ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಸಿಎಂ ಯಡಿಯೂರಪ್ಪ ಚಾಲನೆ

ವಿಜಯಪುರ ಸಮೀಪದ ಮದಬಾವಿಯಲ್ಲಿ ವಿಮಾನ ನಿಲ್ದಾಣ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನಡೆಯಿತು. ಸಿಎಂ ಯಡಿಯೂರಪ್ಪ ವರ್ಚುವಲ್‌ ತಂತ್ರಜ್ಞಾನದ ಮೂಲಕ ವಿಮಾನ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಿದರು. ಅವರು ಮಾತನಾಡಿ, ಐತಿಹಾಸಿಕ ಕೇಂದ್ರ, ತೋಟಗಾರಿಕೆ ಉತ್ಪನ್ನಗಳಿಗೆ ಪ್ರಸಿದ್ಧಿಗಳಿಸಿದ ವಿಜಯಪುರದಲ್ಲಿ ವಿಮಾನ ನಿಲ್ದಾಣದಿಂದ ಪ್ರವಾಸೋದ್ಯಮ ಬೆಳವಣಿಗೆ ಹಾಗೂ ರಫ್ತು ಉತ್ತೇಜನಕ್ಕೆ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು. ಮದಬಾವಿಯಲ್ಲಿ ೭೨೭ ಎಕರೆ … Continued

ಮೀಸಲಾತಿ ಹೋರಾಟ : ಕಾನೂನು ಚೌಕಟ್ಟಿನಲ್ಲಿ ಎಲ್ಲರಿಗೂ ಅವಕಾಶ

ದಾವಣಗೆರೆ:ರಾಜ್ಯದಲ್ಲಿ ವಿವಿಧ ಸಮುದಾಯಗಳು ಮೀಸಲಾತಿಗಾಗಿ ನಡೆಸುತ್ತಿರು ಹೋರಾಟ ನ್ಯಾಯಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ರವಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾನೂನಿನ ಚೌಕಟ್ಟಿನಲ್ಲಿ ಅವರಿಗೆ ಹೇಗೆ ಮೀಸಲಾತಿ ಕಲ್ಪಿಸಬೇಕು ಎನ್ನುವ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಅವರು ಭರವಸೆ ನೀಡಿದ್ದಾರೆ. ವೀರಶೈವ- ಲಿಂಗಾಯತ, ವಾಲ್ಮೀಕಿ, ಕುರುಬ ಸಮುದಾಯ ಸೇರಿದಂತೆ ಮೀಸಲಾತಿಗಾಗಿ ಹೋರಾಟ … Continued

ರಾಜಾಹುಲಿ, ಬೆಟ್ಟದ ಹುಲಿಯಾರೆಂದು ಜನ ತೀರ್ಮಾನ ಮಾಡ್ತಾರೆ: ಯತ್ನಾಳ

ತುಮಕೂರು: ಭವಿಷ್ಯದಲ್ಲಿ ಯಾರು ರಾಜಾಹುಲಿ ಆಗ್ತಾರೆ ಯಾರು ಬೆಟ್ಟದ ಹುಲಿ ಆಗ್ತಾರೆ ಎಂಬುದನ್ನು ರಾಜ್ಯದ ಜನರೇ ತೀರ್ಮಾನ ಮಾಡುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಹೇಳಿದ್ದಾರೆ. ರಾಜ್ಯದಲ್ಲಿ ಲೂಟಿ ಮಾಡಿರುವ ಹಣದಲ್ಲಿ ಎಲ್ಲರನ್ನೂ ಖರೀದಿಸಲಾಗುವುದಿಲ್ಲ. ಹಣದಿಂದ ಎಲ್ಲವನ್ನೂ ಖರೀದಿ ಮಾಡುವುದು ಸಾಧ್ಯವಿದ್ದರೆ ಟಾಟಾ, ಬಿರ್ಲಾರಂಥ ಉದ್ಯಮಿಗಳು ಈ ದೇಶದ ಪ್ರಧಾನಿಗಳು ಆಗಬೇಕಿತ್ತು. ರೈಲಿನಲ್ಲಿ ಚಹಾ … Continued

