ಶೇಖ್ ಹಸೀನಾ ವಿರುದ್ಧ ಸಂಚು | ಖಲೀದಾ ಜಿಯಾ ಪುತ್ರ-ಪಾಕಿಸ್ತಾನದ ಐಎಸ್‌ಐ ಸಭೆ-ಲಂಡನ್ ನಲ್ಲಿ ಯೋಜನೆ-ಢಾಕಾದಲ್ಲಿ ಕಾರ್ಯರೂಪ: ಬಾಂಗ್ಲಾದೇಶ ಗುಪ್ತಚರ ವರದಿ

ಗುಪ್ತಚರ ವರದಿಗಳ ಪ್ರಕಾರ, ಶೇಖ್ ಹಸೀನಾ ಸರ್ಕಾರದ ಪತನಕ್ಕೆ ಕಾರಣವಾದ ಮೀಸಲಾತಿ ವ್ಯವಸ್ಥೆಯ ವಿರುದ್ಧ ಭಾರಿ ಪ್ರತಿಭಟನೆಗಳಿಗೆ ಸಾಕ್ಷಿಯಾದ ಬಾಂಗ್ಲಾದೇಶದಲ್ಲಿ ಆಡಳಿತ ಬದಲಾವಣೆಯ ನೀಲನಕ್ಷೆಯನ್ನು ಲಂಡನ್‌ನಲ್ಲಿ ಪಾಕಿಸ್ತಾನದ ಐಎಸ್‌ಐ ಸಹಯೋಗದೊಂದಿಗೆ ರಚಿಸಲಾಗಿತ್ತು ಎಂದು ವರದಿಯೊಂದು ಹೇಳಿದೆ. ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿಯ (ಬಿಎನ್‌ಪಿ) ಹಂಗಾಮಿ ಮುಖ್ಯಸ್ಥ ಹಾಗೂ ಖಲೀದಾ ಜಿಯಾ ಅವರ ಪುತ್ರ ತಾರಿಕ್ ರೆಹಮಾನ್ ಮತ್ತು … Continued

ಬಾಂಗ್ಲಾದೇಶ ಬಿಕ್ಕಟ್ಟು : ಅವಾಮಿ ಲೀಗ್‌ ನಾಯಕನ ಹೊಟೇಲಿಗೆ ಬೆಂಕಿ ಹಚ್ಚಿ 24 ಜನರನ್ನು ಸಜೀವ ದಹನ ಮಾಡಿದ ಗುಂಪು

ಢಾಕಾ: ಅವಾಮಿ ಲೀಗ್ ಪಕ್ಷದ ನಾಯಕಿ ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶ ತೊರೆದ ನಂತರ ಬಾಂಗ್ಲಾದೇಶದಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ಅವಾಮಿ ಲೀಗ್ ಪಕ್ಷದ ನಾಯಕರ ಒಡೆತನದ ಹೋಟೆಲ್‌ ಗೆ ಗುಂಪೊಂದು ಬೆಂಕಿ ಹಚ್ಚಿ ಇಂಡೋನೇಷ್ಯಾ ಪ್ರಜೆ ಸೇರಿದಂತೆ ಕನಿಷ್ಠ 24 ಜನರನ್ನು ಸಜೀವ ದಹನ ಮಾಡಿದೆ ಎಂದು ಸ್ಥಳೀಯ ಪತ್ರಕರ್ತರು … Continued

ಬಾಂಗ್ಲಾದೇಶ ಬಿಕ್ಕಟ್ಟು : ಬಾಂಗ್ಲಾದೇಶ ಕ್ರಿಕೆಟ್‌ ತಂಡದ ಮಾಜಿ ನಾಯಕನ ಮನೆಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

ಢಾಕಾ: ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆ ಮತ್ತು ಅವರು ಸೋಮವಾರ ದೇಶದಿಂದ ನಿರ್ಗಮಿಸಿದ ನಂತರ ಬಾಂಗ್ಲಾದೇಶದಲ್ಲಿ ಉಂಟಾದ ಹಿಂಸಾಚಾರ ಮತ್ತು ಅರಾಜಕತೆಯ ನಡುವೆ, ಪ್ರತಿಭಟನಾಕಾರರು ಬಾಂಗ್ಲಾದೇಶದ ಕ್ರಿಕೆಟ್ ತಂಡದ ಮಾಜಿ ನಾಯಕ ಮಶ್ರಫೆ ಬಿನ್ ಮೊರ್ತಾಜಾ ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ. ಖುಲ್ನಾ ವಿಭಾಗದ ನರೈಲ್-2 ಕ್ಷೇತ್ರದ ಸಂಸದರಾಗಿರುವ ಮಶ್ರಫೆ … Continued

ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ ಘೋಷಿಸಿದ ಬಾಂಗ್ಲಾದೇಶ ಸೇನಾ ಮುಖ್ಯಸ್ಥ ಯಾರು…?

