ಎಟಿಎಂ ಹಲ್ಲೆ ಪ್ರಕರಣ: ಆರೋಪಿಗೆ ೧೦ ವರ್ಷ ಶಿಕ್ಷೆ

ಬೆಂಗಳೂರು :  2013ರಂದು  ರಾಜ್ಯವನ್ನೇ ಕಂಗಾಲು ಮಾಡಿದ್ದ   ಎಟಿಎಂ ಹಲ್ಲೆ ಪ್ರಕರಣದ ಅಪರಾಧಿ ಮಧುಕರಗೆ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ನಾಲ್ಕು ವರ್ಷಗಳ ಕಾಲ ಸುದೀರ್ಘ ವಾದ ಆಲಿಸಿದ ನ್ಯಾಯಾಲಯ  ಮಧುಕರ್ ಅಪರಾಧಿ ಎಂದು ಹೇಳಿತ್ತು ಹಾಗೂ ಶಿಕ್ಷೆ ಪ್ರಕಟಿಸುವುದನ್ನು ಮಂಗಳವಾರಕ್ಕೆ ಕಾಯ್ದಿರಿಸಿತ್ತು.  ಬೆಂಗಳೂರಿನ ಕಾರ್ಪೋರೇಷನ್ ಸರ್ಕಲ್ ನ ಕಾರ್ಪೋರೇಷನ್ ಎಟಿಎಂನಲ್ಲಿ ಮಹಿಳೆಯ … Continued

ಕಾಂಗ್ರೆಸ್‌ ನಾಯಕನಿಗೆ ರಾಮ ಮಂದಿರ ನಿಧಿ ಸಂಗ್ರಹ ಕಾರ್ಯಕ್ರಮ ಉದ್ಘಾಟನೆ ವಿವಾದ

ತಿರುವನಂತಪುರಂ: ಅಯೋಧ್ಯೆಯ ರಾಮ ಮಂದಿರ   ನಿರ್ಮಾಣಕ್ಕಾಗಿ ನಿಧಿ ಸಂಗ್ರಹ ಕಾರ್ಯಕ್ರಮವನ್ನು ಆಲಪ್ಪುಳ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಉದ್ಘಾಟಿಸಿದ ನಂತರ  ವಿವಾದ ಭುಗಿಲೆದ್ದಿದೆ. ಅಲಪ್ಪುಳ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ರೆಘುನಾಥನ್ ಪಿಳ್ಳೈ   ನಿಧಿ ಸಂಗ್ರಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಉದ್ಘಾಟಿಸಿದರು. ಪಲ್ಲಿಪುರಂನ ಕಡವಿಲ್ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕರಿಗೆ ನಿರ್ದಿಷ್ಟ ಮೊತ್ತವನ್ನು ಹಸ್ತಾಂತರಿಸುವ ಮೂಲಕ … Continued

ಸಭಾಪತಿ ಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ವಿರುದ್ಧ  ಮಂಗಳವಾರ  ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಅವಿಶ್ವಾಸ ನಿರ್ಣಯ ಮಂಡಿಸಿದ್ದಾರೆ. ಮಧ್ಯಾಹ್ನ ಕಲಾಪದಲ್ಲಿ ಪದಚ್ಯುತಿ ವಿಚಾರವನ್ನು ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ಪ್ರಸ್ತಾಪಿಸಿದರು. ಸದಸ್ಯ ಆಯನೂರು ಮಂಜುನಾಥ್ ಅವರಿಗೆ ನಿರ್ಣಯ ಮಂಡಿಸುವಂತೆ ಆಹ್ವಾನಿಸಿದರು. ಬಿಜೆಪಿಯ ಸದಸ್ಯ ಆಯನೂರು ಮಂಜುನಾಥ್ ನಿರ್ಣಯ ಮಂಡಿಸುತ್ತಿದ್ದಂತೆಯೇ, … Continued

ವಿಳಂಬ ಧೋರಣೆ: ಸರ್ಕಾರಕ್ಕೆ ಸಾರಿಗೆ ನೌಕರರ ಎಚ್ಚರಿಕೆ

ಬೆಂಗಳೂರು: ರಾಜ್ಯ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟವು ಧೋರಣೆ ಹೀಗೆ ಮುಂದುವರಿದರೆ ಮತ್ತೊಂದು ಹೋರಾಟ ಅನಿವಾರ್ಯವಾಗಲಿದೆ ಎಂದು ಹೇಳಿದೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ,  ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರಿನಲ್ಲಿ ಮುಷ್ಕರದ ನಡೆದಾಗ ಮೂರು ತಿಂಗಳೊಳಗೆ 9 … Continued

