ವೀಡಿಯೊ | ರಾಮಾಯಣ ಕಥೆಯ ʼದಿ ರಾಮಾಯಣ ಟ್ರಯಲ್ʼ ವೀಡಿಯೊ ಜಾಹೀರಾತು ಮೂಲಕ ಪೌರಾಣಿಕ ಸ್ಥಳಗಳ ದರ್ಶನ ಮಾಡಿಸುವ ಶ್ರೀಲಂಕಾ ಏರ್‌ಲೈನ್ಸ್…!

ಶ್ರೀಲಂಕಾವು ಪುರಾತನ ಹಿಂದೂ ಮಹಾಕಾವ್ಯವಾದ ರಾಮಾಯಣಕ್ಕೆ ಸಂಬಂಧಿಸಿದಂತೆ ಐಕಾನಿಕ್ ಸ್ಥಳಗಳಿಗೆ ವೀಕ್ಷಕರನ್ನು ಕರೆದೊಯ್ಯುವ ‘ದಿ ರಾಮಾಯಣ ಟ್ರಯಲ್’ ಅನ್ನು ಪ್ರಚಾರ ಮಾಡಲು ಶ್ರೀಲಂಕಾ ಏರ್‌ಲೈನ್ಸ್ ಹೊಸ ಜಾಹೀರಾತನ್ನು ಬಿಡುಗಡೆ ಮಾಡಿದೆ. ಜಾಹೀರಾತು ಶ್ರೀಲಂಕಾದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ನಿರೂಪಣೆಯನ್ನು ಒಳಗೊಂಡಿದೆ, ರಾಮಾಯಣಕ್ಕೆ ಸಂಬಂಧಿಸಿದ ಪೌರಾಣಿಕ ಸ್ಥಳಗಳಿಗೆ ಪ್ರವಾಸಿಗರನ್ನು ಆಹ್ವಾನಿಸುತ್ತದೆ. “ದಿ ರಾಮಾಯಣ ಟ್ರಯಲ್‌ʼನಲ್ಲಿ ರಾಮಾಯಣ ಮಹಾಕಾವ್ಯದ … Continued

ಬ್ರಾಂಪ್ಟನ್ ಹಿಂದೂ ದೇವಾಲಯದ ಮೇಲೆ ಖಲಿಸ್ತಾನಿಗಳ ದಾಳಿ ಪ್ರಕರಣ ; ಕೆನಡಾ ಪೊಲೀಸರಿಂದ ಮತ್ತೊಬ್ಬನ ಬಂಧನ

ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದ ಮೇಲೆ ಖಲಿಸ್ತಾನಿಗಳು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೀಲ್ ಪ್ರಾದೇಶಿಕ ಪೊಲೀಸರು ಮತ್ತೊಬ್ಬನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಬ್ರಾಂಪ್ಟನ್‌ನ ಇಂದರ್‌ಜೀತ್ ಗೋಸಲ್ (35) ಎಂದು ಗುರುತಿಸಲಾಗಿದ್ದು, ಆತನ ಮೇಲೆ ಆಯುಧದಿಂದ ಹಲ್ಲೆ ನಡೆಸಿದ ಆರೋಪ ಹೊರಿಸಲಾಗಿದೆ. ಕಳೆದ ವಾರ, ಬ್ರಾಂಪ್ಟನ್‌ನ ಹಿಂದೂ ಮಂದಿರದಲ್ಲಿ ಭಾರತೀಯ ಅಧಿಕಾರಿಗಳು ಭಾಗವಹಿಸಿದ್ದ ದೂತಾವಾಸ ಕಾರ್ಯಕ್ರಮಕ್ಕೆ ಖಲಿಸ್ತಾನವನ್ನು … Continued

ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ ನಿಷೇಧಿಸಿದ ಸ್ವಿಟ್ಜರ್ಲ್ಯಾಂಡ್‌ ಸರ್ಕಾರ

