ಆಡಿಯೋದಲ್ಲಿ ಡಿಕೆಶಿ ಹೆಸರು ಪ್ರಸ್ತಾಪ: ಕಾಂಗ್ರೆಸ್‌ ಕಚೇರಿಯಲ್ಲಿ ಷಡ್ಯಂತ್ರ ನಡೆದಿದೆಯೇ ಎಂದು ಬಿಜೆಪಿ ಪ್ರಶ್ನೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಯುವತಿಯದ್ದು ಎನ್ನಲಾದ ಆಡಿಯೋದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪವಾಗಿದೆ. ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿರುವ ಬಿಜೆಪಿ ಟ್ವೀಟ್‌ ಮಾಡಿದ್ದು, ಈ ಪ್ರಕರಣದ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಕಾಂಗ್ರೆಸ್ ಕಚೇರಿಯಲ್ಲೇ ಷಡ್ಯಂತ್ರ ನಡೆದಿಯೇ ಎಂದು ಪ್ರಶ್ನಿಸಿದೆ. … Continued

ಯುವತಿಯದ್ದು ಎನ್ನಲಾದ ಆಡಿಯೋ ವೈರಲ್‌.. ಡಿಕೆಶಿ ಹೆಸರು ಪ್ರಸ್ತಾಪ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಿಡಿ ರಾದ್ದಾಂತ ಪ್ರಕರಣ ಘಳಿಗೆಗೊಂದು ತಿರುವು ತೆಗೆದುಕೊಳ್ಳುತ್ತಿದೆ. ಅಶ್ಲೀಲ ವಿಡಿಯೋದಲ್ಲಿ ಇದ್ದಾಳೆ ಎನ್ನಲಾದ ಯುವತಿ ತನ್ನ ಸಹೋದರನೊಂದಿಗೆ ಮಾತನಾಡಿರುವ ಆಡಿಯೋ ಶುಕ್ರವಾರ ವೈರಲ್ ಆಗಿದ್ದು, ಆ ಆಡಿಯೋದಲ್ಲಿ ಯುವತಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪಿಸಿದ್ದಾಳೆ. ಆಡಿಯೋದಲ್ಲಿ ಯುವತಿಯು ಸಹೋದರ ಮತ್ತು ತಾಯಿ ಜೊತೆ ದೂರವಾಣಿಯಲ್ಲಿ … Continued

ತಕ್ಷಣವೇ ರಮೇಶ ಜಾರಕಿಹೊಳಿ ಬಂಧಿಸಿ: ಕಾಂಗ್ರೆಸ್‌

ಬೆಂಗಳೂರು:ಸಿಡಿ ಯುವತಿ ಶುಕ್ರವಾರ ಲಿಖಿತ ದೂರು ನೀಡಿದ ಬೆನ್ನಲ್ಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಹೇಳಿ ನೀಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್‌, ರಮೇಶ್ ಜಾರಕಿಹೊಳಿ ಅವರನ್ನು ತಕ್ಷಣವೇ ಬಂಧಿಸಿ ಎಂದು ಸರ್ಕಾರವನ್ನು ಒತ್ತಾಯಿಸಿದೆ. ಅಂತಹ ಸರ್ಕಾರವನ್ನೇ ಬೀಳಿಸಿದ್ದೇನೆ ಇದ್ಯಾವ ಲೆಕ್ಕ, ನಾಳೆಯಿಂದ ನನ್ನ ಆಟ ಶುರು ಮಾಡುತ್ತೇನೆ’ ಎಂದು ರಮೇಶ್ ಜಾರಕಿಹೊಳಿ ಸಿಡಿ ಯುವತಿ … Continued

ಕರ್ನಾಟಕದಲ್ಲಿ ಶುಕ್ರವಾರವೂ ಎರಡೂವರೆ ಸಾವಿರ ದಾಟಿದ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ 2ನೇ ಅಲೆ ಶುರುವಾಗಿದ್ದು ಕಳೆದ 24 ಗಂಟೆಯಲ್ಲಿ 2,566 ಕೋರೊನಾ ಸೋಂಕು ವರದಿಯಾಗಿವೆ. ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 13 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,484ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಸೋಂಕಿತರ ಸಂಖ್ಯೆ 9,81,044ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಶುಕ್ರವಾರ 1,490 ಮಂದಿಗೆ ಸೋಂಕು … Continued

ಅಂತಹ ಸರ್ಕಾರವನ್ನೇ ಉರುಳಿಸಿದ್ದೇನೆ.. ಇದ್ಯಾವ ಲೆಕ್ಕ..

ಬೆಂಗಳೂರು: ಅಂತಹ ಸರ್ಕಾರವನ್ನೇ(ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ) ಉರುಳಿಸಿದ್ದೇನೆ. ಇದ್ಯಾವ ಲೆಕ್ಕ..?. ಇನ್ನೂ ಇಂತಹ 10 ಸಿಡಿಗಳು ಬಂದರೂ ಅದನ್ನು ಎದುರಿಸಲು ಸಿದ್ಧವಿದ್ದೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಯುವತಿ ಪೊಲೀಸರಿಗೆ ದೂರು ನೀಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೊಮ್ಮೆ ಸಿಡಿ ಯುವತಿ ತಾನು ಸಂತ್ರಸ್ತೆ ಎನ್ನುವುದೇ ಆಗಿದ್ದರೆ ಆಕೆ … Continued