ಮತ್ತೊಂದು ಜಿಲೆಟಿನ್‌ ಸ್ಫೋಟ

ತುಮಕೂರು: ಶಿವಮೊಗ್ಗದ ಸ್ಫೋಟ ಪ್ರಕರಣ ಬೆನ್ನಲ್ಲೇ ರಾಜ್ಯದ ತುಮಕೂರು ಜಿಲ್ಲೆಯಲ್ಲಿ ಜಿಲೆಟಿನ್ ಸ್ಫೋಟಗೊಂಡಿದೆ. ತುಮಕೂರು ಜಿಲ್ಲೆ ಮಸ್ಕಲ್ ಗ್ರಾಮದ ಮನೆಯೊಂದರಲ್ಲಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್ ಸ್ಫೊಟಗೊಂಡಿದೆ. ಜಿಲೆಟಿನ್‌ ಇಟ್ಟಿದ್ದ ಮನೆ ಸಂಪೂರ್ಣ ಧ್ವಂಸಗೊಂಡಿದೆ. ಮನೆಯಲ್ಲಿದ್ದ ಸುವರ್ಣಮ್ಮ ಎಂಬುವವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇದು ಲಕ್ಷ್ಮಿಕಾಂತ್ ಎಂಬುವವರಿಗೆ ಸೇರಿದ ಮನೆಯಾಗಿದ್ದು, ಲಕ್ಷ್ಮಿಕಾಂತ್ ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದರು. ಹೀಗಾಗಿ … Continued

ಮೀಸಲು ಚರ್ಚೆಗೆ ಅವಕಾಶಕ್ಕೆ ಒತ್ತಾಯಿಸಿ ಸದನದಲ್ಲಿ ಧರಣಿ

ಬೆಂಗಳೂರು: ರಾಜ್ಯದಲ್ಲಿ ಬೇರೆ ಬೇರೆ ಸಮುದಾಯವರು ಮೀಸಲಾತಿಗಾಗಿ ನಡೆಸುತ್ತಿರುವ ಪಾದಯಾತ್ರೆ ಕುರತು ಚರ್ಚೆಗೆ ಅವಕಾಶ ನೀಡುವಂತೆ ಹಾಗೂ ಅವರ ಬೇಡಿಕೆಗಳನ್ನು ಕಾಲಮಿತಿಯಲ್ಲಿ ಈಡೇರಿಸುವಂತೆ ಒತ್ತಾಯಿಸಿ ಆಡಳಿತ ಪಕ್ಷದವರು  ಪ್ರತಿಪಕ್ಷ ಸದಸ್ಯರ ಜತೆಗೆ ಧರಣಿಗೆ ನಡೆಸಿರುವುದಕ್ಕೆ ಮಂಗಳವಾರ ಸಾಕ್ಷಿಯಾಯಿತು. ಶೂನ್ಯವೇಳೆಯಲ್ಲಿ ಬಿಜೆಪಿಯ ರೆಬೆಲ್‌ ಶಾಸಕ ಎಂದೇ ಗುರುತಿಸಿಕೊಂಡಿರುವ  ಬಸನಗೌಡ ಪಾಟೀಲ್ ಯತ್ನಾಳ್ ವಿಷಯ ಪ್ರಸ್ತಾಪಿಸಿದರು. ಪಂಚಮಸಾಲಿಗರನ್ನು 2ಎಗೆ ಸೇರಿಸಬೇಕು … Continued

ಉಪ ಸ್ಪೀಕರ್ ವಿರುದ್ಧ ಹೇಳಿಕೆ ನೀಡಲ್ಲ:ಉದಯನಿಧಿ

ಚೆನ್ನೈ: ತಮಿಳುನಾಡು ವಿಧಾನಸಭೆ ಉಪ ಸ್ಪೀಕರ್ ಪೊಲ್ಲಾಚಿ ವಿ ಜಯರಾಮನ್ ಅವರು ಸಲ್ಲಿಸಿರುವ ಮಾನಹಾನಿ ಪ್ರಕರಣವನ್ನು ಎದುರಿಸುತ್ತಿರುವ ಉದಯನಿಧಿ ಸ್ಟಾಲಿನ್  ಮದ್ರಾಸ್ ಹೈಕೋರ್ಟ್‌ಗೆ ಉಪ ಸ್ಪೀಕರ್  ವಿರುದ್ಧ ಯಾವುದೇ ಮಾನಹಾನಿ ಹೇಳಿಕೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಕಳೆದ ತಿಂಗಳು ತಿರುಚ್ಚಿಯಲ್ಲಿ ನಡೆದ ಪ್ರಚಾರದ ಸಭೆಯಲ್ಲಿ  ತಮಿಳುನಾಡಿನಲ್ಲಿ ನಡೆದ ಪೊಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂದಿಸಿದಂತೆ ತಮ್ಮ … Continued