ಸ್ವಿಟ್ಜರ್ಲ್ಯಾಂಡ್‌ ಸರ್ಕಾರವು ಕೂಡ ಸಾರ್ವಜನಿಕ ಸ್ಥಳದಲ್ಲಿ ಕಣ್ಣು, ಮುಖ, ಮೂಗು ಬಾಯಿ ಮುಚ್ಚುವ ಮುಖಗವಸು (facial coverings in public) ಧರಿಸುವುದಕ್ಕೆ ನಿಷೇಧ ಹೇರಿದೆ. ಇದು 2025 ಜನವರಿ 1ರಿಂದ ಬುರ್ಖಾ ನಿಷೇಧ ಕಾನೂನು ಜಾರಿಗೆ ಬರಲಿದೆ. ಸ್ವಿಟ್ಜರ್ಲ್ಯಾಂಡ್‌ ಸರ್ಕಾರವು ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ ಧರಿಸಿ ಓಡಾಡುವಂತಿಲ್ಲ ಎಂಬ ಕಠಿಣ ಕಾನೂನು ಕ್ರಮವನ್ನು ಜಾರಿಗೊಳಿಸಿದೆ. ಹಾಗಾಗಿ … Continued

ಕೊನೆಗೂ ಕೆನಡಾದಲ್ಲಿ ʼಖಲಿಸ್ತಾನಿ ಪ್ರತ್ಯೇಕತಾವಾದಿಗಳುʼ ಇರುವುದನ್ನು ಒಪ್ಪಿಕೊಂಡ ಪ್ರಧಾನಿ ಜಸ್ಟಿನ್‌ ಟ್ರುಡೊ…!

ಒಟ್ಟಾವಾ : ಕೆನಡಾದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಇದ್ದಾರೆ ಎಂಬುದನ್ನು ಪ್ರಧಾನಿ ಜಸ್ಟಿನ್ ಟ್ರುಡೊ ಒಪ್ಪಿಕೊಂಡಿದ್ದಾರೆ. ಆದರೆ ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಕೆನಡಾದಲ್ಲಿನ ಸಿಖ್ ಸಮುದಾಯವನ್ನು ಒಟ್ಟಾರೆಯಾಗಿ ಪ್ರತಿನಿಧಿಸುವುದಿಲ್ಲ ಎಂದು ಹೇಳಿದ್ದಾರೆ. ಒಟ್ಟಾವಾದಲ್ಲಿರುವ ಪಾರ್ಲಿಮೆಂಟ್ ಹಿಲ್‌ನಲ್ಲಿ ಇತ್ತೀಚೆಗೆ ನಡೆದ ದೀಪಾವಳಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡುವಾಗ ಕೆನಡಾದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಇದ್ದಾರೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ಕೆನಡಾದಲ್ಲಿ ಹಿಂದೂಗಳಲ್ಲಿ ಪ್ರಧಾನಿ … Continued

ವೀಡಿಯೊ..| ಪಾಕಿಸ್ತಾನದ ರೈಲು ನಿಲ್ದಾಣದಲ್ಲಿ ಆತ್ಮಾಹುತಿ ಬಾಂಬ್‌ ದಾಳಿ ; ಸಾವಿನ ಸಂಖ್ಯೆ 24ಕ್ಕೆ ಏರಿಕೆ; ಸ್ಫೋಟದ ಕ್ಷಣ ಸಿಸಿಟಿವಿಯಲ್ಲಿ ಸೆರೆ

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ರೈಲು ನಿಲ್ದಾಣದ ಬಳಿ ನಡೆದ ಆತ್ಮಾಹುತಿ ಬಾಂಬ್‌ ಸ್ಫೋಟದಲ್ಲಿ ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ ಮತ್ತು 46 ಜನರು ಗಾಯಗೊಂಡಿದ್ದಾರೆ. ನಿಷೇಧಿತ ಬಲೂಚ್ ಲಿಬರೇಶನ್ ಆರ್ಮಿ (BLA) ದಾಳಿಯ ಹೊಣೆ ಹೊತ್ತುಕೊಂಡಿದೆ. ರೈಲು ತನ್ನ ಪ್ಲಾಟ್‌ಫಾರ್ಮ್‌ಗೆ ಬರುವ ಮುನ್ನವೇ ರೈಲ್ವೆ ನಿಲ್ದಾಣದ ಬುಕಿಂಗ್ ಕಚೇರಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಪಾಕಿಸ್ತಾನದ … Continued

ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆಯಾದ ನಂತರ 1.73 ಲಕ್ಷ ಕೋಟಿ ರೂ. ಹಣ ಗಳಿಸಿದ ಎಲೋನ್ ಮಸ್ಕ್…!

ವಾಷಿಂಗ್ಟನ್‌ ; 2024ರ ಅಮೆರಿಕದ ಅಧ್ಯಕ್ಷೀಯ ಚುನಾವಣೆಗಳಲ್ಲಿ ಡೊನಾಲ್ಡ್ ಟ್ರಂಪ್ ಐತಿಹಾಸಿಕ ಗೆಲುವು ಸಾಧಿಸಿದ ನಂತರ ಟೆಸ್ಲಾ ಸಿಇಒ ಎಲೋನ್ ಮಸ್ಕ್ ಭಾರೀ ಶ್ರೀಮಂತರಾಗಿದ್ದಾರೆ…! ಅವರ ಸಂಪತ್ತು ಬುಧವಾರ $ 20.5 ಶತಕೋಟಿ (ಸುಮಾರು 1.73 ಲಕ್ಷ ಕೋಟಿ ರೂ.)ಅಥವಾ ಶೇಕಡಾ 7.73%ರಷ್ಟು ಏರಿಕೆ ಕಂಡಿದೆ….!! ಈಗ ಅವರ ಸಂಪತ್ತು $285.2 ಶತಕೋಟಿಗಳಷ್ಟಾಗಿದೆ ಎಂದು ಫೋರ್ಬ್ಸ್‌ನ … Continued

ಅದ್ಭುತ ಪುನರಾಗಮನ ; ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆ, ಕಮಲಾ ಹ್ಯಾರಿಸ್‌ ಪರಾಭವ

ವಾಷಿಂಗ್ಟನ್‌ : 2024ರ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ (US presidential elections 2024) ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಜಯಗಳಿಸಿದ್ದು, ಎರಡನೇ ಬಾರಿಗೆ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. ಅಸೋಸಿಯೇಟೆಡ್ ಪ್ರೆಸ್‌ನ ಪ್ರೊಜೆಕ್ಷನ್ ಪ್ರಕಾರ, ಟ್ರಂಪ್ ಅವರು 277 ಎಲೆಕ್ಟೊರಲ್ ಮತಗಳನ್ನು  ಪಡೆದಿದ್ದಾರೆ. ಅವರು ಗೆಲ್ಲಲು ಅಗತ್ಯವಿರುವ 270-ಸಂಖ್ಯೆಯನ್ನು ದಾಟಿದ್ದಾರೆ. ಇದರೊಂದಿಗೆ, ಅವರು ತಮ್ಮ ಎದುರಾಳಿಯಾದ … Continued

ವೀಡಿಯೊಗಳು…| ಬಾಂಗ್ಲಾದೇಶದಲ್ಲಿ ಹಿಂದೂ ಪ್ರತಿಭಟನಾಕಾರರ ಮೇಲೆ ಸೇನೆಯಿಂದ ಕಾರ್ಯಾಚರಣೆ, ಲಾಠಿ ಚಾರ್ಜ್‌

ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ನೆಸ್ (ಇಸ್ಕಾನ್) ಮತ್ತು ಸನಾತನ ಧರ್ಮದ ವಿರುದ್ಧ ಮುಸ್ಲಿಂ ವ್ಯಾಪಾರಿಯ ಅವಹೇಳನಕಾರಿ ಪೋಸ್ಟ್ ವಿರುದ್ಧ ಪ್ರತಿಭಟನೆ ನಡೆಸಿದ ನಂತರ ಬಾಂಗ್ಲಾದೇಶದ ಭದ್ರತಾ ಪಡೆಗಳು ಚಿತ್ತಗಾಂಗ್‌ನಲ್ಲಿ ಹಿಂದೂಗಳ ಮೇಲೆ ದಾಳಿ ಮಾಡಲು ಪ್ರಾರಂಭಿಸಿವೆ. ಇಸ್ಕಾನ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಕರೆದಿರುವ ವ್ಯಾಪಾರಿ ಉಸ್ಮಾನ್ ಮೊಲ್ಲಾ ಅವರ ಫೇಸ್‌ಬುಕ್ ಪೋಸ್ಟ್ ನಂತರ … Continued

ವೀಡಿಯೊ..| ಪಂದ್ಯ ನಡೆಯುತ್ತಿರುವಾಗಲೇ ಸಿಡಿಲು ಬಡಿದು ಫುಟ್ಬಾಲ್ ಆಟಗಾರ ಸಾವು, ಐವರಿಗೆ ಗಾಯ

ಪೆರುವಿನಲ್ಲಿ ಫುಟ್ಬಾಲ್ ಪಂದ್ಯ ನಡೆಯುತ್ತಿರುವಾಗ ಸಿಡಿಲು ಬಡಿದು ಫುಟ್ಬಾಲ್ ಆಟಗಾರನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೆರುವಿನ ಚಿಲ್ಕಾ ಜಿಲ್ಲೆಯ ಪೆರುವಿಯನ್ ನಗರದಲ್ಲಿ ಹುವಾನ್‌ಕಾಯೊದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ತಂಡಗಳಾದ ಜುವೆಂಟುಡ್ ಬೆಲ್ಲವಿಸ್ಟಾ ಮತ್ತು ಫ್ಯಾಮಿಲಿಯಾ ಚೋಕಾ ನಡುವೆ ಫುಟ್‌ಬಾಲ್ ಪಂದ್ಯ ನಡೆಯುತ್ತಿತ್ತು. ದಿ ಸನ್‌ನ ವರದಿಯ ಪ್ರಕಾರ, … Continued

ಖಲಿಸ್ತಾನಿಗಳು-ಟ್ರುಡೊ ವಿರುದ್ಧ ನಿರ್ಣಯ ಅಂಗೀಕರಿಸಿದ ಕೆನಡಾದ 36 ಹಿಂದೂ-ಸಿಖ್ ಗುಂಪುಗಳು…

ಕೆನಡಾದ ಹಿಂದೂ ಮತ್ತು ಸಿಖ್ ಗುಂಪುಗಳು ಖಲಿಸ್ತಾನಿ ಗುಂಪುಗಳ ವಿರುದ್ಧ ನಿರ್ಣಯವನ್ನು ಅಂಗೀಕರಿಸಲು ಸೋಮವಾರ ಒಗ್ಗೂಡಿ ಸಭೆ ನಡೆಸಿವೆ. ಮೂಲಗಳ ಪ್ರಕಾರ, ಖಾಲ್ಸಾ ದಿವಾನ್ ಸೊಸೈಟಿ ರಾಸ್ ಸ್ಟ್ರೀಟ್ ವ್ಯಾಂಕೋವರ್ ಗುರುದ್ವಾರದಿಂದ ಸಭೆಯನ್ನು ಆಯೋಜಿಸಲಾಗಿತ್ತು, ಅಲ್ಲಿ 36 ಹಿಂದೂ ಸೊಸೈಟಿಗಳು ಮತ್ತು ಸಿಖ್ ಗುಂಪುಗಳ ಸುಮಾರು 1,000 ಜನರು ಭಾಗವಹಿಸಿದ್ದರು. ಈ ಗುಂಪುಗಳು ಖಲಿಸ್ತಾನಿ ಉಗ್ರಗಾಮಿಗಳು … Continued