ಕುಮಟಾ | ವಕೀಲರ ಸಂಘದ ಮಾಜಿ ಅಧ್ಯಕ್ಷ ಆರ್.ಎ. ಹೆಗಡೆ ನಿಧನ

ಕುಮಟಾ : ಖ್ಯಾತ ವಕೀಲರಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯ ಆರ್.ಎ. ಹೆಗಡೆ (84)ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳವಾರ ನಿಧನರಾದರು. ಆರ್.ಎ. ಹೆಗಡೆ ಅವರು ಅನೇಕ ವರ್ಷಗಳ ಕಾಲ ಮುಂಬೈ ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆ ಸಲ್ಲಿಸಿ ನಂತರ ಕುಮಟಾ ನ್ಯಾಯಾಲಯದಲ್ಲಿ ಸುಧೀರ್ಗ ಕಾಲ ವಕೀಲರಾಗಿ, ಕುಮಟಾ ವಕೀಲರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. … Continued

ಲೇಸರ್ ಆಯುಧ ಬಳಸಿ ಶತ್ರು ಡ್ರೋನ್‌ಗಳನ್ನು ಹೊಡೆದುರುಳಿಸಿದ ಜಗತ್ತಿನ ಮೊದಲ ದೇಶವಾಯ್ತು ಇಸ್ರೇಲ್ – ವೀಡಿಯೊಗಳು

ನವದೆಹಲಿ: ಯುದ್ಧದಲ್ಲಿ ಶತ್ರು ಡ್ರೋನ್‌ಗಳನ್ನು ಹೊಡೆದುರುಳಿಸಲು ಲೇಸರ್ ಆಯುಧವನ್ನು ಯಶಸ್ವಿಯಾಗಿ ಬಳಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಇಸ್ರೇಲ್ ಭಾಜನವಾಗಿದ್ದು, ಇದನ್ನು ಆಧುನಿಕ ಯುದ್ಧದಲ್ಲಿ ಮಹತ್ವದ ಮೈಲಿಗಲ್ಲು ಎಂದು ಪರಿಗಣಿಸಲಾಗಿದೆ. ಗಾಜಾದಲ್ಲಿ ನಡೆಯುತ್ತಿರುವ ಇಸ್ರೇಲ್‌-ಹಮಾಸ್‌ ಯುದ್ಧದ ಸಮಯದಲ್ಲಿ ಇಸ್ರೇಲ್‌ ಇದನ್ನು ಯಶಸ್ವಿಯಾಗಿ ಪರೀಕ್ಷೆ ನಡೆಸಿದೆ. ಇಸ್ರೇಲಿ ವಾಯುಪಡೆಯ ವೈಮಾನಿಕ ರಕ್ಷಣಾ ವ್ಯವಸ್ಥೆಯು ನೇರ ಯುದ್ಧಭೂಮಿ ಪರಿಸ್ಥಿತಿಗಳಲ್ಲಿ … Continued

ಎಸ್‌ ಎಸ್‌ ಎಲ್‌ ಸಿ | ಕುಮಟಾ ಗಿಬ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಭೂಮಿಕಾ ಹೆಗಡೆ ರಾಜ್ಯಕ್ಕೆ ದ್ವಿತೀಯ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಕೆನರಾ ಎಜ್ಯಕೇಶನ್ ಸೊಸೈಟಿಯ ಗಿಬ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಭೂಮಿಕಾ ನಾಗರಾಜ ಹೆಗಡೆ ಶೇ. ೯೯.೮೪ ಅಂಕದೊಂದಿಗೆ ರಾಜ್ಯಕ್ಕೆ ದ್ವಿತೀಯ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಗಿಬ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಎಸ್‌ಎಸ್‌ಎಲ್‌ಸಿಯಲ್ಲಿ ಒಟ್ಟು ಶೇ. ೯೮.೧೪ ಫಳಿತಾಂಶ ದಾಖಲಿಸಿದ್ದು ೨೫ ಮಂದಿ … Continued

