕಿದ್ದ ಮೇಕೆಯ ಬದಲು ಮತ್ತೊಬ್ಬ ವ್ಯಕ್ತಿಯ ಕತ್ತು ಕೊಯ್ದಿರುವ ಆಘಾತಕಾರಿ ಘಟನೆ ನಡೆದಿದೆ.ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಭಾನುವಾರ ಸಂಕ್ರಾಂತಿ ಆಚರಣೆ ವೇಳೆ ಈ ಘಟನೆ ನಡೆದಿದೆ. ಪೋಲೀಸರ ಪ್ರಕಾರ, ಅಮಲೇರಿದ ಸ್ಥಿತಿಯಲ್ಲಿದ್ದ ಚಲಪತಿ ಎಂಬಾತ ಮೇಕೆಯನ್ನು ಕಡಿಯುವ ಬದಲು ಮೇಕೆಯನ್ನು ಹಿಡಿದಿದ್ದ ವ್ಯಕ್ತಿಯೊಬ್ಬನನ್ನು ಹಿಡಿದಿದ್ದ ವ್ಯಕ್ತಿಯೊಬ್ಬನ ಕುತ್ತಿಗೆಯನ್ನು ಕತ್ತರಿಸಿದ್ದಾನೆ.ತೀವ್ರ ರಕ್ತಸ್ರಾವದಿಂದ … Continued

ಭಾರತದಲ್ಲಿ ಹೊಸದಾಗಿ 2.38 ಲಕ್ಷ ಕೋವಿಡ್‌ ಪ್ರಕರಣಗಳು ದಾಖಲು, ಇದು ನಿನ್ನೆಗಿಂತ 20 ಸಾವಿರ ಕಡಿಮೆ

ನವದೆಹಲಿ: , ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ (ಮಂಗಳವಾರ) 2,38,018 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳು ತಿಳಿಸಿವೆ. ಇದು ಭಾರತದ ಪ್ರಸ್ತುತ ಸಕ್ರಿಯ ಪ್ರಕರಣವನ್ನು 17,36,628 ಕ್ಕೆ ಒಯ್ದಿದೆ. ಸಕ್ರಿಯ ಪ್ರಕರಣಗಳು ಪ್ರಸ್ತುತ ಶೇಕಡಾ 4.62 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 310 ಕೊರೊನಾ ರೋಗಿಗಳು ಪ್ರಾಣ … Continued

ಕೋವಿಡ್‌-19 ಗರಿಷ್ಠ ದಾಟಿದ್ದೇವೆಯೇ?…ಕೊರೊನಾ ಉಲ್ಬಣದ ಮಧ್ಯೆಯೇ ಹಲವು ದೊಡ್ಡ ನಗರಗಳಲ್ಲಿ ಸೋಂಕು ಇಳಿಮುಖ

ನವದೆಹಲಿ: ಭಾರತದ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಲೇ ಇದ್ದರೂ, ಹಲವಾರು ಪ್ರಮುಖ ನಗರಗಳು ಈಗ ಇಳಿಕೆಯ ಪ್ರವೃತ್ತಿಯನ್ನು ವರದಿ ಮಾಡಲು ಪ್ರಾರಂಭಿಸಿವೆ. ಸೋಮವಾರ 31,111 ಹೊಸ ಪ್ರಕರಣಗಳನ್ನು ವರದಿ ಮಾಡಿರುವ ಮಹಾರಾಷ್ಟ್ರ – ಹಿಂದಿನ ದಿನಕ್ಕಿಂತ 10 ಸಾವಿರ ಕಡಿಮೆ ವರದಿ ಮಾಡಿದೆ. ಪಶ್ಚಿಮ ಬಂಗಾಳದಂತೆ ದೆಹಲಿ ಕೂಡ ಸಂಖ್ಯೆಯಲ್ಲಿ ಗಮನಾರ್ಹ ಕುಸಿತವನ್ನು ವರದಿ ಮಾಡಿದೆ. ಭಾನುವಾರ … Continued

ಐಶ್ವರ್ಯಾ ರಜನಿಕಾಂತ ಜೊತೆಗಿನ 18 ವರ್ಷಗಳ ದಾಂಪತ್ಯಕ್ಕೆ ಗುಡ್‌ ಬೈ ಹೇಳಿದ ತಮಿಳಿನ ಖ್ಯಾತ ನಟ ಧನುಷ್..!

ಚೆನ್ನೈ: ತಮಿಳು ನಟ ಧನುಷ್ ಸೋಮವಾರ (ಜನವರಿ 17) 18 ವರ್ಷಗಳ ನಂತರ ತಮ್ಮ ಪತ್ನಿ ಐಶ್ವರ್ಯ ಅವರಿಂದ ಪ್ರತ್ಯೇಕವಾಗುವುದನ್ನು ಪ್ರಕಟಿಸಿದ್ದಾರೆ. ನಟ ಟ್ವಿಟರ್‌ ಮೂಲಕ ಈ ಮಾಹಿತಿ ಹಂಚಿಕೊಂಡಿದ್ದಾರೆ. ತಾನು ಮತ್ತು ಐಶ್ವರ್ಯ ದಂಪತಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ ಎಂದು ಬರೆದಿದ್ದಾರೆ. “18 ವರ್ಷಗಳ ಕಾಲ ಸ್ನೇಹಿತರು, ದಂಪತಿ, ಪೋಷಕರು ಮತ್ತು ಹಿತೈಷಿಗಳಾಗಿ ಪರಸ್ಪರ.. ಪ್ರಯಾಣವು … Continued

ಉತ್ತರಾಖಂಡ ಚುನಾವಣೆ 2022: ಝೀ ನ್ಯೂಸ್‌ ಸಮೀಕ್ಷೆಯಲ್ಲಿ ಗೆಲ್ಲುವವರು ಯಾರು..?

ನವದೆಹಲಿ: ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಗುಡ್ಡಗಾಡು ರಾಜ್ಯವಾದ ಉತ್ತರಾಖಂಡದಲ್ಲಿ ಝೀ ನ್ಯೂಸ್ ಮತದಾರರಲ್ಲಿ ಅಭಿಪ್ರಾಯ ಸಂಗ್ರಹವನ್ನು ನಡೆಸಿದೆ. ಯುವ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ನೇತೃತ್ವದಲ್ಲಿ ಆಡಳಿತಾರೂಢ ಬಿಜೆಪಿ ಚುನಾವಣೆ ಎದುರಿಸುತ್ತಿದ್ದರೆ, ಪ್ರತಿಪಕ್ಷ ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಮೇಲೆ ತನ್ನ ಭರವಸೆಯನ್ನು … Continued