೭ ಅಧಿಕಾರಿಗಳ ಗುರಿಯಾಗಿಸಿ ೩೦ ಕಡೆ ಎಸಿಬಿ ದಾಳಿ

  ಬೆಂಗಳೂರು/ಹುಬ್ಬಳ್ಳಿ/ಧಾರವಾಡ/ಚಿತ್ರದುರ್ಗ/ಮಂಗಳೂರು/ಕೋಲಾರ: ಭ್ರಷ್ಟರ  ವಿರುದ್ಧ ಕಾರ್ಯಾಚರಣೆ ಕೈಗೊಂಡಿರುವ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ಏಕಕಾಲದಲ್ಲಿ ರಾಜ್ಯದ  ಏಳು ಅಧಿಕಾರಿಗಳು ಹಾಗೂ ಅವರ ಸಂಬಂಧಿಕರಿಗೆ ಸೇರಿದ ೩೦ ಕಡೆ  ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ, ಬಳ್ಳಾರಿ, ಕೋಲಾರ, ಧಾರವಾಡ, ದಕ್ಷಿಣ ಕನ್ನಡ, ಚಿತ್ರದುರ್ಗ ಹಾಗೂ ಬೀದರ್‌ನಲ್ಲಿ ಈ ಅಧಿಕಾರಿಗಳ ಕಚೇರಿ ನಿವಾಸ ಇನ್ನಿತರ ಸ್ಥಳಗಳು ಸೇರಿದಂತೆ  ೩೦ … Continued

 ಸ್ಟಾರ್ಟ್‌ ಅಪ್‌ ಕಂಪನಿಗಳ ಬೆಳವಣಿಗೆಗೆ ಉಪಯುಕ್ತ:ಶೆಟ್ಟರ

ಹುಬ್ಬಳ್ಳಿ:‌ಹೊಸ ದಶಕದಲ್ಲಿ ಹೊಸ ಯುಗ ಸೃಷ್ಟಿಸುವ ಬಜೆಟ್‌ ಇದಾಗಿದ್ದು, ಕೇಂದ್ರ ಸರಕಾರ ಕೋವಿಡ್‌ ನಂತರದ ಆರ್ಥಿಕತೆ ಉತ್ತೇಜನ ನೀಡಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿರುವುದು  ಕೇಂದ್ರ ಬಜೆಟ್ ನಲ್ಲಿ ಕಾಣಬಹುದಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ  ಸಚಿವ ಜಗದೀಶ್‌ ಶೆಟ್ಟರ್‌ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಆಯವ್ಯಯದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಆರೋಗ್ಯ, ಎಂಎಸ್‌ಎಂಇ, ಸ್ಟಾರ್ಟ್‌ ಅಪ್‌ … Continued

ಬಜೆಟ್‌ ಅಭಿವೃದ್ಧಿಗೆ ಪೂರಕ

ಹುಬ್ಬಳ್ಳಿ: ಕೇಂದ್ರ ವಿತ್ತೆ ಸಚಿವರಾದ ನಿರ್ಮಲಾ ಸೀತಾರಾಮನ್  ಮಂಡಿಸಿದ  ಬಜೆಟ್ ನ್ನು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ  ಶ್ಲಾಘಿಸಿದೆ.‌ ಆರೋಗ್ಯ, ಕೃಷಿ ಹಾಗೂ ಮೂಲ ಸೌಕರ್ಯಗಳಿಗೆ ಬಜೆಟ್ ನಲ್ಲಿ ವಿಶೇಷ ಆದ್ಯತೆ ನೀಡಿರುವುದು  ಬೆಳವಣಿಗೆಗೆ ಪೂರಕವಾಗಿದೆ. ಹಳೆಯ ವಾಹನಗಳಿಗೆ ಗಜರಿ ನೀತಿ ರೂಪಿಸಲು ಉದ್ದೇಶಿಸಿರುವುದು ಆಟೊಮೊಬೈಲ್ ಕ್ಷೇತ್ರದ ಬೆಳವಣಿಗೆಗೆ ಚಾಲನೆ  ಸಿಕ್ಕಂತಾಗಿದೆ ಎಂದು ವಾಣಿಜ್ಯೋದ್ಯಮ ಸಂಸ್ಥೆ ‌‌ಅಧ್ಯಕ್ಷ ಮಹೇಂದ್ರ … Continued