ಉಪಚುನಾವಣೆಯಲ್ಲಿ ಯಾವ ಜೋಡೆತ್ತುಗಳು ಕೆಲಸ ಮಾಡಲ್ಲ: ಸಚಿವ ಶ್ರೀರಾಮಲು

ಬಳ್ಳಾರಿ: ಉಪಚುನಾವಣೆಯಲ್ಲಿ ಯಾವ ಜೋಡೆತ್ತುಗಳು ಕೆಲಸ ಮಾಡಲ್ಲ, ಮಸ್ಕಿ, ಬಸವಕಲ್ಯಾಣ ಹಾಗೂ ಬೆಳಗಾವಿಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಸಚಿವ ಶ್ರೀರಾಮಲು ಹೇಳಿದರು. ಕಾಂಗ್ರೆಸ್‌ ಮುಖಂಡರು ಎಲ್ಲಿ ಪ್ರಚಾರಕ್ಕೆ ಹೋಗಿದ್ದಾರೋ ಅಲ್ಲೆಲ್ಲ ಕಾಂಗ್ರೆಸ್‌ ಸೋಲನುಭವಿಸಿದೆ. ಯಾವ ಜೋಡೆತ್ತುಗಳ ಕರಾಮತ್ತು ನಡೆಯೊಲ್ಲ ಎಂದರು. ವಿಜಯೇಂದ್ರ ಬಂದರೆ ಹಣ ಎಂಬ ಸಿದ್ದು ಹೇಳಿಕೆಗೆ ರಾಮುಲು ತಿರುಗೇಟು ನೀಡಿದ್ದು, ಸುಳ್ಳು … Continued

ಕರ್ನಾಟಕದಲ್ಲಿ ನಾಲ್ಕು ಸಾವಿರ ದಾಟಿದ ದೈನಂದಿನ ಕೊರೊನಾ ಪ್ರಕರಣ…!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಇಂದು ಆರ್ಭಟಿಸಿದೆ. ಕಳೆದ 24 ಗಂಟೆಗಳಲ್ಲಿ ಹೊಸ ಸೋಂಕು ಪ್ರಕರಣಗಳು ನಾಲ್ಕು ಸಾವಿರ ಗಡಿದಾಟಿದೆ. ಬೆಂಗಳೂರು ನಗರದಲ್ಲಿಸೋಂಕಿತರ ಸಂಖ್ಯೆ ಮೂರು ಸಾವಿರ ಹತ್ತಿರ ಬಂದಿದೆ. ಮೃತಪಟ್ಟವರ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 4225 ಕೋರೊನಾ ಹೊಸ ಪ್ರಕರಣಗಳು ವರದಿಯಾಗಿವೆ. 26 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಬೆಂಗಳೂರು ನಗರದಲ್ಲೇ … Continued

ಅಪರೇಶನ್‌ ಕಮಲ: ಸಿಎಂ ಬಿಎಸ್‌ವೈ ವಿರುದ್ಧ ತನಿಖೆಗೆ ಹೈಕೋರ್ಟ್‌ ಅಸ್ತು

ಯಾದಗಿರಿ : ಶಾಸಕರಿಗೆ ಹಣದ ಆಮಿಷ ಒಡ್ಡಿ ಆಪರೇಷನ್ ಕಮಲ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆಪರೇಷನ್ ಕಮಲ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆದರೆ ಎಫ್ಐಆರ್ ಗೆ ತಡೆ ಕೋರಿ … Continued

ನನ್ನ ಇಲಾಖೆಯಲ್ಲಿ ತಮ್ಮವರ ಪರವಾಗಿ ಹಸ್ತಕ್ಷೇಪ; ಸಿಎಂ ಬಿಎಸ್‌ವೈ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದ ಈಶ್ವರಪ್ಪ..!