ಎಸ್‌ ಎಸ್‌ ಎಲ್‌ ಸಿ ; ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಪ್ರೌಢಶಾಲೆ ಶೇ.100 ಫಲಿತಾಂಶ; ಟಾಪ್‌ 10 ರ‍್ಯಾಂಕ್‌ ಪಟ್ಟಿಯಲ್ಲಿ 18 ವಿದ್ಯಾರ್ಥಿಗಳು

 ಕುಮಟಾ : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಿ.ವಿ.ಎಸ್.ಕೆ ಪ್ರೌಢಶಾಲಾ ವಿದ್ಯಾರ್ಥಿಗಳು ಅನುಪಮ ಸಾಧನೆ ತೋರಿದ್ದಾರೆ. ಶಾಲೆ ಶೇಕಡಾ ನೂರರ ಫಲಿತಾಂಶ ಪಡೆದಿದ್ದು, ರಾಜ್ಯದ ಟಾಪ್ 10 ರ‍್ಯಾಂಕ್‌ ನಲ್ಲಿ ಶಾಲೆಯ 18 ವಿದ್ಯಾರ್ಥಿಗಳು ಗುರುತಿಸಿಕೊಳ್ಳುವ ಮೂಲಕ ಶಾಲೆಯ ಹಾಗೂ … Continued

ಕುಮಟಾ | ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದನ್ನು ಖಂಡಿಸಿ ಪ್ರತಿಭಟನೆ ; ಇದು ಷಡ್ಯಂತ್ರ-ದಿನಕರ ಶೆಟ್ಟಿ

ಕುಮಟಾ : ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿ ಅವಮಾನ ಮಾಡಿದ್ದನ್ನು ಖಂಡಿಸಿ ಉತ್ತರ ಕನ್ನಡದ ಕುಮಟಾದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು. ನಂತರ ತಪ್ಪಿತಸ್ಥರನ್ನು ತಕ್ಷಣವೇ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಮಿನಿ ವಿಧಾನಸೌಧಕ್ಕೆ ತೆರಳಿ ತಹಶೀಲ್ದಾರರ ಮೂಲಕ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕುಮಟಾ ಶಾಸಕ ದಿನಕರ ಶೆಟ್ಟಿ ಾವರು, … Continued

ಕುಮಟಾ | ದ್ವಿತೀಯ ಪಿಯು ಫಲಿತಾಂಶ ; ಡಾ. ಬಾಳಿಗಾ ವಾಣಿಜ್ಯ ಪಿಯು ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ. ಎ. ವಿ. ಬಾಳಿಗಾ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ ಫಲಿತಾಂಶ ಪ್ರಕಟಿತವಾಗಿದ್ದು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಕಾಲೇಜಿನ ನವ್ಯಾ ಹೆಬ್ಬಾರ ಶೇ. 97.33% ಅಂಕ ಮತ್ತು ಅನನ್ಯ ಭಟ್ಟ (97.33%)ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರಣತಿ ಭಟ್ಟ ಶೇ. 95.33% ಹಾಗೂ … Continued

ಕುಮಟಾ: ಗಮನ ಸೆಳೆದ ಬಾಳಿಗಾ ವಿದ್ಯಾಲಯದ ಮಕ್ಕಳ ವಸ್ತು ಪ್ರದರ್ಶನ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ಡಾ.ಎ.ವಿ. ಬಾಳಿಗಾ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ನಡೆಯುತ್ತಿದ್ದು ಮಕ್ಕಳ ಪ್ರತಿಭೆ ಅನಾವರಣ ಗೊಂಡಿದೆ. ಪ್ರಾಥಮಿಕ ಶಾಲಾ ಮಕ್ಕಳಿಂದ ಸಮಾಜ ವಿಜ್ಞಾನ, ದೈಹಿಕ ಶಿಕ್ಷಣ ಮತ್ತು ಭಾಷಾ ಜ್ಞಾನದ ಮೇಲೆ ವಸ್ತು ಪ್ರದರ್ಶನ ಆಯೋಜಿಸಲಾಗಿದೆ. ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳು ವೈಜ್ಞಾನಿಕ ವಿಷಯದ … Continued

