ವಿಧಾನಸಭಾ ಚುನಾವಣೆ: ಕಾರ್ಕಳ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಪ್ರಮೋದ ಮುತಾಲಿಕ್ ಘೋಷಣೆ

ಕಾರ್ಕಳ: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳ ಮತಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಘೋಷಣೆ ಮಾಡಿದ್ದಾರೆ. ಕಾರ್ಕಳದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಯಾರು ಏನೇ ಒತ್ತಡ ಹಾಕಿದರೂ ನಾನು ಕಾರ್ಕಳ ಕ್ಷೇತ್ರದಲ್ಲೇ ಸ್ಪರ್ಧೆ ಮಾಡುವುದು ನಿಶ್ಚಿತ. ಸಾವಿರಾರು ಕಾರ್ಯಕರ್ತರ ನೋವಿನ ಧ್ವನಿಯಾಗಿ, ಅವರ ಒತ್ತಡದಿಂದ … Continued

ಜನವರಿ 24ರ ಸಾರಿಗೆ ಸಂಸ್ಥೆ ನೌಕರರ ಧರಣಿಯಿಂದ ಬಸ್‌ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗುವುದಿಲ್ಲ: ಎನ್‌ಡಬ್ಲ್ಯುಕೆಆರ್‌ಟಿಸಿ

ಹುಬ್ಬಳ್ಳಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮ/ಸಂಸ್ಥೆಯ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಸದಸ್ಯರು ಮಂಗಳವಾರ (ಜನವರಿ 24) ಬೆಳಿಗ್ಗೆ 11 ಗಂಟೆಯಿಂದ ಸಂಜೆ 5:30 ರ ವೆರೆಗೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ವಿಭಾಗೀಯ ಕಚೇರಿ ಮುಂದೆ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿದ್ದು, ಆದರೆ ಬಸ್‌ಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು ವಾಯವ್ಯ … Continued

ಹಿಜಾಬ್ ನಿಷೇಧ ವಿವಾದ: ವಿಚಾರಣೆಗೆ ತ್ರಿಸದಸ್ಯ ಪೀಠ ರಚಿಸಲು ಸುಪ್ರೀಂ ಕೋರ್ಟ್ ಪರಿಗಣನೆ

ನವದೆಹಲಿ: ಹಿಜಾಬ್ ಕುರಿತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ರಚನೆ ಮಾಡುವುದನ್ನು ಪರಿಗಣಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಈ ಬಗ್ಗೆ ಕೋರ್ಟ್ ರಿಜಿಸ್ಟ್ರಾರ್ ಮುಂದೆ ವಿಷಯ ಪ್ರಸ್ತಾಪಿಸಲು ಉಭಯ ವಕೀಲರಿಗೆ ಸೂಚಿಸಿದೆ. ಫೆಬ್ರವರಿ 6 ರಿಂದ ರಾಜ್ಯದಲ್ಲಿ ಕೆಲವು ತರಗತಿಗಳಿಗೆ ನಿಗದಿಯಾಗಿರುವ ಪ್ರಾಯೋಗಿಕ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಮಧ್ಯಂತರ ಆದೇಶದ ಅಗತ್ಯವಿದೆ ಎಂದು ಹಿರಿಯ ವಕೀಲರಾದ … Continued

ಕನ್ನಡದ ಹೆಸರಾಂತ ನಟ ಲಕ್ಷ್ಮಣ ಹೃದಯಾಘಾತದಿಂದ ನಿಧನ

ಬೆಂಗಳೂರು : ಕನ್ನಡ ಚಿತ್ರರಂಗದ ಹೆಸರಾಂತ ಖಳ ನಟ ಹಾಗೂ ಪೋಷಕ ನಟ ಲಕ್ಷ್ಮಣ ಹೃದಯಾಘಾತದಿಂದಾಗಿ ಇಂದು, ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಕೆಲ ಕಾಲದಿಂದ ಅನಾರೋಗ್ಯದಿಂಧ ಬಳಲುತ್ತಿದ್ದ ಲಕ್ಷ್ಮಣ ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು (ಜ.23) ಬೆಳಗ್ಗೆ ಸುಮಾರು … Continued

ಗೇಮ್‌ ಅಪ್ಲಿಕೇಶನ್‌ ಮೂಲಕ ಪರಸ್ಪರ ಪ್ರೀತಿ, ಮದುವೆ : ಭಾರತಕ್ಕೆ ಬಂದು ಉತ್ತರ ಪ್ರದೇಶದ ಯುವಕನ ಜೊತೆ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ಯುವತಿ ಬಂಧನ

ಬೆಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಆರೋಪದ ಮೇಲೆ 19 ವರ್ಷದ ಪಾಕಿಸ್ತಾನಿ ಯುವತಿ ಇಕ್ರಾ ಜೀವನಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಕೆ ಉತ್ತರ ಪ್ರದೇಶದ 25 ವರ್ಷದ ಯುವಕನನ್ನು ಮದುವೆಯಾಗಿದ್ದಳು ಎನ್ನಲಾಗಿದ್ದು, ಆತನನ್ನೂ ಬಂಧಿಸಲಾಗಿದೆ. ಪೊಲೀಸರು ಇಕ್ರಾ ಜೀವನಿಯನ್ನು ಬಂಧಿಸಿ ಎಫ್‌ಆರ್‌ಆರ್‌ಒ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ. ನಂತರ ಆಕೆಯನ್ನು ಮಹಿಳೆಯರಿಗಾಗಿ ಇರುವ ಸ್ಟೇಟ್‌ ಹೋಂಗೆ … Continued

ನನ್ನ ಕಾರಿನ ಮೇಲೆ ಕಲ್ಲು ತೂರಾಟ ನಡೆದಿಲ್ಲ : ಗಾಯಕಿ ಮಂಗ್ಲಿ ಸ್ಪಷ್ಟನೆ

ಬಳ್ಳಾರಿ: ಬಳ್ಳಾರಿಯಲ್ಲಿ ಟಾಲಿವುಡ್ ಖ್ಯಾತ ಗಾಯಕಿ ಮಂಗ್ಲಿ ಅವರ ಕಾರಿನ ಮೇಲೆ ಕೆಲವರು ಕಲ್ಲು ಎಸೆದಿದ್ದಾರೆ ಎಂದು ವರದಿಯಾಗಿತ್ತು, ಆದರೆ ಈಗ ಗಾಯಕಿ ಮಂಗ್ಲಿ ಇದನ್ನು ಅಲ್ಲಗೆಳೆದಿದ್ದಾರೆ. ತನ್ನ ಮೇಲೆ ಹಲ್ಲೆ ನಡೆದಿಲ್ಲ ಹಾಗೂ ಕಾರಿನ ಮೇಲೆ ಕಲ್ಲು ತೂರಾಟ ನಡೆದಿಲ್ಲ ಎಂದು ಫೇಸ್ ಬುಕ್ ಮತ್ತು ಇನ್ ಸ್ಟಾಗ್ರಾಂನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. … Continued

ಹುಲಿ ದಾಳಿಗೆ ಕಟ್ಟಿಗೆ ತರಲು ಹೋಗಿದ್ದ ಯುವಕ ಸಾವು

ಮೈಸೂರು : ಜಿಲ್ಲೆಯ ಎಚ್‌.ಡಿ. ಕೋಟೆ ತಾಲೂಕಿನ ಕಾಡಿನಲ್ಲಿ ಕಟ್ಟಿಗೆ ತರಲು ಹೋಗಿದ್ದ ಯುವಕನ ಮೇಲೆ ಹುಲಿಯೊಂದು ದಾಳಿ ಮಾಡಿದ್ದು, ಯುವಕ ಮೃತಪಟ್ಟಿದ್ದಾನೆ. ಈ ದುರ್ಘಟನೆ ಮೈಸೂರು ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಬಳಿಯ ಬಳ್ಳೆ ಅರಣ್ಯ ಸಮೀಪದ ನಡೆದಿದೆ. ಹುಲಿ ದಾಳಿಗೆ ಸಿಲುಕಿದ ಮೃತನನ್ನು ಮಂಜು (18 ) ಎಂದು ಗುರುತಿಸಲಾಗಿದೆ. ಸೌದೆ (ಕಟ್ಟಿಗೆ)ಯನ್ನು … Continued

ಬೇಡಿಕೆ ಈಡೇರಿಕೆಗಾಗಿ ಜನವರಿ 24ರಂದು ಸಾರಿಗೆ ಸಿಬ್ಬಂದಿ ಧರಣಿ : ಬಸ್‌ ಸಂಚಾರದಲ್ಲಿ ವ್ಯತ್ಯಯದ ಸಾಧ್ಯತೆ