ಯಾರೇ ದೂರು ಸಲ್ಲಿಸಿದರೂ ಎಸ್‌ಐಟಿಯಿಂದ ಪರಿಶೀಲನೆ

ಬೆಂಗಳೂರು; ಮಾಜಿ ಸಚಿವ ರಮೇಶ ಜಾರಕಿಹೊಳಿ‌ ಸಿಡಿ ಪ್ರಕರಣದ ಕುರಿತು ಯಾರೇ ದೂರು ಸಲ್ಲಿಸಿದರೂ ಅದನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಕಾನೂನಾತ್ಮಕವಾಗಿ ಪರಿಶೀಲನೆ ನಡೆಸಿ ಕ್ರಮ‌ಕೈಗೊಳ್ಳುತ್ತದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿಡಿಯಲ್ಲಿನ ಯುವತಿಯೇ ಆಗಲಿ, … Continued

ದೇಗುಲ ಸಿಬ್ಬಂದಿಗೆ ಸಂತಸದ ಸುದ್ದಿ ನೀಡಿದ ಸಚಿವ ಪೂಜಾರಿ

ಮೈಸೂರು : ದೇಗುಲ ಸಿಬ್ಬಂದಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಂತಸದ ಸುದ್ದಿ ನೀಡಿದ್ದಾರೆ. ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ದೇಗುಲ ಸಿಬ್ಬಂದಿಗೆ ಶೀಘ್ರದಲ್ಲೇ 6ನೇ ವೇತನ ಶ್ರೇಣಿ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಗುಲ ಸಿಬ್ಬಂದಿಗೆ 6ನೇ ವೇತನ ಶ್ರೇಣಿ ಜಾರಿಗೆ ಕೆಲವೊಂದು ಅಡಚಣೆಗಳಿವೆ. ಈ ಅಡಚಣೆಗಳ ಪರಿಹಾರಕ್ಕೆ ಅಂತಿಮ ರೂಪ … Continued

ಬೆಂಗಳೂರಲ್ಲಿ ೧೪ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು..!

ಬೆಂಗಳೂರು: ಬೆಂಗಳೂರು ನಗರದ ಶಾಲಾ ಮಕ್ಕಳಲ್ಲಿ ೧೪ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಬಿಬಿಎಂಪಿ ನಾಲ್ಕು ಶಾಲೆಗಳ ೧೪ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇದು ಆಡಳಿತಕ್ಕೆ ತಲೆನೋವು ತಂದಿದೆ. ಹತ್ತು ವರ್ಷದೊಳಗಿನ ಮಕ್ಕಳಿಗೆ ಸೋಂಕು ಹರಡುತ್ತಿದೆ ಎಂಬ ತಜ್ಞರ ಎಚ್ಚರಿಕೆ ಹಿನ್ನಲೆಯಲ್ಲಿ ಬಿಬಿಎಂಪಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೊರೊನಾ ತಪಾಸಣೆ ನಡೆಸಲಾಗಿತ್ತು. ಜೋಗುಪಾಳ್ಯ ವಾರ್ಡ್‍ನಲ್ಲಿರುವ ಬಿಬಿಎಂಪಿಯ ಒಂದೇ … Continued

ಸಂಸದೀಯ ವ್ಯವಸ್ಥೆ ಅಡಿ ಸಚಿವ ಸುಧಾಕರ ಮೇಲೆ ಕ್ರಮ: ಕಾಗೇರಿ

ಬೆಂಗಳೂರು: ಶಾಸಕರ ಕುರಿತಾಗಿ ಸಚಿವ ಡಾ.ಕೆ.ಸುಧಾಕರ್ ಅವರ ಮೇಲೆ ಸಂಸದೀಯ ವ್ಯವಸ್ಥೆ ಅಡಿಯಲ್ಲಿ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇನೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಡಾ.ಕೆ.ಸುಧಾಕರ್ ಆಕ್ಷೇಪಾರ್ಹ ಹೇಳಿಕೆ ಸರಿಯಲ್ಲ. ಅದರ ಬಗ್ಗೆ ಅವರೇ ಸ್ಪಷ್ಟೀಕರಣ ಕೂಡಾ ಕೊಟ್ಟಿದ್ದಾರೆ. ಆದರೂ ಸಹ ಸಭಾಧ್ಯಕ್ಷನಾಗಿ ಸಂಸದೀಯ ವ್ಯವಸ್ಥೆ … Continued

ಕೊರೊನಾ 2ನೇ ಅಲೆ ಭೀತಿ: ಹಬ್ಬಗಳ ಸಾರ್ವಜನಿಕ ಆಚರಣೆ-ಕಾರ್ಯಕ್ರಮಗಳಿಗೆ ಸರ್ಕಾರ ನಿಷೇಧ

ಕರ್ನಾಟಕದಲ್ಲಿ ಕೊವಿಡ್‌ -19 ಪ್ರಕರಣಗಳ ಉಲ್ಬಣದ ಹಿನ್ನೆಲೆಯಲ್ಲಿ, ಮುಂಬರುವ ಹಬ್ಬಗಳಾದ ಹೋಳಿ, ಯುಗಾದಿ, ಶಾಬ್-ಎ-ಬರಾತ್ ಮತ್ತು ಶುಭ ಶುಕ್ರವಾರದಂದು ಸಾರ್ವಜನಿಕ ಸಮಾರಂಭ ಹಾಗೂ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ರಾಜ್ಯ ಸರ್ಕಾರ ನಿಷೇಧಿಸಿದೆ. ಸಾರ್ವಜನಿಕ ಮೈದಾನಗಳು, ಉದ್ಯಾನವನಗಳು, ಮಾರುಕಟ್ಟೆಗಳು ಮತ್ತು ಧಾರ್ಮಿಕ ಸ್ಥಳಗಳಲ್ಲಿನ ಸಭೆ-ಸಮಾರಂಭಗಳು ಇವುಗಳಲ್ಲಿ ಸೇರಿವೆ. ತನ್ನ ಆದೇಶದಲ್ಲಿ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತರು … Continued