೪ ಕೋಟಿ ಮೌಲ್ಯದ ಡ್ರಗ್ಸ್‌ ವಶ

ಬೆಂಗಳೂರು: ನಗರದ ಪೂರ್ವ ವಿಭಾಗದ ಪೊಲೀಸರು ೪ ಕೋಟಿ ಮೌಲ್ಯದ ಡ್ರಗ್ಸ್‌ ವಶಪಡಿಸಿಕೊಂಡಿದ್ದಾರೆ. ಡ್ರಗ್ಸ್ ಸರಬರಾಜು ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದ್ದು, ಮನೆ ಮಾಲೀಕರ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ೭ವಿದೇಶಿ ಪ್ರಜೆಗಳಿಂದ ೪೨.೫ ಕೆಜಿ ಗಾಂಜಾ, ೨೦೦ ಗ್ರಾಂ … Continued

ಸಾರಿಗೆ ನಿಗಮಕ್ಕೆ ೪ ಸಾವಿರ ಕೋಟಿ ರೂ.ನಷ್ಟ:ಸವದಿ

ಬೆಂಗಳೂರು: ಕೊವಿಡ್‌ ಪರಿಣಾಮದಿಂದ ರಾಜ್ಯದ ನಾಲ್ಕು ಸಾರಿಗೆ ನಿಗಮಗಳಿಗೆ ೪ ಸಾವಿರ ಕೋಟಿಗೂ ಅಧಿಕ ನಷ್ಟವಾಗಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ವಿಧಾನ ಪರಿಷತ್ತಿಗೆ ಶುಕ್ರವಾರ ತಿಳಿಸಿದರು. ಶು ೨,೯೮೦ ಕೋಟಿ ರೂ. ನಿವ್ವಳ ಆದಾಯವೇ ನಷ್ಟವಾಗಿದೆ. ಹೀಗಾಗಿ ಸಾರಿಗೆ ಸಂಸ್ಥೆಗಳು ನಷ್ಟ ಅನುಭವಿಸುವಂತೆ ಆಗಿವೆ ಎಂದು ಹೇಳಿದರು. ಜೆಡಿಎಸ್ ನ ಕೆ.ಟಿ. ಶ್ರೀಕಂಠೇಗೌಡ ಪ್ರಶ್ನೆಗೆ … Continued

ನನಗೆ ಯುವತಿ ಪರಿಚಯವಿಲ್ಲ, ಕುಟುಂಬದ ಸದಸ್ಯರೊಬ್ಬರು ಸಿಡಿ ಕೊಟ್ಟಿದ್ದಾರೆ

ಬೆಂಗಳೂರು: ನನಗೆ ಯುವತಿ ಪರಿಚಯ ಇಲ್ಲ,ಅವರ ಜೊತೆ ಯಾವುದೇ ಸಂಪರ್ಕವೂ ಇಲ್ಲ. ನನಗೆ ಸಂತ್ರಸ್ತ ಯುವತಿಯ ಕುಟುಂಬದ ಸದಸ್ಯರೊಬ್ಬರ ಪರಿಚಯವಿದೆ. ಅವರೇ ನನಗೆ ಸಿಡಿ ಕೊಟ್ಟಿದ್ದರು ಎಮದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಳ್ಳಿ ತಿಳಿಸಿದ್ದಾರೆ. ಶುಕ್ರವಾರ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ರಾಸಲೀಲೆ ಸಿಡಿ ಸಂಬಂಧವಿಚಾರಣೆಗೆ ಹಾಜರಾಗಿದ್ದ ಅವರನ್ನು ಇಂತಹ ಅವರನ್ನು ಡಿಸಿಪಿ ಅನುಚೇತ್ ನೇತೃತ್ವದಲ್ಲಿ … Continued

53 ಲಕ್ಷ ರೂ. ಹಿಂದಿರುಗಿಸಲು ಹೈಕೋರ್ಟ್‌ ಸೂಚನೆ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪದ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಪ್ತ ಸಚಿನ್‌ ನಾರಾಯಣ್‌ ಮನೆ ಮತ್ತವರ ಕಂಪನಿ ಮೇಲೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದ 53 ಲಕ್ಷ ರೂ. ಹಣ ಬಿಡುಗಡೆ ಮಾಡುವಂತೆ ಸಿಬಿಐಗೆ ಹೈಕೋರ್ಟ್‌ ಸೂಚಿಸಿದೆ. ಡಿ.ಕೆ.ಶಿವಕುಮಾರ್‌ ದೆಹಲಿಯ ಫ್ಲಾಟ್‌ ಹಾಗೂ ಮನೆಯಲ್ಲಿ 2017ರಲ್ಲಿ ಏಳುಕೋಟಿ ರೂಪಾಯಿಗೂ ಅಧಿಕ ನಗದು ದೊರೆತ … Continued

ರೂಪಾಂತರಿ ಕೊರೊನಾ ಸೋಂಕಿನ ವೇಗ ವಿಶ್ವದ ಎಲ್ಲೆಡೆಗಿಂತ ಬೆಂಗಳೂರಿನಲ್ಲಿಯೇ ಹೆಚ್ಚು

ಬೆಂಗಳೂರು: ರೂಪಾಂತರಿ ಕೊರೊನಾ ಸೋಂಕು ಇಡೀ ವಿಶ್ವ, ದೇಶಕ್ಕಿಂತ ಬೆಂಗಳೂರಿನಲ್ಲಿಯೇ ಹೆಚ್ಚು ವೇಗವಾಗಿ ಹರಡುತ್ತಿದೆ ಎಂದು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಅಧ್ಯಯನದಿಂದ ಬೆಳಿಕಿಗೆ ಬಂದಿದೆ. ರೂಪಾಂತರಿ ಸಾರ್ಸ್ ಕೋವಿಡ್-2 ರೂಪಾಂತರಗಳು ಎಷ್ಟು ಆಗಿದೆ ಎಂದು ಇನ್ನೂ ತಿಳಿದುಬಂದಿಲ್ಲ. ಅಧ್ಯಯನದ ನೇತೃತ್ವ ವಹಿಸಿದ್ದ ಐಐಎಸ್‌ಸಿಯ ಬಯೋಕೆಮಿಸ್ಟ್ರಿ ವಿಭಾಗದ ಪ್ರಾಧ್ಯಾಪಕ ಉತ್ಪಾಲ್ ಟಾಟು, ಮಾತನಾಡಿ, ರೂಪಾಂತರಿ ಸ್ಥಿರವಾದಾಗ … Continued