ಬೆಂಗಳೂರು; ಕರ್ನಾಟಕದ ಒಂದು ದೊಡ್ಡ ರಾಜಕೀಯ ಬೆಳವಣಿಗೆಯಲ್ಲಿ, ಸಚಿವರೊಬ್ಬರು ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ವಿರುದ್ಧ ರಾಜ್ಯಪಾಲ ವಾಜುಭಾಯ್ ವಾಲಾ ಅವರಿಗೆ ಬುಧವಾರ ದೂರು ನೀಡಿದ್ದು, ಇಲಾಖೆಯ ವಿಷಯಗಳಲ್ಲಿ ಮುಖ್ಯಮಂತ್ರಿಗಳ ಅವರ ಸಂಬಂಧಿಕರ ಪರವಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕುರಿತು ನ್ಯೂಸ್‌ ಮಿನಿಟ್‌ ವರದಿ ಮಾಡಿದೆ. ಆ ವರದಿ ಪ್ರಕಾರ, ಯಡಿಯೂರಪ್ಪ ಅವರ ಸಚಿವ ಸಂಪುಟದ … Continued

ಸಿಡಿ ಯುವತಿ ವಿಡಿಯೋ ರೆಕಾರ್ಡ್‌ ಮಾಡಿ ಹರಿಬಿಟ್ಟ ಪೊಲೀಸರ ಮೇಲೆ ಕ್ರಮಕ್ಕೆ ವಕೀಲ ಜಗದೀಶ ಒತ್ತಾಯ

ಬೆಂಗಳೂರು: ಸಿಡಿ ಪ್ರಕರಣದಲ್ಲಿ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿ ಯುವತಿ ವಾಪಸ್‌ ತೆರಳುವ ಸಂದರ್ಭದಲ್ಲಿ ಹಿಂಬದಿಯಿಂದ ಚಿತ್ರೀಕರಣ ಮಾಡಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಕೀಲರಾದ ಜಗದೀಶ್ ಒತ್ತಾಯಿಸಿದ್ದಾರೆ. ಬುಧವಾರ ಬೆಳಿಗ್ಗೆ ಫೇಸ್‍ಬುಕ್ ಲೈವ್‍ನಲ್ಲಿ ಮಾತನಾಡಿರುವ ಅವರು, ಹೇಳಿಕೆ ದಾಖಲಿಸಿಕೊಳ್ಳುವಾಗ ನ್ಯಾಯಾಧೀರು ಹಾಗೂ ಸಂತ್ರಸ್ತೆ ಮಾತ್ರ ಇದ್ದರು. ಹೊರಗಡೆ ಪೊಲೀಸರು ಹಾಗೂ … Continued

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮಗೆ ಕೊರೊನಾ ಸೋಂಕು

ಬೆಂಗಳೂರು; ತಮ್ಮ ಪತ್ನಿಗೆ ಕೊರೊನಾ ವೈರಸ್‌ ಸೋಂಕು ತಗುಲಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಬುಧವಾರ ಹೇಳಿದ್ದಾರೆ. ನನ್ನ ಹೆಂಡತಿ ಚೆನ್ನಮ್ಮ ಕೊವಿಡ್‌-19 ಪರೀಕ್ಷೆ ಮಾಡಿಸಿದಾಗ ಪಾಸಿಟಿವ್‌ ಬಂದಿದೆ. ನಾವು ಇತರ ಕುಟುಂಬ ಸದಸ್ಯರೊಂದಿಗೆ ಸ್ವಯಂ-ಪ್ರತ್ಯೇದಲ್ಲಿದ್ದೇವೆ. ಕಳೆದ ಕೆಲವು ದಿನಗಳಿಂದ ಸಂಪರ್ಕಕ್ಕೆ ಬಂದವರೆಲ್ಲರೂ ತಮ್ಮನ್ನು   ಪರೀಕ್ಷಿಸಿಕೊಳ್ಳಬೇಕೆಂದು ನಾನು ವಿನಂತಿಸುತ್ತೇನೆ. ಪಕ್ಷದ ಕಾರ್ಯಕರ್ತರು ಮತ್ತು ಹಿತೈಷಿಗಳು … Continued