ಮೈತ್ರಿ ಸಹವಾಸ ಸಾಕಾಗಿದೆ: ಜೆಡಿಎಸ್‌ ಮುಖಂಡ ಬಂಡೆಪ್ಪ ಕಾಶಂಪೂರ

ಬೆಂಗಳೂರು: ಬೇರೆ ಪಕ್ಷದವರ ಜೊತೆ ಮೈತ್ರಿ ಸಾಕಾಗಿದೆ. ನಮಗೆ ಯಾರ ಸಹವಾಸವೂ ಬೇಡ ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪೂರ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಜೆಡಿಎಸ್‌ ಸಮಾವೇಶದಲ್ಲಿ ಮೈತ್ರಿ ಸಹವಾಸ ಬೇಡ ಎಂದು ವರಿಷ್ಠರಿಗೆ ಮನವಿ ಮಾಡಿದ ಅವರು, ನಮಗೆ ಯಾರ ಸಹವಾಸವೂ ಬೇಡ. ಮುಂದಿನ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ … Continued

ತುಳಿತಕ್ಕೊಳಗಾದವರಿಗೆ ಮೀಸಲಾತಿ ಸಿಗಲಿ: ಸುತ್ತೂರು ಶ್ರೀ

ಮೈಸೂರು: ಎಲ್ಲ ಸಮುದಾಯಗಳಲ್ಲಿಯೂ ತುಳಿತಕ್ಕೊಳಗಾದವರಿದ್ದು, ಅಂಥವರಿಗೆ ಮೀಸಲಾತಿ ಸೌಲಭ್ಯ ದೊರೆಯಬೇಕು ಎಂದು ಸುತ್ತೂರು ಶ್ರೀ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ರಾಜ್ಯದಲ್ಲಿ ಮೀಸಲಾತಿಗಾಗಿ ಹಲವು ಸಮುದಾಯದವರು ಹೋರಾಟ ನಡೆಸುತ್ತಿದ್ದಾರೆ. ಸೌಲಭ್ಯ ವಂಚಿತರಿಗೆ ಸೌಲಭ್ಯ ಒದಗಿಸುವ ಕೆಲಸವನ್ನು ಸರಕಾರ ಸಮರ್ಪಕವಾಗಿ ಮಾಡಬೇಕು ಎಂದರು. ಒಂದು ಸಮುದಾಯದಲ್ಲಿ ನಾಲ್ಕಾರು ಜನರು ಸೌಲಭ್ಯ ಪಡೆದುಕೊಂಡಿದ್ದಾರೆಂದರೆ ಎಲ್ಲರೂ ಸೌಲಭ್ಯ ಪಡೆದುಕೊಂಡಂತಲ್ಲ. ತುಳಿತಕ್ಕೊಳಗಾದವರನ್ನು ಗುರುತಿಸಿ … Continued

ಸಂಘ ಪರಿವಾರ ಸಾಮಾಜಿಕ ನ್ಯಾಯ ಹೋರಾಟದ ದಾರಿ ತಪ್ಪಿಸುತ್ತಿದೆ: ಸಿದ್ದರಾಮಯ್ಯ ಆರೋಪ

ನಾವೆಲ್ಲ ಹಿಂದೂ ನಾವೆಲ್ಲ ಒಂದು ಎಂದು ಹೇಳುತ್ತಿದ್ದ ಸಂಘ ಪರಿವಾರ ಈಗ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ವಹಿಸುತ್ತಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮೀಸಲಾತಿಯನ್ನು ನೇರವಾಗಿ ವಿರೋಧಿಸದ ಸಂಘ ಪರಿವಾರದ ಮುಖಂಡರು ಜಾತಿ ಜಾತಿಗಳ ಮಧ್ಯೆ ವಿವಾದ ಸೃಷ್ಟಿಸಿ ಸಾಮಾಜಿಕ ನ್ಯಾಯ ಹೋರಾಟದ ದಾರಿ ತಪ್ಪಿಸುತ್ತಿದ್ದಾರೆ. … Continued