ರಮೇಶ ಜಾರಕಿಹೊಳಿ ಸಿಡಿ ಪ್ರಸಾರ ಮಾಡದಂತೆ ಕೋರ್ಟ್‌ ತಡೆ

ಬೆಂಗಳೂರು : ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಪ್ರಕರಣ ಸಂಬಂಧ, ಸಿಡಿಯಲ್ಲಿನ ದೃಶ್ಯಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ರಮೇಶ್ ಜಾರಕಿಹೊಳಿ ನ್ಯಾಯಾಲಯದಿಂದ ತಡೆ ತಂದಿದ್ದಾರೆ. ಸಿಡಿ ದೃಶ್ಯಾವಳಿಗಳನ್ನು ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ತಡೆ ನೀಡಿದೆ. ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ಸಿಡಿ ಬಿಡುಗಡೆಯಾದ ನಂತರದಲ್ಲಿ ರಮೇಶ ಜಾರಕಿಹೊಳಿ ಸಚಿವ ಸ್ಥಾನಕ್ಕೆ … Continued

ಸಿಡಿ ಹಗರಣ: ಇದು ಹನಿ ಟ್ರ್ಯಾಪ್‌ ಎಂದ ಶಾಸಕ ಕುಮಟಳ್ಳಿ

ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣದಲ್ಲಿ ರಾಜೀನಾಮೆ ನೀಡಿದ ರಮೇಶ ಜಾರಕಿಹೊಳಿ ಬೆಂಬಲಕ್ಕೆ ಈಗ ಶಾಸಕ ಮಹೇಶ ಕುಮಟಳ್ಳಿ ಬಂದಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವತಿ ಹಾಗೂ ರಮೇಶ್ ಜಾರಕಿಹೊಳಿ ಇಬ್ಬರೂ ಪ್ರಬುದ್ಧರು, ಯುವತಿಯ ಸಮ್ಮತಿ ಇರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಗೊತ್ತಾಗುತ್ತದೆ. ಮೇಲ್ನೋಟಕ್ಕೆ ಇದು ಹನಿಟ್ರ್ಯ‍ಾಪ್ ಎಂದು ಅನಿಸುತ್ತದೆ ಎಂದು ಅವರು ಹೇಳಿದರು. ಹಿಂದೆ ರಾಜ … Continued

ರಾಸಲೀಲೆ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ನಡೆದ ಮಾಹಿತಿಯಿದೆ: ಎಚ್‌ಡಿಕೆ ಬಾಂಬ್‌…!

ಮೈಸೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ನಡೆದಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಬಾಂಬ್‌ ಸಿಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೂರು ತಿಂಗಳಿಂದ ಈ‌ ಡೀಲ್ ವ್ಯವಹಾರ ನಡೆದಿದೆ. ದೊಡ್ಡ ದೊಡ್ಡವರೇ ಈ ಪ್ರಕರಣದಲ್ಲಿ … Continued

ರಮೇಶ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ ವೇಳೆ ಮೈಗೆ ತಗುಲಿದ ಬೆಂಕಿ

ಬೆಳಗಾವಿ: ರಾಸಲೀಲೆ ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದು, ಅವರ ಕ್ಷೇತ್ರವಾದ ಬೆಳಗಾವಿ ಜಿಲ್ಲೆಯ ಗೋಕಾಕಿನಲ್ಲಿ ಅವರ ಬೆಂಬಲಿಗರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ವೇಳೆ ಬೆಂಬಲಿಗನ ಮೈಗೆ ಬೆಂಕಿ ತಗುಲಿದ ಘಟನೆಯೂ ವರದಿಯಾಗಿದೆ. ಗೋಕಾಕಿನಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ ಹೆಚ್ಚುತ್ತಿದ್ದು, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುವ ಸಂರ್ಭದಲ್ಲಿ ಆವೇಸಕ್ಕೊಳಗಾದ … Continued

ರಮೇಶ ಜಾರಕಿಹೊಳಿ ಸಿಡಿ ಪ್ರಕರಣ: ದಿಢೀರ್‌ ವಿಚಾರಣೆಗೆ ಹಾಜರಾದ ಕಲ್ಹಳ್ಳಿ

ಬೆಂಗಳೂರು : ರಮೇಶ್ ಜಾರಕಿಹೊಳಿಯವರದ್ದು ಎನ್ನಲಾದ ರಾಸಲೀಲೆ ಸಿಡಿ ಬಯಲು ಪ್ರಕರಣದಲ್ಲಿ ಸಿಡಿ ಬಿಡುಗಡೆ ಮಾಡಿದ್ದ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಹಳ್ಳಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ದಿನೇಶ ಕಲ್ಹಳ್ಳಿ ಅವರು ತಮಗೆ ಸೂಕ್ತ ಭದ್ರತೆ ನೀಡುವವರೆಗೂ ಪೊಲೀಸರ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಹೇಳಿದ್ದರು. ಇದೀಗ ದಿಢೀರ್ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ … Continued