ಅನವಶ್ಯಕ ಹೇಳಿಕೆಯಿಂದ ತನಿಖೆಯ ಗಂಭೀರತೆ ಹಾಳು ಮಾಡಬೇಡಿ: ಬೊಮ್ಮಾಯಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ತಮ್ಮ ಸರ್ಕಾರವನ್ನು ಟೀಕಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿರುವ ಗೃಹ,  ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ, ಅನವಶ್ಯಕವಾಗಿ ಮಾತನಾಡಿ ಪ್ರಕರಣದ ತನಿಖೆಯ ಗಾಂಭೀರ್ಯತೆ ಹಾಳು ಮಾಡಬೇಡಿ ಎಂದು ಹೇಳಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಎಸ್ಐಟಿ ತನಿಖೆ … Continued

ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಿದ ಸಿಡಿ ಪ್ರಕರಣದ ಯುವತಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಸಿಡಿ ಪ್ರಕರಣಕ್ಕೆ ಸಂಬಂಸಿದಂತೆ ಸ್ವ ಇಚ್ಛಾ ಹೇಳಿಕೆ ನೀಡಲು ಕೋರ್ಟ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸಂತ್ರಸ್ತ ಯುವತಿ ಮಂಗಳವಾರ (ಮಾ.೩೦) ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಕಳೆದ ೨೮ ದಿನಗಳ ಹೈಡ್ರಾಮಾದ ನಂತರ ಸಂತ್ರಸ್ತ ಯುವತಿ ವಸಂತ ನಗರದಲ್ಲಿರುವ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ … Continued

ಕರ್ನಾಟಕದಲ್ಲಿ ಮೂರು ಸಾವಿರ ಸನಿಹಕ್ಕೆ ಬಂದ ದೈನಂದಿನ ಕೊರೊನಾ ಪ್ರಕರಣ… ಬೆಂಗಳೂರಿನದ್ದೇ ಸಿಂಹಪಾಲು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ತಾಸಿನಲ್ಲಿ ಹೊಸದಾಗಿ 2975 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ ಒಂದೇ ದಿನ ಒಂದೇ ದಿನ 21 ಜನ ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 9,92,779 ಕ್ಕೆ ಏರಿಕೆಯಾಗಿದ್ದು, ಇದುವರೆಗೆ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 12,541 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದ 24 ತಾಸಿನಲ್ಲಿ ರಾಜ್ಯದಲ್ಲಿ 1262 … Continued

ಕೊಲ್ಲಾಪುರ ಮಹಾಲಕ್ಷ್ಮೀ ಮೊರೆ ಹೋದ ರಮೇಶ ಜಾರಕಿಹೊಳಿ

ಬೆಂಗಳೂರು: ಇತ್ತ ಸಿಡಿ ಪ್ರಕರಣ ಯುವತಿ ಬೆಂಗಳೂರಿನಲ್ಲಿ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸುತ್ತಿದ್ದರೆ ಈ ಪ್ರಕರಣದ ಆರೋಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಂಗಳವಾರ (ಮಾರ್ಚ್ 30) ಮಹಾರಾಷ್ಟ್ರದ ಕೊಲ್ಲಾಪುರ ಮಹಾಲಕ್ಷ್ಮೀ ದೇಗುಲಕ್ಕೆ ತೆರಳಿದ್ದರು. ದೇವರ ದರ್ಶನ ಪಡೆದು ರಮೇಶ್ ಜಾರಕಿಹೊಳಿ ವಾಪಸ್ ಹೊರಟಿದ್ದಾರೆ. ಅರ್ಧ ಗಂಟೆಗಳ ಕಾಲ ದೇವಿಯ ಸನ್ನಿಧಾನದಲ್ಲಿದ್ದು ವಿಶೇಷ ಪೂಜೆ ಸಲ್ಲಿಸಿದ … Continued