ಕರ್ನಾಟಕದಲ್ಲಿ ಐದು ಸಾವಿರದ ಸಮೀಪ, ಬೆಂಗಳೂರಲ್ಲಿ ಮೂರೂವರೆ ಸಾವಿರ ದಾಟಿದ ದೈನಂದಿನ ಕೊರೊನಾ ಪ್ರಕರಣ..

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಆರ್ಭಟಿಸಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 4,991 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೆ 6 ಸೋಂಕಿತರು ಮೃತಪಟ್ಟಿದ್ದಾರೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 3,509 ಸೇರಿದಂತೆ ರಾಜ್ಯಾಧ್ಯಂತ 4,991 ಜನರಿಗೆ ಕೊರೋನಾ ಸೋಂಕು … Continued

ಬಿಗಿ ಭದ್ರತೆ ಮಧ್ಯೆಯೂ ಶ್ರೀ ಶರಣಬಸವೇಶ್ವರರ ಜಾತ್ರೆಯಲ್ಲಿ ಭಕ್ತರು ಭಾಗಿ

ಕಲಬುರಗಿ: ಹೋಳಿ ಪಂಚಮಿಯ ದಿನದಂದು ನಡೆಯುವ 18ನೇ ಶತಮಾನದ ಸಂತ, ಮಹಾದಾಸೋಹಿ  ಶ್ರೀ ಶರಣಬಸವೇಶ್ವರರ ಪುಣ್ಯಸ್ಮರಣೋತ್ಸವದ ಅಂಗವಾಗಿ ನಡೆಯುವ ಶ್ರೀ ಶರಣಬಸವೇಶ್ವರರ 199ನೇ ಜಾತ್ರೆಯ ಧಾರ್ಮಿಕ ಆಚರಣೆ ಹಾಗೂ ರಥೋತ್ಸವ ಪೋಲಿಸರ ಭದ್ರತಾ ವ್ಯವಸ್ಥೆ ಮಧ್ಯೆ ಸರಳವಾಗಿ ನಡೆಯಿತು. ಬೆಳಿಗ್ಗೆಯಿಂದಲೇ ಶರಣಬಸವೇಶ್ವರ ದೇವಾಸ್ಥಾನದ ಎಲ್ಲ ಪ್ರವೇಶದ್ವಾರಕ್ಕೆ ಬ್ಯಾರಿಕೇಡ್‌ ಹಾಕುವ ಮೂಲಕ ಬಂದ್‌ ಮಾಡಲಾಗಿತ್ತು. ಆಯಾ ದ್ವಾರ  … Continued

ಸಿಎಂ ಬಿಎಸ್‌ವೈ-ಈಶ್ವರಪ್ಪ ವಿಚಾರ ಶೀಘ್ರವೇ ಬಗೆಹರಿಯಲಿದೆ:ಕಟೀಲು

ಮಂಗಳೂರು: ಈಗಾಗಲೇ ಸಚಿವ ಈಶ್ವರಪ್ಪ ಮತ್ತು ಸಂಬಂಧಪಟ್ಟವರ ಜೊತೆ ಮಾತನಾಡಿದ್ದೇವೆ. ಏನೂ ಸಮಸ್ಯೆ ಆಗದಂತೆ ಬಗೆಹರಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಹೇಳಿದ್ದಾರೆ ಮುಖ್ಯಮಂತ್ರಿ ಯಡಿಯುರಪ್ಪ ಅವರ ಹಸ್ತಕ್ಷೇಪದ ಕುರಿತು ಸಚಿವ ಈಶ್ವರಪ್ಪ ರಾಜ್ಯಪಾಲರಿಗೆ ಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ಈಶ್ವರಪ್ಪ ಪಕ್ಷದ ಹಿರಿಯ ನಾಯಕರು. ಹೀಗಾಗಿ ಕುಳಿತು ಪರಸ್ಪರ … Continued

ನನ್ನ ಸಿಎಂ ನಡುವೆ ವೈಯಕ್ತಿಕ ಏನೂ ಇಲ್ಲ, ನಾನು ಪಕ್ಷಕ್ಕೆ ಯಾವತ್ತೂ ಲಾಯಲ್‌, ರಾಜೀನಾಮೆ‌ ಪ್ರಶ್ನೆಯೇ ಇಲ್ಲ: ಈಶ್ವರಪ್ಪ

