ಮಹಾವೀರ ಉಪಾದ್ಯೆಗೆ ಶಿಕ್ಷಕ-ಸಿರಿ ಪ್ರಶಸ್ತಿ

ಧಾರವಾಡದ ಸರಕಾರಿ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಉಪನ್ಯಾಸಕರ ಕ್ರೀಯಾ ಸಮಿತಿ(ರಿ) ಬೆಂಗಳೂರು ಇವರ ಏರ್ಪಡಿಸಿದ್ದ ಅಂತರಾಷ್ಟ್ರೀಯ ಶಿಕ್ಷಕ ದಿನಾಚರಣೆಯ ಕಾರ್ಯಕ್ರಮದಲ್ಲಿ ವಿದ್ಯಾಗಿರಿಯ ಜೆ.ಎಸ್.ಎಸ್ ಐ.ಟಿ.ಐ ಕಾಲೇಜಿನ ಪ್ರಾಚಾರ್ಯರಾದ ಶ್ರೀ ಮಹಾವೀರ ಉಪಾದ್ಯೆ ಯವರಿಗೆ ರಾಜ್ಯ ಮಟ್ಟದ ಶಿಕ್ಷಕ-ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮಕ್ಕಳಲ್ಲಿ ಏಕತಾ ಮನೋಭಾವ ಬೆಳೆಯಲಿ: ಡಾ.ಅಜಿತ ಪ್ರಸಾದ

ಧಾರವಾಡ: ಮಕ್ಕಳ ಮನಸ್ಸು ದ್ವೇಷ, ಅಸೂಯೆ, ಕೀಳರಿಮೆ ಇಲ್ಲದೆ ಮೃದುವಾದದ್ದು. ಅದಕ್ಕೆ ನಾವು ಯಾವ ರೀತಿಯ ಪೋಷಣೆ ನೀಡುತ್ತೇವೆಯೋ ಆ ರೀತಿ ಮಕ್ಕಳು ಬೆಳೆಯುತ್ತಾರೆ. ಸಮಾಜದಲ್ಲಿ ಮೇಲು ಕೀಳು ಎನ್ನದೆ ಸಮವಾಗಿ ಬದುಕಿದಾಗ ಮಾತ್ರ ಬದುಕಿಗೊಂದು ಅರ್ಥ ಬರುತ್ತದೆ ಎಂದು ಜನತಾ ಶಿಕ್ಷಣ ಸಮಿತಿಯ ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ ಹೇಳಿದರು. ಅವರು ಜೆ.ಎಸ್.ಎಸ್ ಶ್ರೀ … Continued

ರಾಷ್ಟ್ರಮಟ್ಟದ ಅತ್ಯುತ್ತಮ ಕಾರ್ಯಕ್ರಮ ಅಧಿಕಾರಿ ಪ್ರಶಸ್ತಿ: ಜೆಎಸ್ಎಸ್‌ ನಿಂದ ಸನ್ಮಾನ

ಧಾರವಾಡ: ಜೆಎಸ್‌ಎಸ್ ಬನಶಂಕರಿ ಕಲಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕಕ್ಕೆ ಅತ್ಯತ್ತಮ ಘಟಕ ಮತ್ತು ಸುರೇಶಪ್ಪ ಸಜ್ಜನ ಅವರಿಗೆ ೨೦೧೯-೨೦೨೦ನೇ ಸಾಲಿನ ರಾಷ್ಟ್ರಮಟ್ಟದ ಅತ್ಯುತ್ತಮ ಕಾರ್ಯಕ್ರಮ ಅಧಿಕಾರಿ ಪ್ರಶಸ್ತಿಯನ್ನು ೨೪ ಸಪ್ಟೆಂಬರ್ ೨೦೨೧ ರಂದು ದೆಹಲಿಯ ಸುಶ್ಮಾಸ್ವರಾಜ ಭವನದಲ್ಲಿ ನೀಡಿ ಗೌರವಿಸಲಾಯಿತು. ಕಳೆದ ಆರು ವರ್ಷಗಳ ಅವಧಿಯಲ್ಲಿ ೧೦ ರಕ್ತದಾನ ಶಿಬಿರ, ೧೨ ಉಚಿತ … Continued

