ಕರ್ನಾಟಕದಲ್ಲಿ ಶನಿವಾರ ದೈನಂದಿನ ಸೋಂಕು, ಸಾವಿನ ಸಂಖ್ಯೆ ಎರಡೂ ಕಡಿಮೆ..

ಬೆಂಗಳೂರು: ರಾಜ್ಯದಲ್ಲಿ ಶನಿವಾರ ದೈನಂದಿನ ಸೋಂಕು ಶುಕ್ರವಾರಕ್ಕಿಂತ ಕಡಿಮೆಯಾಗಿದ್ದರೂ ಏಳು ಸಾವಿರದ ಸನಿಹದಲ್ಲಿಯೇ ಇದೆ. ಶನಿವಾರ ರಾಜ್ಯದಲ್ಲಿ 6955 ಜನರಿಗೆಸೊಂಕು ದೃಢ ಪಟ್ಟಿದೆ. ಕೊರೊನಾದಿಂದ ಕಳೆದ 24 ಗಂಟೆಗಳಲ್ಲಿ 36 ಸೋಂಕಿತ ರು ಮೃತಪಟ್ಟಿದ್ದು, ಇದರದಲ್ಲಿ ಬೆಂಗಳೂರು ನಗರ ದಲ್ಲಿ 19 ಮಂದಿ ಮೃತಪಟ್ಟಿದ್ದಾರೆ. ಮೈಸೂರು ನಗರದಲ್ಲಿ ಐವರು, ಬೀದರ್, ಧಾರವಾಡ, ತುಮಕೂರು, ಹಾಗೂ ಕಲ್ಬುರ್ಗಿಯಲ್ಲಿ … Continued

ಅರುಣ್‌ ಸಿಂಗ್‌ಜಿ ಭ್ರಷ್ಟಾಚಾರದಲ್ಲಿ ತೊಡಗಿರುವವರನ್ನು ಮೊದಲು ಬಿಜೆಪಿಯಿಂದ ಉಚ್ಚಾಟಿಸಿ,ನಂತರ ನನ್ನ ಬಗ್ಗೆ ಯೋಚಿಸಿ;ಯತ್ನಾಳ

ಹುಬ್ಬಳ್ಳಿ: ಭ್ರಷ್ಟಾಚಾರದಲ್ಲಿ ತೊಡಗಿರುವವರನ್ನು ಮೊದಲು ಬಿಜೆಪಿಯಲ್ಲಿ ಉಚ್ಚಾಟಿಸಲಿ, ಆಮೇಲೆ ನನ್ನ ಬಗ್ಗೆ ಏನು ಎಂಬ ನಿರ್ಧಾರ ಕೈಗೊಳ್ಳಲಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ಶನಿವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತನ್ನನ್ನು ಉಚ್ಚಾಟನೆ ಮಾಡುವುದಾಗಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಹೇಳಿಕೆಗೆ ಪ್ರತಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿ ಕುಟುಂಬದ ಭ್ರಷ್ಟಾಚಾರ, … Continued

ಸಾರಿಗೆ ಮುಷ್ಕರ ನಾಲ್ಕು ದಿನಗಳಲ್ಲಿ ಸಹಜ ಸ್ಥಿತಿಗೆ, ಹೀಗಾಗಿ ಎಸ್ಮಾ ಜಾರಿಯಿಲ್ಲ: ಸವದಿ

ಬೀದರ್‌: ‘ರಾಜ್ಯದಲ್ಲಿ ನಾಲ್ಕು ದಿನಗಳಲ್ಲಿ ಸಾರಿಗೆ ವ್ಯವಸ್ಥೆ ಸಹಜ ಸ್ಥಿತಿಗೆ ಬರಲಿದೆ. ಹೀಗಾಗಿ ಎಸ್ಮಾ ಜಾರಿ ಪ್ರಶ್ನೆಯೇ ಉದ್ಘವಿಸುವುದಿಲ್ಲ’ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ತಮ್ಮನ್ನು ಭೇಟಿ ಮಾಡಿದ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಷ್ಕರದ ಸಮಯದಲ್ಲಿ ರಾಜ್ಯದಲ್ಲಿ ‘ಶುಕ್ರವಾರ 900 ಬಸ್‌, ಶನಿವಾರ 1500 ಸಂಚರಿಸಿವೆ. ಭಾನುವಾರ 2 … Continued

ಎಸ್‌ಎಸ್‌ಎಲ್‌ಸಿ-ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಟಿವಿ ಚಾನೆಲ್‌..!

ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಿಹಿಸುದ್ದಿ ನೀಡಿದ್ದು, ಮುಂದಿನ ದಿನಗಳಲ್ಲಿ ಶಿಕ್ಷಣ ಇಲಾಖೆಯಿಂದಲೇ ಒಂದು ಟಿವಿ ಚಾನೆಲ್ ಆರಂಭಿಸುವ ಪ್ರಸ್ತಾಪವಿದೆ ಎಂದು ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಮೇ 24 ರಿಂದ ಪಿಯುಸಿ ಪರೀಕ್ಷೆಗಳು, ಜೂನ್ 20 ರಿಂದ ಎಸ್ ಎಸ್ … Continued

ಕರಾವಳಿ, ಮಲೆನಾಡಿನಲ್ಲಿ ಎರಡು ದಿನ ಗುಡುಗು ಸಹಿತ ಮಳೆ: ಮುನ್ಸೂಚನೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದಲ್ಲಿ ಎರಡು ದಿನ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 12 ರ ನಂತರ ಮಳೆ ಬಿರುಸುಗೊಳ್ಳಲಿದ್ದು, ಏಪ್ರಿಲ್ 14, 15 ರಂದು ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಹಿನ್ನಲೆಯಲ್ಲಿ ಯೆಲ್ಲೋ … Continued