ಮೈಸೂರು:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಅನುದಾನ ಬಿಡುಗಡೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹಸ್ತಕ್ಷೇಪ ವಿರೋಧಿಸಿ ರಾಜ್ಯಪಾಲರಿಗೆ ಹಾಗೂ ಪಕ್ಷದ ವರಿಷ್ಠರಿಗೆ ಪತ್ರ ಬರೆದಿದ್ದ ಸಚಿವ ಈಶ್ವರಪ್ಪ ಈಗ ಮತ್ತೊಮ್ಮೆ ತಾವು ಮಾಡಿದ್ದನ್ನು ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಚಾಮುಂಡಿದೇವಿ ದರ್ಶನದ ಬಳಿಕ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲಾಖೆ ಗಮನಕ್ಕೆ ತರದೆ ನೇರವಾಗಿ ಕೆಲವು ಶಾಸಕರಿಗೆ ಅನುದಾನ … Continued

ಈಶ್ವರಪ್ಪ ಏನು ತಪ್ಪು ಮಾಡಿದ್ದಾರೆ..? ಕ್ಯಾಬಿನೆಟ್‌ ಸಚಿವರಿಗೆ ಅಧಿಕಾರ ಇಲ್ಲವೆಂದ್ರೆ ಹೇಗೆ?: ಈಶ್ವರಪ್ಪ ಪರ ಯತ್ನಾಳ್ ಬ್ಯಾಟ್‌ ‌

ವಿಜಯಪುರ: ಸಚಿವ ಈಶ್ವರಪ್ಪನವರು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಮಾಡಿದ ಆರೋಪಕ್ಕೆ ಮಹತ್ವ ನೀಡಬೇಕು.ಈಶ್ವರಪ್ಪ ಏನು ತಪ್ಪು ಮಾಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಈಶ್ವರಪ್ಪ ಪರ ಬ್ಯಾಟ ಬೀಸಿದ್ದಾರೆ. ವಿಜಯಪುರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಸಚಿವ ಕೆ.ಎಸ್.ಈಶ್ವರಪ್ಪ ದೂರು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯನ್ನು ಈ ಹಿಂದೆ ಕಟ್ಟಿದವರಲ್ಲಿ ಈಶ್ವರಪ್ಪ ಕೂಡ ಒಬ್ಬರು. … Continued

ಕೃಷಿ ಸಚಿವ ಸಚಿವ ಬಿಸಿ ಪಾಟೀಲಗೆ ಮನೆಗೇ ಬಂದು ಲಸಿಕೆ : ತಾಲೂಕು ಆರೋಗ್ಯಾಧಿಕಾರಿ ಅಮಾನತು

ಹಾವೇರಿ: ಸಚಿವರಿಗೆ ಲಸಿಕೆ ನೀಡುವ ಸಲುವಾಗಿ ಬಿ ಸಿ ಪಾಟೀಲ ಅವರ ಮನೆಗೆ ಭೇಟಿ ನೀಡುವಂತೆ ತಮ್ಮ ಸಿಬ್ಬಂದಿಗೆ ಆದೇಶಿಸಿದ್ದ ಹಿರೇಕೆರೂರು ತಾಲೂಕು ಆರೋಗ್ಯ ಅಧಿಕಾರಿ ಡಾ. ಝಡ್. ಆರ್. ಮಕಾಂದಾರ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಅಮಾನತುಗೊಳಿಸಲಾಗಿದೆ. ಮಾರ್ಚ್ 2ರಂದು, ಹಿರೇಕೆರೂರು ತಾಲೂಕಿನ ಆರೋಗ್ಯ ಇಲಾಖೆಯ ಸಿಬ್ಬಂದಿ ಸಚಿವ ಪಾಟೀಲ್ ಮನೆಗೆ … Continued

ಸಿಡಿ ಪ್ರಕರಣ; ಆರೋಪಿ ತಲೆಮರೆಸಿಕೊಳ್ಳಲು ಸರ್ಕಾರವೇ ಸಹಕರಿಸುತ್ತಿದೆ ಎಂದು ಕಾಂಗ್ರೆಸ್‌ ವಾಗ್ದಾಳಿ

ಬೆಂಗಳೂರು: ಆರೋಪಿ ತಲೆ ಮರೆಸಿಕೊಳ್ಳಲು ಸಹಕರಿಸುದು ಕಾನೂನಿನ ಪ್ರಕಾರ ಅಪರಾಧ. ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿ ತಲೆಮರೆಸಿಕೊಂಡು ಅಜ್ಞಾತವಾಸದಲ್ಲಿದ್ದಾರೆ. ಅವರಿಗೆ ಸರ್ಕಾರವೇ ಸಹಕರಿಸುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್‌ ತೀವ್ರ ವಾಗ್ದಾಳಿ ನಡೆಸಿದೆ. ಆರೋಪಿ ಬಂಧಿಸುವುದನ್ನು ಬಿಟ್ಟು ರಕ್ಷಣೆ ನೀಡುತ್ತಿರುವುದು ಕಾನೂನಿನ ಪ್ರಕಾರ ಅಪರಾಧ. ಕಾನೂನು ಉಲ್ಲಂಘಿಸಿದ ಸರ್ಕಾರಕ್ಕೆ ಏನು ಶಿಕ್ಷೆ ನೀಡಬೇಕು ಎಂದು … Continued