ಜೆಇಇ ಮೇನ್ಸ್‌ -ಸಿಇಟಿ ಪರೀಕ್ಷೆಯಲ್ಲಿ ಜೆಎಸ್ಎಸ್ ಆರ್.ಎಸ್.ಹುಕ್ಕೇರಿಕರ ಪಿಯು ಕಾಲೇಜಿನ ಉತ್ತಮ ಸಾಧನೆ

ಧಾರವಾಡ: ನಗರದ ವಿದ್ಯಾಗಿರಿಯ ಜೆ.ಎಸ್.ಎಸ್.ಆರ್.ಎಸ್. ಹುಕ್ಕೇರಿಕರ ಪದವಿಪೂರ್ವ ಮಹಾವಿದ್ಯಾಲಯದ ೨೦೨೦-೨೦೨೧ರ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸಿ.ಇ.ಟಿ ಹಾಗೂ ಜೆ.ಇ.ಇ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಜೆ.ಇ.ಇ ಮೇನ್ಸ್ ಪರೀಕ್ಷೆಯಲ್ಲಿ ಮೂವರು ವಿದ್ಯಾರ್ಥಿಗಳು ನಾಲ್ಕು ಹಂತಗಳ ಪರೀಕ್ಷೆಗಳಲ್ಲೂ ಉತ್ತಮ ಸಾಧನೆಗೈದು ಬಿ.ಇ/ಬಿ.ಟೆಕ್ ವಿಭಾಗದಲ್ಲಿ ಜೆ.ಇ.ಇ. ಅಡ್ವಾನ್ಸ್ಡ್ ಪರೀಕ್ಷೆಗೆ ಆಯ್ಕೆಯಾಗಿದ್ದಾರೆ. ಜೆ.ಇ.ಇ ಮೇನ್ಸ್‌ನಲ್ಲಿ … Continued

ಟಾಟಾ ಉದ್ಯಮ ಲಾಭಾಂಶದ ಬಹುಪಾಲನ್ನು ಆರೋಗ್ಯ, ಶಿಕ್ಷಣ, ಪರಿಸರ ಕಾಳಜಿಗೆ ನೀಡುತ್ತಿದೆ: ಡಾ.ಅಜಿತ್ ಪ್ರಸಾದ

ಧಾರವಾಡ: ದೇಶದ ಅತಿ ದೊಡ್ಡ ಉದ್ಯಮವಾದ ಟಾಟಾ ತನ್ನ ಲಾಭಾಂಶದಲ್ಲಿ ಹೆಚ್ಚಿನ ಪಾಲನ್ನು ಸಾರ್ವಜನಿಕರ ಆರೋಗ್ಯ, ಶಿಕ್ಷಣ, ಪರಿಸರ ಕಾಳಜಿಗಾಗಿ ಖರ್ಚು ಮಾಡುತ್ತಿದೆ. ಪರಿಸರದಿಂದ ಬಹಳಷ್ಟನ್ನು ಪಡೆಯುವ ನಾವು ಪರಿಸರಕ್ಕೆ ಏನನ್ನಾದರೂ ತಿರುಗಿ ನೀಡದಿದ್ದರೆ, ಮುಂದಿನ ಪೀಳಿಗೆಗೆ ಬರಡು ಭೂಮಿಯನ್ನು ಬಿಟ್ಟು ಹೋದಂತಾಗುತ್ತದೆ ಎಂದು ಜೆ.ಎಸ್.ಎಸ್ ನ ವಿತ್ತಾಧಿಕಾರಿಗಳಾದ ಡಾ. ಅಜಿತ್ ಪ್ರಸಾದ್ ಹೇಳಿದರು. ಅವರು … Continued