ಸಿದ್ದಾಪುರ : ಅಖಿಲ ಭಾರತೀಯ ಸಾಹಿತ್ಯ ಪರಿಷದ್ ತಾಲೂಕು ಸಮಿತಿ ಪದಾಧಿಕಾರಿಗಳ ಪದಗ್ರಹಣ

ಸಿದ್ದಾಪುರ : ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನ ಶಿರಸಿ ಜಿಲ್ಲೆಯ ಸಿದ್ದಾಪುರ ತಾಲೂಕು ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಮತ್ತು ಶ್ರಾವಣ ಮಾಸದ ನಿಮಿತ್ತ ಶ್ರೀರಾಮ ಭಜನೆ ಕಾರ್ಯಕ್ರಮ ಸಿದ್ದಾಪುರದ ಶ್ರೀ ರಾಘವೇಂದ್ರ ಮಠದಲ್ಲಿ ಶನಿವಾರ (ಆಗಸ್ಟ್ 31) ಸಂಜೆ ನಡೆಯಿತು. ಜಿ . ಎಸ್.ಬಿ. ಸಮಾಜದ ಅಧ್ಯಕ್ಷರಾದ ಜಯವಂತ ಪದ್ಮನಾಭ ಶಾನಭಾಗ್, ಸಂಘಟನೆಯ ರಾಜ್ಯ … Continued

ಅರುಂಧತಿ ಅನಂತ ಹೆಗಡೆ ಕೊಳಗಿ ನಿಧನ

ಸಿದ್ದಾಪುರ : ಖ್ಯಾತ ಯಕ್ಷಗಾನದ ಕಲಾವಿದ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ದಿವಂಗತ ಅನಂತ ಹೆಗಡೆ ಕೊಳಗಿ ಅವರ ಪತ್ನಿ ಅರುಂಧತಿ ಅನಂತ ಹೆಗಡೆ (೮೨) ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಸ್ವಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶನಿವಾರ ನಿಧನರಾಗಿದ್ದಾರೆ. ಮೃತರು ಯಕ್ಷಗಾನದ ಪ್ರಸಿದ್ಧ ಭಾಗವತ ಕೇಶವ ಹೆಗಡೆ ಕೊಳಗಿ ಸೇರಿದಂತೆ ಮೂವರು ಪುತ್ರರು, ಮೂವರು … Continued

ಕುಮಟಾ : ಜೂನ್‌ 21ರಂದು ವಿಶ್ವ ಸಂಗೀತ ದಿನಾಚರಣೆ ವಿಶೇಷ ಕಾರ್ಯಕ್ರಮ

ಕುಮಟಾ : ವಿಶ್ವ ಸಂಗೀತ ದಿನಾಚರಣೆ ಅಂಗವಾಗಿ ಕುಮಟಾದ ಗಂಧರ್ವ ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ ವಿಶೇಷ ಕಾರ್ಯಕ್ರಮವನ್ನು ಜೂನ್‌ 21ರಂದು ಸಂಜೆ 4:30ರಿಂದ ಪಟ್ಟಣದ ವೈಭವ ಹೊಟೇಲ್‌ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕುಮಟಾದ ಗಂಧರ್ವ ಕಲಾ ಕೇಂದ್ರದ ವಿದ್ಯಾರ್ಥಿಗಳಿಂದ ಸಂಗೀತ, ಭಜನೆ, ಭಾವಗೀತೆ ಹಾಗೂ ಕೊಳಲು ವಾದನ ಕಾರ್ಯಕ್ರಮ ನಡೆಯಲಿದ್ದು, ಸಂಗೀತಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು … Continued