ಢಾಕಾ: ಬಾಂಗ್ಲಾದೇಶದ ಸೇನಾ ಮುಖ್ಯಸ್ಥರಾದ ಕೇವಲ ಒಂದು ತಿಂಗಳ ನಂತರ, ಜನರಲ್ ವಕಾರ್‌-ಉಸ್-ಜಮಾನ್ ಅವರು ಸೋಮವಾರ ದೇಶದಿಂದ ಪಲಾಯನ ಮಾಡಿದ ಪ್ರಧಾನಿ ಶೇಖ್ ಹಸೀನಾ ಅವರ ರಾಜೀನಾಮೆಯನ್ನು ಘೋಷಿಸುವ ಮೂಲಕ ಬೆಳಕಿಗೆ ಬಂದಿದ್ದಾರೆ. ಶೇಖ್ ಹಸೀನಾ ಅವರು ಬಾಂಗ್ಲಾದೇಶದ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ ನಂತರ, ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್ … Continued

ಶೇಖ್ ಹಸೀನಾ ಬಾಂಗ್ಲಾದೇಶದಿಂದ ಪಲಾಯನ ಮಾಡಿದ ಬೆನ್ನಿಗೇ ‘ಪ್ರತಿಸ್ಪರ್ಧಿ ಬೇಗಂ’ ಖಲೀದಾ ಜಿಯಾ ಜೈಲಿನಿಂದ ಬಿಡುಗಡೆ…!

ಢಾಕಾ : ಪ್ರಸ್ತುತ ಜೈಲಿನಲ್ಲಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರನ್ನು ತಕ್ಷಣವೇ ಬಿಡುಗಡೆ ಮಾಡಲು ಬಾಂಗ್ಲಾ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಸೋಮವಾರ ಆದೇಶಿಸಿದ್ದಾರೆ. ಸತತ 15 ವರ್ಷಗಳಿಂದ ಪ್ರಧಾನಿಯಾಗಿದ್ದ ಶೇಖ್ ಹಸೀನಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ ಕೆಲವೇ ಗಂಟೆಗಳಲ್ಲಿ ಈ ಬೆಳವಣಿಗೆ ನಡೆದಿದೆ. ಪತ್ರಿಕಾ ಹೇಳಿಕೆ ಪ್ರಕಾರ, … Continued

ಬಾಂಗ್ಲಾದೇಶದಲ್ಲಿ ದಂಗೆ | ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ದೆಹಲಿಯ ಬಳಿ ಬಂದಿಳಿದ ಶೇಖ್ ಹಸೀನಾ ; ಅಜಿತ ದೋವಲ್ ಭೇಟಿ

ನವದೆಹಲಿ: ಬಾಂಗ್ಲಾದೇಶದ ನಾಯಕಿ ಶೇಖ್ ಹಸೀನಾ ಅವರು ಸೋಮವಾರ ಸಂಜೆ ದೆಹಲಿಯಿಂದ ಸುಮಾರು 30 ಕಿಮೀ ದೂರದಲ್ಲಿರುವ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ಹಿಂಡನ್ ವಾಯುಪಡೆ ನೆಲೆಗೆ ಬಂದಿಳಿದಿದ್ದಾರೆ ಎಂದು ವರದಿಯಾಗಿದೆ. ನಂತರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾದರು. ಕೆಲವು ಗಂಟೆಗಳ ಹಿಂದೆ 76 ವರ್ಷ ವಯಸ್ಸಿನ ಹಾಗೂ ಐದು ಬಾರಿ ಬಾಂಗ್ಲಾದೇಶದ … Continued

ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ ; ಆಡಳಿತ ನಿಯಂತ್ರಣಕ್ಕೆ ತೆಗೆದುಕೊಂಡ ಸೇನೆ

ಅವಾಮಿ ಲೀಗ್‌ ಪಕ್ಷದ ಬೆಂಬಲಿಗರು ಮತ್ತು ಪ್ರತಿಭಟನಾಕಾರರ ನಡುವಿನ ಹಿಂಸಾತ್ಮಕ ಘರ್ಷಣೆಗಳ ನಡುವೆ ಬಾಂಗ್ಲಾದೇಶದ ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ಅವರು ರಾಜೀನಾಮೆ ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಬಾಂಗ್ಲಾದೇಶದ ಸೇನೆಯು ಆಡಳಿತದ ಮೇಲೆ ನಿಯಂತ್ರಣ ತೆಗೆದುಕೊಂಡಿದ್ದು, ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್ ಅವರು ಸೇನೆಯು ಮಧ್ಯಂತರ ಸರ್ಕಾರವನ್ನು ರಚಿಸಲಿದೆ ಎಂದು … Continued