ಕೊರೊನಾ ಹೆಚ್ಚಳ : ಬೆಂಗಳೂರಲ್ಲಿ 6 ರಿಂದ 9ನೇ‌ ತರಗತಿ ಸ್ಥಗಿತಗೊಳಿಸಿ ಆದೇಶ

ಬೆಂಗಳೂರು ನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಪರಿಗಣಿಸಿ ಪ್ರಸ್ತುತ ನಡೆಯುತ್ತಿರುವ 6-9ನೇ‌ ಭೌತಿಕ ತರಗತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗಿದೆ  ಎಂದು ಸಚಿವ ಸುರೇಶ್‌ಕುಮಾರ್ ಹೇಳಿದ್ದಾರೆ. ಮುಂದಿನ‌ ಆದೇಶದ ವರೆಗೆ ಭೌತಿಕ ತರಗತಿಗಳನ್ನು ನಿಲ್ಲಿಸಲಾಗುತ್ತದೆ ಎಂದು ತಿಳಿಸಿರುವ ಸಚಿವರು, ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ, ಈ ವಯೋಮಾನದ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ‌ … Continued

ಸಚಿವ ಕೆ.ಎಸ್‌.ಈಶ್ವರಪ್ಪ ವರ್ತನೆ ಸರಿಯಲ್ಲ: ಸಚಿವ ಸಿ.ಸಿ.ಪಾಟೀಲ

ಗದಗ: ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಸಚಿವ ಕೆ.ಎಸ್‌. ಈಶ್ವರಪ್ಪ ರಾಜ್ಯಪಾಲರು ಹಾಗೂ ಪಕ್ಷದ ವರಿಷ್ಠರಿಗೆ ದೂರು ನೀಡಿದ್ದು ಖಂಡನೀಯ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಹೇಳಿದರು. ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಇಂಥ ಸಂದರ್ಭದಲ್ಲಿ ಪಕ್ಷಕ್ಕೆ ಮುಜುಗುರ ಉಂಟು ಮಾಡಿದ್ದು ಸರಿಯಲ್ಲ ಎಂದರು. ಉಭಯ ನಾಯಕರು ಒಂದೇ ಜಿಲ್ಲೆಯವರು. … Continued

ಯತ್ನಾಳ ಆರೋಪಗಳಿಗೆ ಈಶ್ವರಪ್ಪ ಬೀಗಮುದ್ರೆ: ಕಾಂಗ್ರೆಸ್‌ ಟೀಕೆ

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾಡುತ್ತಿದ್ದ ಆರೋಪಗಳಿಗೆ ಸಚಿವ ಕೆ.ಎಸ್‌. ಈಶ್ವರಪ್ಪ ಬೀಗಮುದ್ರೆ ಒತ್ತಿದ್ದಾರೆ ಎಂದು ಕಾಂಗ್ರೆಸ್‌ ಹೇಳಿದೆ. ಬಿಜೆಪಿ ವಿರುದ್ಧ ಟ್ವೀಟ್‌ ಮಾಡಿದ ಕಾಂಗ್ರೆಸ್‌, ಬಿಜೆಪಿ ಸರಕಾರದಲ್ಲಿ ಭೃಷ್ಟಾಚಾರ, ಸ್ವಜನಪಕ್ಷಪಾತ, ದುರಾಡಳಿತವಿದ್ದು, ರಾಜ್ಯ ಅನಾಥವಾಗಿದೆ ಎಂದು ತಿಳಿಸಿದೆ. ಬಿಜೆಪಿ ಕೂಡಲೇ ಸರಕಾರವನ್ನು ವಿಸರ್ಜಿಸಬೇಕು. ಕೊರೊನಾ ಸೋಂಕಿನಲ್ಲಿ ಭೃಷ್ಟಾಚಾರ, ನೆರೆ ಪರಿಹಾರದಲ್ಲಿ ಭೃಷ್ಟಾಚಾರ, ವರ್ಗಾವಣೆ, … Continued