ಮುಂದುವರಿದ ಮುಷ್ಕರ: ಸಾರಿಗೆ ಇಲಾಖೆ 334 ನೌಕರರ ವಜಾ

ಬೆಂಗಳೂರು: ನೋಟಿಸ್ ನೀಡಿದರೂ ಕರ್ತವ್ಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯಿಂದ ಈವರೆಗೆ 334 ನೌಕರರನ್ನು ವಜಾಗೊಳಿಸಿ ಆದೇಶಿಸಲಾಗಿದೆ. ಶುಕ್ರವಾರ 118 ನೌಕರರನ್ನು ವಜಾಗೊಳಿಸಲಾಗಿತ್ತು. 216 ನೌಕರರನ್ನು ಶನಿವಾರ ವಜಾಗೊಳಿಸಿ ಆದೇಶ ಮಾಡಲಾಗಿದ್ದು, ಒಟ್ಟಾರೆ 334 ನೌಕರರನ್ನು ಕೆಲಸದಿಂದ ವಜಾ ಮಾಡಲಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದಾರೆ. … Continued

ಅನುಕಂಪದ ಆಧಾರದಲ್ಲಿ ನೇಮಕಾತಿ ನಿಯಮಕ್ಕೆಸರ್ಕಾರದ ತಿದ್ದುಪಡಿ

ಬೆಂಗಳೂರು: ಅನುಕಂಪದ ಆಧಾರದಲ್ಲಿ ಕುಟುಂಬದವರಿಗೆ ನೌಕರಿ ನೀಡುವ ನಿಯಮದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿ ಅಧಿಸೂಚನೆ ಹೊರಡಿಸಿದೆ. ಸರ್ಕಾರಿ ಹುದ್ದೆಯಲ್ಲಿರುವವರು ಮೃತಪಟ್ಟಾಗ ಅನುಕಂಪದ ಆಧಾರದಲ್ಲಿ ಅವರ ಅವಲಂಬಿತರನ್ನು ಸರ್ಕಾರಿ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುವ ಕರ್ನಾಟಕ ನಾಗರಿಕ ಸೇವಾ (ಅನುಕಂಪದ ಆಧಾರದಲ್ಲಿ ನೇಮಕಾತಿ) ನಿಯಮಗಳಿಗೆ ತಿದ್ದುಪಡಿ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇದರ ಅನ್ವಯ ಸರ್ಕಾರಿ … Continued

ಸಿಎಂ ಬಿಎಸ್‌ವೈ ಕುಳಿತ ಹಡಗು ಮುಳುಗುತ್ತಿದೆ, ಯತ್ನಾಳ ಇದಕ್ಕೆ ಸಾಕ್ಷಿ: ಸಿದ್ದರಾಮಯ್ಯ ಲೇವಡಿ

ಬೆಳಗಾವಿ: ಮುಖ್ಯಮಂತ್ರಿ ಯಡಿಯೂರಪ್ಪ ಕುಳಿತಿರುವ ಹಡಗೇ ಮುಳುಗುತ್ತಿದೆ. ಇದಕ್ಕೆ ಅವರದ್ದೇ ಪಕ್ಷದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಸರ್ಕಾರಕ್ಕೆ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂಬ ಯಡಿಯೂರಪ್ಪ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಯಡಿಯೂರಪ್ಪ ಕುಳಿತಿರುವ ಹಡಗೇ ಮುಳುಗುತ್ತಿದೆ. ಯತ್ನಾಳ್ ಅವರೇ ಇದಕ್ಕೆ ಸಾಕ್ಷಿಯಾಗಿದ್ದಾರೆ … Continued

ಕೆ-ಸೆಟ್ ಪರೀಕ್ಷೆ ಮುಂದೂಡಿಕೆ

ಮೈಸೂರು : ಏಪ್ರಿಲ್ 11ರಂದು ನಡೆಯಬೇಕಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಪರೀಕ್ಷೆ ಮುಂದೂಡಲಾಗಿದೆ. ಏಪ್ರಿಲ್ 11 ರಂದು ನಡೆಯಬೇಕಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಪರೀಕ್ಷೆ ನಡೆಸಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ಕಾರಣಾಂತರಗಳಿಂದ ಕೆಸೆಟ್ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ. ಮುಂದಿನ ಕೆಸೆಟ್ ಪರೀಕ್ಷಾ ದಿನಾಂಕವನ್ನು … Continued

ಕೋಡಿಹಳ್ಳಿ ಚಂದ್ರಶೇಖರ ಅವರನ್ನು ವಶಕ್ಕೆ ಪಡೆದ ಪೊಲೀಸರು..!

ಬೆಳಗಾವಿ : ರೈತ ಮುಖಂಡ, ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬೆಳಗಾವಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ನಗರದ ಖಾಸಗಿ ಹೋಟೆಲ್ ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಅವರು ರೈತ ಮುಖಂಡರ ಹಾಗೂ ಸಾರಿಗೆ ನೌಕರರ ಜೊತೆಗೆ ಸಭೆ ಮಾಡಲು ಮುಂದಾಗಿದ್ದ  ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಶಕ್ಕೆ ಪಡೆದಿದ್ದಾರೆ. … Continued