ಇರಾನ್ ಇಂದೇ ಇಸ್ರೇಲ್ ಮೇಲೆ ದಾಳಿ ಮಾಡಬಹುದು ; ಇರಾನ್‌ ಮೇಲೆ ಪೂರ್ವಭಾವಿ ದಾಳಿಗೆ ನೆತನ್ಯಾಹು ಒಪ್ಪಬಹುದು : ವರದಿ

ನವದೆಹಲಿ: ಇಸ್ರೇಲ್ ವಿರುದ್ಧ ಇರಾನ್ ಮತ್ತು ಹಿಜ್ಬುಲ್ಲಾ ದಾಳಿ ಸೋಮವಾರದಿಂದಲೇ ಪ್ರಾರಂಭವಾಗಬಹುದು ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಜಿ7 ದೇಶಗಳ ಸದಸ್ಯರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಆಕ್ಸಿಯೋಸ್ ವರದಿ ಮಾಡಿದೆ. ಆದಾಗ್ಯೂ, ಇಸ್ರೇಲ್‌ನ ಪ್ರಮುಖ ದೈನಿಕ ಟೈಮ್ಸ್ ಆಫ್ ಇಸ್ರೇಲ್, ಬೆಂಜಮಿನ್ ನೆತನ್ಯಾಹು ನೇತೃತ್ವದ ಸರ್ಕಾರವು ಇಸ್ರೇಲಿ ನೆಲದ ಮೇಲಿನ ದಾಳಿ ತಡೆಯಲು … Continued

ಭೂಮಿಯಿಂದ ದೂರ ಸರಿಯುತ್ತಿರುವ ಚಂದ್ರ ; ಭೂಮಿಯ ಮೇಲಿನ ಒಂದು ದಿನ ಎಂದರೆ 25 ಗಂಟೆಗಳು ಎಂದಾಗಬಹುದು…!

ಭೂಮಿಯ ಮೇಲಿನ ಒಂದು ದಿನವನ್ನು 25 ಗಂಟೆಗಳೆಂದು ಅರ್ಥೈಸುವ ಕಾಲ ಮುಂದೊಂದು ದಿನ ಬರಬಹುದು ಎಂದು ವಿಜ್ಞಾನಿಗಳು ಹೇಳುತ್ತಾರೆ, ಯಾಕೆಂದರೆ ಚಂದ್ರನು ಭೂಮಿಯಿಂದ ನಿಧಾನವಾಗಿ ದೂರ ಸರಿಯುತ್ತಿದ್ದಾನೆ ಎಂದು ಸಂಶೋಧನೆಯೊಂದು ಹೇಳಿದೆ. ವಿಸ್ಕಾನ್ಸಿನ್-ಮ್ಯಾಡಿಸನ್ ವಿಶ್ವವಿದ್ಯಾನಿಲಯವು ನಡೆಸಿದ ಸಂಶೋಧನೆಯ ಪ್ರಕಾರ ಚಂದ್ರನು ಭೂಮಿಯಿಂದ ವರ್ಷಕ್ಕೆ ಸರಿಸುಮಾರು 3.8 ಸೆಂಟಿಮೀಟರ್‌ ಗಳಷ್ಟು ದೂರ ಹೋಗುತ್ತಿದ್ದಾನೆ. ಇದು ನಮ್ಮ ಗ್ರಹದಲ್ಲಿನ … Continued

ಬಾಂಗ್ಲಾದೇಶದ ಘರ್ಷಣೆಯಲ್ಲಿ 72 ಮಂದಿ ಸಾವು: ರಾಜಧಾನಿ ಢಾಕಾದಲ್ಲಿ ಅನಿರ್ದಿಷ್ಟಾವಧಿಗೆ ಕರ್ಫ್ಯೂ

ಢಾಕಾ : ಬಾಂಗ್ಲಾದೇಶದಲ್ಲಿ ಭಾನುವಾರ ನಡೆದ ಘರ್ಷಣೆಯಲ್ಲಿ ಕನಿಷ್ಠ 72 ಜನರು ಸಾವಿಗೀಡಾಗಿದ್ದಾರೆ ಮತ್ತು ಹತ್ತಾರು ಜನರು ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಬಾಂಗ್ಲಾದೇಶದಲ್ಲಿ ಭಾನುವಾರ ನಡೆದ ಘರ್ಷಣೆಯಲ್ಲಿ ಕನಿಷ್ಠ 72 ಜನರು ಸಾವನ್ನಪ್ಪಿದ್ದಾರೆ ಮತ್ತು ಹತ್ತಾರು ಜನರು ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ಸ್ಟನ್ ಗ್ರೆನೇಡ್‌ಗಳನ್ನು ಪ್ರಯೋಗಿಸಿದ್ದಾರೆ. ಹಿಂಸಾತ್ಮಕ ಪರಿಸ್ಥಿತಿಯ ನಂತರ, ಭಾನುವಾರ … Continued