ಹಿಂದಿ ಹೇರಿದರೆ ರಕ್ತಪಾತವಾದೀತು: ಸಿದ್ದರಾಮಯ್ಯ ಅಬ್ಬರ

ಮಂಡ್ಯ: ಹಿಂದಿ ರಾಷ್ಟ್ರೀಯ ಭಾಷೆಯಲ್ಲ, ಅದನ್ನು ಬಲವಂತವಾಗಿ ರಾಜ್ಯದ ಜನರ ಮೇಲೆ ಹೇರಿದರೆ ರಕ್ತಪಾತ ಉಂಟಾಗುವ ಸಾಧ್ಯತೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಬ್ಬರಿಸಿದ್ದಾರೆ. ಉತ್ತರ ಭಾರತದ ಐದಾರು ರಾಜ್ಯಗಳನ್ನು ಹೊರತುಪಡಿಸಿದರೆ ಪಂಜಾಬ್‌, ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಹಿಂದಿ ಮಾತಾಡುವವರೇ ಇಲ್ಲ. ಇದರಿಂದಾಗಿ ಹಿಂದಿ ರಾಷ್ಟ್ರ ಭಾಷೆಯಾಗಲು … Continued

ಮುಂದಿನ ಚುನಾವಣೆಯಲ್ಲಿ ನಿಮ್ಮ ತಾಕತ್‌ ತೋರಿಸಿ: ಕಾರ್ಯಕರ್ತರಿಗೆ ದೇವೆಗೌಡ ಮನವಿ

ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ನಮ್ಮ ತಾಕತ್ತು ಏನು ಎಂಬುದನ್ನು ತೋರಿಸಬೇಕಿದೆ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಕಾರ್ಯಕರ್ತರಲ್ಲಿ ಕೋರಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಜೆಡಿಎಸ್ ಸಮಾವೇಶವನ್ನು ಉದ್ಘಾಟಿಸಿದ ನಂತರ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕೆಂದು ಕಾರ್ಯಕರ್ತರು, ಮುಖಂಡರಲ್ಲಿ ಮನವಿ ಮಾಡಿದರು. ನಾನು ಮುಂದೆ ನಿಮಗೆ ಮಾರ್ಗದರ್ಶನ ಮಾಡಬಹುದು … Continued

ಮನಸು ಮಾಡಿದ್ರೆ ೨೪ ಗಂಟೆಗಳಲ್ಲಿ ೫ ಕಾಂಗ್ರೆಸ್‌ ಶಾಸಕರ ರಾಜೀನಾಮೆ ಕೊಡಿಸಬಲ್ಲೆ

ಬೆಳಗಾವಿ: ನಾನು ಮನಸು ಮಾಡಿದರೆ ೨೪ ಗಂಟೆಗಳಲ್ಲಿ ಐದು ಕಾಂಗ್ರೆಸ್‌ ಶಾಸಕರ ರಾಜಿನಾಮೆ ಕೊಡಿಸಬಲ್ಲೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಕಾಂಗ್ರೆಸ್‌ನಿಂದ ಬಿಜೆಪಿಗೆ ೧೭ ಶಾಸಕರು ಖುಷಿಯಿಂದ ಇಲ್ಲ ಎಂದು ಕೆಲವರು ಹೇಳುತ್ತಾರೆ. ಆದರೆ ಬೇಕೆನಿಸಿದರೆ ೨೪ ತಾಸುಗಳಲ್ಲಿ ಐವರು ಕಾಂಗ್ರೆಸ್‌ ಶಾಸಕರ ರಾಜಿನಾಮೆ ಕೊಡಿಸಬಲ್ಲೆ ಎಂದರು. ಕಾಂಗ್ರೆಸ್ನ ಉನ್ನತ ಹಂತದ … Continued

ಉಪ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಕಣಕ್ಕೆ: ಎಚ್‌ಡಿಕೆ

ಬೆಂಗಳೂರು: ಬಸವಕಲ್ಯಾಣ, ಮಸ್ಕಿ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಜೆಡಿಎಸ್‌ ಮುಖಂಡ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಅವರು ಅರಮನೆ ಮೈದಾನದಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಮಾತನಾಡಿ, ಆರ್ಥಿಕ ಸಾಮರ್ಥ್ಯದ ಕೊರತೆಯಿಂದಾಗಿ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರಲು ನಿರ್ಧರಿಸಲಾಗಿತ್ತು. ಆದರೆ ಈಗ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಸೆಣೆಸಲಿದ್ದಾರೆ … Continued