ಧಾರವಾಡ ಜೆಎಸ್ಎಸ್ ಐಟಿಐನಲ್ಲಿ ಅಭಿಯಂತರರ ದಿನಾಚರಣೆ

ಧಾರವಾಡ ವಿದ್ಯಾಗಿರಿಯ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಐಟಿಐನಲ್ಲಿ ಭಾರತರತ್ನ ಸರ್. ಎಂ ವಿಶ್ವೇಶ್ವರಯ್ಯನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಅಭಿಯಂತರರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಹೇಶ ಕುಂದರಪಿಮಠ, ವಿನಾಯಕ ಗವಳಿ, ವಿಶಾಲ ಭಜಂತ್ರಿ, ಅಶೋಕ ಜಿಗಳೂರ, ಮಹೇಶ ಬಡಿಗೇರ, ವಿಕಾಸ ಬಿಳಗೀಕರ್, ಬಿ.ಎ. ತಡಕೋಡ, ಕೆ. ಜಿ. ವಸ್ತ್ರದ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇಂದು ಸರಳ-ಸಜ್ಜನಿಕೆಯ ಜನಾನುರಾಗಿ ವ್ಯಕ್ತಿ ಬಸವರಾಜ ಬಿಕ್ಕಣ್ಣವರ ಪ್ರಥಮ ಪುಣ್ಯ ಸ್ಮರಣೆ

(ಬಸವರಾಜ ಎಸ್. ಬಿಕ್ಕಣ್ಣವರ ಪ್ರಥಮ ಪುಣ್ಯ ಸ್ಮರಣೆ ರವಿವಾರ, ದಿನಾಂಕ ೧೨.೦೯.೨೦೨೧ ಧಾರವಾಡದ ಸ್ವಗೃಹದಲ್ಲಿ ಜರುಗಲಿದ್ದು, ಆ ನಿಮಿತ್ಯವಾದ ಲೇಖನ) ಬಸವರಾಜ ಎಸ್. ಬಿಕ್ಕಣ್ಣವರ ಸರಳ, ಸಜ್ಜನಿಕೆಯ ವ್ಯಕ್ತಿ ಜನಾನುರಾಗಿಯಾಗಿದ್ದರು. ಬಿ.ಕಾಂ., ಪದವೀಧರರು, ವೃತ್ತಿಯಲ್ಲಿ ಕೃಷಿಕರಾಗಿದ್ದು, ಪ್ರವೃತ್ತಿಯಲ್ಲಿ, ಸಮಾಜ ಸೇವಕರು ಹಾಗೂ ರಾಜಕಾರಣಿಗಳಾಗಿದ್ದರು. ಬಸವರಾಜ ಸುಸಂಸ್ಕೃತ ಕುಟುಂಬ ಹಿನ್ನೆಲೆಯ ಇವರು ಕರ್ನಾಟಕ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣಾಧಿಕಾರಿಗಳಾಗಿದ್ದ … Continued

ಅತ್ಯುತ್ತಮ ವಿದ್ಯಾರ್ಥಿಗಳೇ ಶಿಕ್ಷಕರ ಜೀವಾಳ: ಡಾ. ನ.ವಜ್ರಕುಮಾರ

ಧಾರವಾಡ: ಅತ್ಯುತ್ತಮ ಶಿಕ್ಷಕರಿಗೆ ವಿದ್ಯಾರ್ಥಿಗಳೇ ಆಸ್ತಿ. ಶಿಕ್ಷಕ-ವಿದ್ಯಾರ್ಥಿ ಬಾಂಧವ್ಯ ವರ್ಣಿಸಲು ಅಸಾಧ್ಯ. ನಮ್ಮನ್ನು ಗುರುತಿಸಿ ಮಾತನಾಡಿಸಿದಾಗ ಆಗುವ ಆತ್ಮತೃಪ್ತಿ ಯಾವುದರಿಂದಲೂ ಸಿಗಲು ಸಾಧ್ಯವಿಲ್ಲ ಎಂದು ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ನ. ವಜ್ರಕುಮಾರ ಹೇಳಿದರು. ಶಿಕ್ಷಕ ದಿನಾಚರಣೆ ನಿಮಿತ್ತ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಂದ ಗೌರವ ಸ್ವೀಕರಿಸಿ ಮಾತನಾಡಿದ ಅವರು, ನಾವು ಹಣ-ಆಸ್ತಿ ಗಳಿಸಬಹುದು … Continued