ಬೆಂಗಳೂರು : ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸರ್ಕಾರದ ವಿರುದ್ಧ ಜನವರಿ ೨೪ರಂದು ಸಾರಿಗೆ ನೌಕರರು ನಗರದಲ್ಲಿ ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಂದು ರಾಜ್ಯಾದ್ಯಂತ ಬಸ್ ಸಂಚಾರ ವ್ಯತ್ಯಯ ಆಗುವ ಸಾಧ್ಯತೆಯಿದೆ. ರಾಜ್ಯ ಸರ್ಕಾರವು ೬ ವರ್ಷಗಳು ಕಳೆದರೂ ವೇತನ ಹೆಚ್ಚಳ ಮಾಡದಿರುವುದರಿಂದ ಸಾರಿಗೆ ನೌಕರರು ಮತ್ತೆ ಪ್ರತಿಭಟನೆ … Continued

ಬೆಂಗಳೂರು: ಗರ್ಭಿಣಿ ಪತ್ನಿ ಕೊಂದು ವಿಮಾನದಲ್ಲಿ ಪರಾರಿಯಾಗಿದ್ದ ಖತರ್ನಾಕ್ ಗಂಡನ ಸೆರೆ

ಬೆಂಗಳೂರು: `ಬಾನಲ್ಲೆ ಮಧುಚಂದ್ರಕೆ’ ಸಿನಿಮಾದಂತೆಯೇ ಬೆಂಗಳೂರಿನಲ್ಲೊಬ್ಬ ತನ್ನ ಹೆಂಡತಿಯನ್ನ ಕೊಲೆ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಪತ್ನಿಯನ್ನು ಕೊಂದು ವಿಮಾನದಲ್ಲಿ ದೆಹಲಿಗೆ ಪರಾರಿಯಾದವನನ್ನು ಬೆಂಗಳೂರಿನ ಸದ್ದುಗುಂಟೆ ಪಾಳ್ಯ ಠಾಣೆ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಸಾಫ್ಟ್‌ವೇರ್ ಎಂಜಿನಿಯರ್ ನಾಝ್‍ ಎಂಬವರನ್ನು ಪ್ರೀತಿಸಿ ವಿವಾಹದ ನಂತರ ಕೊಲೆ ಮಾಡಿ ಪರಾರಿಯಾಗಿದ್ದ ನಾಸಿರ್ ಹುಸೇನ್‍ನನ್ನು ಪೊಲೀಸರು ದೆಹಲಿಯಲ್ಲಿ ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ … Continued

 ದೆಹಲಿ ಗಣರಾಜ್ಯೋತ್ಸವ ಪರೇಡ್‌ನಲ್ಲಿ ನೌಕಾಪಡೆ ತುಕಡಿ ಮುನ್ನಡೆಸಲಿರುವ ಮಂಗಳೂರಿನ ಹುಡುಗಿ ಲೆಫ್ಟಿನೆಂಟ್ ಕಮಾಂಡರ್ ದಿಶಾ ಅಮೃತ್

ಮಂಗಳೂರು: ಮಂಗಳೂರಿನವರಾದ ಭಾರತೀಯ ನೌಕಾಪಡೆಯ ಲೆಫ್ಟಿನೆಂಟ್ ಕಮಾಂಡರ್ ದಿಶಾ ಅಮೃತ್ ಅವರು ಗಣರಾಜ್ಯೋತ್ಸವದ ದಿನದಿಂದ ನಡೆಯುವ ಪರೇಡ್‌ನಲ್ಲಿ ಭಾರತೀಯ ನೌಕಾಪಡೆಯ ತುಕಡಿಯನ್ನು ಮುನ್ನಡೆಸಲಿದ್ದಾರೆ. ನೌಕಾಪಡೆಯ ತುಕಡಿಯು 144 ಯುವ ನಾವಿಕರು “ನಾರಿ ಶಕ್ತಿ” ಒಳಗೊಂಡ ಟ್ಯಾಬ್ಲೋವನ್ನು ಹೊಂದಿರುತ್ತದೆ. 29 ವರ್ಷದ ದಿಶಾ ಮಂಗಳೂರಿನ ಬೋಳೂರು ಸಮೀಪದ ತಿಲಕ್ ನಗರದ ಅಮೃತಕುಮಾರ್ ಮತ್ತು ಲೀಲಾ ಅಮೃತಕುಮಾರ ದಂಪತಿಯ … Continued