ಶ್ರೀಕೃಷ್ಣ ಜನ್ಮಾಷ್ಟಮಿ..: ಕೃಷ್ಣ-ರಾಧೆ ವೇಷ ಧರಿಸಿ ಚಿಣ್ಣರ ಸಂಭ್ರಮ

ಧಾರವಾಡ; ಹಬ್ಬ ಹರಿದಿನಗಳು ನಮ್ಮ ಸಂಸ್ಕೃತಿ ಪರಂಪರೆಯ ಪರಿಚಯ ಮಾಡಿಕೊಡುವ ಸಂದರ್ಭ. ಪ್ರತಿ ಹಬ್ಬದಿಂದ ನಾವು ಒಂದು ಒಳ್ಳೆಯ ಸಂದೇಶ ಪಡೆಯುತ್ತೇವೆ. ಎಂದು ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ ಹೇಳಿದರು. ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸಿ.ಬಿ.ಎಸ್.ಇ ಶಾಲೆಯಲ್ಲಿ ಆಯೋಜಿಸಿದ್ದ ಶ್ರೀಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಬ್ಬದ ಆಚರಣೆಯ ಮಹತ್ವ, ಸಂದೇಶಗಳ ಪರಿಚಯ ಇಂದಿನ ಮಕ್ಕಳಿಗೆ … Continued

ಜೆಎಸ್ಎಸ್‌ ನಲ್ಲಿ ಕ್ರೀಡಾ ದಿನಾಚರಣೆ: ಕ್ರೀಡಾ ವಿಷಯ ಪಠ್ಯಕ್ರಮದಲ್ಲಿ ಸೇರ್ಪಡೆಯಾಗಲಿ ಎಂದ ಡಾ.ಅಜಿತ ಪ್ರಸಾದ

ಜೆಎಸ್ಎಸ್‌ ನಲ್ಲಿ ಕ್ರೀಡಾ ದಿನಾಚರಣೆ: ಕ್ರೀಡಾ ವಿಷಯ ಪಠ್ಯಕ್ರಮದಲ್ಲಿ ಸೇರ್ಪಡೆಯಾಗಲಿ-ಡಾ.ಅಜಿತ ಪ್ರಸಾದ ಧಾರವಾಡ:ಎಲ್ಲ ಶಿಕ್ಷಣ ಸಂಸ್ಥೆಗಳು ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಿ ವಿದ್ಯಾರ್ಥಿಗಳನ್ನು ದೇಶದ ಉತ್ತಮ ಕ್ರೀಡಾಪಟುಗಳಾಗಿ ರೂಪಿಸುವಲ್ಲಿ ಸಹಕರಿಸಬೇಕು. ಕ್ರೀಡೆ ವಿದ್ಯಾಭ್ಯಾಸದ ಅವಿಭಾಜ್ಯ ಅಂಗವಾದಾಗ ಮಾತ್ರ ದೇಶವನ್ನು ಕ್ರೀಡೆಯಲ್ಲಿ ಉನ್ನತ ದರ್ಜೆಗೆ ಕೊಂಡೊಯ್ಯಬಹುದು ಎಂದು ಪ್ರಾಚಾರ್ಯರಾದ ಡಾ. ಅಜಿತ ಪ್ರಸಾದ ಹೇಳಿದರು. ಜೆ.ಎಸ್.ಎಸ್ ಶ್ರೀ … Continued